Homeಕರ್ನಾಟಕಅನರ್ಹ ಸಂಪುಟ, ಅತೃಪ್ತ ಸರ್ಕಾರ: ಹೈದರಾಬಾದ್ ಕರ್ನಾಟಕಕ್ಕೆ ಭಾರೀ ಅನ್ಯಾಯ

ಅನರ್ಹ ಸಂಪುಟ, ಅತೃಪ್ತ ಸರ್ಕಾರ: ಹೈದರಾಬಾದ್ ಕರ್ನಾಟಕಕ್ಕೆ ಭಾರೀ ಅನ್ಯಾಯ

- Advertisement -
- Advertisement -

ಅಂತೂ ಇಂತೂ ಗಜಪ್ರಸವದಂತೆ ಯಡಿಯೂರಪ್ಪ ತಮ್ಮ ಅರೆಬರೆ ಸಂಪುಟವನ್ನು ರಚಿಸಿದ್ದಾರೆ. ಆದರೆ ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಳ್ಳದೇ ಮಾಡಿರುವ ಈ ಸಂಪುಟವನ್ನು ಅನರ್ಹ ಸಂಪುಟವೆನ್ನಬಹುದು. ಇನ್ನು ತಾನು ಭರವಸೆ ಕೊಟ್ಟಿದ್ದವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಆಗದಿದ್ದಕ್ಕಾಗಿ ಅಸಮಧಾನದಿಂದ ಕುದಿಯುತ್ತಿರುವ ಯಡಿಯೂರಪ್ಪ, ಉಪ – ಮುಖ್ಯಮಂತ್ರಿ ಸ್ಥಾನ ಸಿಗದೆ ಬೇಸರಗೊಂಡಿರುವ ಕೆ.ಎಸ್. ಈಶ್ವರಪ್ಪ, ಆರ್.ಅಶೋಕ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು ಹಾಗೂ ಪ್ರಮುಖ ಖಾತೆಗಳಿಗಾಗಿ ಹಾತೊರೆಯುತ್ತಿರುವ ಇತರ ಸಚಿವರಿಂದಾಗಿ ಇದನ್ನು ಅತೃಪ್ತ ಸರ್ಕಾರವೆಂದೇ ಕರೆಯಬೇಕಾಗುತ್ತದೆ.

ಯಾವುದೇ ಬದ್ಧತೆ, ಸಾಮಾಜಿಕ ಕಾಳಜಿಗಳಿಲ್ಲದ ಆರ್.ಎಸ್.ಎಸ್ ನ ಬಿ.ಎಲ್ ಸಂತೋಷ್‍ ಸಲಹೆಯಂತೆ, ಕರ್ನಾಟಕದ ಸಾಮಾಜಿಕ ಸಂರಚನೆ ಮತ್ತು ಪ್ರಾದೇಶಿಕ ಅಸಮತೋಲನ ಕುರಿತು ಪ್ರಾಥಮಿಕ ಜ್ಞಾನವೂ ಇರದ “ಮೋಟಾಭಾಯ್” ಅಮಿತ್ ಷಾ ಅಂತಿಮಗೊಳಿಸಿದ ಸಚಿವ ಸಂಪುಟವು ಮುಂದಿನ ದಿನಗಳಲ್ಲಿ ಭಾರೀ ರಾಜಕೀಯ ಪಲ್ಲಟಗಳಿಗೆ ಕಾರಣವಾಗಬಹುದು. ಸೇರ್ಪಡೆಯಾದ 17 ಜನರಲ್ಲಿ 7 ಲಿಂಗಾಯತ, 3 ಒಕ್ಕಲಿಗ, 2 ಹಿಂದುಳಿದ ವರ್ಗ, 3 ಪರಿಶಿಷ್ಟ ಜಾತಿ, 1 ಪರಿಶಿಷ್ಟ ಪಂಗಡ ಹಾಗು 1 ಬ್ರಾಹ್ಮಣರಿದ್ದಾರೆ.

2018 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸಾರಾಸಗಟಾಗಿ ಬೆಂಬಲಿಸಿದ್ದ ಬೋವಿ, ಯಾದವ, ಮರಾಠ ಹಾಗೂ ಮೀನುಗಾರ ಸಮುದಾಯಗಳಿಗೆ ಇಲ್ಲಿ ಯಾವುದೇ ಪ್ರಾತಿನಿಧ್ಯ ಇಲ್ಲ. ಇನ್ನು ರೆಡ್ಡಿ, ಕಮ್ಮ ಹಾಗು ಬಲಿಜ ಜಾತಿಗಳಿಗೆ ಸಂಪುಟದಲ್ಲಿ ಯಾವುದೇ ಸ್ಥಾನ ದೊರೆತಿಲ್ಲ. ಇದಲ್ಲದೆ ಕರಾವಳಿಯಲ್ಲಿ ಬಿಜೆಪಿಯ ಕಟ್ಟಾ ಬೆಂಬಲಿಗರಾಗಿರುವ ಬಂಟ ಮತ್ತು ಮೊಗವೀರ ಸಮುದಾಯಗಳಿಗೂ ನಿರಾಶೆಯಾಗಿದೆ.

ಇತ್ತ ಜಿಲ್ಲಾವಾರು ಪ್ರಾತಿನಿಧ್ಯವನ್ನು ನೋಡಿದರೆ ಬೆಳಗಾವಿ (2), ಬೆಂಗಳೂರು ನಗರ (3), ಶಿವಮೊಗ್ಗ(2), ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ತಲಾ ಒಂದೊಂದು ಸಚಿವ ಸ್ಥಾನ ದೊರೆತಿದೆ. ಉಳಿದ ವಿಜಯಪುರ, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ, ದಾವಣಗೆರೆ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಮಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ. ಈ 17 ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಇಲ್ಲ. ಇವುಗಳಲ್ಲಿ ಅರ್ಧದಷ್ಟು ಜಿಲ್ಲೆಗಳು ಇತ್ತೀಚಿನ ಪ್ರವಾಹ, ಭೂ ಕುಸಿತದಂತಹ ಪ್ರಾಕೃತಿಕ ವಿಕೋಪಕ್ಕೆ ಬಲಿಯಾಗಿವೆ. ಇಲ್ಲಿ ತುರ್ತು ಪರಿಹಾರ ಕಾರ್ಯದ ಉಸ್ತುವಾರಿಯ ಅವಶ್ಯಕತೆ ಇದೆ.

ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕವಾಗಿ ಅತಿಹೆಚ್ಚು ಅನ್ಯಾಯವಾಗಿರುವುದು ಅತ್ಯಂತ ಹಿಂದುಳಿದ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಎನ್ನುವುದೇ ದುರಂತ. ಇಲ್ಲಿನ 6 ಜಿಲ್ಲೆಗಳ ಪೈಕಿ ಬೀದರ್ ಜಿಲ್ಲೆಯ ಔರಾದ್‍ನ ಪ್ರಭು ಚವ್ಹಾಣ್‍ಗೆ ಮಾತ್ರ ಸಂಪುಟದಲ್ಲಿ ಸ್ಥಾನ ದೊರೆತಿದೆ. ಅದು ಕೂಡ ಪಶುಸಂಗೋಪನಾ ಇಲಾಖೆಯಾಗಿದೆ. ಹೈ.ಕರ್ನಾಟಕದ ಒಟ್ಟು 40 ಶಾಸಕರಲ್ಲಿ 15 ಜನ ಬಿಜೆಪಿಯವರಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಒಬ್ಬ ವಿಧಾನ ಪರಿಷತ್ ಸದಸ್ಯರೂ ಇದ್ದಾರೆ. ಮೊನ್ನೆ ತಾನೇ ನಡೆದ ಲೋಕಸಭಾ ಚುನಾವಣೆಯಲ್ಲಿ 5 ಕ್ಕೆ 5 ಕ್ಷೇತ್ರಗಳಲ್ಲಿ ಬಿಜೆಪಿಯ ಸಂಸದರೇ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಯಾದಗಿರಿ ಜಿಲ್ಲೆಯಿಂದ ರಾಜು ಗೌಡ ಹಾಗು ಬಳ್ಳಾರಿ ಜಿಲ್ಲೆಯ ಕರುಣಾಕರ ರೆಡ್ಡಿಯವರಿಗೆ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗುವ ಭರವಸೆ ಕೊನೆಯ ಕ್ಷಣದವರೆಗೂ ಇತ್ತು. ಹೀಗಿದ್ದೂ ಕೂಡ ಕೇವಲ ಒಬ್ಬರಿಗೆ ಮಾತ್ರ ಅವಕಾಶ ನೀಡಿರುವುದು ಈ ಭಾಗದ ಬಿಜೆಪಿಯ ಶಾಸಕರು ಹಾಗೂ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅವರನ್ನು ಸಮಾಧಾನ ಪಡಿಸಲು ಬಳ್ಳಾರಿ ಜಿಲ್ಲೆಯ ಶ್ರೀರಾಮುಲು ಅವರಿಗೂ ಅವಕಾಶ ನೀಡಿರುವುದಾಗಿ ಹೇಳಲಾಗುತ್ತಿದೆ. ಆದರೆ ಶ್ರೀರಾಮುಲು ಆಯ್ಕೆಯಾಗಿರುವುದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಹಾಗಾಗಿ ಆ ಜಿಲ್ಲೆಯಿಂದ ಆಯ್ಕೆಯಾದ ಬಿಜೆಪಿಯ 5 ಜನ ಶಾಸಕರಿಗೂ ಶ್ರೀರಾಮಲುರನ್ನೇ ತೋರಿಸಿ ಸಮಾಧಾನ ಪಡಿಸುತ್ತಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ಹೈ.ಕರ್ನಾಟಕದಲ್ಲಿ ರಾಯಚೂರು, ಯಾದಗಿರಿ ಹಾಗು ಕಲ್ಬುರ್ಗಿ ಜಿಲ್ಲೆಗಳು ತೀವ್ರ ಮಳೆ ಮತ್ತು ಭೀಮಾ, ಕೃಷ್ಣ, ತುಂಗಭದ್ರಾ ನದಿಗಳ ಪ್ರವಾಹದಿಂದ ತತ್ತರಿಸಿ ಹೋಗಿವೆ. ಜನಜೀವನ ಸಹಜ ಪರಿಸ್ಥಿತಿಗೆ ಬರಲು ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯಬೇಕಾದ ಅಗತ್ಯವಿದೆ. ಹಾಗೆ ನೋಡಿದರೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಬೀದರ್‍ನಿಂದ 3 , ಬಳ್ಳಾರಿಯಿಂದ 2 , ರಾಯಚೂರು ಮತ್ತು ಕಲ್ಬುರ್ಗಿಯಿಂದ ತಲಾ ಒಬ್ಬರು ಹೀಗೆ ಹೈ.ಕರ್ನಾಟಕದಿಂದ ಒಟ್ಟು 7 ಜನ ಸಚಿವರಿದ್ದರು. ಈಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೈ.ಕರ್ನಾಟಕ ಪ್ರದೇಶ ನಿರ್ಲಕ್ಷ್ಯಕ್ಕೊಳಗಾಗಿರುವುದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

– ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ-ಕೋಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಿಮನಗೌಡ ಕಾಸಿರೆಡ್ಡಿ ಇವರ ಲೇಖನ ವಾಸ್ತವಕ್ಕೆ ಹಿಡಿದ ಕನ್ನಡಿಯಾಗಿದೆ.
    ಬಂಗಿ ದೊಡ್ಡ ಮಂಜುನಾಥ, ಕಂಪ್ಲಿ.

  2. ಹೈಕ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಯಂತಿದೆ ಗೌಡರ ಲೇಖನ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...