Homeಕರ್ನಾಟಕಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

ಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

- Advertisement -
- Advertisement -

ನಾಲ್ಕೈದು ತಾಸುಗಳ ಪೊಲಿಟಿಕಲ್ ಹೈಡ್ರಾಮಾ ನಡೆದಷ್ಟೇ ವೇಗವಾಗಿ ತಾತ್ಕಾಲಿಕವಾಗಿ ತಣ್ಣಗಾಗಿದೆ. ಒಂತರಾ ರಾಜ್ಯದ ಬಹುಭಾಗಗಳಲ್ಲಿ ರಪ್ ರಪ್ ಅಂತ ಹೊಡೆಯಲು ಶುರು ಮಾಡಿ, ಹತ್ತೇ ನಿಮಿಷದಲ್ಲಿ ಪಟ್ ಅಂತ ನಿಂತು ಹೋಗುತ್ತಿರುವ ಮಳೆಯಂತೆ…

ಈ ಐದಾರು ತಾಸುಗಳಲ್ಲಿ ಮೂರು ತಾಸಂತೂ ತಿರುವು ನೀಡುವಂತಹ ಪಿಚ್ಚರ್‍ನಂತೆ ಭಾಸವಾಗಿತು. ಸಿನಿಮಾದ ಪಾತ್ರಧಾರಿಗಳೆಲ್ಲ ಮೂಕನಾಯಕರು. ಅವರು ಸ್ಪೀಕರ್ ಕೊಠಡಿಯಲ್ಲಿ ಹೋಗಿ ಕೂತರು. ಕೆಲವರು (ಅಧಿಕೃತವಾಗಿ 11) ಸ್ಪೀಕರ್ ಕಾರ್ಯದರ್ಶಿಗೆ ರಾಜಿನಾಮೆ ನೀಡಿ ಸ್ವೀಕೃತಿ ಪಡೆದರು. ಅಲ್ಲಿ ಟ್ರಬಲ್‍ಶೂಟರ್ ಖ್ಯಾತಿಯ ಡಿ.ಕೆ ಶಿವಕುಮಾರ್ ಎಂಟ್ರಿ ಕೊಟ್ಟರು. ರಾಜಿನಾಮೆ ಕೊಡಲು ಬಂದಿದ್ದ ಶಾಸಕರ ಪೈಕಿ ಒಂದು ದೊಡ್ದ ಗುಂಪು ರಾಜ್ಯಪಾಲರ ಭವನ ತಲುಪಿತು. ನಾಲ್ವರು ಶಾಸಕರು ಡಿ.ಕೆ ಶಿವಕುಮಾರ್ ಜೊತೆ ಹೋದರು….

‘ಹೊಸ ಸರ್ಕಾರ’ ಎಂಬ ಪಿಚ್ಚರ್ ಹೀಗೆ ಟ್ರೈಲರ್‍ನಲ್ಲಿ ಸದ್ಯಕ್ಕೆ ಸ್ಟಾಪ್ ಆಗಿದೆ. ಇದರ ನಿರ್ದೇಶಕ ಯಾರು, ನಿರ್ಮಾಪಕ ಯಾರು ಎಂಬುದೇ ಇನ್ನೂ ಅಸ್ಪಷ್ಟವಾಗಿದೆ.

ಮಧ್ಯಾಹ್ನ 2.30ರ ಸುಮಾರಿಗೆ ಸ್ಪೀಕರ್ ರಮೇಶಕುಮಾರ್ ಕಾಣಿಸಿಕೊಂಡ ಮೇಲಷ್ಟೇ ಒಂದು ಸ್ಪಷ್ಟ ಚಿತ್ರಣ ಸಿಕ್ಕಿದೆ. ಅವರು ಹೇಳಿದ ಪ್ರಕಾರ, 11 ಶಾಸಕರು ಅವರ ಕಾರ್ಯದರ್ಶಿಗೆ ರಾಜಿನಾಮೆ ಸಲ್ಲಿಸಿದ್ದಾರೆ. ತಮಗೆ ಯಾವುದೇ ಮಾಹಿತಿ ನೀಡದೇ ಶಾಸಕರು ರಾಜಿನಾಮೆ ನೀಡಲು ಬಂದಿದ್ದಾರೆ, ಮೊದಲೆ ಗೊತ್ತಿದ್ದರೆ ನಾನು ನನ್ನ ವೈಯಕ್ತಿಕ ಕೆಲಸ ಬಿಟ್ಟು ಕಚೇರಿಗೆ ಬರುತ್ತಿದ್ದೆ. ನಾಳೆ ರವಿವಾರ ರಜೆ, ಸೋಮವಾರ ನನಗೆ ಪೂರ್ವನಿಗದಿತ ಕಾರ್ಯಕ್ರಮವಿದೆ. ಹೀಗಾಗಿ ನಾನು ಮಂಗಳವಾರ ಕಚೇರಿಗೆ ಬಂದು ಎಲ್ಲವನ್ನೂ ಪರಿಶೀಲಿಸುವೆ ಎನ್ನುವ ಮೂಲಕ ಶನಿವಾರದ ಈ ಹಗಲು ಹೈಡ್ರಾಮಾಕ್ಕೆ ತಕ್ಷಣದ ಬ್ರೇಕ್ ಹಾಕಿದ್ದಾರೆ. ಗಂಟಲು ಒಣಗಿಸಿಕೊಂಡ ಆ್ಯಂಕರ್‍ಗಳು ನೀರು ಕುಡಿದು ವಿಶ್ಲೇಷಣೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಹೈಡ್ರಾಮಾದ ಪಾತ್ರಧಾರಿಗಳು
ಇವತ್ತು ದಿಢೀರ್ ಎನಿಸುವಂತೆ ನಡೆದ ಈ ರಾಜಿನಾಮೆ ಪ್ರಸಂಗ ಪೂರ್ವ ನಿಯೋಜಿತವಾಗಿತ್ತು, ಪಕ್ಕಾ ವ್ಯವಸ್ಥಿತವಾಗಿತ್ತು. ಇಲ್ಲೆಲ್ಲೂ ಬಿಜೆಪಿ ಸೀನ್‍ನಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಈ ಸಾರಿ ಆಶ್ಚರ್ಯವೆಂದರೆ ಈ ಗುಂಪಿನಲ್ಲಿ ಜೆಡಿಎಸ್‍ನ ಮೂವರು ಶಾಸಕರು, ಸಿದ್ರಾಮಯ್ಯನವರ ಬೆಂಬಲಿಗರಾದ ಮೂವರು ಬೆಂಗಳೂರು ಶಾಸಕರು, ಇತ್ತೀಚೆಗೆ ಮುನಿಸಿಕೊಂಡಿರುವ ರಾಮಲಿಂಗಾರೆಡ್ಡಿ, ಅವರ ಪುತ್ರಿ ಸೌಮ್ಯರೆಡ್ಡಿ, ಅಂಜಲಿ ನಿಂಬಾಳ್ಕರ್ ಕೂಡ ಇದ್ದರು.

ವಿಧಾನಸೌಧದದ ಕಾರಿಡಾರಿನಲ್ಲಿ ಗುಂಪಾಗಿ ಹೋದ 12-14 ಜನರ ಶಾಸಕರ ತಂಡ ರಾಜಿನಾಮೆ ನೀಡಿಯೇ ಸಿದ್ದ ಎಂಬ ಧಾವಂತದಲ್ಲಿ ಸ್ಪೀಕರ್ ಕಚೇರಿ ತಲುಪಿ ಅಲ್ಲಿ ಆಸೀನರಾದರು. ಅಲ್ಲಿ ಕಾಣಿಸಿಕೊಂಡವರು ಮತ್ತು ಕೇಳಲ್ಪಟ್ಟ ಹೆಸರುಗಳು:
ಕಾಂಗ್ರೆಸ್: ರಾಮಲಿಂಗಾರೆಡ್ಡಿ, ಎಸ್. ಟಿ. ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನಂ, ಸೌಮ್ಯರೆಡ್ಡಿ, ರೋಶನ್ ಬೇಗ್, ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ, ನಾಗೇಂದ್ರ, ಸುಧಾಕರರೆಡ್ಡಿ, ಸುಬ್ಬಾರೆಡ್ಡಿ, ಬಸನಗೌಡ ದದ್ದಲ್, ಮಹೇಶ ಕುಮಟಳ್ಳಿ, ಆನೇಕಲ್ ಶಿವಣ್ಣ, ಆನಂದ್‍ಸಿಂಗ್, ಶಿವರಾಮ್ ಹೆಬ್ಬಾರ್…

ಜೆಡಿಎಸ್: ಎಚ್ ವಿಶ್ವನಾಥ್, ಕೆ. ಗೋಪಾಲಯ್ಯ, ಕೆ.ಆರ್ ಪೇಟೆಯ ನಾರಾಯಣಗೌಡ..

ಇಷ್ಟರಲ್ಲಿ ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದವರು

ರಾಮಲಿಂಗಾರೆಡ್ಡಿ, ಎಚ್ ವಿಶ್ವನಾಥ್, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ್, ಬೈರತಿ ಬಸವರಾಜ, ನಾರಾಯಂಗೌಡ, ಶಿವರಾಮ್ ಹೆಬ್ಬಾರ್, ಮಹೇಶ ಕುಮಟಳ್ಳಿ, ಕೆ. ಗೋಪಾಲಯ್ಯ, ಜಾರಕಿಹೊಳಿ, ಆನಂದಸಿಂಗ್ ( ಕೊನೆಯ ಇಬ್ಬರು ಮೊನ್ನೆಯೇ ಸಲ್ಲಿಸಿದ್ದರು)..

ಈಗ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದೆ. ಇನ್ನೊಂದು ಕಡೆ ಡಿ.ಕೆ. ಶಿವಕುಮಾರ್ ರಾಮಲಿಂಗಾರೆಡ್ಡಿಯವರನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸುತ್ತಿದ್ದಾರೆ. ಇದಿಷ್ಟು ಹೊರನೋಟಕ್ಕೆ ಕಾಣುತ್ತಿರುವ ಬೆಳವಣಿಗೆ. ರಾಜಿನಾಮೆ ನೀಡಿದವರು ಮುಂಬೈ ಅಥವಾ ಇನ್ನಾವುದೋ ರೆಸಾರ್ಟಿಗೆ ಹೋಗುವ ಸಾಧ್ಯತೆಗಳಿವೆ.

ಸರ್ಕಾರ ಆತಂಕದಲ್ಲಿರುವುದೂ ಗೊತ್ತಿದ್ದೂ ಸಿಎಂ ಕುಮಾರಸ್ವಾಮಿ ವಿದೇಶದಲ್ಲಿರುವುದು, ದಿನೇಶ ಗುಂಡುರಾವ್ ಕೂಡ ವಿದೇಶದಲ್ಲಿರುವುದು ವಿಚಿತ್ರವಾಗಿದೆ. ಮಂಗಳವಾರದವರೆಗೂ ಟೈಮ್ ಸಿಕ್ಕಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಶಾಸಕರನ್ನು ಉಳಿಸಿಕೊಳ್ಳಲು ಅವಕಾಶ ಸಿಕ್ಕಿದೆ. ರಾಮಲಿಂಗಾರೆಡ್ಡಿಯ ನಿರ್ಧಾರ ಈಗ ಮುಖ್ಯವಾಗಿದೆ. ಈಗಿರುವ ಕಾಂಗ್ರೆಸ್ ಸಚಿವರಿಂದ ಸಚಿವ ಸ್ಥಾನ ಹಿಂಪಡೆದು, ಅತೃಪ್ತರಿಗೆ ಸಚಿವ ಪಟ್ಟು ನೀಡಬಹುದು.

ಆದರೆ, ಇವತ್ತಿನ ಒಟ್ಟು ಬೆಳವಣಿಗೆಗಳು ಮಾತ್ರ ಅಸಹ್ಯಕರವೇ ಆಗಿದ್ದವು. ಸ್ಪೀಕರ್‍ಗೆ ಸಂದೇಶ ಕೊಡದೇ, ಮಾಧ್ಯಮದವರನ್ನು ಕರೆದುಕೊಂಡು ಹೋಗಿ ಸ್ಪೀಕರ್ ಕಚೇರಿಯಲ್ಲಿ ಟೆಂಟು ಹಾಕಿದ್ದು, ಅಲ್ಲಿಗೆ ಡಿಕೆ ಶಿವಕುಮಾರ್ ನುಗ್ಗಿದ್ದು, ಚಾನೆಲ್‍ಗಳು ಬಿದ್ದೇ ಹೋಯ್ತು ಎಂದು ಅರಚಿ ಸುಸ್ತಾಗಿದ್ದು… ಇಲ್ಲಿ ಯಾರಿಗೂ ತಾಳ್ಮೆಯಿಲ್ಲ. ಯಾವ ನಿಯಮ ಪಾಲನೆಯೂ ಬೇಕಾಗಿಲ್ಲ. ಒಟ್ಟಿನಲ್ಲಿ ಒಂದು ಟ್ರೈಲರ್ ಅನ್ನು ರಾಜ್ಯದ ಜನತೆ ವೀಕ್ಷಿಸಿ ಮನರಂಜನೆ ಪಡೆದಿದ್ದಾರೆ.

ಹೊಸ ಸರ್ಕಾರ ಬರುತ್ತೋ, ರಾಷ್ಟ್ರಪತಿ ಆಡಳಿತವೋ, ಮೈತ್ರಿ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಯೋ? ಎಲ್ಲ ಸಾಧ್ಯತೆಗಳೂ ಇವೆ. ರೆಸಾರ್ಟ್ ರಾಜಕಾರಣ ಮತ್ತೆ ಗರಿಗೆದರುತ್ತಿದೆ ಎಂಬುದಂತೂ ಸ್ಪಷ್ಟ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...