Homeಮುಖಪುಟಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು 'ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ' ಎಂದ...

ಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದ ಪಿ. ಚಿದಂಬರಂ

- Advertisement -
- Advertisement -

ಒಡಿಶಾ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆ ಪತ್ರಕ್ಕೆ ಕರ್ನಾಟಕದ ನಾಲ್ವರು ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದರು. ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಶನಿವಾರ ಹೇಳಿದ್ದಾರೆ.

ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ, ಸದಾನಂದ ಗೌಡ, ಪಿ.ಸಿ. ಮೋಹನ್ ಮತ್ತು ಎಸ್. ಮುನಿಸ್ವಾಮಿ ಅವರು ಖರ್ಗೆ ಅವರ ಪತ್ರವನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ಈ ವಿಚಾರವಾಗಿ  ಮಾತನಾಡಿದ ಚಿದಂಬರಂ ಅವರು, ”ಈ ಪ್ರತಿಕ್ರಿಯೆಯಲ್ಲಿ ಸತ್ವವಿಲ್ಲ ಮತ್ತು ವಿಷಯ ಮಂಡನೆಯು ಪೊಳ್ಳಾಗಿದೆ” ಎಂದಿದ್ದಾರೆ.

ಖರ್ಗೆ ಅವರು ಪತ್ರದಲ್ಲಿ, ”ರೈಲ್ವೆ ಭದ್ರತೆಯ ಕುರಿತು ಅಶ್ವಿನಿ ವೈಷ್ಣವ್ ಅವರು ನೀಡಿದ್ದ ಟೊಳ್ಳು ಭರವಸೆಗಳ ನಿಜ ಬಣ್ಣ ಈಗ ಬಯಲಾಗಿದೆ ಎಂದು ಉಲ್ಲೇಖಿಸಿದ್ದರು. ಜೊತೆಗೆ, ರೈಲು ಅಪಘಾತ ತನಿಖೆಯನ್ನು ಸಿಬಿಐಗೆ ವಹಿಸುವುದನ್ನು ವಿರೋಧಿಸಿದ್ದ ಅವರು, ಸಿಬಿಐ ಇರುವುದು ಅಪರಾಧ ಪ್ರಕರಣಗಳ ತನಿಖೆ ನಡೆಸಲು ಹೊರತು ಅಪಘಾತದ ತನಿಖೆ ನಡೆಸಲು ಅಲ್ಲ” ಎಂದು ಟೀಕಿಸಿದ್ದರು.

ಇದನ್ನೂ ಓದಿ: ಸಿಬಿಐ ಕೆಲಸ ಅಪರಾಧಗಳನ್ನು ತನಿಖೆ ಮಾಡುವುದು, ರೈಲ್ವೆ ಅಪಘಾತಗಳ ತನಿಖೆ ಮಾಡುವುದಲ್ಲ: ಪ್ರಧಾನಿಗೆ ಖರ್ಗೆ ಪತ್ರ

ಇದಕ್ಕೆ ಸಂಸರು ಪ್ರತಿಕ್ರಿಯಿ, ”ವಾಟ್ಸ್‌ಆ್ಯಪ್ ವಿಶ್ವವಿದ್ಯಾಲಯದಿಂದ ಎರವಲು ಪಡೆದ ಮಾಹಿತಿ ಆಧರಿಸಿ ಪ್ರಧಾನಿ ಅವರಿಗೆ ಪತ್ರ ಬರೆಯುವುದು ನಿಮ್ಮಂಥ ಉನ್ನತ ನಾಯಕರಿಗೆ ಸರಿಹೊಂದುವುದಿಲ್ಲ. ವಾಟ್ಸ್‌ಆ್ಯಪ್ ವಿ.ವಿಯ ಕುಲಪತಿಗಳಾದ ನೀವು ಸುಳ್ಳು ಸುದ್ದಿಗಳನ್ನು ಉಗುಳಲೇಬೇಕು ಎಂಬ ಒತ್ತಡಕ್ಕೆ ಒಳಗಾಗಿರುತ್ತೀರಿ” ಎಂದು ಸಂಸದರು ಹೇಳಿದ್ದಾರೆ.

ಬಿಜೆಪಿ ಸಂಸದರ ಈ ಹೇಳಿಕೆಯನ್ನು ವಿರೋಧಿಸಿರುವ ಚಿದಂಬರಂ ಅವರು, ”ಕಾರ್ಯಪ್ರವೃತ ಪ್ರಜಾಪ್ರಭುತ್ವದಲ್ಲಿ ಇಂಥ ಪತ್ರಗಳಿಗೆ ಪ್ರಧಾನಿ ಉತ್ತರಿಸಲಿ ಎಂದು ಜನರು ಎದುರು ನೋಡುತ್ತಾರೆ. ಆದರೆ ನಮ್ಮದೇಶದ ಪ್ರಜಾಪ್ರಭುತ್ವ ಹೇಗಿದೆ ಎಂದರೆ, ಪ್ರಧಾನಿಯು ಪತ್ರಕ್ಕೆ ಪ್ರತಿಕ್ರಿಯಿಸಬೇಕು ಎಂಬುದನ್ನು ಪರಿಗಣಿಸುವುದೂ ಇಲ್ಲ” ಎಂದು ಹೇಳಿದ್ದಾರೆ.

”ಖರ್ಗೆ ಅವರು ಎತ್ತಿದಂಥ ಪ್ರಶ್ನೆಗಳನ್ನೇ ಹೋಲುವಂಥ ಅಂಶಗಳನ್ನು ಮಹಾಲೇಖಪಾಲರು 2022ರ ಡಿಸೆಂಬರ್‌ನಲ್ಲಿ ನೀಡಿದ್ದ ವರದಿಯು ಉಲ್ಲೇಖಿಸಿತ್ತು. ಆಗ್ನೆಯ ವಿಭಾಗೀಯ ರೈಲ್ವೆಯ ಮುಖ್ಯ ಕಾರ್ಯಕಾರಿ ನಿರ್ವಾಹಕರು 2023ರ ಫೆಬ್ರುವರಿ 9ರಂದು ಬರೆದಿದ್ದ ಪತ್ರದಲ್ಲಿ ಒಡಿಶಾದ ಬಾಲೇಶ್ವರ ರೈಲು ದುರಂತದಂಥ ಘಟನೆಗಳು ನಡೆಯುವ ಸಂಭವದ ಕುರಿತು ಎಚ್ಚರಿಸಿದ್ದರು. ಈ ಪತ್ರಕ್ಕೆ ಸಂಬಂಧಿಸಿ ಸರ್ಕಾರವು ಯಾವ ಕ್ರಮ ಕೈಗೊಂಡಿದೆ ಎಂದು ಗೌರವಾನ್ವಿತ ಸಂಸದರು ಮಾಹಿತಿ ನೀಡುತ್ತಾರೆಯೇ?” ಎಂದು ಚಿದಂಬರಂ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...