Homeದಲಿತ್ ಫೈಲ್ಸ್ದಲಿತರು ಭಾಗವಹಿಸುತ್ತಾರೆ ಎಂಬ ಭಯದಲ್ಲಿ ಜಾತ್ರೆ ರದ್ದು?: ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಇಂದಿಗೂ ಸಾಮಾಜಿಕ...

ದಲಿತರು ಭಾಗವಹಿಸುತ್ತಾರೆ ಎಂಬ ಭಯದಲ್ಲಿ ಜಾತ್ರೆ ರದ್ದು?: ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಇಂದಿಗೂ ಸಾಮಾಜಿಕ ಬಹಿಷ್ಕಾರ

ಸ್ಪೃಶ್ಯತೆಯನ್ನು ತೊಲಗಿಸಲು ಸಾಧ್ಯವಿಲ್ಲದಿದ್ದರೆ, ಸರಕಾರಿ ಯೋಜನೆಗೆ ತನ್ನ ಮಗನ ಹೆಸರಿಟ್ಟು ಏನು ಪ್ರಯೋಜನ ಎಂದು ವಿನಯನ ತಂದೆ ಚಂದ್ರಶೇಖರ ಶಿವಪ್ಪ ಕೇಳುತ್ತಾರೆ

- Advertisement -
- Advertisement -

ಕರ್ನಾಟಕವು ತನ್ನ ಅಸ್ಪೃಶ್ಯತಾ ವಿರೋಧಿ ಕಾರ್ಯಕ್ರಮಕ್ಕೆ ಈ ದಲಿತ ಬಾಲಕನ ಹೆಸರಿಟ್ಟಿದೆ. ಆದರೆ, ಆದದ್ದೇನು? ಆ ಊರಿನ ಗ್ರಾಮಸ್ಥರು ಆ ಬಾಲಕನ ಕುಟುಂಬಕ್ಕೇ ಸಾಮಾಜಿಕ ಬಹಿಷ್ಕಾರ ಹಾಕಿ ಹೊರದಬ್ಬಿದ್ದಾರೆ!

2021ರ ಸೆ. 4 ರಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ವಿನಯ ಹೆಸರಿನ ಮಗುವೊಂದು ಆಕಸ್ಮಿಕವಾಗಿ ದೇವಸ್ಥಾನ ಪ್ರವೇಶಿಸಿದಕ್ಕೆ ಮಗುವಿನ ಕುಟುಂಬಕ್ಕೆ ಗ್ರಾಮಸ್ಥರು ದಂಡ ವಿಧಿಸಿದ್ದರು. ದೇವಸ್ಥಾನ ಶುದ್ಧಿಕರಿಸಿ ಅಸ್ಪೃಶ್ಯತೆ ಆಚರಿಸಿದ್ದರು. ಈ ಘಟನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕರ್ನಾಟಕ ಸರಕಾರವು ತನ್ನ ಅಸ್ಪೃಶ್ಯತಾ ವಿರೋಧಿ ಯೋಜನೆಗೆ ಯಾವ ದಲಿತ ಹುಡುಗನ ಹೆಸರಿಟ್ಟಿತೋ, ಅದೇ ಹುಡುಗನ ಕುಟುಂಬವನ್ನೇ ಊರವರು ಸಾಮಾಜಿಕ ಬಹಿಷ್ಕಾರ ಹಾಕಿ ಹೊರದಬ್ಬಿದ ಘಟನೆಯೊಂದನ್ನು “ಇಂಡಿಯನ್ ಎಕ್ಸ್‌ಪ್ರೆಸ್” ವರದಿ ಮಾಡಿದೆ.

ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಸ್ಪೃಶ್ಯತೆಯ ಕುರಿತು ಅರಿವು ಮೂಡಿಸುವ “ವಿನಯ ಸಾಮರಸ್ಯ ಯೋಜನೆ”ಯನ್ನು ಬಸವರಾಜ ಬೊಮ್ಮಾಯಿ ಸರಕಾರ ಘೋಷಿಸಿದ್ದು, ಇದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವಾದ ಎಪ್ರಿಲ್ 14ರಂದು ಚಾಲನೆಗೊಳ್ಳಲಿದೆ.

ಮೂರು ವರ್ಷಗಳ ದಲಿತ ಮಗು ವಿನಯ, ಮಳೆಯಿಂದ ರಕ್ಷಣೆ ಪಡೆಯಲು ಆಕಸ್ಮಿಕವಾಗಿ ಕೊಪ್ಪಳ ಜಿಲ್ಲೆಯಲ್ಲಿ ಇದಕ್ಕಾಗಿ ಗ್ರಾಮದ ಮುಖಂಡರು ಅವನ ಕುಟುಂಬಕ್ಕೆ 25,000 ರೂ.ಗಳ ದಂಡ ವಿಧಿಸಿತ್ತು. ಮಾಧ್ಯಮಗಳಲ್ಲಿ ವರದಿಯಾದ ನಂತರ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳ ಬಂಧನವೂ ಆಗಿತ್ತು. ಆದರೆ ಆ ಕುಟುಂಬಕ್ಕೆ ನ್ಯಾಯ ಸಿಕ್ಕಿತೆ? ಇಲ್ಲ ಇದೀಗ ಅದು ಸಾಲದು ಎಂಬಂತೆ ಈ ಕುಟುಂಬವು ಇನ್ನೂ ಹೆಚ್ಚಿನ ದೌರ್ಜನ್ಯಕ್ಕೆ ಒಳಗಾಗಿದೆ.

ಈ ಘಟನೆಯ ನಂತರ ಮುಖ್ಯವಾಗಿ ಗಾಣಿಗ ಸಮುದಾಯದವರೇ ಇರುವ 1,500ರಷ್ಟು ಗ್ರಾಮಸ್ಥರು ಈ ದಲಿತ ಕುಟುಂಬಕ್ಕೆ ಎಂತಾ ಕಿರುಕುಳ ನೀಡಿದ್ದಾರೆಂದರೆ, ಆ ಕುಟುಂಬ ತನ್ನ ಕೃಷಿ ಜಮೀನನ್ನೂ, ಊರನ್ನೂ ಬಿಟ್ಟುಹೋಗಿದೆ.

ಈ ಜಾತಿ ತಾರತಮ್ಯ ಮತ್ತು ದೌರ್ಜನ್ಯದ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾದವರು ಜಾಮೀನಿನ ಮೇಲೆ ಹೊರಬಂದಿದ್ದು, ಈಗ ಗ್ರಾಮವನ್ನೇ ಆಳುತ್ತಿದ್ದಾರೆ ಎಂದು ವಿನಯನ ಕುಟುಂಬದವರು ಹೇಳುತ್ತಾರೆ..

ದಲಿತರು ಭಾಗವಹಿಸಬಹುದು ಎಂಬ ಭಯದಿಂದ ವರ್ಷ ವರ್ಷವೂ ನಡೆಯುವ ಊರ ಜಾತ್ರೆಯನ್ನೂ ರದ್ದುಗೊಳಿಸಲಾಗಿದೆ ಎಂದು ಅವರು ಹೇಳುತ್ತಾರೆ. ಆದರೆ, ಜಾತ್ರೆ ರದ್ದಾಗಿರುವ ಬಗ್ಗೆ ತಮಗೇನೂ ಮಾಹಿತಿಯಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳಿರುವುದಾಗಿ ವರದಿ ತಿಳಿಸುತ್ತದೆ.

“ಊರಲ್ಲಿ ನಡೆದ ಎಲ್ಲಾ ಕೆಟ್ಟದಕ್ಕೂ ನಮ್ಮ ಕುಟುಂಬವೇ ಕಾರಣ ಎಂದು ಊರವರು ದೂರುತ್ತಾರೆ. ಒಂದು ವೇಳೆ ಏನಾದರೂ ತುರ್ತಾದ ಉಪಕಾರ ಆಗಬೇಕಿದ್ದರೂ, ಅದು ಈ ಊರಿನಲ್ಲಿ ಸಿಗುವ ಸಾಧ್ಯತೆ ಇಲ್ಲ” ಎಂದವರು ಹೇಳುತ್ತಾರೆ. ಈ ಕುಟುಂಬವು ಈಗ ಚಂದ್ರಶೇಖರ ಅವರ ತಾಯಿಯ ಊರಾದ ಯಲಬುರ್ಗಾದಲ್ಲಿ ವಾಸಿಸುತ್ತಿದೆ.

ಚಂದ್ರಶೇಖರ ಅವರಿಗೆ ಸರಕಾರದಿಂದ ಒಂದು ಲಕ್ಷ ರೂ. ಪರಿಹಾರ ದೊರೆತಿದ್ದು, ಅವರೊಂದು ಕಾರು ತೊಳೆಯುವ ಅಂಗಡಿಯನ್ನು ಆರಂಭಿಸುವ ಯೋಚನೆ ಹೊಂದಿದ್ದಾರೆ. ಆದರೆ, ಮಿಯಾಪುರದಲ್ಲಿರುವ ತನ್ನ ಜಮೀನನ್ನು ರಕ್ಷಿಸಲು ಅಥವಾ ಬದಲಿ ಜಮೀನು ಪಡೆಯಲು ಸರಕಾರದೊಂದಿಗೆ ನಡೆಸಿದ ಪ್ರಯತ್ನ ಫಲ ನೀಡಿಲ್ಲ ಎಂದವರು ಹೇಳುತ್ತಾರೆ.

“ನಾನಿನ್ನು ಸರಕಾರಿ ಅಧಿಕಾರಿಗಳ ಮುಂದೆ ಕೈಯೊಡ್ಡಿ ಬೇಡಲು ಹೋಗುವುದಿಲ್ಲ. ನನಗಿದು ಈಗ ಸಾಕಾಗಿ ಹೋಗಿದೆ” ಎನ್ನುತ್ತಾರವರು.

“ಅವರಿಗೆ ಯಲಬುರ್ಗಾದಲ್ಲಿ ಜಮೀನು ದೊರಕಿಸಿ, ಮನೆ ಕಟ್ಟಲು ನೆರವಾಗುವ ಪ್ರಯತ್ನ ಮಾಡಲಾಗಿದೆ” ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.

ಈ ಪ್ರಕರಣದಲ್ಲಿ ಹೋರಾಟ ನಡೆಸಿದ್ದ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಸರ್ಕಾರಕ್ಕೆ ಅಶ್ಪಶ್ಯತೆ ಆಚರಣೆ ತಡೆಗಟ್ಟುವ ನಿಜವಾದ ಕಾಳಜಿ ಇದ್ದಲ್ಲಿ, ರಾಜ್ಯದ ಸಮಸ್ತ ಜನರಲ್ಲಿ ಕಾನೂನು ಅರಿವು ಮೂಡಿಸಬೇಕಿದೆ. ಜಿಲ್ಲಾಡಳಿತ ಜಾತೀಯತೆ ಕ್ರೂರ ಆಚರಣೆ ಎಂಬುದಾಗಿ ಅರಿವು ಮೂಡಿಸಬೇಕು. ಜಾತಿ ದೌರ್ಜನ್ಯವೆಸಗಿದವರಿಗೆ ಕಠಿಣ ಶಿಕ್ಷೆ ಇದೆ ಎಂದು ದೊಡ್ಡ ದೊಡ್ಡ ಹೋರ್ಡಿಂಗ್‌ಗಳ ಮೂಲಕ, ಟಿವಿ-ಪತ್ರಿಕೆ ಜಾಹೀರಾತುಗಳ ಮೂಲಕ ಜನರಿಗೆ ಅರಿವು ಮತ್ತು ಎಚ್ಚರಿಕೆ ಮೂಡಿಸಬೇಕು” ಎಂದರು.

ಜಾತಿಯನ್ನು ಮನುಷ್ಯರು ಸೃಷ್ಟಿಸಿದ್ದಾರೆಯೆ ಹೊರತು ದೇವರಲ್ಲ. ಹಾಗಾಗಿ ದಲಿತ ದಮನಿತರ ಮೇಲೆ ದೌರ್ಜನ್ಯವೆಸಗುವುದು ಅಪರಾಧವಾಗಿದೆ ಎಂದು ಸವರ್ಣಿಯ ಸಮುದಾಯಗಳಿಗೆ ಮನವರಿಕೆ ಮಾಡಿಕೊಡಬೇಕಿದೆ. ಅದೇ ಸಂದರ್ಭದಲ್ಲಿ ದಲಿತ ದಮನಿತರು ಆರ್ಥಿಕವಾಗಿ-ಸಾಮಾಜಿಕವಾಗಿ ಮೇಲೆತ್ತಲು ಯೋಜನೆಗಳನ್ನು ಪ್ರಾಮಾಣಿಕವಾಗಿ ಜಾರಿಗೆ ತರಬೇಕು. ಅದೇ ಸಂದರ್ಭದಲ್ಲಿ ಸಮಾನತೆ-ಸಾಮರಸ್ಯದ ಕಾರ್ಯಕ್ರಮಗಳನ್ನು ಪ್ರಜ್ಞಾಪೂರ್ವಕವಾಗಿ ಏರ್ಪಡಿಸಬೇಕು. ಅದನ್ನು ಸರ್ಕಾರ ಜಾರಿಗೆ ತರುತ್ತಿರುವ ವಿನಯ ಸಾಮರಸ್ಯ ಯೋಜನೆಯನ್ನು ಪರಿಣಾಮಕಾರಿ ಜಾರಿಗೆ ತರಬೇಕು ಎಂದು ಕರಿಯಪ್ಪ ಗುಡಿಮನಿ ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯ್ಯೋ ….ನಮ್ಮೂರಲ್ಲಿ ದಲಿತರು ದೈವಕ್ಷೇತ್ರ ಪ್ರವೇಶ ಮಾಡ್ತಾರೆಂದು ಆ ಕ್ಷೇತ್ರವನ್ನೇ ಮುಚ್ಚಿದ್ದಾರೆ. ೨೦೧೮ ರಿಂದ ನಮ್ಮ ಗ್ರಾಮ ದೈವಸ್ಥಾನ ಮುಚ್ಚಲ್ಪಟ್ಟಿದೆ. ಇಲ್ಲಿಯವರೇನೂ ಎಲ್ಲಿಗೂ ಓಡಿಹೋಗಿಲ್ಲ. ನಿರಂತರ ಹೋರಾಟಗಳ ಮೂಲಕ ಮುಚ್ಚಿದವರ ನಿದ್ದೆಗೆಡಿಸುತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...