Homeಕರ್ನಾಟಕನಕ್ಸಲ್ ನಿಗ್ರಹ ಪಡೆ ವಿಸರ್ಜನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ನಕ್ಸಲ್ ನಿಗ್ರಹ ಪಡೆ ವಿಸರ್ಜನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು 10 ಕೋಟಿ ರೂ. ವಿಶೇಷ ಪ್ಯಾಕೇಜ್

- Advertisement -
- Advertisement -

ಕರ್ನಾಟಕವು ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಮಾ.7) ಘೋಷಿಸಿದ್ದಾರೆ.

2025-26ನೇ ಸಾಲಿನ ರಾಜ್ಯ ಆಯವ್ಯಯ (ಬಜೆಟ್) ಮಂಡಿಸಿದ ಸಿದ್ದರಾಮಯ್ಯ, “ನಮ್ಮ ಸರ್ಕಾರದ ಅವಧಿಯಲ್ಲಿ ಆರು ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿ ಶರಣಾಗಿದ್ದಾರೆ. ಇದರೊಂದಿಗೆ ರಾಜ್ಯವು ನಕ್ಸಲ್ ಮುಕ್ತವಾಗಿದೆ. ಆದ್ದರಿಂದ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುವುದು ಎಂದು ಹೇಳಿದ್ದಾರೆ.

ಶರಣಾಗಿರುವ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು ಹಾಗೂ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು 10 ಕೋಟಿ ರೂ. ವಿಶೇಷ ಪ್ಯಾಕೇಜ್ ರೂಪಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಇದಲ್ಲದೆ, ಬೆಂಗಳೂರು ಸೇಫ್ ಸಿಟಿ ಯೋಜನೆಯನ್ನು 667 ಕೋಟಿ ರೂ. ವೆಚ್ಚದಲ್ಲಿ ಜಾರಿಗೆ ತರಲಾಗಿದೆ. ಯೋಜನೆಯ ಭಾಗವಾಗಿ, ನಗರದಾದ್ಯಂತ 7,500 ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, 10 ಡ್ರೋನ್‌ಗಳು ಮತ್ತು 560 ಬಾಡಿ-ವೋರ್ನ್ ಕ್ಯಾಮರಾಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಹಿಳೆಯರಲ್ಲಿ ಸಾರ್ವಜನಿಕ ಸುರಕ್ಷತಾ ಪ್ರಜ್ಞೆಯನ್ನು ಬೆಳೆಸಲು ಮತ್ತು ಅಪರಾಧಕ್ಕೆ ಬಲಿಯಾದ ಮಹಿಳೆಯರು ಮತ್ತು ಮಕ್ಕಳಿಗೆ ತ್ವರಿತ ಪೊಲೀಸ್ ನೆರವು ಒದಗಿಸಲು ಬೆಂಗಳೂರು ನಗರದಾದ್ಯಂತ ಒಟ್ಟು 60 ಮಹಿಳಾ ಔಟ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಏಳು ಪೊಲೀಸ್ ಠಾಣೆ ಕಟ್ಟಡಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸಮರ್ಪಿಸಲಾಗುವುದು ಎಂದು ಹೇಳಿದ್ದಾರೆ.

ಸಂಚಾರ ಹೆಚ್ಚಿಸುವ ಉದ್ದೇಶದಿಂದ, ಗೃಹ ಇಲಾಖೆಗೆ ಅನುಕೂಲವಾಗುವಂತೆ ಪೊಲೀಸ್ ಸಂಚಾರ ಯೋಜನೆಯಡಿ 1000 ಹೊಸ ವಾಹನಗಳ ಖರೀದಿಗೆ 50 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಮತ್ತು ಮಾದಕ ದ್ರವ್ಯಗಳ ಸೇವನೆ ಮತ್ತು ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ, 5 ಕೋಟಿ ರೂ. ಅನುದಾನದೊಂದಿಗೆ ಸೈಬರ್ ಅಪರಾಧ ವಿಭಾಗವನ್ನು ಬಲಪಡಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಂದಿ ಬೆಟ್ಟದ ಬಳಿಯ ಕುಡುಗುರ್ಕಿ ಮತ್ತು ಕೆಜಿಎಫ್‌ನಲ್ಲಿ ಎರಡು ಭಾರತೀಯ ಮೀಸಲು ಬೆಟಾಲಿಯನ್‌ಗಳನ್ನು ಸ್ಥಾಪಿಸಲಾಗುವುದು. ಈ ಉದ್ದೇಶಕ್ಕಾಗಿ 80 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಬೆಂಗಳೂರು ನಗರದ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗಾಗಿ ಪೊಲೀಸ್ ವಿಭಾಗಗಳ ಸಂಖ್ಯೆಯನ್ನು 8 ರಿಂದ 11 ಕ್ಕೆ ಹೆಚ್ಚಿಸಲಾಗುವುದು. ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಇನ್ನೂ ನಾಲ್ಕು ಬಾಂಬ್ ಪತ್ತೆ ಮತ್ತು ವಿಲೇವಾರಿ ದಳಗಳನ್ನು ಸ್ಥಾಪಿಸಲಾಗುವುದು. ಕಾರಾಗೃಹ ಇಲಾಖೆಯಡಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಅಲ್ಲದೆ, 15ನೇ ಹಣಕಾಸು ಆಯೋಗದ ಅನುದಾನದಡಿಯಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ವಿಸ್ತರಣೆ ಮತ್ತು ಆಧುನೀಕರಣವನ್ನು 330 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಹೇಳಿದರು.

Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...