Homeಮುಖಪುಟಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು 'ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ' ಎಂದ...

ಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದ ಪಿ. ಚಿದಂಬರಂ

- Advertisement -
- Advertisement -

ಒಡಿಶಾ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆ ಪತ್ರಕ್ಕೆ ಕರ್ನಾಟಕದ ನಾಲ್ವರು ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದರು. ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಶನಿವಾರ ಹೇಳಿದ್ದಾರೆ.

ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ, ಸದಾನಂದ ಗೌಡ, ಪಿ.ಸಿ. ಮೋಹನ್ ಮತ್ತು ಎಸ್. ಮುನಿಸ್ವಾಮಿ ಅವರು ಖರ್ಗೆ ಅವರ ಪತ್ರವನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ಈ ವಿಚಾರವಾಗಿ  ಮಾತನಾಡಿದ ಚಿದಂಬರಂ ಅವರು, ”ಈ ಪ್ರತಿಕ್ರಿಯೆಯಲ್ಲಿ ಸತ್ವವಿಲ್ಲ ಮತ್ತು ವಿಷಯ ಮಂಡನೆಯು ಪೊಳ್ಳಾಗಿದೆ” ಎಂದಿದ್ದಾರೆ.

ಖರ್ಗೆ ಅವರು ಪತ್ರದಲ್ಲಿ, ”ರೈಲ್ವೆ ಭದ್ರತೆಯ ಕುರಿತು ಅಶ್ವಿನಿ ವೈಷ್ಣವ್ ಅವರು ನೀಡಿದ್ದ ಟೊಳ್ಳು ಭರವಸೆಗಳ ನಿಜ ಬಣ್ಣ ಈಗ ಬಯಲಾಗಿದೆ ಎಂದು ಉಲ್ಲೇಖಿಸಿದ್ದರು. ಜೊತೆಗೆ, ರೈಲು ಅಪಘಾತ ತನಿಖೆಯನ್ನು ಸಿಬಿಐಗೆ ವಹಿಸುವುದನ್ನು ವಿರೋಧಿಸಿದ್ದ ಅವರು, ಸಿಬಿಐ ಇರುವುದು ಅಪರಾಧ ಪ್ರಕರಣಗಳ ತನಿಖೆ ನಡೆಸಲು ಹೊರತು ಅಪಘಾತದ ತನಿಖೆ ನಡೆಸಲು ಅಲ್ಲ” ಎಂದು ಟೀಕಿಸಿದ್ದರು.

ಇದನ್ನೂ ಓದಿ: ಸಿಬಿಐ ಕೆಲಸ ಅಪರಾಧಗಳನ್ನು ತನಿಖೆ ಮಾಡುವುದು, ರೈಲ್ವೆ ಅಪಘಾತಗಳ ತನಿಖೆ ಮಾಡುವುದಲ್ಲ: ಪ್ರಧಾನಿಗೆ ಖರ್ಗೆ ಪತ್ರ

ಇದಕ್ಕೆ ಸಂಸರು ಪ್ರತಿಕ್ರಿಯಿ, ”ವಾಟ್ಸ್‌ಆ್ಯಪ್ ವಿಶ್ವವಿದ್ಯಾಲಯದಿಂದ ಎರವಲು ಪಡೆದ ಮಾಹಿತಿ ಆಧರಿಸಿ ಪ್ರಧಾನಿ ಅವರಿಗೆ ಪತ್ರ ಬರೆಯುವುದು ನಿಮ್ಮಂಥ ಉನ್ನತ ನಾಯಕರಿಗೆ ಸರಿಹೊಂದುವುದಿಲ್ಲ. ವಾಟ್ಸ್‌ಆ್ಯಪ್ ವಿ.ವಿಯ ಕುಲಪತಿಗಳಾದ ನೀವು ಸುಳ್ಳು ಸುದ್ದಿಗಳನ್ನು ಉಗುಳಲೇಬೇಕು ಎಂಬ ಒತ್ತಡಕ್ಕೆ ಒಳಗಾಗಿರುತ್ತೀರಿ” ಎಂದು ಸಂಸದರು ಹೇಳಿದ್ದಾರೆ.

ಬಿಜೆಪಿ ಸಂಸದರ ಈ ಹೇಳಿಕೆಯನ್ನು ವಿರೋಧಿಸಿರುವ ಚಿದಂಬರಂ ಅವರು, ”ಕಾರ್ಯಪ್ರವೃತ ಪ್ರಜಾಪ್ರಭುತ್ವದಲ್ಲಿ ಇಂಥ ಪತ್ರಗಳಿಗೆ ಪ್ರಧಾನಿ ಉತ್ತರಿಸಲಿ ಎಂದು ಜನರು ಎದುರು ನೋಡುತ್ತಾರೆ. ಆದರೆ ನಮ್ಮದೇಶದ ಪ್ರಜಾಪ್ರಭುತ್ವ ಹೇಗಿದೆ ಎಂದರೆ, ಪ್ರಧಾನಿಯು ಪತ್ರಕ್ಕೆ ಪ್ರತಿಕ್ರಿಯಿಸಬೇಕು ಎಂಬುದನ್ನು ಪರಿಗಣಿಸುವುದೂ ಇಲ್ಲ” ಎಂದು ಹೇಳಿದ್ದಾರೆ.

”ಖರ್ಗೆ ಅವರು ಎತ್ತಿದಂಥ ಪ್ರಶ್ನೆಗಳನ್ನೇ ಹೋಲುವಂಥ ಅಂಶಗಳನ್ನು ಮಹಾಲೇಖಪಾಲರು 2022ರ ಡಿಸೆಂಬರ್‌ನಲ್ಲಿ ನೀಡಿದ್ದ ವರದಿಯು ಉಲ್ಲೇಖಿಸಿತ್ತು. ಆಗ್ನೆಯ ವಿಭಾಗೀಯ ರೈಲ್ವೆಯ ಮುಖ್ಯ ಕಾರ್ಯಕಾರಿ ನಿರ್ವಾಹಕರು 2023ರ ಫೆಬ್ರುವರಿ 9ರಂದು ಬರೆದಿದ್ದ ಪತ್ರದಲ್ಲಿ ಒಡಿಶಾದ ಬಾಲೇಶ್ವರ ರೈಲು ದುರಂತದಂಥ ಘಟನೆಗಳು ನಡೆಯುವ ಸಂಭವದ ಕುರಿತು ಎಚ್ಚರಿಸಿದ್ದರು. ಈ ಪತ್ರಕ್ಕೆ ಸಂಬಂಧಿಸಿ ಸರ್ಕಾರವು ಯಾವ ಕ್ರಮ ಕೈಗೊಂಡಿದೆ ಎಂದು ಗೌರವಾನ್ವಿತ ಸಂಸದರು ಮಾಹಿತಿ ನೀಡುತ್ತಾರೆಯೇ?” ಎಂದು ಚಿದಂಬರಂ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...