Homeಮುಖಪುಟಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು 'ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ' ಎಂದ...

ಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದ ಪಿ. ಚಿದಂಬರಂ

- Advertisement -
- Advertisement -

ಒಡಿಶಾ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆ ಪತ್ರಕ್ಕೆ ಕರ್ನಾಟಕದ ನಾಲ್ವರು ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದರು. ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಶನಿವಾರ ಹೇಳಿದ್ದಾರೆ.

ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ, ಸದಾನಂದ ಗೌಡ, ಪಿ.ಸಿ. ಮೋಹನ್ ಮತ್ತು ಎಸ್. ಮುನಿಸ್ವಾಮಿ ಅವರು ಖರ್ಗೆ ಅವರ ಪತ್ರವನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ಈ ವಿಚಾರವಾಗಿ  ಮಾತನಾಡಿದ ಚಿದಂಬರಂ ಅವರು, ”ಈ ಪ್ರತಿಕ್ರಿಯೆಯಲ್ಲಿ ಸತ್ವವಿಲ್ಲ ಮತ್ತು ವಿಷಯ ಮಂಡನೆಯು ಪೊಳ್ಳಾಗಿದೆ” ಎಂದಿದ್ದಾರೆ.

ಖರ್ಗೆ ಅವರು ಪತ್ರದಲ್ಲಿ, ”ರೈಲ್ವೆ ಭದ್ರತೆಯ ಕುರಿತು ಅಶ್ವಿನಿ ವೈಷ್ಣವ್ ಅವರು ನೀಡಿದ್ದ ಟೊಳ್ಳು ಭರವಸೆಗಳ ನಿಜ ಬಣ್ಣ ಈಗ ಬಯಲಾಗಿದೆ ಎಂದು ಉಲ್ಲೇಖಿಸಿದ್ದರು. ಜೊತೆಗೆ, ರೈಲು ಅಪಘಾತ ತನಿಖೆಯನ್ನು ಸಿಬಿಐಗೆ ವಹಿಸುವುದನ್ನು ವಿರೋಧಿಸಿದ್ದ ಅವರು, ಸಿಬಿಐ ಇರುವುದು ಅಪರಾಧ ಪ್ರಕರಣಗಳ ತನಿಖೆ ನಡೆಸಲು ಹೊರತು ಅಪಘಾತದ ತನಿಖೆ ನಡೆಸಲು ಅಲ್ಲ” ಎಂದು ಟೀಕಿಸಿದ್ದರು.

ಇದನ್ನೂ ಓದಿ: ಸಿಬಿಐ ಕೆಲಸ ಅಪರಾಧಗಳನ್ನು ತನಿಖೆ ಮಾಡುವುದು, ರೈಲ್ವೆ ಅಪಘಾತಗಳ ತನಿಖೆ ಮಾಡುವುದಲ್ಲ: ಪ್ರಧಾನಿಗೆ ಖರ್ಗೆ ಪತ್ರ

ಇದಕ್ಕೆ ಸಂಸರು ಪ್ರತಿಕ್ರಿಯಿ, ”ವಾಟ್ಸ್‌ಆ್ಯಪ್ ವಿಶ್ವವಿದ್ಯಾಲಯದಿಂದ ಎರವಲು ಪಡೆದ ಮಾಹಿತಿ ಆಧರಿಸಿ ಪ್ರಧಾನಿ ಅವರಿಗೆ ಪತ್ರ ಬರೆಯುವುದು ನಿಮ್ಮಂಥ ಉನ್ನತ ನಾಯಕರಿಗೆ ಸರಿಹೊಂದುವುದಿಲ್ಲ. ವಾಟ್ಸ್‌ಆ್ಯಪ್ ವಿ.ವಿಯ ಕುಲಪತಿಗಳಾದ ನೀವು ಸುಳ್ಳು ಸುದ್ದಿಗಳನ್ನು ಉಗುಳಲೇಬೇಕು ಎಂಬ ಒತ್ತಡಕ್ಕೆ ಒಳಗಾಗಿರುತ್ತೀರಿ” ಎಂದು ಸಂಸದರು ಹೇಳಿದ್ದಾರೆ.

ಬಿಜೆಪಿ ಸಂಸದರ ಈ ಹೇಳಿಕೆಯನ್ನು ವಿರೋಧಿಸಿರುವ ಚಿದಂಬರಂ ಅವರು, ”ಕಾರ್ಯಪ್ರವೃತ ಪ್ರಜಾಪ್ರಭುತ್ವದಲ್ಲಿ ಇಂಥ ಪತ್ರಗಳಿಗೆ ಪ್ರಧಾನಿ ಉತ್ತರಿಸಲಿ ಎಂದು ಜನರು ಎದುರು ನೋಡುತ್ತಾರೆ. ಆದರೆ ನಮ್ಮದೇಶದ ಪ್ರಜಾಪ್ರಭುತ್ವ ಹೇಗಿದೆ ಎಂದರೆ, ಪ್ರಧಾನಿಯು ಪತ್ರಕ್ಕೆ ಪ್ರತಿಕ್ರಿಯಿಸಬೇಕು ಎಂಬುದನ್ನು ಪರಿಗಣಿಸುವುದೂ ಇಲ್ಲ” ಎಂದು ಹೇಳಿದ್ದಾರೆ.

”ಖರ್ಗೆ ಅವರು ಎತ್ತಿದಂಥ ಪ್ರಶ್ನೆಗಳನ್ನೇ ಹೋಲುವಂಥ ಅಂಶಗಳನ್ನು ಮಹಾಲೇಖಪಾಲರು 2022ರ ಡಿಸೆಂಬರ್‌ನಲ್ಲಿ ನೀಡಿದ್ದ ವರದಿಯು ಉಲ್ಲೇಖಿಸಿತ್ತು. ಆಗ್ನೆಯ ವಿಭಾಗೀಯ ರೈಲ್ವೆಯ ಮುಖ್ಯ ಕಾರ್ಯಕಾರಿ ನಿರ್ವಾಹಕರು 2023ರ ಫೆಬ್ರುವರಿ 9ರಂದು ಬರೆದಿದ್ದ ಪತ್ರದಲ್ಲಿ ಒಡಿಶಾದ ಬಾಲೇಶ್ವರ ರೈಲು ದುರಂತದಂಥ ಘಟನೆಗಳು ನಡೆಯುವ ಸಂಭವದ ಕುರಿತು ಎಚ್ಚರಿಸಿದ್ದರು. ಈ ಪತ್ರಕ್ಕೆ ಸಂಬಂಧಿಸಿ ಸರ್ಕಾರವು ಯಾವ ಕ್ರಮ ಕೈಗೊಂಡಿದೆ ಎಂದು ಗೌರವಾನ್ವಿತ ಸಂಸದರು ಮಾಹಿತಿ ನೀಡುತ್ತಾರೆಯೇ?” ಎಂದು ಚಿದಂಬರಂ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...