Homeಕರ್ನಾಟಕಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

ಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

- Advertisement -
- Advertisement -

ನಾಲ್ಕೈದು ತಾಸುಗಳ ಪೊಲಿಟಿಕಲ್ ಹೈಡ್ರಾಮಾ ನಡೆದಷ್ಟೇ ವೇಗವಾಗಿ ತಾತ್ಕಾಲಿಕವಾಗಿ ತಣ್ಣಗಾಗಿದೆ. ಒಂತರಾ ರಾಜ್ಯದ ಬಹುಭಾಗಗಳಲ್ಲಿ ರಪ್ ರಪ್ ಅಂತ ಹೊಡೆಯಲು ಶುರು ಮಾಡಿ, ಹತ್ತೇ ನಿಮಿಷದಲ್ಲಿ ಪಟ್ ಅಂತ ನಿಂತು ಹೋಗುತ್ತಿರುವ ಮಳೆಯಂತೆ…

ಈ ಐದಾರು ತಾಸುಗಳಲ್ಲಿ ಮೂರು ತಾಸಂತೂ ತಿರುವು ನೀಡುವಂತಹ ಪಿಚ್ಚರ್‍ನಂತೆ ಭಾಸವಾಗಿತು. ಸಿನಿಮಾದ ಪಾತ್ರಧಾರಿಗಳೆಲ್ಲ ಮೂಕನಾಯಕರು. ಅವರು ಸ್ಪೀಕರ್ ಕೊಠಡಿಯಲ್ಲಿ ಹೋಗಿ ಕೂತರು. ಕೆಲವರು (ಅಧಿಕೃತವಾಗಿ 11) ಸ್ಪೀಕರ್ ಕಾರ್ಯದರ್ಶಿಗೆ ರಾಜಿನಾಮೆ ನೀಡಿ ಸ್ವೀಕೃತಿ ಪಡೆದರು. ಅಲ್ಲಿ ಟ್ರಬಲ್‍ಶೂಟರ್ ಖ್ಯಾತಿಯ ಡಿ.ಕೆ ಶಿವಕುಮಾರ್ ಎಂಟ್ರಿ ಕೊಟ್ಟರು. ರಾಜಿನಾಮೆ ಕೊಡಲು ಬಂದಿದ್ದ ಶಾಸಕರ ಪೈಕಿ ಒಂದು ದೊಡ್ದ ಗುಂಪು ರಾಜ್ಯಪಾಲರ ಭವನ ತಲುಪಿತು. ನಾಲ್ವರು ಶಾಸಕರು ಡಿ.ಕೆ ಶಿವಕುಮಾರ್ ಜೊತೆ ಹೋದರು….

‘ಹೊಸ ಸರ್ಕಾರ’ ಎಂಬ ಪಿಚ್ಚರ್ ಹೀಗೆ ಟ್ರೈಲರ್‍ನಲ್ಲಿ ಸದ್ಯಕ್ಕೆ ಸ್ಟಾಪ್ ಆಗಿದೆ. ಇದರ ನಿರ್ದೇಶಕ ಯಾರು, ನಿರ್ಮಾಪಕ ಯಾರು ಎಂಬುದೇ ಇನ್ನೂ ಅಸ್ಪಷ್ಟವಾಗಿದೆ.

ಮಧ್ಯಾಹ್ನ 2.30ರ ಸುಮಾರಿಗೆ ಸ್ಪೀಕರ್ ರಮೇಶಕುಮಾರ್ ಕಾಣಿಸಿಕೊಂಡ ಮೇಲಷ್ಟೇ ಒಂದು ಸ್ಪಷ್ಟ ಚಿತ್ರಣ ಸಿಕ್ಕಿದೆ. ಅವರು ಹೇಳಿದ ಪ್ರಕಾರ, 11 ಶಾಸಕರು ಅವರ ಕಾರ್ಯದರ್ಶಿಗೆ ರಾಜಿನಾಮೆ ಸಲ್ಲಿಸಿದ್ದಾರೆ. ತಮಗೆ ಯಾವುದೇ ಮಾಹಿತಿ ನೀಡದೇ ಶಾಸಕರು ರಾಜಿನಾಮೆ ನೀಡಲು ಬಂದಿದ್ದಾರೆ, ಮೊದಲೆ ಗೊತ್ತಿದ್ದರೆ ನಾನು ನನ್ನ ವೈಯಕ್ತಿಕ ಕೆಲಸ ಬಿಟ್ಟು ಕಚೇರಿಗೆ ಬರುತ್ತಿದ್ದೆ. ನಾಳೆ ರವಿವಾರ ರಜೆ, ಸೋಮವಾರ ನನಗೆ ಪೂರ್ವನಿಗದಿತ ಕಾರ್ಯಕ್ರಮವಿದೆ. ಹೀಗಾಗಿ ನಾನು ಮಂಗಳವಾರ ಕಚೇರಿಗೆ ಬಂದು ಎಲ್ಲವನ್ನೂ ಪರಿಶೀಲಿಸುವೆ ಎನ್ನುವ ಮೂಲಕ ಶನಿವಾರದ ಈ ಹಗಲು ಹೈಡ್ರಾಮಾಕ್ಕೆ ತಕ್ಷಣದ ಬ್ರೇಕ್ ಹಾಕಿದ್ದಾರೆ. ಗಂಟಲು ಒಣಗಿಸಿಕೊಂಡ ಆ್ಯಂಕರ್‍ಗಳು ನೀರು ಕುಡಿದು ವಿಶ್ಲೇಷಣೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಹೈಡ್ರಾಮಾದ ಪಾತ್ರಧಾರಿಗಳು
ಇವತ್ತು ದಿಢೀರ್ ಎನಿಸುವಂತೆ ನಡೆದ ಈ ರಾಜಿನಾಮೆ ಪ್ರಸಂಗ ಪೂರ್ವ ನಿಯೋಜಿತವಾಗಿತ್ತು, ಪಕ್ಕಾ ವ್ಯವಸ್ಥಿತವಾಗಿತ್ತು. ಇಲ್ಲೆಲ್ಲೂ ಬಿಜೆಪಿ ಸೀನ್‍ನಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಈ ಸಾರಿ ಆಶ್ಚರ್ಯವೆಂದರೆ ಈ ಗುಂಪಿನಲ್ಲಿ ಜೆಡಿಎಸ್‍ನ ಮೂವರು ಶಾಸಕರು, ಸಿದ್ರಾಮಯ್ಯನವರ ಬೆಂಬಲಿಗರಾದ ಮೂವರು ಬೆಂಗಳೂರು ಶಾಸಕರು, ಇತ್ತೀಚೆಗೆ ಮುನಿಸಿಕೊಂಡಿರುವ ರಾಮಲಿಂಗಾರೆಡ್ಡಿ, ಅವರ ಪುತ್ರಿ ಸೌಮ್ಯರೆಡ್ಡಿ, ಅಂಜಲಿ ನಿಂಬಾಳ್ಕರ್ ಕೂಡ ಇದ್ದರು.

ವಿಧಾನಸೌಧದದ ಕಾರಿಡಾರಿನಲ್ಲಿ ಗುಂಪಾಗಿ ಹೋದ 12-14 ಜನರ ಶಾಸಕರ ತಂಡ ರಾಜಿನಾಮೆ ನೀಡಿಯೇ ಸಿದ್ದ ಎಂಬ ಧಾವಂತದಲ್ಲಿ ಸ್ಪೀಕರ್ ಕಚೇರಿ ತಲುಪಿ ಅಲ್ಲಿ ಆಸೀನರಾದರು. ಅಲ್ಲಿ ಕಾಣಿಸಿಕೊಂಡವರು ಮತ್ತು ಕೇಳಲ್ಪಟ್ಟ ಹೆಸರುಗಳು:
ಕಾಂಗ್ರೆಸ್: ರಾಮಲಿಂಗಾರೆಡ್ಡಿ, ಎಸ್. ಟಿ. ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನಂ, ಸೌಮ್ಯರೆಡ್ಡಿ, ರೋಶನ್ ಬೇಗ್, ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ, ನಾಗೇಂದ್ರ, ಸುಧಾಕರರೆಡ್ಡಿ, ಸುಬ್ಬಾರೆಡ್ಡಿ, ಬಸನಗೌಡ ದದ್ದಲ್, ಮಹೇಶ ಕುಮಟಳ್ಳಿ, ಆನೇಕಲ್ ಶಿವಣ್ಣ, ಆನಂದ್‍ಸಿಂಗ್, ಶಿವರಾಮ್ ಹೆಬ್ಬಾರ್…

ಜೆಡಿಎಸ್: ಎಚ್ ವಿಶ್ವನಾಥ್, ಕೆ. ಗೋಪಾಲಯ್ಯ, ಕೆ.ಆರ್ ಪೇಟೆಯ ನಾರಾಯಣಗೌಡ..

ಇಷ್ಟರಲ್ಲಿ ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದವರು

ರಾಮಲಿಂಗಾರೆಡ್ಡಿ, ಎಚ್ ವಿಶ್ವನಾಥ್, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ್, ಬೈರತಿ ಬಸವರಾಜ, ನಾರಾಯಂಗೌಡ, ಶಿವರಾಮ್ ಹೆಬ್ಬಾರ್, ಮಹೇಶ ಕುಮಟಳ್ಳಿ, ಕೆ. ಗೋಪಾಲಯ್ಯ, ಜಾರಕಿಹೊಳಿ, ಆನಂದಸಿಂಗ್ ( ಕೊನೆಯ ಇಬ್ಬರು ಮೊನ್ನೆಯೇ ಸಲ್ಲಿಸಿದ್ದರು)..

ಈಗ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದೆ. ಇನ್ನೊಂದು ಕಡೆ ಡಿ.ಕೆ. ಶಿವಕುಮಾರ್ ರಾಮಲಿಂಗಾರೆಡ್ಡಿಯವರನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸುತ್ತಿದ್ದಾರೆ. ಇದಿಷ್ಟು ಹೊರನೋಟಕ್ಕೆ ಕಾಣುತ್ತಿರುವ ಬೆಳವಣಿಗೆ. ರಾಜಿನಾಮೆ ನೀಡಿದವರು ಮುಂಬೈ ಅಥವಾ ಇನ್ನಾವುದೋ ರೆಸಾರ್ಟಿಗೆ ಹೋಗುವ ಸಾಧ್ಯತೆಗಳಿವೆ.

ಸರ್ಕಾರ ಆತಂಕದಲ್ಲಿರುವುದೂ ಗೊತ್ತಿದ್ದೂ ಸಿಎಂ ಕುಮಾರಸ್ವಾಮಿ ವಿದೇಶದಲ್ಲಿರುವುದು, ದಿನೇಶ ಗುಂಡುರಾವ್ ಕೂಡ ವಿದೇಶದಲ್ಲಿರುವುದು ವಿಚಿತ್ರವಾಗಿದೆ. ಮಂಗಳವಾರದವರೆಗೂ ಟೈಮ್ ಸಿಕ್ಕಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಶಾಸಕರನ್ನು ಉಳಿಸಿಕೊಳ್ಳಲು ಅವಕಾಶ ಸಿಕ್ಕಿದೆ. ರಾಮಲಿಂಗಾರೆಡ್ಡಿಯ ನಿರ್ಧಾರ ಈಗ ಮುಖ್ಯವಾಗಿದೆ. ಈಗಿರುವ ಕಾಂಗ್ರೆಸ್ ಸಚಿವರಿಂದ ಸಚಿವ ಸ್ಥಾನ ಹಿಂಪಡೆದು, ಅತೃಪ್ತರಿಗೆ ಸಚಿವ ಪಟ್ಟು ನೀಡಬಹುದು.

ಆದರೆ, ಇವತ್ತಿನ ಒಟ್ಟು ಬೆಳವಣಿಗೆಗಳು ಮಾತ್ರ ಅಸಹ್ಯಕರವೇ ಆಗಿದ್ದವು. ಸ್ಪೀಕರ್‍ಗೆ ಸಂದೇಶ ಕೊಡದೇ, ಮಾಧ್ಯಮದವರನ್ನು ಕರೆದುಕೊಂಡು ಹೋಗಿ ಸ್ಪೀಕರ್ ಕಚೇರಿಯಲ್ಲಿ ಟೆಂಟು ಹಾಕಿದ್ದು, ಅಲ್ಲಿಗೆ ಡಿಕೆ ಶಿವಕುಮಾರ್ ನುಗ್ಗಿದ್ದು, ಚಾನೆಲ್‍ಗಳು ಬಿದ್ದೇ ಹೋಯ್ತು ಎಂದು ಅರಚಿ ಸುಸ್ತಾಗಿದ್ದು… ಇಲ್ಲಿ ಯಾರಿಗೂ ತಾಳ್ಮೆಯಿಲ್ಲ. ಯಾವ ನಿಯಮ ಪಾಲನೆಯೂ ಬೇಕಾಗಿಲ್ಲ. ಒಟ್ಟಿನಲ್ಲಿ ಒಂದು ಟ್ರೈಲರ್ ಅನ್ನು ರಾಜ್ಯದ ಜನತೆ ವೀಕ್ಷಿಸಿ ಮನರಂಜನೆ ಪಡೆದಿದ್ದಾರೆ.

ಹೊಸ ಸರ್ಕಾರ ಬರುತ್ತೋ, ರಾಷ್ಟ್ರಪತಿ ಆಡಳಿತವೋ, ಮೈತ್ರಿ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಯೋ? ಎಲ್ಲ ಸಾಧ್ಯತೆಗಳೂ ಇವೆ. ರೆಸಾರ್ಟ್ ರಾಜಕಾರಣ ಮತ್ತೆ ಗರಿಗೆದರುತ್ತಿದೆ ಎಂಬುದಂತೂ ಸ್ಪಷ್ಟ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...