Homeಕರ್ನಾಟಕಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

ಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

- Advertisement -
- Advertisement -

ನಾಲ್ಕೈದು ತಾಸುಗಳ ಪೊಲಿಟಿಕಲ್ ಹೈಡ್ರಾಮಾ ನಡೆದಷ್ಟೇ ವೇಗವಾಗಿ ತಾತ್ಕಾಲಿಕವಾಗಿ ತಣ್ಣಗಾಗಿದೆ. ಒಂತರಾ ರಾಜ್ಯದ ಬಹುಭಾಗಗಳಲ್ಲಿ ರಪ್ ರಪ್ ಅಂತ ಹೊಡೆಯಲು ಶುರು ಮಾಡಿ, ಹತ್ತೇ ನಿಮಿಷದಲ್ಲಿ ಪಟ್ ಅಂತ ನಿಂತು ಹೋಗುತ್ತಿರುವ ಮಳೆಯಂತೆ…

ಈ ಐದಾರು ತಾಸುಗಳಲ್ಲಿ ಮೂರು ತಾಸಂತೂ ತಿರುವು ನೀಡುವಂತಹ ಪಿಚ್ಚರ್‍ನಂತೆ ಭಾಸವಾಗಿತು. ಸಿನಿಮಾದ ಪಾತ್ರಧಾರಿಗಳೆಲ್ಲ ಮೂಕನಾಯಕರು. ಅವರು ಸ್ಪೀಕರ್ ಕೊಠಡಿಯಲ್ಲಿ ಹೋಗಿ ಕೂತರು. ಕೆಲವರು (ಅಧಿಕೃತವಾಗಿ 11) ಸ್ಪೀಕರ್ ಕಾರ್ಯದರ್ಶಿಗೆ ರಾಜಿನಾಮೆ ನೀಡಿ ಸ್ವೀಕೃತಿ ಪಡೆದರು. ಅಲ್ಲಿ ಟ್ರಬಲ್‍ಶೂಟರ್ ಖ್ಯಾತಿಯ ಡಿ.ಕೆ ಶಿವಕುಮಾರ್ ಎಂಟ್ರಿ ಕೊಟ್ಟರು. ರಾಜಿನಾಮೆ ಕೊಡಲು ಬಂದಿದ್ದ ಶಾಸಕರ ಪೈಕಿ ಒಂದು ದೊಡ್ದ ಗುಂಪು ರಾಜ್ಯಪಾಲರ ಭವನ ತಲುಪಿತು. ನಾಲ್ವರು ಶಾಸಕರು ಡಿ.ಕೆ ಶಿವಕುಮಾರ್ ಜೊತೆ ಹೋದರು….

‘ಹೊಸ ಸರ್ಕಾರ’ ಎಂಬ ಪಿಚ್ಚರ್ ಹೀಗೆ ಟ್ರೈಲರ್‍ನಲ್ಲಿ ಸದ್ಯಕ್ಕೆ ಸ್ಟಾಪ್ ಆಗಿದೆ. ಇದರ ನಿರ್ದೇಶಕ ಯಾರು, ನಿರ್ಮಾಪಕ ಯಾರು ಎಂಬುದೇ ಇನ್ನೂ ಅಸ್ಪಷ್ಟವಾಗಿದೆ.

ಮಧ್ಯಾಹ್ನ 2.30ರ ಸುಮಾರಿಗೆ ಸ್ಪೀಕರ್ ರಮೇಶಕುಮಾರ್ ಕಾಣಿಸಿಕೊಂಡ ಮೇಲಷ್ಟೇ ಒಂದು ಸ್ಪಷ್ಟ ಚಿತ್ರಣ ಸಿಕ್ಕಿದೆ. ಅವರು ಹೇಳಿದ ಪ್ರಕಾರ, 11 ಶಾಸಕರು ಅವರ ಕಾರ್ಯದರ್ಶಿಗೆ ರಾಜಿನಾಮೆ ಸಲ್ಲಿಸಿದ್ದಾರೆ. ತಮಗೆ ಯಾವುದೇ ಮಾಹಿತಿ ನೀಡದೇ ಶಾಸಕರು ರಾಜಿನಾಮೆ ನೀಡಲು ಬಂದಿದ್ದಾರೆ, ಮೊದಲೆ ಗೊತ್ತಿದ್ದರೆ ನಾನು ನನ್ನ ವೈಯಕ್ತಿಕ ಕೆಲಸ ಬಿಟ್ಟು ಕಚೇರಿಗೆ ಬರುತ್ತಿದ್ದೆ. ನಾಳೆ ರವಿವಾರ ರಜೆ, ಸೋಮವಾರ ನನಗೆ ಪೂರ್ವನಿಗದಿತ ಕಾರ್ಯಕ್ರಮವಿದೆ. ಹೀಗಾಗಿ ನಾನು ಮಂಗಳವಾರ ಕಚೇರಿಗೆ ಬಂದು ಎಲ್ಲವನ್ನೂ ಪರಿಶೀಲಿಸುವೆ ಎನ್ನುವ ಮೂಲಕ ಶನಿವಾರದ ಈ ಹಗಲು ಹೈಡ್ರಾಮಾಕ್ಕೆ ತಕ್ಷಣದ ಬ್ರೇಕ್ ಹಾಕಿದ್ದಾರೆ. ಗಂಟಲು ಒಣಗಿಸಿಕೊಂಡ ಆ್ಯಂಕರ್‍ಗಳು ನೀರು ಕುಡಿದು ವಿಶ್ಲೇಷಣೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಹೈಡ್ರಾಮಾದ ಪಾತ್ರಧಾರಿಗಳು
ಇವತ್ತು ದಿಢೀರ್ ಎನಿಸುವಂತೆ ನಡೆದ ಈ ರಾಜಿನಾಮೆ ಪ್ರಸಂಗ ಪೂರ್ವ ನಿಯೋಜಿತವಾಗಿತ್ತು, ಪಕ್ಕಾ ವ್ಯವಸ್ಥಿತವಾಗಿತ್ತು. ಇಲ್ಲೆಲ್ಲೂ ಬಿಜೆಪಿ ಸೀನ್‍ನಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಈ ಸಾರಿ ಆಶ್ಚರ್ಯವೆಂದರೆ ಈ ಗುಂಪಿನಲ್ಲಿ ಜೆಡಿಎಸ್‍ನ ಮೂವರು ಶಾಸಕರು, ಸಿದ್ರಾಮಯ್ಯನವರ ಬೆಂಬಲಿಗರಾದ ಮೂವರು ಬೆಂಗಳೂರು ಶಾಸಕರು, ಇತ್ತೀಚೆಗೆ ಮುನಿಸಿಕೊಂಡಿರುವ ರಾಮಲಿಂಗಾರೆಡ್ಡಿ, ಅವರ ಪುತ್ರಿ ಸೌಮ್ಯರೆಡ್ಡಿ, ಅಂಜಲಿ ನಿಂಬಾಳ್ಕರ್ ಕೂಡ ಇದ್ದರು.

ವಿಧಾನಸೌಧದದ ಕಾರಿಡಾರಿನಲ್ಲಿ ಗುಂಪಾಗಿ ಹೋದ 12-14 ಜನರ ಶಾಸಕರ ತಂಡ ರಾಜಿನಾಮೆ ನೀಡಿಯೇ ಸಿದ್ದ ಎಂಬ ಧಾವಂತದಲ್ಲಿ ಸ್ಪೀಕರ್ ಕಚೇರಿ ತಲುಪಿ ಅಲ್ಲಿ ಆಸೀನರಾದರು. ಅಲ್ಲಿ ಕಾಣಿಸಿಕೊಂಡವರು ಮತ್ತು ಕೇಳಲ್ಪಟ್ಟ ಹೆಸರುಗಳು:
ಕಾಂಗ್ರೆಸ್: ರಾಮಲಿಂಗಾರೆಡ್ಡಿ, ಎಸ್. ಟಿ. ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನಂ, ಸೌಮ್ಯರೆಡ್ಡಿ, ರೋಶನ್ ಬೇಗ್, ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ, ನಾಗೇಂದ್ರ, ಸುಧಾಕರರೆಡ್ಡಿ, ಸುಬ್ಬಾರೆಡ್ಡಿ, ಬಸನಗೌಡ ದದ್ದಲ್, ಮಹೇಶ ಕುಮಟಳ್ಳಿ, ಆನೇಕಲ್ ಶಿವಣ್ಣ, ಆನಂದ್‍ಸಿಂಗ್, ಶಿವರಾಮ್ ಹೆಬ್ಬಾರ್…

ಜೆಡಿಎಸ್: ಎಚ್ ವಿಶ್ವನಾಥ್, ಕೆ. ಗೋಪಾಲಯ್ಯ, ಕೆ.ಆರ್ ಪೇಟೆಯ ನಾರಾಯಣಗೌಡ..

ಇಷ್ಟರಲ್ಲಿ ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದವರು

ರಾಮಲಿಂಗಾರೆಡ್ಡಿ, ಎಚ್ ವಿಶ್ವನಾಥ್, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ್, ಬೈರತಿ ಬಸವರಾಜ, ನಾರಾಯಂಗೌಡ, ಶಿವರಾಮ್ ಹೆಬ್ಬಾರ್, ಮಹೇಶ ಕುಮಟಳ್ಳಿ, ಕೆ. ಗೋಪಾಲಯ್ಯ, ಜಾರಕಿಹೊಳಿ, ಆನಂದಸಿಂಗ್ ( ಕೊನೆಯ ಇಬ್ಬರು ಮೊನ್ನೆಯೇ ಸಲ್ಲಿಸಿದ್ದರು)..

ಈಗ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದೆ. ಇನ್ನೊಂದು ಕಡೆ ಡಿ.ಕೆ. ಶಿವಕುಮಾರ್ ರಾಮಲಿಂಗಾರೆಡ್ಡಿಯವರನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸುತ್ತಿದ್ದಾರೆ. ಇದಿಷ್ಟು ಹೊರನೋಟಕ್ಕೆ ಕಾಣುತ್ತಿರುವ ಬೆಳವಣಿಗೆ. ರಾಜಿನಾಮೆ ನೀಡಿದವರು ಮುಂಬೈ ಅಥವಾ ಇನ್ನಾವುದೋ ರೆಸಾರ್ಟಿಗೆ ಹೋಗುವ ಸಾಧ್ಯತೆಗಳಿವೆ.

ಸರ್ಕಾರ ಆತಂಕದಲ್ಲಿರುವುದೂ ಗೊತ್ತಿದ್ದೂ ಸಿಎಂ ಕುಮಾರಸ್ವಾಮಿ ವಿದೇಶದಲ್ಲಿರುವುದು, ದಿನೇಶ ಗುಂಡುರಾವ್ ಕೂಡ ವಿದೇಶದಲ್ಲಿರುವುದು ವಿಚಿತ್ರವಾಗಿದೆ. ಮಂಗಳವಾರದವರೆಗೂ ಟೈಮ್ ಸಿಕ್ಕಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಶಾಸಕರನ್ನು ಉಳಿಸಿಕೊಳ್ಳಲು ಅವಕಾಶ ಸಿಕ್ಕಿದೆ. ರಾಮಲಿಂಗಾರೆಡ್ಡಿಯ ನಿರ್ಧಾರ ಈಗ ಮುಖ್ಯವಾಗಿದೆ. ಈಗಿರುವ ಕಾಂಗ್ರೆಸ್ ಸಚಿವರಿಂದ ಸಚಿವ ಸ್ಥಾನ ಹಿಂಪಡೆದು, ಅತೃಪ್ತರಿಗೆ ಸಚಿವ ಪಟ್ಟು ನೀಡಬಹುದು.

ಆದರೆ, ಇವತ್ತಿನ ಒಟ್ಟು ಬೆಳವಣಿಗೆಗಳು ಮಾತ್ರ ಅಸಹ್ಯಕರವೇ ಆಗಿದ್ದವು. ಸ್ಪೀಕರ್‍ಗೆ ಸಂದೇಶ ಕೊಡದೇ, ಮಾಧ್ಯಮದವರನ್ನು ಕರೆದುಕೊಂಡು ಹೋಗಿ ಸ್ಪೀಕರ್ ಕಚೇರಿಯಲ್ಲಿ ಟೆಂಟು ಹಾಕಿದ್ದು, ಅಲ್ಲಿಗೆ ಡಿಕೆ ಶಿವಕುಮಾರ್ ನುಗ್ಗಿದ್ದು, ಚಾನೆಲ್‍ಗಳು ಬಿದ್ದೇ ಹೋಯ್ತು ಎಂದು ಅರಚಿ ಸುಸ್ತಾಗಿದ್ದು… ಇಲ್ಲಿ ಯಾರಿಗೂ ತಾಳ್ಮೆಯಿಲ್ಲ. ಯಾವ ನಿಯಮ ಪಾಲನೆಯೂ ಬೇಕಾಗಿಲ್ಲ. ಒಟ್ಟಿನಲ್ಲಿ ಒಂದು ಟ್ರೈಲರ್ ಅನ್ನು ರಾಜ್ಯದ ಜನತೆ ವೀಕ್ಷಿಸಿ ಮನರಂಜನೆ ಪಡೆದಿದ್ದಾರೆ.

ಹೊಸ ಸರ್ಕಾರ ಬರುತ್ತೋ, ರಾಷ್ಟ್ರಪತಿ ಆಡಳಿತವೋ, ಮೈತ್ರಿ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಯೋ? ಎಲ್ಲ ಸಾಧ್ಯತೆಗಳೂ ಇವೆ. ರೆಸಾರ್ಟ್ ರಾಜಕಾರಣ ಮತ್ತೆ ಗರಿಗೆದರುತ್ತಿದೆ ಎಂಬುದಂತೂ ಸ್ಪಷ್ಟ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...