Homeಮುಖಪುಟಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು 'ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ' ಎಂದ...

ಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದ ಪಿ. ಚಿದಂಬರಂ

- Advertisement -
- Advertisement -

ಒಡಿಶಾ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆ ಪತ್ರಕ್ಕೆ ಕರ್ನಾಟಕದ ನಾಲ್ವರು ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದರು. ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಶನಿವಾರ ಹೇಳಿದ್ದಾರೆ.

ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ, ಸದಾನಂದ ಗೌಡ, ಪಿ.ಸಿ. ಮೋಹನ್ ಮತ್ತು ಎಸ್. ಮುನಿಸ್ವಾಮಿ ಅವರು ಖರ್ಗೆ ಅವರ ಪತ್ರವನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ಈ ವಿಚಾರವಾಗಿ  ಮಾತನಾಡಿದ ಚಿದಂಬರಂ ಅವರು, ”ಈ ಪ್ರತಿಕ್ರಿಯೆಯಲ್ಲಿ ಸತ್ವವಿಲ್ಲ ಮತ್ತು ವಿಷಯ ಮಂಡನೆಯು ಪೊಳ್ಳಾಗಿದೆ” ಎಂದಿದ್ದಾರೆ.

ಖರ್ಗೆ ಅವರು ಪತ್ರದಲ್ಲಿ, ”ರೈಲ್ವೆ ಭದ್ರತೆಯ ಕುರಿತು ಅಶ್ವಿನಿ ವೈಷ್ಣವ್ ಅವರು ನೀಡಿದ್ದ ಟೊಳ್ಳು ಭರವಸೆಗಳ ನಿಜ ಬಣ್ಣ ಈಗ ಬಯಲಾಗಿದೆ ಎಂದು ಉಲ್ಲೇಖಿಸಿದ್ದರು. ಜೊತೆಗೆ, ರೈಲು ಅಪಘಾತ ತನಿಖೆಯನ್ನು ಸಿಬಿಐಗೆ ವಹಿಸುವುದನ್ನು ವಿರೋಧಿಸಿದ್ದ ಅವರು, ಸಿಬಿಐ ಇರುವುದು ಅಪರಾಧ ಪ್ರಕರಣಗಳ ತನಿಖೆ ನಡೆಸಲು ಹೊರತು ಅಪಘಾತದ ತನಿಖೆ ನಡೆಸಲು ಅಲ್ಲ” ಎಂದು ಟೀಕಿಸಿದ್ದರು.

ಇದನ್ನೂ ಓದಿ: ಸಿಬಿಐ ಕೆಲಸ ಅಪರಾಧಗಳನ್ನು ತನಿಖೆ ಮಾಡುವುದು, ರೈಲ್ವೆ ಅಪಘಾತಗಳ ತನಿಖೆ ಮಾಡುವುದಲ್ಲ: ಪ್ರಧಾನಿಗೆ ಖರ್ಗೆ ಪತ್ರ

ಇದಕ್ಕೆ ಸಂಸರು ಪ್ರತಿಕ್ರಿಯಿ, ”ವಾಟ್ಸ್‌ಆ್ಯಪ್ ವಿಶ್ವವಿದ್ಯಾಲಯದಿಂದ ಎರವಲು ಪಡೆದ ಮಾಹಿತಿ ಆಧರಿಸಿ ಪ್ರಧಾನಿ ಅವರಿಗೆ ಪತ್ರ ಬರೆಯುವುದು ನಿಮ್ಮಂಥ ಉನ್ನತ ನಾಯಕರಿಗೆ ಸರಿಹೊಂದುವುದಿಲ್ಲ. ವಾಟ್ಸ್‌ಆ್ಯಪ್ ವಿ.ವಿಯ ಕುಲಪತಿಗಳಾದ ನೀವು ಸುಳ್ಳು ಸುದ್ದಿಗಳನ್ನು ಉಗುಳಲೇಬೇಕು ಎಂಬ ಒತ್ತಡಕ್ಕೆ ಒಳಗಾಗಿರುತ್ತೀರಿ” ಎಂದು ಸಂಸದರು ಹೇಳಿದ್ದಾರೆ.

ಬಿಜೆಪಿ ಸಂಸದರ ಈ ಹೇಳಿಕೆಯನ್ನು ವಿರೋಧಿಸಿರುವ ಚಿದಂಬರಂ ಅವರು, ”ಕಾರ್ಯಪ್ರವೃತ ಪ್ರಜಾಪ್ರಭುತ್ವದಲ್ಲಿ ಇಂಥ ಪತ್ರಗಳಿಗೆ ಪ್ರಧಾನಿ ಉತ್ತರಿಸಲಿ ಎಂದು ಜನರು ಎದುರು ನೋಡುತ್ತಾರೆ. ಆದರೆ ನಮ್ಮದೇಶದ ಪ್ರಜಾಪ್ರಭುತ್ವ ಹೇಗಿದೆ ಎಂದರೆ, ಪ್ರಧಾನಿಯು ಪತ್ರಕ್ಕೆ ಪ್ರತಿಕ್ರಿಯಿಸಬೇಕು ಎಂಬುದನ್ನು ಪರಿಗಣಿಸುವುದೂ ಇಲ್ಲ” ಎಂದು ಹೇಳಿದ್ದಾರೆ.

”ಖರ್ಗೆ ಅವರು ಎತ್ತಿದಂಥ ಪ್ರಶ್ನೆಗಳನ್ನೇ ಹೋಲುವಂಥ ಅಂಶಗಳನ್ನು ಮಹಾಲೇಖಪಾಲರು 2022ರ ಡಿಸೆಂಬರ್‌ನಲ್ಲಿ ನೀಡಿದ್ದ ವರದಿಯು ಉಲ್ಲೇಖಿಸಿತ್ತು. ಆಗ್ನೆಯ ವಿಭಾಗೀಯ ರೈಲ್ವೆಯ ಮುಖ್ಯ ಕಾರ್ಯಕಾರಿ ನಿರ್ವಾಹಕರು 2023ರ ಫೆಬ್ರುವರಿ 9ರಂದು ಬರೆದಿದ್ದ ಪತ್ರದಲ್ಲಿ ಒಡಿಶಾದ ಬಾಲೇಶ್ವರ ರೈಲು ದುರಂತದಂಥ ಘಟನೆಗಳು ನಡೆಯುವ ಸಂಭವದ ಕುರಿತು ಎಚ್ಚರಿಸಿದ್ದರು. ಈ ಪತ್ರಕ್ಕೆ ಸಂಬಂಧಿಸಿ ಸರ್ಕಾರವು ಯಾವ ಕ್ರಮ ಕೈಗೊಂಡಿದೆ ಎಂದು ಗೌರವಾನ್ವಿತ ಸಂಸದರು ಮಾಹಿತಿ ನೀಡುತ್ತಾರೆಯೇ?” ಎಂದು ಚಿದಂಬರಂ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...