Homeದಲಿತ್ ಫೈಲ್ಸ್ದಲಿತರು ಭಾಗವಹಿಸುತ್ತಾರೆ ಎಂಬ ಭಯದಲ್ಲಿ ಜಾತ್ರೆ ರದ್ದು?: ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಇಂದಿಗೂ ಸಾಮಾಜಿಕ...

ದಲಿತರು ಭಾಗವಹಿಸುತ್ತಾರೆ ಎಂಬ ಭಯದಲ್ಲಿ ಜಾತ್ರೆ ರದ್ದು?: ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಇಂದಿಗೂ ಸಾಮಾಜಿಕ ಬಹಿಷ್ಕಾರ

ಸ್ಪೃಶ್ಯತೆಯನ್ನು ತೊಲಗಿಸಲು ಸಾಧ್ಯವಿಲ್ಲದಿದ್ದರೆ, ಸರಕಾರಿ ಯೋಜನೆಗೆ ತನ್ನ ಮಗನ ಹೆಸರಿಟ್ಟು ಏನು ಪ್ರಯೋಜನ ಎಂದು ವಿನಯನ ತಂದೆ ಚಂದ್ರಶೇಖರ ಶಿವಪ್ಪ ಕೇಳುತ್ತಾರೆ

- Advertisement -
- Advertisement -

ಕರ್ನಾಟಕವು ತನ್ನ ಅಸ್ಪೃಶ್ಯತಾ ವಿರೋಧಿ ಕಾರ್ಯಕ್ರಮಕ್ಕೆ ಈ ದಲಿತ ಬಾಲಕನ ಹೆಸರಿಟ್ಟಿದೆ. ಆದರೆ, ಆದದ್ದೇನು? ಆ ಊರಿನ ಗ್ರಾಮಸ್ಥರು ಆ ಬಾಲಕನ ಕುಟುಂಬಕ್ಕೇ ಸಾಮಾಜಿಕ ಬಹಿಷ್ಕಾರ ಹಾಕಿ ಹೊರದಬ್ಬಿದ್ದಾರೆ!

2021ರ ಸೆ. 4 ರಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ವಿನಯ ಹೆಸರಿನ ಮಗುವೊಂದು ಆಕಸ್ಮಿಕವಾಗಿ ದೇವಸ್ಥಾನ ಪ್ರವೇಶಿಸಿದಕ್ಕೆ ಮಗುವಿನ ಕುಟುಂಬಕ್ಕೆ ಗ್ರಾಮಸ್ಥರು ದಂಡ ವಿಧಿಸಿದ್ದರು. ದೇವಸ್ಥಾನ ಶುದ್ಧಿಕರಿಸಿ ಅಸ್ಪೃಶ್ಯತೆ ಆಚರಿಸಿದ್ದರು. ಈ ಘಟನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕರ್ನಾಟಕ ಸರಕಾರವು ತನ್ನ ಅಸ್ಪೃಶ್ಯತಾ ವಿರೋಧಿ ಯೋಜನೆಗೆ ಯಾವ ದಲಿತ ಹುಡುಗನ ಹೆಸರಿಟ್ಟಿತೋ, ಅದೇ ಹುಡುಗನ ಕುಟುಂಬವನ್ನೇ ಊರವರು ಸಾಮಾಜಿಕ ಬಹಿಷ್ಕಾರ ಹಾಕಿ ಹೊರದಬ್ಬಿದ ಘಟನೆಯೊಂದನ್ನು “ಇಂಡಿಯನ್ ಎಕ್ಸ್‌ಪ್ರೆಸ್” ವರದಿ ಮಾಡಿದೆ.

ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಸ್ಪೃಶ್ಯತೆಯ ಕುರಿತು ಅರಿವು ಮೂಡಿಸುವ “ವಿನಯ ಸಾಮರಸ್ಯ ಯೋಜನೆ”ಯನ್ನು ಬಸವರಾಜ ಬೊಮ್ಮಾಯಿ ಸರಕಾರ ಘೋಷಿಸಿದ್ದು, ಇದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವಾದ ಎಪ್ರಿಲ್ 14ರಂದು ಚಾಲನೆಗೊಳ್ಳಲಿದೆ.

ಮೂರು ವರ್ಷಗಳ ದಲಿತ ಮಗು ವಿನಯ, ಮಳೆಯಿಂದ ರಕ್ಷಣೆ ಪಡೆಯಲು ಆಕಸ್ಮಿಕವಾಗಿ ಕೊಪ್ಪಳ ಜಿಲ್ಲೆಯಲ್ಲಿ ಇದಕ್ಕಾಗಿ ಗ್ರಾಮದ ಮುಖಂಡರು ಅವನ ಕುಟುಂಬಕ್ಕೆ 25,000 ರೂ.ಗಳ ದಂಡ ವಿಧಿಸಿತ್ತು. ಮಾಧ್ಯಮಗಳಲ್ಲಿ ವರದಿಯಾದ ನಂತರ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳ ಬಂಧನವೂ ಆಗಿತ್ತು. ಆದರೆ ಆ ಕುಟುಂಬಕ್ಕೆ ನ್ಯಾಯ ಸಿಕ್ಕಿತೆ? ಇಲ್ಲ ಇದೀಗ ಅದು ಸಾಲದು ಎಂಬಂತೆ ಈ ಕುಟುಂಬವು ಇನ್ನೂ ಹೆಚ್ಚಿನ ದೌರ್ಜನ್ಯಕ್ಕೆ ಒಳಗಾಗಿದೆ.

ಈ ಘಟನೆಯ ನಂತರ ಮುಖ್ಯವಾಗಿ ಗಾಣಿಗ ಸಮುದಾಯದವರೇ ಇರುವ 1,500ರಷ್ಟು ಗ್ರಾಮಸ್ಥರು ಈ ದಲಿತ ಕುಟುಂಬಕ್ಕೆ ಎಂತಾ ಕಿರುಕುಳ ನೀಡಿದ್ದಾರೆಂದರೆ, ಆ ಕುಟುಂಬ ತನ್ನ ಕೃಷಿ ಜಮೀನನ್ನೂ, ಊರನ್ನೂ ಬಿಟ್ಟುಹೋಗಿದೆ.

ಈ ಜಾತಿ ತಾರತಮ್ಯ ಮತ್ತು ದೌರ್ಜನ್ಯದ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾದವರು ಜಾಮೀನಿನ ಮೇಲೆ ಹೊರಬಂದಿದ್ದು, ಈಗ ಗ್ರಾಮವನ್ನೇ ಆಳುತ್ತಿದ್ದಾರೆ ಎಂದು ವಿನಯನ ಕುಟುಂಬದವರು ಹೇಳುತ್ತಾರೆ..

ದಲಿತರು ಭಾಗವಹಿಸಬಹುದು ಎಂಬ ಭಯದಿಂದ ವರ್ಷ ವರ್ಷವೂ ನಡೆಯುವ ಊರ ಜಾತ್ರೆಯನ್ನೂ ರದ್ದುಗೊಳಿಸಲಾಗಿದೆ ಎಂದು ಅವರು ಹೇಳುತ್ತಾರೆ. ಆದರೆ, ಜಾತ್ರೆ ರದ್ದಾಗಿರುವ ಬಗ್ಗೆ ತಮಗೇನೂ ಮಾಹಿತಿಯಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳಿರುವುದಾಗಿ ವರದಿ ತಿಳಿಸುತ್ತದೆ.

“ಊರಲ್ಲಿ ನಡೆದ ಎಲ್ಲಾ ಕೆಟ್ಟದಕ್ಕೂ ನಮ್ಮ ಕುಟುಂಬವೇ ಕಾರಣ ಎಂದು ಊರವರು ದೂರುತ್ತಾರೆ. ಒಂದು ವೇಳೆ ಏನಾದರೂ ತುರ್ತಾದ ಉಪಕಾರ ಆಗಬೇಕಿದ್ದರೂ, ಅದು ಈ ಊರಿನಲ್ಲಿ ಸಿಗುವ ಸಾಧ್ಯತೆ ಇಲ್ಲ” ಎಂದವರು ಹೇಳುತ್ತಾರೆ. ಈ ಕುಟುಂಬವು ಈಗ ಚಂದ್ರಶೇಖರ ಅವರ ತಾಯಿಯ ಊರಾದ ಯಲಬುರ್ಗಾದಲ್ಲಿ ವಾಸಿಸುತ್ತಿದೆ.

ಚಂದ್ರಶೇಖರ ಅವರಿಗೆ ಸರಕಾರದಿಂದ ಒಂದು ಲಕ್ಷ ರೂ. ಪರಿಹಾರ ದೊರೆತಿದ್ದು, ಅವರೊಂದು ಕಾರು ತೊಳೆಯುವ ಅಂಗಡಿಯನ್ನು ಆರಂಭಿಸುವ ಯೋಚನೆ ಹೊಂದಿದ್ದಾರೆ. ಆದರೆ, ಮಿಯಾಪುರದಲ್ಲಿರುವ ತನ್ನ ಜಮೀನನ್ನು ರಕ್ಷಿಸಲು ಅಥವಾ ಬದಲಿ ಜಮೀನು ಪಡೆಯಲು ಸರಕಾರದೊಂದಿಗೆ ನಡೆಸಿದ ಪ್ರಯತ್ನ ಫಲ ನೀಡಿಲ್ಲ ಎಂದವರು ಹೇಳುತ್ತಾರೆ.

“ನಾನಿನ್ನು ಸರಕಾರಿ ಅಧಿಕಾರಿಗಳ ಮುಂದೆ ಕೈಯೊಡ್ಡಿ ಬೇಡಲು ಹೋಗುವುದಿಲ್ಲ. ನನಗಿದು ಈಗ ಸಾಕಾಗಿ ಹೋಗಿದೆ” ಎನ್ನುತ್ತಾರವರು.

“ಅವರಿಗೆ ಯಲಬುರ್ಗಾದಲ್ಲಿ ಜಮೀನು ದೊರಕಿಸಿ, ಮನೆ ಕಟ್ಟಲು ನೆರವಾಗುವ ಪ್ರಯತ್ನ ಮಾಡಲಾಗಿದೆ” ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.

ಈ ಪ್ರಕರಣದಲ್ಲಿ ಹೋರಾಟ ನಡೆಸಿದ್ದ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಸರ್ಕಾರಕ್ಕೆ ಅಶ್ಪಶ್ಯತೆ ಆಚರಣೆ ತಡೆಗಟ್ಟುವ ನಿಜವಾದ ಕಾಳಜಿ ಇದ್ದಲ್ಲಿ, ರಾಜ್ಯದ ಸಮಸ್ತ ಜನರಲ್ಲಿ ಕಾನೂನು ಅರಿವು ಮೂಡಿಸಬೇಕಿದೆ. ಜಿಲ್ಲಾಡಳಿತ ಜಾತೀಯತೆ ಕ್ರೂರ ಆಚರಣೆ ಎಂಬುದಾಗಿ ಅರಿವು ಮೂಡಿಸಬೇಕು. ಜಾತಿ ದೌರ್ಜನ್ಯವೆಸಗಿದವರಿಗೆ ಕಠಿಣ ಶಿಕ್ಷೆ ಇದೆ ಎಂದು ದೊಡ್ಡ ದೊಡ್ಡ ಹೋರ್ಡಿಂಗ್‌ಗಳ ಮೂಲಕ, ಟಿವಿ-ಪತ್ರಿಕೆ ಜಾಹೀರಾತುಗಳ ಮೂಲಕ ಜನರಿಗೆ ಅರಿವು ಮತ್ತು ಎಚ್ಚರಿಕೆ ಮೂಡಿಸಬೇಕು” ಎಂದರು.

ಜಾತಿಯನ್ನು ಮನುಷ್ಯರು ಸೃಷ್ಟಿಸಿದ್ದಾರೆಯೆ ಹೊರತು ದೇವರಲ್ಲ. ಹಾಗಾಗಿ ದಲಿತ ದಮನಿತರ ಮೇಲೆ ದೌರ್ಜನ್ಯವೆಸಗುವುದು ಅಪರಾಧವಾಗಿದೆ ಎಂದು ಸವರ್ಣಿಯ ಸಮುದಾಯಗಳಿಗೆ ಮನವರಿಕೆ ಮಾಡಿಕೊಡಬೇಕಿದೆ. ಅದೇ ಸಂದರ್ಭದಲ್ಲಿ ದಲಿತ ದಮನಿತರು ಆರ್ಥಿಕವಾಗಿ-ಸಾಮಾಜಿಕವಾಗಿ ಮೇಲೆತ್ತಲು ಯೋಜನೆಗಳನ್ನು ಪ್ರಾಮಾಣಿಕವಾಗಿ ಜಾರಿಗೆ ತರಬೇಕು. ಅದೇ ಸಂದರ್ಭದಲ್ಲಿ ಸಮಾನತೆ-ಸಾಮರಸ್ಯದ ಕಾರ್ಯಕ್ರಮಗಳನ್ನು ಪ್ರಜ್ಞಾಪೂರ್ವಕವಾಗಿ ಏರ್ಪಡಿಸಬೇಕು. ಅದನ್ನು ಸರ್ಕಾರ ಜಾರಿಗೆ ತರುತ್ತಿರುವ ವಿನಯ ಸಾಮರಸ್ಯ ಯೋಜನೆಯನ್ನು ಪರಿಣಾಮಕಾರಿ ಜಾರಿಗೆ ತರಬೇಕು ಎಂದು ಕರಿಯಪ್ಪ ಗುಡಿಮನಿ ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯ್ಯೋ ….ನಮ್ಮೂರಲ್ಲಿ ದಲಿತರು ದೈವಕ್ಷೇತ್ರ ಪ್ರವೇಶ ಮಾಡ್ತಾರೆಂದು ಆ ಕ್ಷೇತ್ರವನ್ನೇ ಮುಚ್ಚಿದ್ದಾರೆ. ೨೦೧೮ ರಿಂದ ನಮ್ಮ ಗ್ರಾಮ ದೈವಸ್ಥಾನ ಮುಚ್ಚಲ್ಪಟ್ಟಿದೆ. ಇಲ್ಲಿಯವರೇನೂ ಎಲ್ಲಿಗೂ ಓಡಿಹೋಗಿಲ್ಲ. ನಿರಂತರ ಹೋರಾಟಗಳ ಮೂಲಕ ಮುಚ್ಚಿದವರ ನಿದ್ದೆಗೆಡಿಸುತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...