Homeಕರ್ನಾಟಕಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

ಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

- Advertisement -
- Advertisement -

ನಾಲ್ಕೈದು ತಾಸುಗಳ ಪೊಲಿಟಿಕಲ್ ಹೈಡ್ರಾಮಾ ನಡೆದಷ್ಟೇ ವೇಗವಾಗಿ ತಾತ್ಕಾಲಿಕವಾಗಿ ತಣ್ಣಗಾಗಿದೆ. ಒಂತರಾ ರಾಜ್ಯದ ಬಹುಭಾಗಗಳಲ್ಲಿ ರಪ್ ರಪ್ ಅಂತ ಹೊಡೆಯಲು ಶುರು ಮಾಡಿ, ಹತ್ತೇ ನಿಮಿಷದಲ್ಲಿ ಪಟ್ ಅಂತ ನಿಂತು ಹೋಗುತ್ತಿರುವ ಮಳೆಯಂತೆ…

ಈ ಐದಾರು ತಾಸುಗಳಲ್ಲಿ ಮೂರು ತಾಸಂತೂ ತಿರುವು ನೀಡುವಂತಹ ಪಿಚ್ಚರ್‍ನಂತೆ ಭಾಸವಾಗಿತು. ಸಿನಿಮಾದ ಪಾತ್ರಧಾರಿಗಳೆಲ್ಲ ಮೂಕನಾಯಕರು. ಅವರು ಸ್ಪೀಕರ್ ಕೊಠಡಿಯಲ್ಲಿ ಹೋಗಿ ಕೂತರು. ಕೆಲವರು (ಅಧಿಕೃತವಾಗಿ 11) ಸ್ಪೀಕರ್ ಕಾರ್ಯದರ್ಶಿಗೆ ರಾಜಿನಾಮೆ ನೀಡಿ ಸ್ವೀಕೃತಿ ಪಡೆದರು. ಅಲ್ಲಿ ಟ್ರಬಲ್‍ಶೂಟರ್ ಖ್ಯಾತಿಯ ಡಿ.ಕೆ ಶಿವಕುಮಾರ್ ಎಂಟ್ರಿ ಕೊಟ್ಟರು. ರಾಜಿನಾಮೆ ಕೊಡಲು ಬಂದಿದ್ದ ಶಾಸಕರ ಪೈಕಿ ಒಂದು ದೊಡ್ದ ಗುಂಪು ರಾಜ್ಯಪಾಲರ ಭವನ ತಲುಪಿತು. ನಾಲ್ವರು ಶಾಸಕರು ಡಿ.ಕೆ ಶಿವಕುಮಾರ್ ಜೊತೆ ಹೋದರು….

‘ಹೊಸ ಸರ್ಕಾರ’ ಎಂಬ ಪಿಚ್ಚರ್ ಹೀಗೆ ಟ್ರೈಲರ್‍ನಲ್ಲಿ ಸದ್ಯಕ್ಕೆ ಸ್ಟಾಪ್ ಆಗಿದೆ. ಇದರ ನಿರ್ದೇಶಕ ಯಾರು, ನಿರ್ಮಾಪಕ ಯಾರು ಎಂಬುದೇ ಇನ್ನೂ ಅಸ್ಪಷ್ಟವಾಗಿದೆ.

ಮಧ್ಯಾಹ್ನ 2.30ರ ಸುಮಾರಿಗೆ ಸ್ಪೀಕರ್ ರಮೇಶಕುಮಾರ್ ಕಾಣಿಸಿಕೊಂಡ ಮೇಲಷ್ಟೇ ಒಂದು ಸ್ಪಷ್ಟ ಚಿತ್ರಣ ಸಿಕ್ಕಿದೆ. ಅವರು ಹೇಳಿದ ಪ್ರಕಾರ, 11 ಶಾಸಕರು ಅವರ ಕಾರ್ಯದರ್ಶಿಗೆ ರಾಜಿನಾಮೆ ಸಲ್ಲಿಸಿದ್ದಾರೆ. ತಮಗೆ ಯಾವುದೇ ಮಾಹಿತಿ ನೀಡದೇ ಶಾಸಕರು ರಾಜಿನಾಮೆ ನೀಡಲು ಬಂದಿದ್ದಾರೆ, ಮೊದಲೆ ಗೊತ್ತಿದ್ದರೆ ನಾನು ನನ್ನ ವೈಯಕ್ತಿಕ ಕೆಲಸ ಬಿಟ್ಟು ಕಚೇರಿಗೆ ಬರುತ್ತಿದ್ದೆ. ನಾಳೆ ರವಿವಾರ ರಜೆ, ಸೋಮವಾರ ನನಗೆ ಪೂರ್ವನಿಗದಿತ ಕಾರ್ಯಕ್ರಮವಿದೆ. ಹೀಗಾಗಿ ನಾನು ಮಂಗಳವಾರ ಕಚೇರಿಗೆ ಬಂದು ಎಲ್ಲವನ್ನೂ ಪರಿಶೀಲಿಸುವೆ ಎನ್ನುವ ಮೂಲಕ ಶನಿವಾರದ ಈ ಹಗಲು ಹೈಡ್ರಾಮಾಕ್ಕೆ ತಕ್ಷಣದ ಬ್ರೇಕ್ ಹಾಕಿದ್ದಾರೆ. ಗಂಟಲು ಒಣಗಿಸಿಕೊಂಡ ಆ್ಯಂಕರ್‍ಗಳು ನೀರು ಕುಡಿದು ವಿಶ್ಲೇಷಣೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಹೈಡ್ರಾಮಾದ ಪಾತ್ರಧಾರಿಗಳು
ಇವತ್ತು ದಿಢೀರ್ ಎನಿಸುವಂತೆ ನಡೆದ ಈ ರಾಜಿನಾಮೆ ಪ್ರಸಂಗ ಪೂರ್ವ ನಿಯೋಜಿತವಾಗಿತ್ತು, ಪಕ್ಕಾ ವ್ಯವಸ್ಥಿತವಾಗಿತ್ತು. ಇಲ್ಲೆಲ್ಲೂ ಬಿಜೆಪಿ ಸೀನ್‍ನಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಈ ಸಾರಿ ಆಶ್ಚರ್ಯವೆಂದರೆ ಈ ಗುಂಪಿನಲ್ಲಿ ಜೆಡಿಎಸ್‍ನ ಮೂವರು ಶಾಸಕರು, ಸಿದ್ರಾಮಯ್ಯನವರ ಬೆಂಬಲಿಗರಾದ ಮೂವರು ಬೆಂಗಳೂರು ಶಾಸಕರು, ಇತ್ತೀಚೆಗೆ ಮುನಿಸಿಕೊಂಡಿರುವ ರಾಮಲಿಂಗಾರೆಡ್ಡಿ, ಅವರ ಪುತ್ರಿ ಸೌಮ್ಯರೆಡ್ಡಿ, ಅಂಜಲಿ ನಿಂಬಾಳ್ಕರ್ ಕೂಡ ಇದ್ದರು.

ವಿಧಾನಸೌಧದದ ಕಾರಿಡಾರಿನಲ್ಲಿ ಗುಂಪಾಗಿ ಹೋದ 12-14 ಜನರ ಶಾಸಕರ ತಂಡ ರಾಜಿನಾಮೆ ನೀಡಿಯೇ ಸಿದ್ದ ಎಂಬ ಧಾವಂತದಲ್ಲಿ ಸ್ಪೀಕರ್ ಕಚೇರಿ ತಲುಪಿ ಅಲ್ಲಿ ಆಸೀನರಾದರು. ಅಲ್ಲಿ ಕಾಣಿಸಿಕೊಂಡವರು ಮತ್ತು ಕೇಳಲ್ಪಟ್ಟ ಹೆಸರುಗಳು:
ಕಾಂಗ್ರೆಸ್: ರಾಮಲಿಂಗಾರೆಡ್ಡಿ, ಎಸ್. ಟಿ. ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನಂ, ಸೌಮ್ಯರೆಡ್ಡಿ, ರೋಶನ್ ಬೇಗ್, ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ, ನಾಗೇಂದ್ರ, ಸುಧಾಕರರೆಡ್ಡಿ, ಸುಬ್ಬಾರೆಡ್ಡಿ, ಬಸನಗೌಡ ದದ್ದಲ್, ಮಹೇಶ ಕುಮಟಳ್ಳಿ, ಆನೇಕಲ್ ಶಿವಣ್ಣ, ಆನಂದ್‍ಸಿಂಗ್, ಶಿವರಾಮ್ ಹೆಬ್ಬಾರ್…

ಜೆಡಿಎಸ್: ಎಚ್ ವಿಶ್ವನಾಥ್, ಕೆ. ಗೋಪಾಲಯ್ಯ, ಕೆ.ಆರ್ ಪೇಟೆಯ ನಾರಾಯಣಗೌಡ..

ಇಷ್ಟರಲ್ಲಿ ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದವರು

ರಾಮಲಿಂಗಾರೆಡ್ಡಿ, ಎಚ್ ವಿಶ್ವನಾಥ್, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ್, ಬೈರತಿ ಬಸವರಾಜ, ನಾರಾಯಂಗೌಡ, ಶಿವರಾಮ್ ಹೆಬ್ಬಾರ್, ಮಹೇಶ ಕುಮಟಳ್ಳಿ, ಕೆ. ಗೋಪಾಲಯ್ಯ, ಜಾರಕಿಹೊಳಿ, ಆನಂದಸಿಂಗ್ ( ಕೊನೆಯ ಇಬ್ಬರು ಮೊನ್ನೆಯೇ ಸಲ್ಲಿಸಿದ್ದರು)..

ಈಗ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದೆ. ಇನ್ನೊಂದು ಕಡೆ ಡಿ.ಕೆ. ಶಿವಕುಮಾರ್ ರಾಮಲಿಂಗಾರೆಡ್ಡಿಯವರನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸುತ್ತಿದ್ದಾರೆ. ಇದಿಷ್ಟು ಹೊರನೋಟಕ್ಕೆ ಕಾಣುತ್ತಿರುವ ಬೆಳವಣಿಗೆ. ರಾಜಿನಾಮೆ ನೀಡಿದವರು ಮುಂಬೈ ಅಥವಾ ಇನ್ನಾವುದೋ ರೆಸಾರ್ಟಿಗೆ ಹೋಗುವ ಸಾಧ್ಯತೆಗಳಿವೆ.

ಸರ್ಕಾರ ಆತಂಕದಲ್ಲಿರುವುದೂ ಗೊತ್ತಿದ್ದೂ ಸಿಎಂ ಕುಮಾರಸ್ವಾಮಿ ವಿದೇಶದಲ್ಲಿರುವುದು, ದಿನೇಶ ಗುಂಡುರಾವ್ ಕೂಡ ವಿದೇಶದಲ್ಲಿರುವುದು ವಿಚಿತ್ರವಾಗಿದೆ. ಮಂಗಳವಾರದವರೆಗೂ ಟೈಮ್ ಸಿಕ್ಕಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಶಾಸಕರನ್ನು ಉಳಿಸಿಕೊಳ್ಳಲು ಅವಕಾಶ ಸಿಕ್ಕಿದೆ. ರಾಮಲಿಂಗಾರೆಡ್ಡಿಯ ನಿರ್ಧಾರ ಈಗ ಮುಖ್ಯವಾಗಿದೆ. ಈಗಿರುವ ಕಾಂಗ್ರೆಸ್ ಸಚಿವರಿಂದ ಸಚಿವ ಸ್ಥಾನ ಹಿಂಪಡೆದು, ಅತೃಪ್ತರಿಗೆ ಸಚಿವ ಪಟ್ಟು ನೀಡಬಹುದು.

ಆದರೆ, ಇವತ್ತಿನ ಒಟ್ಟು ಬೆಳವಣಿಗೆಗಳು ಮಾತ್ರ ಅಸಹ್ಯಕರವೇ ಆಗಿದ್ದವು. ಸ್ಪೀಕರ್‍ಗೆ ಸಂದೇಶ ಕೊಡದೇ, ಮಾಧ್ಯಮದವರನ್ನು ಕರೆದುಕೊಂಡು ಹೋಗಿ ಸ್ಪೀಕರ್ ಕಚೇರಿಯಲ್ಲಿ ಟೆಂಟು ಹಾಕಿದ್ದು, ಅಲ್ಲಿಗೆ ಡಿಕೆ ಶಿವಕುಮಾರ್ ನುಗ್ಗಿದ್ದು, ಚಾನೆಲ್‍ಗಳು ಬಿದ್ದೇ ಹೋಯ್ತು ಎಂದು ಅರಚಿ ಸುಸ್ತಾಗಿದ್ದು… ಇಲ್ಲಿ ಯಾರಿಗೂ ತಾಳ್ಮೆಯಿಲ್ಲ. ಯಾವ ನಿಯಮ ಪಾಲನೆಯೂ ಬೇಕಾಗಿಲ್ಲ. ಒಟ್ಟಿನಲ್ಲಿ ಒಂದು ಟ್ರೈಲರ್ ಅನ್ನು ರಾಜ್ಯದ ಜನತೆ ವೀಕ್ಷಿಸಿ ಮನರಂಜನೆ ಪಡೆದಿದ್ದಾರೆ.

ಹೊಸ ಸರ್ಕಾರ ಬರುತ್ತೋ, ರಾಷ್ಟ್ರಪತಿ ಆಡಳಿತವೋ, ಮೈತ್ರಿ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಯೋ? ಎಲ್ಲ ಸಾಧ್ಯತೆಗಳೂ ಇವೆ. ರೆಸಾರ್ಟ್ ರಾಜಕಾರಣ ಮತ್ತೆ ಗರಿಗೆದರುತ್ತಿದೆ ಎಂಬುದಂತೂ ಸ್ಪಷ್ಟ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...