Homeಕರ್ನಾಟಕಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

ಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

- Advertisement -
- Advertisement -

ನಾಲ್ಕೈದು ತಾಸುಗಳ ಪೊಲಿಟಿಕಲ್ ಹೈಡ್ರಾಮಾ ನಡೆದಷ್ಟೇ ವೇಗವಾಗಿ ತಾತ್ಕಾಲಿಕವಾಗಿ ತಣ್ಣಗಾಗಿದೆ. ಒಂತರಾ ರಾಜ್ಯದ ಬಹುಭಾಗಗಳಲ್ಲಿ ರಪ್ ರಪ್ ಅಂತ ಹೊಡೆಯಲು ಶುರು ಮಾಡಿ, ಹತ್ತೇ ನಿಮಿಷದಲ್ಲಿ ಪಟ್ ಅಂತ ನಿಂತು ಹೋಗುತ್ತಿರುವ ಮಳೆಯಂತೆ…

ಈ ಐದಾರು ತಾಸುಗಳಲ್ಲಿ ಮೂರು ತಾಸಂತೂ ತಿರುವು ನೀಡುವಂತಹ ಪಿಚ್ಚರ್‍ನಂತೆ ಭಾಸವಾಗಿತು. ಸಿನಿಮಾದ ಪಾತ್ರಧಾರಿಗಳೆಲ್ಲ ಮೂಕನಾಯಕರು. ಅವರು ಸ್ಪೀಕರ್ ಕೊಠಡಿಯಲ್ಲಿ ಹೋಗಿ ಕೂತರು. ಕೆಲವರು (ಅಧಿಕೃತವಾಗಿ 11) ಸ್ಪೀಕರ್ ಕಾರ್ಯದರ್ಶಿಗೆ ರಾಜಿನಾಮೆ ನೀಡಿ ಸ್ವೀಕೃತಿ ಪಡೆದರು. ಅಲ್ಲಿ ಟ್ರಬಲ್‍ಶೂಟರ್ ಖ್ಯಾತಿಯ ಡಿ.ಕೆ ಶಿವಕುಮಾರ್ ಎಂಟ್ರಿ ಕೊಟ್ಟರು. ರಾಜಿನಾಮೆ ಕೊಡಲು ಬಂದಿದ್ದ ಶಾಸಕರ ಪೈಕಿ ಒಂದು ದೊಡ್ದ ಗುಂಪು ರಾಜ್ಯಪಾಲರ ಭವನ ತಲುಪಿತು. ನಾಲ್ವರು ಶಾಸಕರು ಡಿ.ಕೆ ಶಿವಕುಮಾರ್ ಜೊತೆ ಹೋದರು….

‘ಹೊಸ ಸರ್ಕಾರ’ ಎಂಬ ಪಿಚ್ಚರ್ ಹೀಗೆ ಟ್ರೈಲರ್‍ನಲ್ಲಿ ಸದ್ಯಕ್ಕೆ ಸ್ಟಾಪ್ ಆಗಿದೆ. ಇದರ ನಿರ್ದೇಶಕ ಯಾರು, ನಿರ್ಮಾಪಕ ಯಾರು ಎಂಬುದೇ ಇನ್ನೂ ಅಸ್ಪಷ್ಟವಾಗಿದೆ.

ಮಧ್ಯಾಹ್ನ 2.30ರ ಸುಮಾರಿಗೆ ಸ್ಪೀಕರ್ ರಮೇಶಕುಮಾರ್ ಕಾಣಿಸಿಕೊಂಡ ಮೇಲಷ್ಟೇ ಒಂದು ಸ್ಪಷ್ಟ ಚಿತ್ರಣ ಸಿಕ್ಕಿದೆ. ಅವರು ಹೇಳಿದ ಪ್ರಕಾರ, 11 ಶಾಸಕರು ಅವರ ಕಾರ್ಯದರ್ಶಿಗೆ ರಾಜಿನಾಮೆ ಸಲ್ಲಿಸಿದ್ದಾರೆ. ತಮಗೆ ಯಾವುದೇ ಮಾಹಿತಿ ನೀಡದೇ ಶಾಸಕರು ರಾಜಿನಾಮೆ ನೀಡಲು ಬಂದಿದ್ದಾರೆ, ಮೊದಲೆ ಗೊತ್ತಿದ್ದರೆ ನಾನು ನನ್ನ ವೈಯಕ್ತಿಕ ಕೆಲಸ ಬಿಟ್ಟು ಕಚೇರಿಗೆ ಬರುತ್ತಿದ್ದೆ. ನಾಳೆ ರವಿವಾರ ರಜೆ, ಸೋಮವಾರ ನನಗೆ ಪೂರ್ವನಿಗದಿತ ಕಾರ್ಯಕ್ರಮವಿದೆ. ಹೀಗಾಗಿ ನಾನು ಮಂಗಳವಾರ ಕಚೇರಿಗೆ ಬಂದು ಎಲ್ಲವನ್ನೂ ಪರಿಶೀಲಿಸುವೆ ಎನ್ನುವ ಮೂಲಕ ಶನಿವಾರದ ಈ ಹಗಲು ಹೈಡ್ರಾಮಾಕ್ಕೆ ತಕ್ಷಣದ ಬ್ರೇಕ್ ಹಾಕಿದ್ದಾರೆ. ಗಂಟಲು ಒಣಗಿಸಿಕೊಂಡ ಆ್ಯಂಕರ್‍ಗಳು ನೀರು ಕುಡಿದು ವಿಶ್ಲೇಷಣೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಹೈಡ್ರಾಮಾದ ಪಾತ್ರಧಾರಿಗಳು
ಇವತ್ತು ದಿಢೀರ್ ಎನಿಸುವಂತೆ ನಡೆದ ಈ ರಾಜಿನಾಮೆ ಪ್ರಸಂಗ ಪೂರ್ವ ನಿಯೋಜಿತವಾಗಿತ್ತು, ಪಕ್ಕಾ ವ್ಯವಸ್ಥಿತವಾಗಿತ್ತು. ಇಲ್ಲೆಲ್ಲೂ ಬಿಜೆಪಿ ಸೀನ್‍ನಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಈ ಸಾರಿ ಆಶ್ಚರ್ಯವೆಂದರೆ ಈ ಗುಂಪಿನಲ್ಲಿ ಜೆಡಿಎಸ್‍ನ ಮೂವರು ಶಾಸಕರು, ಸಿದ್ರಾಮಯ್ಯನವರ ಬೆಂಬಲಿಗರಾದ ಮೂವರು ಬೆಂಗಳೂರು ಶಾಸಕರು, ಇತ್ತೀಚೆಗೆ ಮುನಿಸಿಕೊಂಡಿರುವ ರಾಮಲಿಂಗಾರೆಡ್ಡಿ, ಅವರ ಪುತ್ರಿ ಸೌಮ್ಯರೆಡ್ಡಿ, ಅಂಜಲಿ ನಿಂಬಾಳ್ಕರ್ ಕೂಡ ಇದ್ದರು.

ವಿಧಾನಸೌಧದದ ಕಾರಿಡಾರಿನಲ್ಲಿ ಗುಂಪಾಗಿ ಹೋದ 12-14 ಜನರ ಶಾಸಕರ ತಂಡ ರಾಜಿನಾಮೆ ನೀಡಿಯೇ ಸಿದ್ದ ಎಂಬ ಧಾವಂತದಲ್ಲಿ ಸ್ಪೀಕರ್ ಕಚೇರಿ ತಲುಪಿ ಅಲ್ಲಿ ಆಸೀನರಾದರು. ಅಲ್ಲಿ ಕಾಣಿಸಿಕೊಂಡವರು ಮತ್ತು ಕೇಳಲ್ಪಟ್ಟ ಹೆಸರುಗಳು:
ಕಾಂಗ್ರೆಸ್: ರಾಮಲಿಂಗಾರೆಡ್ಡಿ, ಎಸ್. ಟಿ. ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನಂ, ಸೌಮ್ಯರೆಡ್ಡಿ, ರೋಶನ್ ಬೇಗ್, ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ, ನಾಗೇಂದ್ರ, ಸುಧಾಕರರೆಡ್ಡಿ, ಸುಬ್ಬಾರೆಡ್ಡಿ, ಬಸನಗೌಡ ದದ್ದಲ್, ಮಹೇಶ ಕುಮಟಳ್ಳಿ, ಆನೇಕಲ್ ಶಿವಣ್ಣ, ಆನಂದ್‍ಸಿಂಗ್, ಶಿವರಾಮ್ ಹೆಬ್ಬಾರ್…

ಜೆಡಿಎಸ್: ಎಚ್ ವಿಶ್ವನಾಥ್, ಕೆ. ಗೋಪಾಲಯ್ಯ, ಕೆ.ಆರ್ ಪೇಟೆಯ ನಾರಾಯಣಗೌಡ..

ಇಷ್ಟರಲ್ಲಿ ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದವರು

ರಾಮಲಿಂಗಾರೆಡ್ಡಿ, ಎಚ್ ವಿಶ್ವನಾಥ್, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ್, ಬೈರತಿ ಬಸವರಾಜ, ನಾರಾಯಂಗೌಡ, ಶಿವರಾಮ್ ಹೆಬ್ಬಾರ್, ಮಹೇಶ ಕುಮಟಳ್ಳಿ, ಕೆ. ಗೋಪಾಲಯ್ಯ, ಜಾರಕಿಹೊಳಿ, ಆನಂದಸಿಂಗ್ ( ಕೊನೆಯ ಇಬ್ಬರು ಮೊನ್ನೆಯೇ ಸಲ್ಲಿಸಿದ್ದರು)..

ಈಗ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದೆ. ಇನ್ನೊಂದು ಕಡೆ ಡಿ.ಕೆ. ಶಿವಕುಮಾರ್ ರಾಮಲಿಂಗಾರೆಡ್ಡಿಯವರನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸುತ್ತಿದ್ದಾರೆ. ಇದಿಷ್ಟು ಹೊರನೋಟಕ್ಕೆ ಕಾಣುತ್ತಿರುವ ಬೆಳವಣಿಗೆ. ರಾಜಿನಾಮೆ ನೀಡಿದವರು ಮುಂಬೈ ಅಥವಾ ಇನ್ನಾವುದೋ ರೆಸಾರ್ಟಿಗೆ ಹೋಗುವ ಸಾಧ್ಯತೆಗಳಿವೆ.

ಸರ್ಕಾರ ಆತಂಕದಲ್ಲಿರುವುದೂ ಗೊತ್ತಿದ್ದೂ ಸಿಎಂ ಕುಮಾರಸ್ವಾಮಿ ವಿದೇಶದಲ್ಲಿರುವುದು, ದಿನೇಶ ಗುಂಡುರಾವ್ ಕೂಡ ವಿದೇಶದಲ್ಲಿರುವುದು ವಿಚಿತ್ರವಾಗಿದೆ. ಮಂಗಳವಾರದವರೆಗೂ ಟೈಮ್ ಸಿಕ್ಕಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಶಾಸಕರನ್ನು ಉಳಿಸಿಕೊಳ್ಳಲು ಅವಕಾಶ ಸಿಕ್ಕಿದೆ. ರಾಮಲಿಂಗಾರೆಡ್ಡಿಯ ನಿರ್ಧಾರ ಈಗ ಮುಖ್ಯವಾಗಿದೆ. ಈಗಿರುವ ಕಾಂಗ್ರೆಸ್ ಸಚಿವರಿಂದ ಸಚಿವ ಸ್ಥಾನ ಹಿಂಪಡೆದು, ಅತೃಪ್ತರಿಗೆ ಸಚಿವ ಪಟ್ಟು ನೀಡಬಹುದು.

ಆದರೆ, ಇವತ್ತಿನ ಒಟ್ಟು ಬೆಳವಣಿಗೆಗಳು ಮಾತ್ರ ಅಸಹ್ಯಕರವೇ ಆಗಿದ್ದವು. ಸ್ಪೀಕರ್‍ಗೆ ಸಂದೇಶ ಕೊಡದೇ, ಮಾಧ್ಯಮದವರನ್ನು ಕರೆದುಕೊಂಡು ಹೋಗಿ ಸ್ಪೀಕರ್ ಕಚೇರಿಯಲ್ಲಿ ಟೆಂಟು ಹಾಕಿದ್ದು, ಅಲ್ಲಿಗೆ ಡಿಕೆ ಶಿವಕುಮಾರ್ ನುಗ್ಗಿದ್ದು, ಚಾನೆಲ್‍ಗಳು ಬಿದ್ದೇ ಹೋಯ್ತು ಎಂದು ಅರಚಿ ಸುಸ್ತಾಗಿದ್ದು… ಇಲ್ಲಿ ಯಾರಿಗೂ ತಾಳ್ಮೆಯಿಲ್ಲ. ಯಾವ ನಿಯಮ ಪಾಲನೆಯೂ ಬೇಕಾಗಿಲ್ಲ. ಒಟ್ಟಿನಲ್ಲಿ ಒಂದು ಟ್ರೈಲರ್ ಅನ್ನು ರಾಜ್ಯದ ಜನತೆ ವೀಕ್ಷಿಸಿ ಮನರಂಜನೆ ಪಡೆದಿದ್ದಾರೆ.

ಹೊಸ ಸರ್ಕಾರ ಬರುತ್ತೋ, ರಾಷ್ಟ್ರಪತಿ ಆಡಳಿತವೋ, ಮೈತ್ರಿ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಯೋ? ಎಲ್ಲ ಸಾಧ್ಯತೆಗಳೂ ಇವೆ. ರೆಸಾರ್ಟ್ ರಾಜಕಾರಣ ಮತ್ತೆ ಗರಿಗೆದರುತ್ತಿದೆ ಎಂಬುದಂತೂ ಸ್ಪಷ್ಟ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...