Homeಕರ್ನಾಟಕಅನರ್ಹ ಸಂಪುಟ, ಅತೃಪ್ತ ಸರ್ಕಾರ: ಹೈದರಾಬಾದ್ ಕರ್ನಾಟಕಕ್ಕೆ ಭಾರೀ ಅನ್ಯಾಯ

ಅನರ್ಹ ಸಂಪುಟ, ಅತೃಪ್ತ ಸರ್ಕಾರ: ಹೈದರಾಬಾದ್ ಕರ್ನಾಟಕಕ್ಕೆ ಭಾರೀ ಅನ್ಯಾಯ

- Advertisement -
- Advertisement -

ಅಂತೂ ಇಂತೂ ಗಜಪ್ರಸವದಂತೆ ಯಡಿಯೂರಪ್ಪ ತಮ್ಮ ಅರೆಬರೆ ಸಂಪುಟವನ್ನು ರಚಿಸಿದ್ದಾರೆ. ಆದರೆ ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಳ್ಳದೇ ಮಾಡಿರುವ ಈ ಸಂಪುಟವನ್ನು ಅನರ್ಹ ಸಂಪುಟವೆನ್ನಬಹುದು. ಇನ್ನು ತಾನು ಭರವಸೆ ಕೊಟ್ಟಿದ್ದವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಆಗದಿದ್ದಕ್ಕಾಗಿ ಅಸಮಧಾನದಿಂದ ಕುದಿಯುತ್ತಿರುವ ಯಡಿಯೂರಪ್ಪ, ಉಪ – ಮುಖ್ಯಮಂತ್ರಿ ಸ್ಥಾನ ಸಿಗದೆ ಬೇಸರಗೊಂಡಿರುವ ಕೆ.ಎಸ್. ಈಶ್ವರಪ್ಪ, ಆರ್.ಅಶೋಕ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು ಹಾಗೂ ಪ್ರಮುಖ ಖಾತೆಗಳಿಗಾಗಿ ಹಾತೊರೆಯುತ್ತಿರುವ ಇತರ ಸಚಿವರಿಂದಾಗಿ ಇದನ್ನು ಅತೃಪ್ತ ಸರ್ಕಾರವೆಂದೇ ಕರೆಯಬೇಕಾಗುತ್ತದೆ.

ಯಾವುದೇ ಬದ್ಧತೆ, ಸಾಮಾಜಿಕ ಕಾಳಜಿಗಳಿಲ್ಲದ ಆರ್.ಎಸ್.ಎಸ್ ನ ಬಿ.ಎಲ್ ಸಂತೋಷ್‍ ಸಲಹೆಯಂತೆ, ಕರ್ನಾಟಕದ ಸಾಮಾಜಿಕ ಸಂರಚನೆ ಮತ್ತು ಪ್ರಾದೇಶಿಕ ಅಸಮತೋಲನ ಕುರಿತು ಪ್ರಾಥಮಿಕ ಜ್ಞಾನವೂ ಇರದ “ಮೋಟಾಭಾಯ್” ಅಮಿತ್ ಷಾ ಅಂತಿಮಗೊಳಿಸಿದ ಸಚಿವ ಸಂಪುಟವು ಮುಂದಿನ ದಿನಗಳಲ್ಲಿ ಭಾರೀ ರಾಜಕೀಯ ಪಲ್ಲಟಗಳಿಗೆ ಕಾರಣವಾಗಬಹುದು. ಸೇರ್ಪಡೆಯಾದ 17 ಜನರಲ್ಲಿ 7 ಲಿಂಗಾಯತ, 3 ಒಕ್ಕಲಿಗ, 2 ಹಿಂದುಳಿದ ವರ್ಗ, 3 ಪರಿಶಿಷ್ಟ ಜಾತಿ, 1 ಪರಿಶಿಷ್ಟ ಪಂಗಡ ಹಾಗು 1 ಬ್ರಾಹ್ಮಣರಿದ್ದಾರೆ.

2018 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸಾರಾಸಗಟಾಗಿ ಬೆಂಬಲಿಸಿದ್ದ ಬೋವಿ, ಯಾದವ, ಮರಾಠ ಹಾಗೂ ಮೀನುಗಾರ ಸಮುದಾಯಗಳಿಗೆ ಇಲ್ಲಿ ಯಾವುದೇ ಪ್ರಾತಿನಿಧ್ಯ ಇಲ್ಲ. ಇನ್ನು ರೆಡ್ಡಿ, ಕಮ್ಮ ಹಾಗು ಬಲಿಜ ಜಾತಿಗಳಿಗೆ ಸಂಪುಟದಲ್ಲಿ ಯಾವುದೇ ಸ್ಥಾನ ದೊರೆತಿಲ್ಲ. ಇದಲ್ಲದೆ ಕರಾವಳಿಯಲ್ಲಿ ಬಿಜೆಪಿಯ ಕಟ್ಟಾ ಬೆಂಬಲಿಗರಾಗಿರುವ ಬಂಟ ಮತ್ತು ಮೊಗವೀರ ಸಮುದಾಯಗಳಿಗೂ ನಿರಾಶೆಯಾಗಿದೆ.

ಇತ್ತ ಜಿಲ್ಲಾವಾರು ಪ್ರಾತಿನಿಧ್ಯವನ್ನು ನೋಡಿದರೆ ಬೆಳಗಾವಿ (2), ಬೆಂಗಳೂರು ನಗರ (3), ಶಿವಮೊಗ್ಗ(2), ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ತಲಾ ಒಂದೊಂದು ಸಚಿವ ಸ್ಥಾನ ದೊರೆತಿದೆ. ಉಳಿದ ವಿಜಯಪುರ, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ, ದಾವಣಗೆರೆ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಮಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ. ಈ 17 ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಇಲ್ಲ. ಇವುಗಳಲ್ಲಿ ಅರ್ಧದಷ್ಟು ಜಿಲ್ಲೆಗಳು ಇತ್ತೀಚಿನ ಪ್ರವಾಹ, ಭೂ ಕುಸಿತದಂತಹ ಪ್ರಾಕೃತಿಕ ವಿಕೋಪಕ್ಕೆ ಬಲಿಯಾಗಿವೆ. ಇಲ್ಲಿ ತುರ್ತು ಪರಿಹಾರ ಕಾರ್ಯದ ಉಸ್ತುವಾರಿಯ ಅವಶ್ಯಕತೆ ಇದೆ.

ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕವಾಗಿ ಅತಿಹೆಚ್ಚು ಅನ್ಯಾಯವಾಗಿರುವುದು ಅತ್ಯಂತ ಹಿಂದುಳಿದ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಎನ್ನುವುದೇ ದುರಂತ. ಇಲ್ಲಿನ 6 ಜಿಲ್ಲೆಗಳ ಪೈಕಿ ಬೀದರ್ ಜಿಲ್ಲೆಯ ಔರಾದ್‍ನ ಪ್ರಭು ಚವ್ಹಾಣ್‍ಗೆ ಮಾತ್ರ ಸಂಪುಟದಲ್ಲಿ ಸ್ಥಾನ ದೊರೆತಿದೆ. ಅದು ಕೂಡ ಪಶುಸಂಗೋಪನಾ ಇಲಾಖೆಯಾಗಿದೆ. ಹೈ.ಕರ್ನಾಟಕದ ಒಟ್ಟು 40 ಶಾಸಕರಲ್ಲಿ 15 ಜನ ಬಿಜೆಪಿಯವರಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಒಬ್ಬ ವಿಧಾನ ಪರಿಷತ್ ಸದಸ್ಯರೂ ಇದ್ದಾರೆ. ಮೊನ್ನೆ ತಾನೇ ನಡೆದ ಲೋಕಸಭಾ ಚುನಾವಣೆಯಲ್ಲಿ 5 ಕ್ಕೆ 5 ಕ್ಷೇತ್ರಗಳಲ್ಲಿ ಬಿಜೆಪಿಯ ಸಂಸದರೇ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಯಾದಗಿರಿ ಜಿಲ್ಲೆಯಿಂದ ರಾಜು ಗೌಡ ಹಾಗು ಬಳ್ಳಾರಿ ಜಿಲ್ಲೆಯ ಕರುಣಾಕರ ರೆಡ್ಡಿಯವರಿಗೆ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗುವ ಭರವಸೆ ಕೊನೆಯ ಕ್ಷಣದವರೆಗೂ ಇತ್ತು. ಹೀಗಿದ್ದೂ ಕೂಡ ಕೇವಲ ಒಬ್ಬರಿಗೆ ಮಾತ್ರ ಅವಕಾಶ ನೀಡಿರುವುದು ಈ ಭಾಗದ ಬಿಜೆಪಿಯ ಶಾಸಕರು ಹಾಗೂ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅವರನ್ನು ಸಮಾಧಾನ ಪಡಿಸಲು ಬಳ್ಳಾರಿ ಜಿಲ್ಲೆಯ ಶ್ರೀರಾಮುಲು ಅವರಿಗೂ ಅವಕಾಶ ನೀಡಿರುವುದಾಗಿ ಹೇಳಲಾಗುತ್ತಿದೆ. ಆದರೆ ಶ್ರೀರಾಮುಲು ಆಯ್ಕೆಯಾಗಿರುವುದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಹಾಗಾಗಿ ಆ ಜಿಲ್ಲೆಯಿಂದ ಆಯ್ಕೆಯಾದ ಬಿಜೆಪಿಯ 5 ಜನ ಶಾಸಕರಿಗೂ ಶ್ರೀರಾಮಲುರನ್ನೇ ತೋರಿಸಿ ಸಮಾಧಾನ ಪಡಿಸುತ್ತಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ಹೈ.ಕರ್ನಾಟಕದಲ್ಲಿ ರಾಯಚೂರು, ಯಾದಗಿರಿ ಹಾಗು ಕಲ್ಬುರ್ಗಿ ಜಿಲ್ಲೆಗಳು ತೀವ್ರ ಮಳೆ ಮತ್ತು ಭೀಮಾ, ಕೃಷ್ಣ, ತುಂಗಭದ್ರಾ ನದಿಗಳ ಪ್ರವಾಹದಿಂದ ತತ್ತರಿಸಿ ಹೋಗಿವೆ. ಜನಜೀವನ ಸಹಜ ಪರಿಸ್ಥಿತಿಗೆ ಬರಲು ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯಬೇಕಾದ ಅಗತ್ಯವಿದೆ. ಹಾಗೆ ನೋಡಿದರೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಬೀದರ್‍ನಿಂದ 3 , ಬಳ್ಳಾರಿಯಿಂದ 2 , ರಾಯಚೂರು ಮತ್ತು ಕಲ್ಬುರ್ಗಿಯಿಂದ ತಲಾ ಒಬ್ಬರು ಹೀಗೆ ಹೈ.ಕರ್ನಾಟಕದಿಂದ ಒಟ್ಟು 7 ಜನ ಸಚಿವರಿದ್ದರು. ಈಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೈ.ಕರ್ನಾಟಕ ಪ್ರದೇಶ ನಿರ್ಲಕ್ಷ್ಯಕ್ಕೊಳಗಾಗಿರುವುದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

– ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ-ಕೋಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಿಮನಗೌಡ ಕಾಸಿರೆಡ್ಡಿ ಇವರ ಲೇಖನ ವಾಸ್ತವಕ್ಕೆ ಹಿಡಿದ ಕನ್ನಡಿಯಾಗಿದೆ.
    ಬಂಗಿ ದೊಡ್ಡ ಮಂಜುನಾಥ, ಕಂಪ್ಲಿ.

  2. ಹೈಕ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಯಂತಿದೆ ಗೌಡರ ಲೇಖನ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...