Homeದಲಿತ್ ಫೈಲ್ಸ್ದಲಿತರು ಭಾಗವಹಿಸುತ್ತಾರೆ ಎಂಬ ಭಯದಲ್ಲಿ ಜಾತ್ರೆ ರದ್ದು?: ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಇಂದಿಗೂ ಸಾಮಾಜಿಕ...

ದಲಿತರು ಭಾಗವಹಿಸುತ್ತಾರೆ ಎಂಬ ಭಯದಲ್ಲಿ ಜಾತ್ರೆ ರದ್ದು?: ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಇಂದಿಗೂ ಸಾಮಾಜಿಕ ಬಹಿಷ್ಕಾರ

ಸ್ಪೃಶ್ಯತೆಯನ್ನು ತೊಲಗಿಸಲು ಸಾಧ್ಯವಿಲ್ಲದಿದ್ದರೆ, ಸರಕಾರಿ ಯೋಜನೆಗೆ ತನ್ನ ಮಗನ ಹೆಸರಿಟ್ಟು ಏನು ಪ್ರಯೋಜನ ಎಂದು ವಿನಯನ ತಂದೆ ಚಂದ್ರಶೇಖರ ಶಿವಪ್ಪ ಕೇಳುತ್ತಾರೆ

- Advertisement -
- Advertisement -

ಕರ್ನಾಟಕವು ತನ್ನ ಅಸ್ಪೃಶ್ಯತಾ ವಿರೋಧಿ ಕಾರ್ಯಕ್ರಮಕ್ಕೆ ಈ ದಲಿತ ಬಾಲಕನ ಹೆಸರಿಟ್ಟಿದೆ. ಆದರೆ, ಆದದ್ದೇನು? ಆ ಊರಿನ ಗ್ರಾಮಸ್ಥರು ಆ ಬಾಲಕನ ಕುಟುಂಬಕ್ಕೇ ಸಾಮಾಜಿಕ ಬಹಿಷ್ಕಾರ ಹಾಕಿ ಹೊರದಬ್ಬಿದ್ದಾರೆ!

2021ರ ಸೆ. 4 ರಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ವಿನಯ ಹೆಸರಿನ ಮಗುವೊಂದು ಆಕಸ್ಮಿಕವಾಗಿ ದೇವಸ್ಥಾನ ಪ್ರವೇಶಿಸಿದಕ್ಕೆ ಮಗುವಿನ ಕುಟುಂಬಕ್ಕೆ ಗ್ರಾಮಸ್ಥರು ದಂಡ ವಿಧಿಸಿದ್ದರು. ದೇವಸ್ಥಾನ ಶುದ್ಧಿಕರಿಸಿ ಅಸ್ಪೃಶ್ಯತೆ ಆಚರಿಸಿದ್ದರು. ಈ ಘಟನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕರ್ನಾಟಕ ಸರಕಾರವು ತನ್ನ ಅಸ್ಪೃಶ್ಯತಾ ವಿರೋಧಿ ಯೋಜನೆಗೆ ಯಾವ ದಲಿತ ಹುಡುಗನ ಹೆಸರಿಟ್ಟಿತೋ, ಅದೇ ಹುಡುಗನ ಕುಟುಂಬವನ್ನೇ ಊರವರು ಸಾಮಾಜಿಕ ಬಹಿಷ್ಕಾರ ಹಾಕಿ ಹೊರದಬ್ಬಿದ ಘಟನೆಯೊಂದನ್ನು “ಇಂಡಿಯನ್ ಎಕ್ಸ್‌ಪ್ರೆಸ್” ವರದಿ ಮಾಡಿದೆ.

ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಸ್ಪೃಶ್ಯತೆಯ ಕುರಿತು ಅರಿವು ಮೂಡಿಸುವ “ವಿನಯ ಸಾಮರಸ್ಯ ಯೋಜನೆ”ಯನ್ನು ಬಸವರಾಜ ಬೊಮ್ಮಾಯಿ ಸರಕಾರ ಘೋಷಿಸಿದ್ದು, ಇದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವಾದ ಎಪ್ರಿಲ್ 14ರಂದು ಚಾಲನೆಗೊಳ್ಳಲಿದೆ.

ಮೂರು ವರ್ಷಗಳ ದಲಿತ ಮಗು ವಿನಯ, ಮಳೆಯಿಂದ ರಕ್ಷಣೆ ಪಡೆಯಲು ಆಕಸ್ಮಿಕವಾಗಿ ಕೊಪ್ಪಳ ಜಿಲ್ಲೆಯಲ್ಲಿ ಇದಕ್ಕಾಗಿ ಗ್ರಾಮದ ಮುಖಂಡರು ಅವನ ಕುಟುಂಬಕ್ಕೆ 25,000 ರೂ.ಗಳ ದಂಡ ವಿಧಿಸಿತ್ತು. ಮಾಧ್ಯಮಗಳಲ್ಲಿ ವರದಿಯಾದ ನಂತರ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳ ಬಂಧನವೂ ಆಗಿತ್ತು. ಆದರೆ ಆ ಕುಟುಂಬಕ್ಕೆ ನ್ಯಾಯ ಸಿಕ್ಕಿತೆ? ಇಲ್ಲ ಇದೀಗ ಅದು ಸಾಲದು ಎಂಬಂತೆ ಈ ಕುಟುಂಬವು ಇನ್ನೂ ಹೆಚ್ಚಿನ ದೌರ್ಜನ್ಯಕ್ಕೆ ಒಳಗಾಗಿದೆ.

ಈ ಘಟನೆಯ ನಂತರ ಮುಖ್ಯವಾಗಿ ಗಾಣಿಗ ಸಮುದಾಯದವರೇ ಇರುವ 1,500ರಷ್ಟು ಗ್ರಾಮಸ್ಥರು ಈ ದಲಿತ ಕುಟುಂಬಕ್ಕೆ ಎಂತಾ ಕಿರುಕುಳ ನೀಡಿದ್ದಾರೆಂದರೆ, ಆ ಕುಟುಂಬ ತನ್ನ ಕೃಷಿ ಜಮೀನನ್ನೂ, ಊರನ್ನೂ ಬಿಟ್ಟುಹೋಗಿದೆ.

ಈ ಜಾತಿ ತಾರತಮ್ಯ ಮತ್ತು ದೌರ್ಜನ್ಯದ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾದವರು ಜಾಮೀನಿನ ಮೇಲೆ ಹೊರಬಂದಿದ್ದು, ಈಗ ಗ್ರಾಮವನ್ನೇ ಆಳುತ್ತಿದ್ದಾರೆ ಎಂದು ವಿನಯನ ಕುಟುಂಬದವರು ಹೇಳುತ್ತಾರೆ..

ದಲಿತರು ಭಾಗವಹಿಸಬಹುದು ಎಂಬ ಭಯದಿಂದ ವರ್ಷ ವರ್ಷವೂ ನಡೆಯುವ ಊರ ಜಾತ್ರೆಯನ್ನೂ ರದ್ದುಗೊಳಿಸಲಾಗಿದೆ ಎಂದು ಅವರು ಹೇಳುತ್ತಾರೆ. ಆದರೆ, ಜಾತ್ರೆ ರದ್ದಾಗಿರುವ ಬಗ್ಗೆ ತಮಗೇನೂ ಮಾಹಿತಿಯಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳಿರುವುದಾಗಿ ವರದಿ ತಿಳಿಸುತ್ತದೆ.

“ಊರಲ್ಲಿ ನಡೆದ ಎಲ್ಲಾ ಕೆಟ್ಟದಕ್ಕೂ ನಮ್ಮ ಕುಟುಂಬವೇ ಕಾರಣ ಎಂದು ಊರವರು ದೂರುತ್ತಾರೆ. ಒಂದು ವೇಳೆ ಏನಾದರೂ ತುರ್ತಾದ ಉಪಕಾರ ಆಗಬೇಕಿದ್ದರೂ, ಅದು ಈ ಊರಿನಲ್ಲಿ ಸಿಗುವ ಸಾಧ್ಯತೆ ಇಲ್ಲ” ಎಂದವರು ಹೇಳುತ್ತಾರೆ. ಈ ಕುಟುಂಬವು ಈಗ ಚಂದ್ರಶೇಖರ ಅವರ ತಾಯಿಯ ಊರಾದ ಯಲಬುರ್ಗಾದಲ್ಲಿ ವಾಸಿಸುತ್ತಿದೆ.

ಚಂದ್ರಶೇಖರ ಅವರಿಗೆ ಸರಕಾರದಿಂದ ಒಂದು ಲಕ್ಷ ರೂ. ಪರಿಹಾರ ದೊರೆತಿದ್ದು, ಅವರೊಂದು ಕಾರು ತೊಳೆಯುವ ಅಂಗಡಿಯನ್ನು ಆರಂಭಿಸುವ ಯೋಚನೆ ಹೊಂದಿದ್ದಾರೆ. ಆದರೆ, ಮಿಯಾಪುರದಲ್ಲಿರುವ ತನ್ನ ಜಮೀನನ್ನು ರಕ್ಷಿಸಲು ಅಥವಾ ಬದಲಿ ಜಮೀನು ಪಡೆಯಲು ಸರಕಾರದೊಂದಿಗೆ ನಡೆಸಿದ ಪ್ರಯತ್ನ ಫಲ ನೀಡಿಲ್ಲ ಎಂದವರು ಹೇಳುತ್ತಾರೆ.

“ನಾನಿನ್ನು ಸರಕಾರಿ ಅಧಿಕಾರಿಗಳ ಮುಂದೆ ಕೈಯೊಡ್ಡಿ ಬೇಡಲು ಹೋಗುವುದಿಲ್ಲ. ನನಗಿದು ಈಗ ಸಾಕಾಗಿ ಹೋಗಿದೆ” ಎನ್ನುತ್ತಾರವರು.

“ಅವರಿಗೆ ಯಲಬುರ್ಗಾದಲ್ಲಿ ಜಮೀನು ದೊರಕಿಸಿ, ಮನೆ ಕಟ್ಟಲು ನೆರವಾಗುವ ಪ್ರಯತ್ನ ಮಾಡಲಾಗಿದೆ” ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.

ಈ ಪ್ರಕರಣದಲ್ಲಿ ಹೋರಾಟ ನಡೆಸಿದ್ದ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಸರ್ಕಾರಕ್ಕೆ ಅಶ್ಪಶ್ಯತೆ ಆಚರಣೆ ತಡೆಗಟ್ಟುವ ನಿಜವಾದ ಕಾಳಜಿ ಇದ್ದಲ್ಲಿ, ರಾಜ್ಯದ ಸಮಸ್ತ ಜನರಲ್ಲಿ ಕಾನೂನು ಅರಿವು ಮೂಡಿಸಬೇಕಿದೆ. ಜಿಲ್ಲಾಡಳಿತ ಜಾತೀಯತೆ ಕ್ರೂರ ಆಚರಣೆ ಎಂಬುದಾಗಿ ಅರಿವು ಮೂಡಿಸಬೇಕು. ಜಾತಿ ದೌರ್ಜನ್ಯವೆಸಗಿದವರಿಗೆ ಕಠಿಣ ಶಿಕ್ಷೆ ಇದೆ ಎಂದು ದೊಡ್ಡ ದೊಡ್ಡ ಹೋರ್ಡಿಂಗ್‌ಗಳ ಮೂಲಕ, ಟಿವಿ-ಪತ್ರಿಕೆ ಜಾಹೀರಾತುಗಳ ಮೂಲಕ ಜನರಿಗೆ ಅರಿವು ಮತ್ತು ಎಚ್ಚರಿಕೆ ಮೂಡಿಸಬೇಕು” ಎಂದರು.

ಜಾತಿಯನ್ನು ಮನುಷ್ಯರು ಸೃಷ್ಟಿಸಿದ್ದಾರೆಯೆ ಹೊರತು ದೇವರಲ್ಲ. ಹಾಗಾಗಿ ದಲಿತ ದಮನಿತರ ಮೇಲೆ ದೌರ್ಜನ್ಯವೆಸಗುವುದು ಅಪರಾಧವಾಗಿದೆ ಎಂದು ಸವರ್ಣಿಯ ಸಮುದಾಯಗಳಿಗೆ ಮನವರಿಕೆ ಮಾಡಿಕೊಡಬೇಕಿದೆ. ಅದೇ ಸಂದರ್ಭದಲ್ಲಿ ದಲಿತ ದಮನಿತರು ಆರ್ಥಿಕವಾಗಿ-ಸಾಮಾಜಿಕವಾಗಿ ಮೇಲೆತ್ತಲು ಯೋಜನೆಗಳನ್ನು ಪ್ರಾಮಾಣಿಕವಾಗಿ ಜಾರಿಗೆ ತರಬೇಕು. ಅದೇ ಸಂದರ್ಭದಲ್ಲಿ ಸಮಾನತೆ-ಸಾಮರಸ್ಯದ ಕಾರ್ಯಕ್ರಮಗಳನ್ನು ಪ್ರಜ್ಞಾಪೂರ್ವಕವಾಗಿ ಏರ್ಪಡಿಸಬೇಕು. ಅದನ್ನು ಸರ್ಕಾರ ಜಾರಿಗೆ ತರುತ್ತಿರುವ ವಿನಯ ಸಾಮರಸ್ಯ ಯೋಜನೆಯನ್ನು ಪರಿಣಾಮಕಾರಿ ಜಾರಿಗೆ ತರಬೇಕು ಎಂದು ಕರಿಯಪ್ಪ ಗುಡಿಮನಿ ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯ್ಯೋ ….ನಮ್ಮೂರಲ್ಲಿ ದಲಿತರು ದೈವಕ್ಷೇತ್ರ ಪ್ರವೇಶ ಮಾಡ್ತಾರೆಂದು ಆ ಕ್ಷೇತ್ರವನ್ನೇ ಮುಚ್ಚಿದ್ದಾರೆ. ೨೦೧೮ ರಿಂದ ನಮ್ಮ ಗ್ರಾಮ ದೈವಸ್ಥಾನ ಮುಚ್ಚಲ್ಪಟ್ಟಿದೆ. ಇಲ್ಲಿಯವರೇನೂ ಎಲ್ಲಿಗೂ ಓಡಿಹೋಗಿಲ್ಲ. ನಿರಂತರ ಹೋರಾಟಗಳ ಮೂಲಕ ಮುಚ್ಚಿದವರ ನಿದ್ದೆಗೆಡಿಸುತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...