Homeಕರ್ನಾಟಕಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

ಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

- Advertisement -
- Advertisement -

ನಾಲ್ಕೈದು ತಾಸುಗಳ ಪೊಲಿಟಿಕಲ್ ಹೈಡ್ರಾಮಾ ನಡೆದಷ್ಟೇ ವೇಗವಾಗಿ ತಾತ್ಕಾಲಿಕವಾಗಿ ತಣ್ಣಗಾಗಿದೆ. ಒಂತರಾ ರಾಜ್ಯದ ಬಹುಭಾಗಗಳಲ್ಲಿ ರಪ್ ರಪ್ ಅಂತ ಹೊಡೆಯಲು ಶುರು ಮಾಡಿ, ಹತ್ತೇ ನಿಮಿಷದಲ್ಲಿ ಪಟ್ ಅಂತ ನಿಂತು ಹೋಗುತ್ತಿರುವ ಮಳೆಯಂತೆ…

ಈ ಐದಾರು ತಾಸುಗಳಲ್ಲಿ ಮೂರು ತಾಸಂತೂ ತಿರುವು ನೀಡುವಂತಹ ಪಿಚ್ಚರ್‍ನಂತೆ ಭಾಸವಾಗಿತು. ಸಿನಿಮಾದ ಪಾತ್ರಧಾರಿಗಳೆಲ್ಲ ಮೂಕನಾಯಕರು. ಅವರು ಸ್ಪೀಕರ್ ಕೊಠಡಿಯಲ್ಲಿ ಹೋಗಿ ಕೂತರು. ಕೆಲವರು (ಅಧಿಕೃತವಾಗಿ 11) ಸ್ಪೀಕರ್ ಕಾರ್ಯದರ್ಶಿಗೆ ರಾಜಿನಾಮೆ ನೀಡಿ ಸ್ವೀಕೃತಿ ಪಡೆದರು. ಅಲ್ಲಿ ಟ್ರಬಲ್‍ಶೂಟರ್ ಖ್ಯಾತಿಯ ಡಿ.ಕೆ ಶಿವಕುಮಾರ್ ಎಂಟ್ರಿ ಕೊಟ್ಟರು. ರಾಜಿನಾಮೆ ಕೊಡಲು ಬಂದಿದ್ದ ಶಾಸಕರ ಪೈಕಿ ಒಂದು ದೊಡ್ದ ಗುಂಪು ರಾಜ್ಯಪಾಲರ ಭವನ ತಲುಪಿತು. ನಾಲ್ವರು ಶಾಸಕರು ಡಿ.ಕೆ ಶಿವಕುಮಾರ್ ಜೊತೆ ಹೋದರು….

‘ಹೊಸ ಸರ್ಕಾರ’ ಎಂಬ ಪಿಚ್ಚರ್ ಹೀಗೆ ಟ್ರೈಲರ್‍ನಲ್ಲಿ ಸದ್ಯಕ್ಕೆ ಸ್ಟಾಪ್ ಆಗಿದೆ. ಇದರ ನಿರ್ದೇಶಕ ಯಾರು, ನಿರ್ಮಾಪಕ ಯಾರು ಎಂಬುದೇ ಇನ್ನೂ ಅಸ್ಪಷ್ಟವಾಗಿದೆ.

ಮಧ್ಯಾಹ್ನ 2.30ರ ಸುಮಾರಿಗೆ ಸ್ಪೀಕರ್ ರಮೇಶಕುಮಾರ್ ಕಾಣಿಸಿಕೊಂಡ ಮೇಲಷ್ಟೇ ಒಂದು ಸ್ಪಷ್ಟ ಚಿತ್ರಣ ಸಿಕ್ಕಿದೆ. ಅವರು ಹೇಳಿದ ಪ್ರಕಾರ, 11 ಶಾಸಕರು ಅವರ ಕಾರ್ಯದರ್ಶಿಗೆ ರಾಜಿನಾಮೆ ಸಲ್ಲಿಸಿದ್ದಾರೆ. ತಮಗೆ ಯಾವುದೇ ಮಾಹಿತಿ ನೀಡದೇ ಶಾಸಕರು ರಾಜಿನಾಮೆ ನೀಡಲು ಬಂದಿದ್ದಾರೆ, ಮೊದಲೆ ಗೊತ್ತಿದ್ದರೆ ನಾನು ನನ್ನ ವೈಯಕ್ತಿಕ ಕೆಲಸ ಬಿಟ್ಟು ಕಚೇರಿಗೆ ಬರುತ್ತಿದ್ದೆ. ನಾಳೆ ರವಿವಾರ ರಜೆ, ಸೋಮವಾರ ನನಗೆ ಪೂರ್ವನಿಗದಿತ ಕಾರ್ಯಕ್ರಮವಿದೆ. ಹೀಗಾಗಿ ನಾನು ಮಂಗಳವಾರ ಕಚೇರಿಗೆ ಬಂದು ಎಲ್ಲವನ್ನೂ ಪರಿಶೀಲಿಸುವೆ ಎನ್ನುವ ಮೂಲಕ ಶನಿವಾರದ ಈ ಹಗಲು ಹೈಡ್ರಾಮಾಕ್ಕೆ ತಕ್ಷಣದ ಬ್ರೇಕ್ ಹಾಕಿದ್ದಾರೆ. ಗಂಟಲು ಒಣಗಿಸಿಕೊಂಡ ಆ್ಯಂಕರ್‍ಗಳು ನೀರು ಕುಡಿದು ವಿಶ್ಲೇಷಣೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಹೈಡ್ರಾಮಾದ ಪಾತ್ರಧಾರಿಗಳು
ಇವತ್ತು ದಿಢೀರ್ ಎನಿಸುವಂತೆ ನಡೆದ ಈ ರಾಜಿನಾಮೆ ಪ್ರಸಂಗ ಪೂರ್ವ ನಿಯೋಜಿತವಾಗಿತ್ತು, ಪಕ್ಕಾ ವ್ಯವಸ್ಥಿತವಾಗಿತ್ತು. ಇಲ್ಲೆಲ್ಲೂ ಬಿಜೆಪಿ ಸೀನ್‍ನಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಈ ಸಾರಿ ಆಶ್ಚರ್ಯವೆಂದರೆ ಈ ಗುಂಪಿನಲ್ಲಿ ಜೆಡಿಎಸ್‍ನ ಮೂವರು ಶಾಸಕರು, ಸಿದ್ರಾಮಯ್ಯನವರ ಬೆಂಬಲಿಗರಾದ ಮೂವರು ಬೆಂಗಳೂರು ಶಾಸಕರು, ಇತ್ತೀಚೆಗೆ ಮುನಿಸಿಕೊಂಡಿರುವ ರಾಮಲಿಂಗಾರೆಡ್ಡಿ, ಅವರ ಪುತ್ರಿ ಸೌಮ್ಯರೆಡ್ಡಿ, ಅಂಜಲಿ ನಿಂಬಾಳ್ಕರ್ ಕೂಡ ಇದ್ದರು.

ವಿಧಾನಸೌಧದದ ಕಾರಿಡಾರಿನಲ್ಲಿ ಗುಂಪಾಗಿ ಹೋದ 12-14 ಜನರ ಶಾಸಕರ ತಂಡ ರಾಜಿನಾಮೆ ನೀಡಿಯೇ ಸಿದ್ದ ಎಂಬ ಧಾವಂತದಲ್ಲಿ ಸ್ಪೀಕರ್ ಕಚೇರಿ ತಲುಪಿ ಅಲ್ಲಿ ಆಸೀನರಾದರು. ಅಲ್ಲಿ ಕಾಣಿಸಿಕೊಂಡವರು ಮತ್ತು ಕೇಳಲ್ಪಟ್ಟ ಹೆಸರುಗಳು:
ಕಾಂಗ್ರೆಸ್: ರಾಮಲಿಂಗಾರೆಡ್ಡಿ, ಎಸ್. ಟಿ. ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನಂ, ಸೌಮ್ಯರೆಡ್ಡಿ, ರೋಶನ್ ಬೇಗ್, ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ, ನಾಗೇಂದ್ರ, ಸುಧಾಕರರೆಡ್ಡಿ, ಸುಬ್ಬಾರೆಡ್ಡಿ, ಬಸನಗೌಡ ದದ್ದಲ್, ಮಹೇಶ ಕುಮಟಳ್ಳಿ, ಆನೇಕಲ್ ಶಿವಣ್ಣ, ಆನಂದ್‍ಸಿಂಗ್, ಶಿವರಾಮ್ ಹೆಬ್ಬಾರ್…

ಜೆಡಿಎಸ್: ಎಚ್ ವಿಶ್ವನಾಥ್, ಕೆ. ಗೋಪಾಲಯ್ಯ, ಕೆ.ಆರ್ ಪೇಟೆಯ ನಾರಾಯಣಗೌಡ..

ಇಷ್ಟರಲ್ಲಿ ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದವರು

ರಾಮಲಿಂಗಾರೆಡ್ಡಿ, ಎಚ್ ವಿಶ್ವನಾಥ್, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ್, ಬೈರತಿ ಬಸವರಾಜ, ನಾರಾಯಂಗೌಡ, ಶಿವರಾಮ್ ಹೆಬ್ಬಾರ್, ಮಹೇಶ ಕುಮಟಳ್ಳಿ, ಕೆ. ಗೋಪಾಲಯ್ಯ, ಜಾರಕಿಹೊಳಿ, ಆನಂದಸಿಂಗ್ ( ಕೊನೆಯ ಇಬ್ಬರು ಮೊನ್ನೆಯೇ ಸಲ್ಲಿಸಿದ್ದರು)..

ಈಗ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದೆ. ಇನ್ನೊಂದು ಕಡೆ ಡಿ.ಕೆ. ಶಿವಕುಮಾರ್ ರಾಮಲಿಂಗಾರೆಡ್ಡಿಯವರನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸುತ್ತಿದ್ದಾರೆ. ಇದಿಷ್ಟು ಹೊರನೋಟಕ್ಕೆ ಕಾಣುತ್ತಿರುವ ಬೆಳವಣಿಗೆ. ರಾಜಿನಾಮೆ ನೀಡಿದವರು ಮುಂಬೈ ಅಥವಾ ಇನ್ನಾವುದೋ ರೆಸಾರ್ಟಿಗೆ ಹೋಗುವ ಸಾಧ್ಯತೆಗಳಿವೆ.

ಸರ್ಕಾರ ಆತಂಕದಲ್ಲಿರುವುದೂ ಗೊತ್ತಿದ್ದೂ ಸಿಎಂ ಕುಮಾರಸ್ವಾಮಿ ವಿದೇಶದಲ್ಲಿರುವುದು, ದಿನೇಶ ಗುಂಡುರಾವ್ ಕೂಡ ವಿದೇಶದಲ್ಲಿರುವುದು ವಿಚಿತ್ರವಾಗಿದೆ. ಮಂಗಳವಾರದವರೆಗೂ ಟೈಮ್ ಸಿಕ್ಕಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಶಾಸಕರನ್ನು ಉಳಿಸಿಕೊಳ್ಳಲು ಅವಕಾಶ ಸಿಕ್ಕಿದೆ. ರಾಮಲಿಂಗಾರೆಡ್ಡಿಯ ನಿರ್ಧಾರ ಈಗ ಮುಖ್ಯವಾಗಿದೆ. ಈಗಿರುವ ಕಾಂಗ್ರೆಸ್ ಸಚಿವರಿಂದ ಸಚಿವ ಸ್ಥಾನ ಹಿಂಪಡೆದು, ಅತೃಪ್ತರಿಗೆ ಸಚಿವ ಪಟ್ಟು ನೀಡಬಹುದು.

ಆದರೆ, ಇವತ್ತಿನ ಒಟ್ಟು ಬೆಳವಣಿಗೆಗಳು ಮಾತ್ರ ಅಸಹ್ಯಕರವೇ ಆಗಿದ್ದವು. ಸ್ಪೀಕರ್‍ಗೆ ಸಂದೇಶ ಕೊಡದೇ, ಮಾಧ್ಯಮದವರನ್ನು ಕರೆದುಕೊಂಡು ಹೋಗಿ ಸ್ಪೀಕರ್ ಕಚೇರಿಯಲ್ಲಿ ಟೆಂಟು ಹಾಕಿದ್ದು, ಅಲ್ಲಿಗೆ ಡಿಕೆ ಶಿವಕುಮಾರ್ ನುಗ್ಗಿದ್ದು, ಚಾನೆಲ್‍ಗಳು ಬಿದ್ದೇ ಹೋಯ್ತು ಎಂದು ಅರಚಿ ಸುಸ್ತಾಗಿದ್ದು… ಇಲ್ಲಿ ಯಾರಿಗೂ ತಾಳ್ಮೆಯಿಲ್ಲ. ಯಾವ ನಿಯಮ ಪಾಲನೆಯೂ ಬೇಕಾಗಿಲ್ಲ. ಒಟ್ಟಿನಲ್ಲಿ ಒಂದು ಟ್ರೈಲರ್ ಅನ್ನು ರಾಜ್ಯದ ಜನತೆ ವೀಕ್ಷಿಸಿ ಮನರಂಜನೆ ಪಡೆದಿದ್ದಾರೆ.

ಹೊಸ ಸರ್ಕಾರ ಬರುತ್ತೋ, ರಾಷ್ಟ್ರಪತಿ ಆಡಳಿತವೋ, ಮೈತ್ರಿ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಯೋ? ಎಲ್ಲ ಸಾಧ್ಯತೆಗಳೂ ಇವೆ. ರೆಸಾರ್ಟ್ ರಾಜಕಾರಣ ಮತ್ತೆ ಗರಿಗೆದರುತ್ತಿದೆ ಎಂಬುದಂತೂ ಸ್ಪಷ್ಟ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...