Homeಕರ್ನಾಟಕಅನರ್ಹ ಸಂಪುಟ, ಅತೃಪ್ತ ಸರ್ಕಾರ: ಹೈದರಾಬಾದ್ ಕರ್ನಾಟಕಕ್ಕೆ ಭಾರೀ ಅನ್ಯಾಯ

ಅನರ್ಹ ಸಂಪುಟ, ಅತೃಪ್ತ ಸರ್ಕಾರ: ಹೈದರಾಬಾದ್ ಕರ್ನಾಟಕಕ್ಕೆ ಭಾರೀ ಅನ್ಯಾಯ

- Advertisement -
- Advertisement -

ಅಂತೂ ಇಂತೂ ಗಜಪ್ರಸವದಂತೆ ಯಡಿಯೂರಪ್ಪ ತಮ್ಮ ಅರೆಬರೆ ಸಂಪುಟವನ್ನು ರಚಿಸಿದ್ದಾರೆ. ಆದರೆ ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಳ್ಳದೇ ಮಾಡಿರುವ ಈ ಸಂಪುಟವನ್ನು ಅನರ್ಹ ಸಂಪುಟವೆನ್ನಬಹುದು. ಇನ್ನು ತಾನು ಭರವಸೆ ಕೊಟ್ಟಿದ್ದವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಆಗದಿದ್ದಕ್ಕಾಗಿ ಅಸಮಧಾನದಿಂದ ಕುದಿಯುತ್ತಿರುವ ಯಡಿಯೂರಪ್ಪ, ಉಪ – ಮುಖ್ಯಮಂತ್ರಿ ಸ್ಥಾನ ಸಿಗದೆ ಬೇಸರಗೊಂಡಿರುವ ಕೆ.ಎಸ್. ಈಶ್ವರಪ್ಪ, ಆರ್.ಅಶೋಕ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು ಹಾಗೂ ಪ್ರಮುಖ ಖಾತೆಗಳಿಗಾಗಿ ಹಾತೊರೆಯುತ್ತಿರುವ ಇತರ ಸಚಿವರಿಂದಾಗಿ ಇದನ್ನು ಅತೃಪ್ತ ಸರ್ಕಾರವೆಂದೇ ಕರೆಯಬೇಕಾಗುತ್ತದೆ.

ಯಾವುದೇ ಬದ್ಧತೆ, ಸಾಮಾಜಿಕ ಕಾಳಜಿಗಳಿಲ್ಲದ ಆರ್.ಎಸ್.ಎಸ್ ನ ಬಿ.ಎಲ್ ಸಂತೋಷ್‍ ಸಲಹೆಯಂತೆ, ಕರ್ನಾಟಕದ ಸಾಮಾಜಿಕ ಸಂರಚನೆ ಮತ್ತು ಪ್ರಾದೇಶಿಕ ಅಸಮತೋಲನ ಕುರಿತು ಪ್ರಾಥಮಿಕ ಜ್ಞಾನವೂ ಇರದ “ಮೋಟಾಭಾಯ್” ಅಮಿತ್ ಷಾ ಅಂತಿಮಗೊಳಿಸಿದ ಸಚಿವ ಸಂಪುಟವು ಮುಂದಿನ ದಿನಗಳಲ್ಲಿ ಭಾರೀ ರಾಜಕೀಯ ಪಲ್ಲಟಗಳಿಗೆ ಕಾರಣವಾಗಬಹುದು. ಸೇರ್ಪಡೆಯಾದ 17 ಜನರಲ್ಲಿ 7 ಲಿಂಗಾಯತ, 3 ಒಕ್ಕಲಿಗ, 2 ಹಿಂದುಳಿದ ವರ್ಗ, 3 ಪರಿಶಿಷ್ಟ ಜಾತಿ, 1 ಪರಿಶಿಷ್ಟ ಪಂಗಡ ಹಾಗು 1 ಬ್ರಾಹ್ಮಣರಿದ್ದಾರೆ.

2018 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸಾರಾಸಗಟಾಗಿ ಬೆಂಬಲಿಸಿದ್ದ ಬೋವಿ, ಯಾದವ, ಮರಾಠ ಹಾಗೂ ಮೀನುಗಾರ ಸಮುದಾಯಗಳಿಗೆ ಇಲ್ಲಿ ಯಾವುದೇ ಪ್ರಾತಿನಿಧ್ಯ ಇಲ್ಲ. ಇನ್ನು ರೆಡ್ಡಿ, ಕಮ್ಮ ಹಾಗು ಬಲಿಜ ಜಾತಿಗಳಿಗೆ ಸಂಪುಟದಲ್ಲಿ ಯಾವುದೇ ಸ್ಥಾನ ದೊರೆತಿಲ್ಲ. ಇದಲ್ಲದೆ ಕರಾವಳಿಯಲ್ಲಿ ಬಿಜೆಪಿಯ ಕಟ್ಟಾ ಬೆಂಬಲಿಗರಾಗಿರುವ ಬಂಟ ಮತ್ತು ಮೊಗವೀರ ಸಮುದಾಯಗಳಿಗೂ ನಿರಾಶೆಯಾಗಿದೆ.

ಇತ್ತ ಜಿಲ್ಲಾವಾರು ಪ್ರಾತಿನಿಧ್ಯವನ್ನು ನೋಡಿದರೆ ಬೆಳಗಾವಿ (2), ಬೆಂಗಳೂರು ನಗರ (3), ಶಿವಮೊಗ್ಗ(2), ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ತಲಾ ಒಂದೊಂದು ಸಚಿವ ಸ್ಥಾನ ದೊರೆತಿದೆ. ಉಳಿದ ವಿಜಯಪುರ, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ, ದಾವಣಗೆರೆ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಮಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ. ಈ 17 ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಇಲ್ಲ. ಇವುಗಳಲ್ಲಿ ಅರ್ಧದಷ್ಟು ಜಿಲ್ಲೆಗಳು ಇತ್ತೀಚಿನ ಪ್ರವಾಹ, ಭೂ ಕುಸಿತದಂತಹ ಪ್ರಾಕೃತಿಕ ವಿಕೋಪಕ್ಕೆ ಬಲಿಯಾಗಿವೆ. ಇಲ್ಲಿ ತುರ್ತು ಪರಿಹಾರ ಕಾರ್ಯದ ಉಸ್ತುವಾರಿಯ ಅವಶ್ಯಕತೆ ಇದೆ.

ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕವಾಗಿ ಅತಿಹೆಚ್ಚು ಅನ್ಯಾಯವಾಗಿರುವುದು ಅತ್ಯಂತ ಹಿಂದುಳಿದ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಎನ್ನುವುದೇ ದುರಂತ. ಇಲ್ಲಿನ 6 ಜಿಲ್ಲೆಗಳ ಪೈಕಿ ಬೀದರ್ ಜಿಲ್ಲೆಯ ಔರಾದ್‍ನ ಪ್ರಭು ಚವ್ಹಾಣ್‍ಗೆ ಮಾತ್ರ ಸಂಪುಟದಲ್ಲಿ ಸ್ಥಾನ ದೊರೆತಿದೆ. ಅದು ಕೂಡ ಪಶುಸಂಗೋಪನಾ ಇಲಾಖೆಯಾಗಿದೆ. ಹೈ.ಕರ್ನಾಟಕದ ಒಟ್ಟು 40 ಶಾಸಕರಲ್ಲಿ 15 ಜನ ಬಿಜೆಪಿಯವರಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಒಬ್ಬ ವಿಧಾನ ಪರಿಷತ್ ಸದಸ್ಯರೂ ಇದ್ದಾರೆ. ಮೊನ್ನೆ ತಾನೇ ನಡೆದ ಲೋಕಸಭಾ ಚುನಾವಣೆಯಲ್ಲಿ 5 ಕ್ಕೆ 5 ಕ್ಷೇತ್ರಗಳಲ್ಲಿ ಬಿಜೆಪಿಯ ಸಂಸದರೇ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಯಾದಗಿರಿ ಜಿಲ್ಲೆಯಿಂದ ರಾಜು ಗೌಡ ಹಾಗು ಬಳ್ಳಾರಿ ಜಿಲ್ಲೆಯ ಕರುಣಾಕರ ರೆಡ್ಡಿಯವರಿಗೆ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗುವ ಭರವಸೆ ಕೊನೆಯ ಕ್ಷಣದವರೆಗೂ ಇತ್ತು. ಹೀಗಿದ್ದೂ ಕೂಡ ಕೇವಲ ಒಬ್ಬರಿಗೆ ಮಾತ್ರ ಅವಕಾಶ ನೀಡಿರುವುದು ಈ ಭಾಗದ ಬಿಜೆಪಿಯ ಶಾಸಕರು ಹಾಗೂ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅವರನ್ನು ಸಮಾಧಾನ ಪಡಿಸಲು ಬಳ್ಳಾರಿ ಜಿಲ್ಲೆಯ ಶ್ರೀರಾಮುಲು ಅವರಿಗೂ ಅವಕಾಶ ನೀಡಿರುವುದಾಗಿ ಹೇಳಲಾಗುತ್ತಿದೆ. ಆದರೆ ಶ್ರೀರಾಮುಲು ಆಯ್ಕೆಯಾಗಿರುವುದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಹಾಗಾಗಿ ಆ ಜಿಲ್ಲೆಯಿಂದ ಆಯ್ಕೆಯಾದ ಬಿಜೆಪಿಯ 5 ಜನ ಶಾಸಕರಿಗೂ ಶ್ರೀರಾಮಲುರನ್ನೇ ತೋರಿಸಿ ಸಮಾಧಾನ ಪಡಿಸುತ್ತಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ಹೈ.ಕರ್ನಾಟಕದಲ್ಲಿ ರಾಯಚೂರು, ಯಾದಗಿರಿ ಹಾಗು ಕಲ್ಬುರ್ಗಿ ಜಿಲ್ಲೆಗಳು ತೀವ್ರ ಮಳೆ ಮತ್ತು ಭೀಮಾ, ಕೃಷ್ಣ, ತುಂಗಭದ್ರಾ ನದಿಗಳ ಪ್ರವಾಹದಿಂದ ತತ್ತರಿಸಿ ಹೋಗಿವೆ. ಜನಜೀವನ ಸಹಜ ಪರಿಸ್ಥಿತಿಗೆ ಬರಲು ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯಬೇಕಾದ ಅಗತ್ಯವಿದೆ. ಹಾಗೆ ನೋಡಿದರೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಬೀದರ್‍ನಿಂದ 3 , ಬಳ್ಳಾರಿಯಿಂದ 2 , ರಾಯಚೂರು ಮತ್ತು ಕಲ್ಬುರ್ಗಿಯಿಂದ ತಲಾ ಒಬ್ಬರು ಹೀಗೆ ಹೈ.ಕರ್ನಾಟಕದಿಂದ ಒಟ್ಟು 7 ಜನ ಸಚಿವರಿದ್ದರು. ಈಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೈ.ಕರ್ನಾಟಕ ಪ್ರದೇಶ ನಿರ್ಲಕ್ಷ್ಯಕ್ಕೊಳಗಾಗಿರುವುದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

– ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ-ಕೋಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಿಮನಗೌಡ ಕಾಸಿರೆಡ್ಡಿ ಇವರ ಲೇಖನ ವಾಸ್ತವಕ್ಕೆ ಹಿಡಿದ ಕನ್ನಡಿಯಾಗಿದೆ.
    ಬಂಗಿ ದೊಡ್ಡ ಮಂಜುನಾಥ, ಕಂಪ್ಲಿ.

  2. ಹೈಕ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಯಂತಿದೆ ಗೌಡರ ಲೇಖನ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...