Homeಕರ್ನಾಟಕಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

ಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

- Advertisement -
- Advertisement -

ನಾಲ್ಕೈದು ತಾಸುಗಳ ಪೊಲಿಟಿಕಲ್ ಹೈಡ್ರಾಮಾ ನಡೆದಷ್ಟೇ ವೇಗವಾಗಿ ತಾತ್ಕಾಲಿಕವಾಗಿ ತಣ್ಣಗಾಗಿದೆ. ಒಂತರಾ ರಾಜ್ಯದ ಬಹುಭಾಗಗಳಲ್ಲಿ ರಪ್ ರಪ್ ಅಂತ ಹೊಡೆಯಲು ಶುರು ಮಾಡಿ, ಹತ್ತೇ ನಿಮಿಷದಲ್ಲಿ ಪಟ್ ಅಂತ ನಿಂತು ಹೋಗುತ್ತಿರುವ ಮಳೆಯಂತೆ…

ಈ ಐದಾರು ತಾಸುಗಳಲ್ಲಿ ಮೂರು ತಾಸಂತೂ ತಿರುವು ನೀಡುವಂತಹ ಪಿಚ್ಚರ್‍ನಂತೆ ಭಾಸವಾಗಿತು. ಸಿನಿಮಾದ ಪಾತ್ರಧಾರಿಗಳೆಲ್ಲ ಮೂಕನಾಯಕರು. ಅವರು ಸ್ಪೀಕರ್ ಕೊಠಡಿಯಲ್ಲಿ ಹೋಗಿ ಕೂತರು. ಕೆಲವರು (ಅಧಿಕೃತವಾಗಿ 11) ಸ್ಪೀಕರ್ ಕಾರ್ಯದರ್ಶಿಗೆ ರಾಜಿನಾಮೆ ನೀಡಿ ಸ್ವೀಕೃತಿ ಪಡೆದರು. ಅಲ್ಲಿ ಟ್ರಬಲ್‍ಶೂಟರ್ ಖ್ಯಾತಿಯ ಡಿ.ಕೆ ಶಿವಕುಮಾರ್ ಎಂಟ್ರಿ ಕೊಟ್ಟರು. ರಾಜಿನಾಮೆ ಕೊಡಲು ಬಂದಿದ್ದ ಶಾಸಕರ ಪೈಕಿ ಒಂದು ದೊಡ್ದ ಗುಂಪು ರಾಜ್ಯಪಾಲರ ಭವನ ತಲುಪಿತು. ನಾಲ್ವರು ಶಾಸಕರು ಡಿ.ಕೆ ಶಿವಕುಮಾರ್ ಜೊತೆ ಹೋದರು….

‘ಹೊಸ ಸರ್ಕಾರ’ ಎಂಬ ಪಿಚ್ಚರ್ ಹೀಗೆ ಟ್ರೈಲರ್‍ನಲ್ಲಿ ಸದ್ಯಕ್ಕೆ ಸ್ಟಾಪ್ ಆಗಿದೆ. ಇದರ ನಿರ್ದೇಶಕ ಯಾರು, ನಿರ್ಮಾಪಕ ಯಾರು ಎಂಬುದೇ ಇನ್ನೂ ಅಸ್ಪಷ್ಟವಾಗಿದೆ.

ಮಧ್ಯಾಹ್ನ 2.30ರ ಸುಮಾರಿಗೆ ಸ್ಪೀಕರ್ ರಮೇಶಕುಮಾರ್ ಕಾಣಿಸಿಕೊಂಡ ಮೇಲಷ್ಟೇ ಒಂದು ಸ್ಪಷ್ಟ ಚಿತ್ರಣ ಸಿಕ್ಕಿದೆ. ಅವರು ಹೇಳಿದ ಪ್ರಕಾರ, 11 ಶಾಸಕರು ಅವರ ಕಾರ್ಯದರ್ಶಿಗೆ ರಾಜಿನಾಮೆ ಸಲ್ಲಿಸಿದ್ದಾರೆ. ತಮಗೆ ಯಾವುದೇ ಮಾಹಿತಿ ನೀಡದೇ ಶಾಸಕರು ರಾಜಿನಾಮೆ ನೀಡಲು ಬಂದಿದ್ದಾರೆ, ಮೊದಲೆ ಗೊತ್ತಿದ್ದರೆ ನಾನು ನನ್ನ ವೈಯಕ್ತಿಕ ಕೆಲಸ ಬಿಟ್ಟು ಕಚೇರಿಗೆ ಬರುತ್ತಿದ್ದೆ. ನಾಳೆ ರವಿವಾರ ರಜೆ, ಸೋಮವಾರ ನನಗೆ ಪೂರ್ವನಿಗದಿತ ಕಾರ್ಯಕ್ರಮವಿದೆ. ಹೀಗಾಗಿ ನಾನು ಮಂಗಳವಾರ ಕಚೇರಿಗೆ ಬಂದು ಎಲ್ಲವನ್ನೂ ಪರಿಶೀಲಿಸುವೆ ಎನ್ನುವ ಮೂಲಕ ಶನಿವಾರದ ಈ ಹಗಲು ಹೈಡ್ರಾಮಾಕ್ಕೆ ತಕ್ಷಣದ ಬ್ರೇಕ್ ಹಾಕಿದ್ದಾರೆ. ಗಂಟಲು ಒಣಗಿಸಿಕೊಂಡ ಆ್ಯಂಕರ್‍ಗಳು ನೀರು ಕುಡಿದು ವಿಶ್ಲೇಷಣೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಹೈಡ್ರಾಮಾದ ಪಾತ್ರಧಾರಿಗಳು
ಇವತ್ತು ದಿಢೀರ್ ಎನಿಸುವಂತೆ ನಡೆದ ಈ ರಾಜಿನಾಮೆ ಪ್ರಸಂಗ ಪೂರ್ವ ನಿಯೋಜಿತವಾಗಿತ್ತು, ಪಕ್ಕಾ ವ್ಯವಸ್ಥಿತವಾಗಿತ್ತು. ಇಲ್ಲೆಲ್ಲೂ ಬಿಜೆಪಿ ಸೀನ್‍ನಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಈ ಸಾರಿ ಆಶ್ಚರ್ಯವೆಂದರೆ ಈ ಗುಂಪಿನಲ್ಲಿ ಜೆಡಿಎಸ್‍ನ ಮೂವರು ಶಾಸಕರು, ಸಿದ್ರಾಮಯ್ಯನವರ ಬೆಂಬಲಿಗರಾದ ಮೂವರು ಬೆಂಗಳೂರು ಶಾಸಕರು, ಇತ್ತೀಚೆಗೆ ಮುನಿಸಿಕೊಂಡಿರುವ ರಾಮಲಿಂಗಾರೆಡ್ಡಿ, ಅವರ ಪುತ್ರಿ ಸೌಮ್ಯರೆಡ್ಡಿ, ಅಂಜಲಿ ನಿಂಬಾಳ್ಕರ್ ಕೂಡ ಇದ್ದರು.

ವಿಧಾನಸೌಧದದ ಕಾರಿಡಾರಿನಲ್ಲಿ ಗುಂಪಾಗಿ ಹೋದ 12-14 ಜನರ ಶಾಸಕರ ತಂಡ ರಾಜಿನಾಮೆ ನೀಡಿಯೇ ಸಿದ್ದ ಎಂಬ ಧಾವಂತದಲ್ಲಿ ಸ್ಪೀಕರ್ ಕಚೇರಿ ತಲುಪಿ ಅಲ್ಲಿ ಆಸೀನರಾದರು. ಅಲ್ಲಿ ಕಾಣಿಸಿಕೊಂಡವರು ಮತ್ತು ಕೇಳಲ್ಪಟ್ಟ ಹೆಸರುಗಳು:
ಕಾಂಗ್ರೆಸ್: ರಾಮಲಿಂಗಾರೆಡ್ಡಿ, ಎಸ್. ಟಿ. ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನಂ, ಸೌಮ್ಯರೆಡ್ಡಿ, ರೋಶನ್ ಬೇಗ್, ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ, ನಾಗೇಂದ್ರ, ಸುಧಾಕರರೆಡ್ಡಿ, ಸುಬ್ಬಾರೆಡ್ಡಿ, ಬಸನಗೌಡ ದದ್ದಲ್, ಮಹೇಶ ಕುಮಟಳ್ಳಿ, ಆನೇಕಲ್ ಶಿವಣ್ಣ, ಆನಂದ್‍ಸಿಂಗ್, ಶಿವರಾಮ್ ಹೆಬ್ಬಾರ್…

ಜೆಡಿಎಸ್: ಎಚ್ ವಿಶ್ವನಾಥ್, ಕೆ. ಗೋಪಾಲಯ್ಯ, ಕೆ.ಆರ್ ಪೇಟೆಯ ನಾರಾಯಣಗೌಡ..

ಇಷ್ಟರಲ್ಲಿ ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದವರು

ರಾಮಲಿಂಗಾರೆಡ್ಡಿ, ಎಚ್ ವಿಶ್ವನಾಥ್, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ್, ಬೈರತಿ ಬಸವರಾಜ, ನಾರಾಯಂಗೌಡ, ಶಿವರಾಮ್ ಹೆಬ್ಬಾರ್, ಮಹೇಶ ಕುಮಟಳ್ಳಿ, ಕೆ. ಗೋಪಾಲಯ್ಯ, ಜಾರಕಿಹೊಳಿ, ಆನಂದಸಿಂಗ್ ( ಕೊನೆಯ ಇಬ್ಬರು ಮೊನ್ನೆಯೇ ಸಲ್ಲಿಸಿದ್ದರು)..

ಈಗ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದೆ. ಇನ್ನೊಂದು ಕಡೆ ಡಿ.ಕೆ. ಶಿವಕುಮಾರ್ ರಾಮಲಿಂಗಾರೆಡ್ಡಿಯವರನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸುತ್ತಿದ್ದಾರೆ. ಇದಿಷ್ಟು ಹೊರನೋಟಕ್ಕೆ ಕಾಣುತ್ತಿರುವ ಬೆಳವಣಿಗೆ. ರಾಜಿನಾಮೆ ನೀಡಿದವರು ಮುಂಬೈ ಅಥವಾ ಇನ್ನಾವುದೋ ರೆಸಾರ್ಟಿಗೆ ಹೋಗುವ ಸಾಧ್ಯತೆಗಳಿವೆ.

ಸರ್ಕಾರ ಆತಂಕದಲ್ಲಿರುವುದೂ ಗೊತ್ತಿದ್ದೂ ಸಿಎಂ ಕುಮಾರಸ್ವಾಮಿ ವಿದೇಶದಲ್ಲಿರುವುದು, ದಿನೇಶ ಗುಂಡುರಾವ್ ಕೂಡ ವಿದೇಶದಲ್ಲಿರುವುದು ವಿಚಿತ್ರವಾಗಿದೆ. ಮಂಗಳವಾರದವರೆಗೂ ಟೈಮ್ ಸಿಕ್ಕಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಶಾಸಕರನ್ನು ಉಳಿಸಿಕೊಳ್ಳಲು ಅವಕಾಶ ಸಿಕ್ಕಿದೆ. ರಾಮಲಿಂಗಾರೆಡ್ಡಿಯ ನಿರ್ಧಾರ ಈಗ ಮುಖ್ಯವಾಗಿದೆ. ಈಗಿರುವ ಕಾಂಗ್ರೆಸ್ ಸಚಿವರಿಂದ ಸಚಿವ ಸ್ಥಾನ ಹಿಂಪಡೆದು, ಅತೃಪ್ತರಿಗೆ ಸಚಿವ ಪಟ್ಟು ನೀಡಬಹುದು.

ಆದರೆ, ಇವತ್ತಿನ ಒಟ್ಟು ಬೆಳವಣಿಗೆಗಳು ಮಾತ್ರ ಅಸಹ್ಯಕರವೇ ಆಗಿದ್ದವು. ಸ್ಪೀಕರ್‍ಗೆ ಸಂದೇಶ ಕೊಡದೇ, ಮಾಧ್ಯಮದವರನ್ನು ಕರೆದುಕೊಂಡು ಹೋಗಿ ಸ್ಪೀಕರ್ ಕಚೇರಿಯಲ್ಲಿ ಟೆಂಟು ಹಾಕಿದ್ದು, ಅಲ್ಲಿಗೆ ಡಿಕೆ ಶಿವಕುಮಾರ್ ನುಗ್ಗಿದ್ದು, ಚಾನೆಲ್‍ಗಳು ಬಿದ್ದೇ ಹೋಯ್ತು ಎಂದು ಅರಚಿ ಸುಸ್ತಾಗಿದ್ದು… ಇಲ್ಲಿ ಯಾರಿಗೂ ತಾಳ್ಮೆಯಿಲ್ಲ. ಯಾವ ನಿಯಮ ಪಾಲನೆಯೂ ಬೇಕಾಗಿಲ್ಲ. ಒಟ್ಟಿನಲ್ಲಿ ಒಂದು ಟ್ರೈಲರ್ ಅನ್ನು ರಾಜ್ಯದ ಜನತೆ ವೀಕ್ಷಿಸಿ ಮನರಂಜನೆ ಪಡೆದಿದ್ದಾರೆ.

ಹೊಸ ಸರ್ಕಾರ ಬರುತ್ತೋ, ರಾಷ್ಟ್ರಪತಿ ಆಡಳಿತವೋ, ಮೈತ್ರಿ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಯೋ? ಎಲ್ಲ ಸಾಧ್ಯತೆಗಳೂ ಇವೆ. ರೆಸಾರ್ಟ್ ರಾಜಕಾರಣ ಮತ್ತೆ ಗರಿಗೆದರುತ್ತಿದೆ ಎಂಬುದಂತೂ ಸ್ಪಷ್ಟ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...