Homeದಲಿತ್ ಫೈಲ್ಸ್ದಲಿತರು ಭಾಗವಹಿಸುತ್ತಾರೆ ಎಂಬ ಭಯದಲ್ಲಿ ಜಾತ್ರೆ ರದ್ದು?: ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಇಂದಿಗೂ ಸಾಮಾಜಿಕ...

ದಲಿತರು ಭಾಗವಹಿಸುತ್ತಾರೆ ಎಂಬ ಭಯದಲ್ಲಿ ಜಾತ್ರೆ ರದ್ದು?: ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಇಂದಿಗೂ ಸಾಮಾಜಿಕ ಬಹಿಷ್ಕಾರ

ಸ್ಪೃಶ್ಯತೆಯನ್ನು ತೊಲಗಿಸಲು ಸಾಧ್ಯವಿಲ್ಲದಿದ್ದರೆ, ಸರಕಾರಿ ಯೋಜನೆಗೆ ತನ್ನ ಮಗನ ಹೆಸರಿಟ್ಟು ಏನು ಪ್ರಯೋಜನ ಎಂದು ವಿನಯನ ತಂದೆ ಚಂದ್ರಶೇಖರ ಶಿವಪ್ಪ ಕೇಳುತ್ತಾರೆ

- Advertisement -
- Advertisement -

ಕರ್ನಾಟಕವು ತನ್ನ ಅಸ್ಪೃಶ್ಯತಾ ವಿರೋಧಿ ಕಾರ್ಯಕ್ರಮಕ್ಕೆ ಈ ದಲಿತ ಬಾಲಕನ ಹೆಸರಿಟ್ಟಿದೆ. ಆದರೆ, ಆದದ್ದೇನು? ಆ ಊರಿನ ಗ್ರಾಮಸ್ಥರು ಆ ಬಾಲಕನ ಕುಟುಂಬಕ್ಕೇ ಸಾಮಾಜಿಕ ಬಹಿಷ್ಕಾರ ಹಾಕಿ ಹೊರದಬ್ಬಿದ್ದಾರೆ!

2021ರ ಸೆ. 4 ರಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ವಿನಯ ಹೆಸರಿನ ಮಗುವೊಂದು ಆಕಸ್ಮಿಕವಾಗಿ ದೇವಸ್ಥಾನ ಪ್ರವೇಶಿಸಿದಕ್ಕೆ ಮಗುವಿನ ಕುಟುಂಬಕ್ಕೆ ಗ್ರಾಮಸ್ಥರು ದಂಡ ವಿಧಿಸಿದ್ದರು. ದೇವಸ್ಥಾನ ಶುದ್ಧಿಕರಿಸಿ ಅಸ್ಪೃಶ್ಯತೆ ಆಚರಿಸಿದ್ದರು. ಈ ಘಟನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕರ್ನಾಟಕ ಸರಕಾರವು ತನ್ನ ಅಸ್ಪೃಶ್ಯತಾ ವಿರೋಧಿ ಯೋಜನೆಗೆ ಯಾವ ದಲಿತ ಹುಡುಗನ ಹೆಸರಿಟ್ಟಿತೋ, ಅದೇ ಹುಡುಗನ ಕುಟುಂಬವನ್ನೇ ಊರವರು ಸಾಮಾಜಿಕ ಬಹಿಷ್ಕಾರ ಹಾಕಿ ಹೊರದಬ್ಬಿದ ಘಟನೆಯೊಂದನ್ನು “ಇಂಡಿಯನ್ ಎಕ್ಸ್‌ಪ್ರೆಸ್” ವರದಿ ಮಾಡಿದೆ.

ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಸ್ಪೃಶ್ಯತೆಯ ಕುರಿತು ಅರಿವು ಮೂಡಿಸುವ “ವಿನಯ ಸಾಮರಸ್ಯ ಯೋಜನೆ”ಯನ್ನು ಬಸವರಾಜ ಬೊಮ್ಮಾಯಿ ಸರಕಾರ ಘೋಷಿಸಿದ್ದು, ಇದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವಾದ ಎಪ್ರಿಲ್ 14ರಂದು ಚಾಲನೆಗೊಳ್ಳಲಿದೆ.

ಮೂರು ವರ್ಷಗಳ ದಲಿತ ಮಗು ವಿನಯ, ಮಳೆಯಿಂದ ರಕ್ಷಣೆ ಪಡೆಯಲು ಆಕಸ್ಮಿಕವಾಗಿ ಕೊಪ್ಪಳ ಜಿಲ್ಲೆಯಲ್ಲಿ ಇದಕ್ಕಾಗಿ ಗ್ರಾಮದ ಮುಖಂಡರು ಅವನ ಕುಟುಂಬಕ್ಕೆ 25,000 ರೂ.ಗಳ ದಂಡ ವಿಧಿಸಿತ್ತು. ಮಾಧ್ಯಮಗಳಲ್ಲಿ ವರದಿಯಾದ ನಂತರ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳ ಬಂಧನವೂ ಆಗಿತ್ತು. ಆದರೆ ಆ ಕುಟುಂಬಕ್ಕೆ ನ್ಯಾಯ ಸಿಕ್ಕಿತೆ? ಇಲ್ಲ ಇದೀಗ ಅದು ಸಾಲದು ಎಂಬಂತೆ ಈ ಕುಟುಂಬವು ಇನ್ನೂ ಹೆಚ್ಚಿನ ದೌರ್ಜನ್ಯಕ್ಕೆ ಒಳಗಾಗಿದೆ.

ಈ ಘಟನೆಯ ನಂತರ ಮುಖ್ಯವಾಗಿ ಗಾಣಿಗ ಸಮುದಾಯದವರೇ ಇರುವ 1,500ರಷ್ಟು ಗ್ರಾಮಸ್ಥರು ಈ ದಲಿತ ಕುಟುಂಬಕ್ಕೆ ಎಂತಾ ಕಿರುಕುಳ ನೀಡಿದ್ದಾರೆಂದರೆ, ಆ ಕುಟುಂಬ ತನ್ನ ಕೃಷಿ ಜಮೀನನ್ನೂ, ಊರನ್ನೂ ಬಿಟ್ಟುಹೋಗಿದೆ.

ಈ ಜಾತಿ ತಾರತಮ್ಯ ಮತ್ತು ದೌರ್ಜನ್ಯದ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾದವರು ಜಾಮೀನಿನ ಮೇಲೆ ಹೊರಬಂದಿದ್ದು, ಈಗ ಗ್ರಾಮವನ್ನೇ ಆಳುತ್ತಿದ್ದಾರೆ ಎಂದು ವಿನಯನ ಕುಟುಂಬದವರು ಹೇಳುತ್ತಾರೆ..

ದಲಿತರು ಭಾಗವಹಿಸಬಹುದು ಎಂಬ ಭಯದಿಂದ ವರ್ಷ ವರ್ಷವೂ ನಡೆಯುವ ಊರ ಜಾತ್ರೆಯನ್ನೂ ರದ್ದುಗೊಳಿಸಲಾಗಿದೆ ಎಂದು ಅವರು ಹೇಳುತ್ತಾರೆ. ಆದರೆ, ಜಾತ್ರೆ ರದ್ದಾಗಿರುವ ಬಗ್ಗೆ ತಮಗೇನೂ ಮಾಹಿತಿಯಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳಿರುವುದಾಗಿ ವರದಿ ತಿಳಿಸುತ್ತದೆ.

“ಊರಲ್ಲಿ ನಡೆದ ಎಲ್ಲಾ ಕೆಟ್ಟದಕ್ಕೂ ನಮ್ಮ ಕುಟುಂಬವೇ ಕಾರಣ ಎಂದು ಊರವರು ದೂರುತ್ತಾರೆ. ಒಂದು ವೇಳೆ ಏನಾದರೂ ತುರ್ತಾದ ಉಪಕಾರ ಆಗಬೇಕಿದ್ದರೂ, ಅದು ಈ ಊರಿನಲ್ಲಿ ಸಿಗುವ ಸಾಧ್ಯತೆ ಇಲ್ಲ” ಎಂದವರು ಹೇಳುತ್ತಾರೆ. ಈ ಕುಟುಂಬವು ಈಗ ಚಂದ್ರಶೇಖರ ಅವರ ತಾಯಿಯ ಊರಾದ ಯಲಬುರ್ಗಾದಲ್ಲಿ ವಾಸಿಸುತ್ತಿದೆ.

ಚಂದ್ರಶೇಖರ ಅವರಿಗೆ ಸರಕಾರದಿಂದ ಒಂದು ಲಕ್ಷ ರೂ. ಪರಿಹಾರ ದೊರೆತಿದ್ದು, ಅವರೊಂದು ಕಾರು ತೊಳೆಯುವ ಅಂಗಡಿಯನ್ನು ಆರಂಭಿಸುವ ಯೋಚನೆ ಹೊಂದಿದ್ದಾರೆ. ಆದರೆ, ಮಿಯಾಪುರದಲ್ಲಿರುವ ತನ್ನ ಜಮೀನನ್ನು ರಕ್ಷಿಸಲು ಅಥವಾ ಬದಲಿ ಜಮೀನು ಪಡೆಯಲು ಸರಕಾರದೊಂದಿಗೆ ನಡೆಸಿದ ಪ್ರಯತ್ನ ಫಲ ನೀಡಿಲ್ಲ ಎಂದವರು ಹೇಳುತ್ತಾರೆ.

“ನಾನಿನ್ನು ಸರಕಾರಿ ಅಧಿಕಾರಿಗಳ ಮುಂದೆ ಕೈಯೊಡ್ಡಿ ಬೇಡಲು ಹೋಗುವುದಿಲ್ಲ. ನನಗಿದು ಈಗ ಸಾಕಾಗಿ ಹೋಗಿದೆ” ಎನ್ನುತ್ತಾರವರು.

“ಅವರಿಗೆ ಯಲಬುರ್ಗಾದಲ್ಲಿ ಜಮೀನು ದೊರಕಿಸಿ, ಮನೆ ಕಟ್ಟಲು ನೆರವಾಗುವ ಪ್ರಯತ್ನ ಮಾಡಲಾಗಿದೆ” ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.

ಈ ಪ್ರಕರಣದಲ್ಲಿ ಹೋರಾಟ ನಡೆಸಿದ್ದ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಸರ್ಕಾರಕ್ಕೆ ಅಶ್ಪಶ್ಯತೆ ಆಚರಣೆ ತಡೆಗಟ್ಟುವ ನಿಜವಾದ ಕಾಳಜಿ ಇದ್ದಲ್ಲಿ, ರಾಜ್ಯದ ಸಮಸ್ತ ಜನರಲ್ಲಿ ಕಾನೂನು ಅರಿವು ಮೂಡಿಸಬೇಕಿದೆ. ಜಿಲ್ಲಾಡಳಿತ ಜಾತೀಯತೆ ಕ್ರೂರ ಆಚರಣೆ ಎಂಬುದಾಗಿ ಅರಿವು ಮೂಡಿಸಬೇಕು. ಜಾತಿ ದೌರ್ಜನ್ಯವೆಸಗಿದವರಿಗೆ ಕಠಿಣ ಶಿಕ್ಷೆ ಇದೆ ಎಂದು ದೊಡ್ಡ ದೊಡ್ಡ ಹೋರ್ಡಿಂಗ್‌ಗಳ ಮೂಲಕ, ಟಿವಿ-ಪತ್ರಿಕೆ ಜಾಹೀರಾತುಗಳ ಮೂಲಕ ಜನರಿಗೆ ಅರಿವು ಮತ್ತು ಎಚ್ಚರಿಕೆ ಮೂಡಿಸಬೇಕು” ಎಂದರು.

ಜಾತಿಯನ್ನು ಮನುಷ್ಯರು ಸೃಷ್ಟಿಸಿದ್ದಾರೆಯೆ ಹೊರತು ದೇವರಲ್ಲ. ಹಾಗಾಗಿ ದಲಿತ ದಮನಿತರ ಮೇಲೆ ದೌರ್ಜನ್ಯವೆಸಗುವುದು ಅಪರಾಧವಾಗಿದೆ ಎಂದು ಸವರ್ಣಿಯ ಸಮುದಾಯಗಳಿಗೆ ಮನವರಿಕೆ ಮಾಡಿಕೊಡಬೇಕಿದೆ. ಅದೇ ಸಂದರ್ಭದಲ್ಲಿ ದಲಿತ ದಮನಿತರು ಆರ್ಥಿಕವಾಗಿ-ಸಾಮಾಜಿಕವಾಗಿ ಮೇಲೆತ್ತಲು ಯೋಜನೆಗಳನ್ನು ಪ್ರಾಮಾಣಿಕವಾಗಿ ಜಾರಿಗೆ ತರಬೇಕು. ಅದೇ ಸಂದರ್ಭದಲ್ಲಿ ಸಮಾನತೆ-ಸಾಮರಸ್ಯದ ಕಾರ್ಯಕ್ರಮಗಳನ್ನು ಪ್ರಜ್ಞಾಪೂರ್ವಕವಾಗಿ ಏರ್ಪಡಿಸಬೇಕು. ಅದನ್ನು ಸರ್ಕಾರ ಜಾರಿಗೆ ತರುತ್ತಿರುವ ವಿನಯ ಸಾಮರಸ್ಯ ಯೋಜನೆಯನ್ನು ಪರಿಣಾಮಕಾರಿ ಜಾರಿಗೆ ತರಬೇಕು ಎಂದು ಕರಿಯಪ್ಪ ಗುಡಿಮನಿ ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯ್ಯೋ ….ನಮ್ಮೂರಲ್ಲಿ ದಲಿತರು ದೈವಕ್ಷೇತ್ರ ಪ್ರವೇಶ ಮಾಡ್ತಾರೆಂದು ಆ ಕ್ಷೇತ್ರವನ್ನೇ ಮುಚ್ಚಿದ್ದಾರೆ. ೨೦೧೮ ರಿಂದ ನಮ್ಮ ಗ್ರಾಮ ದೈವಸ್ಥಾನ ಮುಚ್ಚಲ್ಪಟ್ಟಿದೆ. ಇಲ್ಲಿಯವರೇನೂ ಎಲ್ಲಿಗೂ ಓಡಿಹೋಗಿಲ್ಲ. ನಿರಂತರ ಹೋರಾಟಗಳ ಮೂಲಕ ಮುಚ್ಚಿದವರ ನಿದ್ದೆಗೆಡಿಸುತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...