Homeಮುಖಪುಟಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು 'ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ' ಎಂದ...

ಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದ ಪಿ. ಚಿದಂಬರಂ

- Advertisement -
- Advertisement -

ಒಡಿಶಾ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆ ಪತ್ರಕ್ಕೆ ಕರ್ನಾಟಕದ ನಾಲ್ವರು ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದರು. ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಶನಿವಾರ ಹೇಳಿದ್ದಾರೆ.

ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ, ಸದಾನಂದ ಗೌಡ, ಪಿ.ಸಿ. ಮೋಹನ್ ಮತ್ತು ಎಸ್. ಮುನಿಸ್ವಾಮಿ ಅವರು ಖರ್ಗೆ ಅವರ ಪತ್ರವನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ಈ ವಿಚಾರವಾಗಿ  ಮಾತನಾಡಿದ ಚಿದಂಬರಂ ಅವರು, ”ಈ ಪ್ರತಿಕ್ರಿಯೆಯಲ್ಲಿ ಸತ್ವವಿಲ್ಲ ಮತ್ತು ವಿಷಯ ಮಂಡನೆಯು ಪೊಳ್ಳಾಗಿದೆ” ಎಂದಿದ್ದಾರೆ.

ಖರ್ಗೆ ಅವರು ಪತ್ರದಲ್ಲಿ, ”ರೈಲ್ವೆ ಭದ್ರತೆಯ ಕುರಿತು ಅಶ್ವಿನಿ ವೈಷ್ಣವ್ ಅವರು ನೀಡಿದ್ದ ಟೊಳ್ಳು ಭರವಸೆಗಳ ನಿಜ ಬಣ್ಣ ಈಗ ಬಯಲಾಗಿದೆ ಎಂದು ಉಲ್ಲೇಖಿಸಿದ್ದರು. ಜೊತೆಗೆ, ರೈಲು ಅಪಘಾತ ತನಿಖೆಯನ್ನು ಸಿಬಿಐಗೆ ವಹಿಸುವುದನ್ನು ವಿರೋಧಿಸಿದ್ದ ಅವರು, ಸಿಬಿಐ ಇರುವುದು ಅಪರಾಧ ಪ್ರಕರಣಗಳ ತನಿಖೆ ನಡೆಸಲು ಹೊರತು ಅಪಘಾತದ ತನಿಖೆ ನಡೆಸಲು ಅಲ್ಲ” ಎಂದು ಟೀಕಿಸಿದ್ದರು.

ಇದನ್ನೂ ಓದಿ: ಸಿಬಿಐ ಕೆಲಸ ಅಪರಾಧಗಳನ್ನು ತನಿಖೆ ಮಾಡುವುದು, ರೈಲ್ವೆ ಅಪಘಾತಗಳ ತನಿಖೆ ಮಾಡುವುದಲ್ಲ: ಪ್ರಧಾನಿಗೆ ಖರ್ಗೆ ಪತ್ರ

ಇದಕ್ಕೆ ಸಂಸರು ಪ್ರತಿಕ್ರಿಯಿ, ”ವಾಟ್ಸ್‌ಆ್ಯಪ್ ವಿಶ್ವವಿದ್ಯಾಲಯದಿಂದ ಎರವಲು ಪಡೆದ ಮಾಹಿತಿ ಆಧರಿಸಿ ಪ್ರಧಾನಿ ಅವರಿಗೆ ಪತ್ರ ಬರೆಯುವುದು ನಿಮ್ಮಂಥ ಉನ್ನತ ನಾಯಕರಿಗೆ ಸರಿಹೊಂದುವುದಿಲ್ಲ. ವಾಟ್ಸ್‌ಆ್ಯಪ್ ವಿ.ವಿಯ ಕುಲಪತಿಗಳಾದ ನೀವು ಸುಳ್ಳು ಸುದ್ದಿಗಳನ್ನು ಉಗುಳಲೇಬೇಕು ಎಂಬ ಒತ್ತಡಕ್ಕೆ ಒಳಗಾಗಿರುತ್ತೀರಿ” ಎಂದು ಸಂಸದರು ಹೇಳಿದ್ದಾರೆ.

ಬಿಜೆಪಿ ಸಂಸದರ ಈ ಹೇಳಿಕೆಯನ್ನು ವಿರೋಧಿಸಿರುವ ಚಿದಂಬರಂ ಅವರು, ”ಕಾರ್ಯಪ್ರವೃತ ಪ್ರಜಾಪ್ರಭುತ್ವದಲ್ಲಿ ಇಂಥ ಪತ್ರಗಳಿಗೆ ಪ್ರಧಾನಿ ಉತ್ತರಿಸಲಿ ಎಂದು ಜನರು ಎದುರು ನೋಡುತ್ತಾರೆ. ಆದರೆ ನಮ್ಮದೇಶದ ಪ್ರಜಾಪ್ರಭುತ್ವ ಹೇಗಿದೆ ಎಂದರೆ, ಪ್ರಧಾನಿಯು ಪತ್ರಕ್ಕೆ ಪ್ರತಿಕ್ರಿಯಿಸಬೇಕು ಎಂಬುದನ್ನು ಪರಿಗಣಿಸುವುದೂ ಇಲ್ಲ” ಎಂದು ಹೇಳಿದ್ದಾರೆ.

”ಖರ್ಗೆ ಅವರು ಎತ್ತಿದಂಥ ಪ್ರಶ್ನೆಗಳನ್ನೇ ಹೋಲುವಂಥ ಅಂಶಗಳನ್ನು ಮಹಾಲೇಖಪಾಲರು 2022ರ ಡಿಸೆಂಬರ್‌ನಲ್ಲಿ ನೀಡಿದ್ದ ವರದಿಯು ಉಲ್ಲೇಖಿಸಿತ್ತು. ಆಗ್ನೆಯ ವಿಭಾಗೀಯ ರೈಲ್ವೆಯ ಮುಖ್ಯ ಕಾರ್ಯಕಾರಿ ನಿರ್ವಾಹಕರು 2023ರ ಫೆಬ್ರುವರಿ 9ರಂದು ಬರೆದಿದ್ದ ಪತ್ರದಲ್ಲಿ ಒಡಿಶಾದ ಬಾಲೇಶ್ವರ ರೈಲು ದುರಂತದಂಥ ಘಟನೆಗಳು ನಡೆಯುವ ಸಂಭವದ ಕುರಿತು ಎಚ್ಚರಿಸಿದ್ದರು. ಈ ಪತ್ರಕ್ಕೆ ಸಂಬಂಧಿಸಿ ಸರ್ಕಾರವು ಯಾವ ಕ್ರಮ ಕೈಗೊಂಡಿದೆ ಎಂದು ಗೌರವಾನ್ವಿತ ಸಂಸದರು ಮಾಹಿತಿ ನೀಡುತ್ತಾರೆಯೇ?” ಎಂದು ಚಿದಂಬರಂ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...