Homeಮುಖಪುಟಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು 'ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ' ಎಂದ...

ಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದ ಪಿ. ಚಿದಂಬರಂ

- Advertisement -
- Advertisement -

ಒಡಿಶಾ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆ ಪತ್ರಕ್ಕೆ ಕರ್ನಾಟಕದ ನಾಲ್ವರು ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದರು. ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಶನಿವಾರ ಹೇಳಿದ್ದಾರೆ.

ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ, ಸದಾನಂದ ಗೌಡ, ಪಿ.ಸಿ. ಮೋಹನ್ ಮತ್ತು ಎಸ್. ಮುನಿಸ್ವಾಮಿ ಅವರು ಖರ್ಗೆ ಅವರ ಪತ್ರವನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ಈ ವಿಚಾರವಾಗಿ  ಮಾತನಾಡಿದ ಚಿದಂಬರಂ ಅವರು, ”ಈ ಪ್ರತಿಕ್ರಿಯೆಯಲ್ಲಿ ಸತ್ವವಿಲ್ಲ ಮತ್ತು ವಿಷಯ ಮಂಡನೆಯು ಪೊಳ್ಳಾಗಿದೆ” ಎಂದಿದ್ದಾರೆ.

ಖರ್ಗೆ ಅವರು ಪತ್ರದಲ್ಲಿ, ”ರೈಲ್ವೆ ಭದ್ರತೆಯ ಕುರಿತು ಅಶ್ವಿನಿ ವೈಷ್ಣವ್ ಅವರು ನೀಡಿದ್ದ ಟೊಳ್ಳು ಭರವಸೆಗಳ ನಿಜ ಬಣ್ಣ ಈಗ ಬಯಲಾಗಿದೆ ಎಂದು ಉಲ್ಲೇಖಿಸಿದ್ದರು. ಜೊತೆಗೆ, ರೈಲು ಅಪಘಾತ ತನಿಖೆಯನ್ನು ಸಿಬಿಐಗೆ ವಹಿಸುವುದನ್ನು ವಿರೋಧಿಸಿದ್ದ ಅವರು, ಸಿಬಿಐ ಇರುವುದು ಅಪರಾಧ ಪ್ರಕರಣಗಳ ತನಿಖೆ ನಡೆಸಲು ಹೊರತು ಅಪಘಾತದ ತನಿಖೆ ನಡೆಸಲು ಅಲ್ಲ” ಎಂದು ಟೀಕಿಸಿದ್ದರು.

ಇದನ್ನೂ ಓದಿ: ಸಿಬಿಐ ಕೆಲಸ ಅಪರಾಧಗಳನ್ನು ತನಿಖೆ ಮಾಡುವುದು, ರೈಲ್ವೆ ಅಪಘಾತಗಳ ತನಿಖೆ ಮಾಡುವುದಲ್ಲ: ಪ್ರಧಾನಿಗೆ ಖರ್ಗೆ ಪತ್ರ

ಇದಕ್ಕೆ ಸಂಸರು ಪ್ರತಿಕ್ರಿಯಿ, ”ವಾಟ್ಸ್‌ಆ್ಯಪ್ ವಿಶ್ವವಿದ್ಯಾಲಯದಿಂದ ಎರವಲು ಪಡೆದ ಮಾಹಿತಿ ಆಧರಿಸಿ ಪ್ರಧಾನಿ ಅವರಿಗೆ ಪತ್ರ ಬರೆಯುವುದು ನಿಮ್ಮಂಥ ಉನ್ನತ ನಾಯಕರಿಗೆ ಸರಿಹೊಂದುವುದಿಲ್ಲ. ವಾಟ್ಸ್‌ಆ್ಯಪ್ ವಿ.ವಿಯ ಕುಲಪತಿಗಳಾದ ನೀವು ಸುಳ್ಳು ಸುದ್ದಿಗಳನ್ನು ಉಗುಳಲೇಬೇಕು ಎಂಬ ಒತ್ತಡಕ್ಕೆ ಒಳಗಾಗಿರುತ್ತೀರಿ” ಎಂದು ಸಂಸದರು ಹೇಳಿದ್ದಾರೆ.

ಬಿಜೆಪಿ ಸಂಸದರ ಈ ಹೇಳಿಕೆಯನ್ನು ವಿರೋಧಿಸಿರುವ ಚಿದಂಬರಂ ಅವರು, ”ಕಾರ್ಯಪ್ರವೃತ ಪ್ರಜಾಪ್ರಭುತ್ವದಲ್ಲಿ ಇಂಥ ಪತ್ರಗಳಿಗೆ ಪ್ರಧಾನಿ ಉತ್ತರಿಸಲಿ ಎಂದು ಜನರು ಎದುರು ನೋಡುತ್ತಾರೆ. ಆದರೆ ನಮ್ಮದೇಶದ ಪ್ರಜಾಪ್ರಭುತ್ವ ಹೇಗಿದೆ ಎಂದರೆ, ಪ್ರಧಾನಿಯು ಪತ್ರಕ್ಕೆ ಪ್ರತಿಕ್ರಿಯಿಸಬೇಕು ಎಂಬುದನ್ನು ಪರಿಗಣಿಸುವುದೂ ಇಲ್ಲ” ಎಂದು ಹೇಳಿದ್ದಾರೆ.

”ಖರ್ಗೆ ಅವರು ಎತ್ತಿದಂಥ ಪ್ರಶ್ನೆಗಳನ್ನೇ ಹೋಲುವಂಥ ಅಂಶಗಳನ್ನು ಮಹಾಲೇಖಪಾಲರು 2022ರ ಡಿಸೆಂಬರ್‌ನಲ್ಲಿ ನೀಡಿದ್ದ ವರದಿಯು ಉಲ್ಲೇಖಿಸಿತ್ತು. ಆಗ್ನೆಯ ವಿಭಾಗೀಯ ರೈಲ್ವೆಯ ಮುಖ್ಯ ಕಾರ್ಯಕಾರಿ ನಿರ್ವಾಹಕರು 2023ರ ಫೆಬ್ರುವರಿ 9ರಂದು ಬರೆದಿದ್ದ ಪತ್ರದಲ್ಲಿ ಒಡಿಶಾದ ಬಾಲೇಶ್ವರ ರೈಲು ದುರಂತದಂಥ ಘಟನೆಗಳು ನಡೆಯುವ ಸಂಭವದ ಕುರಿತು ಎಚ್ಚರಿಸಿದ್ದರು. ಈ ಪತ್ರಕ್ಕೆ ಸಂಬಂಧಿಸಿ ಸರ್ಕಾರವು ಯಾವ ಕ್ರಮ ಕೈಗೊಂಡಿದೆ ಎಂದು ಗೌರವಾನ್ವಿತ ಸಂಸದರು ಮಾಹಿತಿ ನೀಡುತ್ತಾರೆಯೇ?” ಎಂದು ಚಿದಂಬರಂ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...