Homeಕರ್ನಾಟಕಇಂದಿನಿಂದ ವಿಧಾನಮಂಡಲದ ಅಧಿವೇಶನ: ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ಇಂದಿನಿಂದ ವಿಧಾನಮಂಡಲದ ಅಧಿವೇಶನ: ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

- Advertisement -
- Advertisement -

ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಇಂದಿನಿಂದ (ಆಗಸ್ಟ್ 11, ಸೋಮವಾರ) ಆರಂಭಗೊಳ್ಳಲಿದೆ. ಈಗಾಗಲೇ ಆಡಳಿತ ಮತ್ತು ಪ್ರತಿಪಕ್ಷಗಳು ತಮ್ಮ ತಮ್ಮ ಅಸ್ತ್ರಗಳನ್ನು ಸಿದ್ದಪಡಿಸಿಕೊಂಡು ಸದನ ಕಣದಲ್ಲಿ ಕದನಕ್ಕೆ ಸಿದ್ದತೆ ಮಾಡಿಕೊಂಡಿವೆ.

ಆಗಸ್ಟ್ 22ರವರೆಗೆ ಒಟ್ಟು 9 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಸರ್ಕಾರವನ್ನು ಇಕ್ಕಟ್ಟಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಿದ್ದತೆ ಮಾಡಿಕೊಂಡರೆ, ಅತ್ತ ಆಡಳಿತ ಪಕ್ಷ ಕೂಡ ಕೆಲವೊಂದು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳನ್ನು ಕಟ್ಟಿ ಹಾಕಲು ತಯಾರಿ ನಡೆಸಿದೆ.

ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷಗಳು ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರದ ಕೊರತೆ, ಶಾಸಕರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ, ಧರ್ಮಸ್ಥಳದ ಎಸ್‌ಐಟಿ ತನಿಖೆ, ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ದುರಂತ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ರಸ್ತೆ ಸಾರಿಗೆ ನೌಕರರ ಮುಷ್ಕರ, ಬೆಂಗಳೂರಿನಲ್ಲಿ ಬಾಲಕನನ್ನು ಅಪಹರಿಸಿ ಹತ್ಯೆ ಮತ್ತು ರಾಜ್ಯದ ವಿವಿದೆಡೆ ನಡೆದ ಕೊಲೆಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬಹುದು.

ಅಲ್ಲದೆ, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸಮೀಕ್ಷೆ, ಹಳೆ ವರದಿ ಅಂಗೀಕರಿಸದೇ ಹೊಸ ಜಾತಿ ಗಣತಿ ನಿರ್ಧಾರ, ಎಸ್‌ಸಿ-ಎಸ್‌ಟಿಗೆ ಮೀಸಲಾದ ಅನುದಾನ ಬೇರೆಡೆ ವರ್ಗಾವಣೆ, ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೊರತೆ, ಬಿಜೆಪಿ ಶಾಸಕರನ್ನ ಗುರಿಯಾಗಿಸಿ ಎಫ್‌ಐಆರ್, ಮಹದಾಯಿ ವಿವಾದ ಇತ್ಯಾದಿ ವಿಷಯಗಳಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ಏರ್ಪಡುವ ಸಾಧ್ಯತೆ ಇದೆ.

ಆಡಳಿತ ಪಕ್ಷ, ಕಾರು ಚಾಲಕನ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ದ ಎಫ್‌ಐಆರ್ ದಾಖಲಾಗಿರುವುದು, ರೌಡಿ ಶೀಟರ್ ಹತ್ಯೆ ಪ್ರಕರಣದಲ್ಲಿ ಕೆ.ಆರ್. ಪುರ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿರುವುದು, ಕೇಂದ್ರ ಸರ್ಕಾರ ಸರಿಯಾಗಿ ರಸಗೊಬ್ಬರ ಪೂರೈಸಿಲ್ಲ ಎಂಬ ಆರೋಪ ಮತ್ತು ವಿಶೇಷವಾಗಿ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನದ ಆರೋಪವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷವನ್ನು ಕಟ್ಟಿ ಹಾಕುವ ಸಾಧ್ಯತೆ ಇದೆ.

ಈ ನಡುವೆ, ಒಳಮೀಸಲಾತಿ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್‌ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಬಹಿರಂಗಪಡಿಸುವಂತೆ ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಒತ್ತಾಯಿಸುವ ಸಾಧ್ಯತೆ ಇದೆ. ಈ ಬಗ್ಗೆ ಆಗಸ್ಟ್ 16ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಿದ್ದು, ಆ ಬಳಿಕ ಸರ್ಕಾರ ಸದನದಲ್ಲಿ ಹೇಳಿಕೆ ನೀಡುವ ಸಾಧ್ಯತೆ ಇದೆ.

ಕಳೆದ ಅಧಿವೇಶನದ ಕಲಾಪದ ವೇಳೆ ಅಮಾನತ್ತಿಗೆ ಒಳಗಾಗಿದ್ದ 18 ಶಾಸಕರ ಅಮಾನತು ರದ್ದು ಕ್ರಮವನ್ನು ಸಭಾಧ್ಯಕ್ಷರು ಸೋಮವಾರವೇ ಪ್ರಕಟಿಸಲಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸದನದಲ್ಲಿ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗುತ್ತದೆ.

ಈ ಬಾರಿಯ ಅಧಿವೇಶನದಲ್ಲಿ ‘ಕರ್ನಾಟಕ ದೇವದಾಸಿ ಪದ್ಧತಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಮಸೂದೆ 2025’, ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ)ಮಸೂದೆ 2025 ಸೇರಿದಂತೆ 17 ಮಸೂದೆಗಳನ್ನು ಮಂಡಿಸಲು ಸರ್ಕಾರ ಸಿದ್ದತೆ ನಡೆಸಿದೆ ಎಂಬ ಮಾಹಿತಿ ದೊರೆತಿದೆ.

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...