Homeದಲಿತ್ ಫೈಲ್ಸ್ದಲಿತರು ಭಾಗವಹಿಸುತ್ತಾರೆ ಎಂಬ ಭಯದಲ್ಲಿ ಜಾತ್ರೆ ರದ್ದು?: ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಇಂದಿಗೂ ಸಾಮಾಜಿಕ...

ದಲಿತರು ಭಾಗವಹಿಸುತ್ತಾರೆ ಎಂಬ ಭಯದಲ್ಲಿ ಜಾತ್ರೆ ರದ್ದು?: ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಇಂದಿಗೂ ಸಾಮಾಜಿಕ ಬಹಿಷ್ಕಾರ

ಸ್ಪೃಶ್ಯತೆಯನ್ನು ತೊಲಗಿಸಲು ಸಾಧ್ಯವಿಲ್ಲದಿದ್ದರೆ, ಸರಕಾರಿ ಯೋಜನೆಗೆ ತನ್ನ ಮಗನ ಹೆಸರಿಟ್ಟು ಏನು ಪ್ರಯೋಜನ ಎಂದು ವಿನಯನ ತಂದೆ ಚಂದ್ರಶೇಖರ ಶಿವಪ್ಪ ಕೇಳುತ್ತಾರೆ

- Advertisement -
- Advertisement -

ಕರ್ನಾಟಕವು ತನ್ನ ಅಸ್ಪೃಶ್ಯತಾ ವಿರೋಧಿ ಕಾರ್ಯಕ್ರಮಕ್ಕೆ ಈ ದಲಿತ ಬಾಲಕನ ಹೆಸರಿಟ್ಟಿದೆ. ಆದರೆ, ಆದದ್ದೇನು? ಆ ಊರಿನ ಗ್ರಾಮಸ್ಥರು ಆ ಬಾಲಕನ ಕುಟುಂಬಕ್ಕೇ ಸಾಮಾಜಿಕ ಬಹಿಷ್ಕಾರ ಹಾಕಿ ಹೊರದಬ್ಬಿದ್ದಾರೆ!

2021ರ ಸೆ. 4 ರಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ವಿನಯ ಹೆಸರಿನ ಮಗುವೊಂದು ಆಕಸ್ಮಿಕವಾಗಿ ದೇವಸ್ಥಾನ ಪ್ರವೇಶಿಸಿದಕ್ಕೆ ಮಗುವಿನ ಕುಟುಂಬಕ್ಕೆ ಗ್ರಾಮಸ್ಥರು ದಂಡ ವಿಧಿಸಿದ್ದರು. ದೇವಸ್ಥಾನ ಶುದ್ಧಿಕರಿಸಿ ಅಸ್ಪೃಶ್ಯತೆ ಆಚರಿಸಿದ್ದರು. ಈ ಘಟನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕರ್ನಾಟಕ ಸರಕಾರವು ತನ್ನ ಅಸ್ಪೃಶ್ಯತಾ ವಿರೋಧಿ ಯೋಜನೆಗೆ ಯಾವ ದಲಿತ ಹುಡುಗನ ಹೆಸರಿಟ್ಟಿತೋ, ಅದೇ ಹುಡುಗನ ಕುಟುಂಬವನ್ನೇ ಊರವರು ಸಾಮಾಜಿಕ ಬಹಿಷ್ಕಾರ ಹಾಕಿ ಹೊರದಬ್ಬಿದ ಘಟನೆಯೊಂದನ್ನು “ಇಂಡಿಯನ್ ಎಕ್ಸ್‌ಪ್ರೆಸ್” ವರದಿ ಮಾಡಿದೆ.

ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಸ್ಪೃಶ್ಯತೆಯ ಕುರಿತು ಅರಿವು ಮೂಡಿಸುವ “ವಿನಯ ಸಾಮರಸ್ಯ ಯೋಜನೆ”ಯನ್ನು ಬಸವರಾಜ ಬೊಮ್ಮಾಯಿ ಸರಕಾರ ಘೋಷಿಸಿದ್ದು, ಇದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವಾದ ಎಪ್ರಿಲ್ 14ರಂದು ಚಾಲನೆಗೊಳ್ಳಲಿದೆ.

ಮೂರು ವರ್ಷಗಳ ದಲಿತ ಮಗು ವಿನಯ, ಮಳೆಯಿಂದ ರಕ್ಷಣೆ ಪಡೆಯಲು ಆಕಸ್ಮಿಕವಾಗಿ ಕೊಪ್ಪಳ ಜಿಲ್ಲೆಯಲ್ಲಿ ಇದಕ್ಕಾಗಿ ಗ್ರಾಮದ ಮುಖಂಡರು ಅವನ ಕುಟುಂಬಕ್ಕೆ 25,000 ರೂ.ಗಳ ದಂಡ ವಿಧಿಸಿತ್ತು. ಮಾಧ್ಯಮಗಳಲ್ಲಿ ವರದಿಯಾದ ನಂತರ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳ ಬಂಧನವೂ ಆಗಿತ್ತು. ಆದರೆ ಆ ಕುಟುಂಬಕ್ಕೆ ನ್ಯಾಯ ಸಿಕ್ಕಿತೆ? ಇಲ್ಲ ಇದೀಗ ಅದು ಸಾಲದು ಎಂಬಂತೆ ಈ ಕುಟುಂಬವು ಇನ್ನೂ ಹೆಚ್ಚಿನ ದೌರ್ಜನ್ಯಕ್ಕೆ ಒಳಗಾಗಿದೆ.

ಈ ಘಟನೆಯ ನಂತರ ಮುಖ್ಯವಾಗಿ ಗಾಣಿಗ ಸಮುದಾಯದವರೇ ಇರುವ 1,500ರಷ್ಟು ಗ್ರಾಮಸ್ಥರು ಈ ದಲಿತ ಕುಟುಂಬಕ್ಕೆ ಎಂತಾ ಕಿರುಕುಳ ನೀಡಿದ್ದಾರೆಂದರೆ, ಆ ಕುಟುಂಬ ತನ್ನ ಕೃಷಿ ಜಮೀನನ್ನೂ, ಊರನ್ನೂ ಬಿಟ್ಟುಹೋಗಿದೆ.

ಈ ಜಾತಿ ತಾರತಮ್ಯ ಮತ್ತು ದೌರ್ಜನ್ಯದ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾದವರು ಜಾಮೀನಿನ ಮೇಲೆ ಹೊರಬಂದಿದ್ದು, ಈಗ ಗ್ರಾಮವನ್ನೇ ಆಳುತ್ತಿದ್ದಾರೆ ಎಂದು ವಿನಯನ ಕುಟುಂಬದವರು ಹೇಳುತ್ತಾರೆ..

ದಲಿತರು ಭಾಗವಹಿಸಬಹುದು ಎಂಬ ಭಯದಿಂದ ವರ್ಷ ವರ್ಷವೂ ನಡೆಯುವ ಊರ ಜಾತ್ರೆಯನ್ನೂ ರದ್ದುಗೊಳಿಸಲಾಗಿದೆ ಎಂದು ಅವರು ಹೇಳುತ್ತಾರೆ. ಆದರೆ, ಜಾತ್ರೆ ರದ್ದಾಗಿರುವ ಬಗ್ಗೆ ತಮಗೇನೂ ಮಾಹಿತಿಯಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳಿರುವುದಾಗಿ ವರದಿ ತಿಳಿಸುತ್ತದೆ.

“ಊರಲ್ಲಿ ನಡೆದ ಎಲ್ಲಾ ಕೆಟ್ಟದಕ್ಕೂ ನಮ್ಮ ಕುಟುಂಬವೇ ಕಾರಣ ಎಂದು ಊರವರು ದೂರುತ್ತಾರೆ. ಒಂದು ವೇಳೆ ಏನಾದರೂ ತುರ್ತಾದ ಉಪಕಾರ ಆಗಬೇಕಿದ್ದರೂ, ಅದು ಈ ಊರಿನಲ್ಲಿ ಸಿಗುವ ಸಾಧ್ಯತೆ ಇಲ್ಲ” ಎಂದವರು ಹೇಳುತ್ತಾರೆ. ಈ ಕುಟುಂಬವು ಈಗ ಚಂದ್ರಶೇಖರ ಅವರ ತಾಯಿಯ ಊರಾದ ಯಲಬುರ್ಗಾದಲ್ಲಿ ವಾಸಿಸುತ್ತಿದೆ.

ಚಂದ್ರಶೇಖರ ಅವರಿಗೆ ಸರಕಾರದಿಂದ ಒಂದು ಲಕ್ಷ ರೂ. ಪರಿಹಾರ ದೊರೆತಿದ್ದು, ಅವರೊಂದು ಕಾರು ತೊಳೆಯುವ ಅಂಗಡಿಯನ್ನು ಆರಂಭಿಸುವ ಯೋಚನೆ ಹೊಂದಿದ್ದಾರೆ. ಆದರೆ, ಮಿಯಾಪುರದಲ್ಲಿರುವ ತನ್ನ ಜಮೀನನ್ನು ರಕ್ಷಿಸಲು ಅಥವಾ ಬದಲಿ ಜಮೀನು ಪಡೆಯಲು ಸರಕಾರದೊಂದಿಗೆ ನಡೆಸಿದ ಪ್ರಯತ್ನ ಫಲ ನೀಡಿಲ್ಲ ಎಂದವರು ಹೇಳುತ್ತಾರೆ.

“ನಾನಿನ್ನು ಸರಕಾರಿ ಅಧಿಕಾರಿಗಳ ಮುಂದೆ ಕೈಯೊಡ್ಡಿ ಬೇಡಲು ಹೋಗುವುದಿಲ್ಲ. ನನಗಿದು ಈಗ ಸಾಕಾಗಿ ಹೋಗಿದೆ” ಎನ್ನುತ್ತಾರವರು.

“ಅವರಿಗೆ ಯಲಬುರ್ಗಾದಲ್ಲಿ ಜಮೀನು ದೊರಕಿಸಿ, ಮನೆ ಕಟ್ಟಲು ನೆರವಾಗುವ ಪ್ರಯತ್ನ ಮಾಡಲಾಗಿದೆ” ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.

ಈ ಪ್ರಕರಣದಲ್ಲಿ ಹೋರಾಟ ನಡೆಸಿದ್ದ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಸರ್ಕಾರಕ್ಕೆ ಅಶ್ಪಶ್ಯತೆ ಆಚರಣೆ ತಡೆಗಟ್ಟುವ ನಿಜವಾದ ಕಾಳಜಿ ಇದ್ದಲ್ಲಿ, ರಾಜ್ಯದ ಸಮಸ್ತ ಜನರಲ್ಲಿ ಕಾನೂನು ಅರಿವು ಮೂಡಿಸಬೇಕಿದೆ. ಜಿಲ್ಲಾಡಳಿತ ಜಾತೀಯತೆ ಕ್ರೂರ ಆಚರಣೆ ಎಂಬುದಾಗಿ ಅರಿವು ಮೂಡಿಸಬೇಕು. ಜಾತಿ ದೌರ್ಜನ್ಯವೆಸಗಿದವರಿಗೆ ಕಠಿಣ ಶಿಕ್ಷೆ ಇದೆ ಎಂದು ದೊಡ್ಡ ದೊಡ್ಡ ಹೋರ್ಡಿಂಗ್‌ಗಳ ಮೂಲಕ, ಟಿವಿ-ಪತ್ರಿಕೆ ಜಾಹೀರಾತುಗಳ ಮೂಲಕ ಜನರಿಗೆ ಅರಿವು ಮತ್ತು ಎಚ್ಚರಿಕೆ ಮೂಡಿಸಬೇಕು” ಎಂದರು.

ಜಾತಿಯನ್ನು ಮನುಷ್ಯರು ಸೃಷ್ಟಿಸಿದ್ದಾರೆಯೆ ಹೊರತು ದೇವರಲ್ಲ. ಹಾಗಾಗಿ ದಲಿತ ದಮನಿತರ ಮೇಲೆ ದೌರ್ಜನ್ಯವೆಸಗುವುದು ಅಪರಾಧವಾಗಿದೆ ಎಂದು ಸವರ್ಣಿಯ ಸಮುದಾಯಗಳಿಗೆ ಮನವರಿಕೆ ಮಾಡಿಕೊಡಬೇಕಿದೆ. ಅದೇ ಸಂದರ್ಭದಲ್ಲಿ ದಲಿತ ದಮನಿತರು ಆರ್ಥಿಕವಾಗಿ-ಸಾಮಾಜಿಕವಾಗಿ ಮೇಲೆತ್ತಲು ಯೋಜನೆಗಳನ್ನು ಪ್ರಾಮಾಣಿಕವಾಗಿ ಜಾರಿಗೆ ತರಬೇಕು. ಅದೇ ಸಂದರ್ಭದಲ್ಲಿ ಸಮಾನತೆ-ಸಾಮರಸ್ಯದ ಕಾರ್ಯಕ್ರಮಗಳನ್ನು ಪ್ರಜ್ಞಾಪೂರ್ವಕವಾಗಿ ಏರ್ಪಡಿಸಬೇಕು. ಅದನ್ನು ಸರ್ಕಾರ ಜಾರಿಗೆ ತರುತ್ತಿರುವ ವಿನಯ ಸಾಮರಸ್ಯ ಯೋಜನೆಯನ್ನು ಪರಿಣಾಮಕಾರಿ ಜಾರಿಗೆ ತರಬೇಕು ಎಂದು ಕರಿಯಪ್ಪ ಗುಡಿಮನಿ ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯ್ಯೋ ….ನಮ್ಮೂರಲ್ಲಿ ದಲಿತರು ದೈವಕ್ಷೇತ್ರ ಪ್ರವೇಶ ಮಾಡ್ತಾರೆಂದು ಆ ಕ್ಷೇತ್ರವನ್ನೇ ಮುಚ್ಚಿದ್ದಾರೆ. ೨೦೧೮ ರಿಂದ ನಮ್ಮ ಗ್ರಾಮ ದೈವಸ್ಥಾನ ಮುಚ್ಚಲ್ಪಟ್ಟಿದೆ. ಇಲ್ಲಿಯವರೇನೂ ಎಲ್ಲಿಗೂ ಓಡಿಹೋಗಿಲ್ಲ. ನಿರಂತರ ಹೋರಾಟಗಳ ಮೂಲಕ ಮುಚ್ಚಿದವರ ನಿದ್ದೆಗೆಡಿಸುತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...