Homeಕರ್ನಾಟಕಅನರ್ಹ ಸಂಪುಟ, ಅತೃಪ್ತ ಸರ್ಕಾರ: ಹೈದರಾಬಾದ್ ಕರ್ನಾಟಕಕ್ಕೆ ಭಾರೀ ಅನ್ಯಾಯ

ಅನರ್ಹ ಸಂಪುಟ, ಅತೃಪ್ತ ಸರ್ಕಾರ: ಹೈದರಾಬಾದ್ ಕರ್ನಾಟಕಕ್ಕೆ ಭಾರೀ ಅನ್ಯಾಯ

- Advertisement -
- Advertisement -

ಅಂತೂ ಇಂತೂ ಗಜಪ್ರಸವದಂತೆ ಯಡಿಯೂರಪ್ಪ ತಮ್ಮ ಅರೆಬರೆ ಸಂಪುಟವನ್ನು ರಚಿಸಿದ್ದಾರೆ. ಆದರೆ ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಳ್ಳದೇ ಮಾಡಿರುವ ಈ ಸಂಪುಟವನ್ನು ಅನರ್ಹ ಸಂಪುಟವೆನ್ನಬಹುದು. ಇನ್ನು ತಾನು ಭರವಸೆ ಕೊಟ್ಟಿದ್ದವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಆಗದಿದ್ದಕ್ಕಾಗಿ ಅಸಮಧಾನದಿಂದ ಕುದಿಯುತ್ತಿರುವ ಯಡಿಯೂರಪ್ಪ, ಉಪ – ಮುಖ್ಯಮಂತ್ರಿ ಸ್ಥಾನ ಸಿಗದೆ ಬೇಸರಗೊಂಡಿರುವ ಕೆ.ಎಸ್. ಈಶ್ವರಪ್ಪ, ಆರ್.ಅಶೋಕ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು ಹಾಗೂ ಪ್ರಮುಖ ಖಾತೆಗಳಿಗಾಗಿ ಹಾತೊರೆಯುತ್ತಿರುವ ಇತರ ಸಚಿವರಿಂದಾಗಿ ಇದನ್ನು ಅತೃಪ್ತ ಸರ್ಕಾರವೆಂದೇ ಕರೆಯಬೇಕಾಗುತ್ತದೆ.

ಯಾವುದೇ ಬದ್ಧತೆ, ಸಾಮಾಜಿಕ ಕಾಳಜಿಗಳಿಲ್ಲದ ಆರ್.ಎಸ್.ಎಸ್ ನ ಬಿ.ಎಲ್ ಸಂತೋಷ್‍ ಸಲಹೆಯಂತೆ, ಕರ್ನಾಟಕದ ಸಾಮಾಜಿಕ ಸಂರಚನೆ ಮತ್ತು ಪ್ರಾದೇಶಿಕ ಅಸಮತೋಲನ ಕುರಿತು ಪ್ರಾಥಮಿಕ ಜ್ಞಾನವೂ ಇರದ “ಮೋಟಾಭಾಯ್” ಅಮಿತ್ ಷಾ ಅಂತಿಮಗೊಳಿಸಿದ ಸಚಿವ ಸಂಪುಟವು ಮುಂದಿನ ದಿನಗಳಲ್ಲಿ ಭಾರೀ ರಾಜಕೀಯ ಪಲ್ಲಟಗಳಿಗೆ ಕಾರಣವಾಗಬಹುದು. ಸೇರ್ಪಡೆಯಾದ 17 ಜನರಲ್ಲಿ 7 ಲಿಂಗಾಯತ, 3 ಒಕ್ಕಲಿಗ, 2 ಹಿಂದುಳಿದ ವರ್ಗ, 3 ಪರಿಶಿಷ್ಟ ಜಾತಿ, 1 ಪರಿಶಿಷ್ಟ ಪಂಗಡ ಹಾಗು 1 ಬ್ರಾಹ್ಮಣರಿದ್ದಾರೆ.

2018 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸಾರಾಸಗಟಾಗಿ ಬೆಂಬಲಿಸಿದ್ದ ಬೋವಿ, ಯಾದವ, ಮರಾಠ ಹಾಗೂ ಮೀನುಗಾರ ಸಮುದಾಯಗಳಿಗೆ ಇಲ್ಲಿ ಯಾವುದೇ ಪ್ರಾತಿನಿಧ್ಯ ಇಲ್ಲ. ಇನ್ನು ರೆಡ್ಡಿ, ಕಮ್ಮ ಹಾಗು ಬಲಿಜ ಜಾತಿಗಳಿಗೆ ಸಂಪುಟದಲ್ಲಿ ಯಾವುದೇ ಸ್ಥಾನ ದೊರೆತಿಲ್ಲ. ಇದಲ್ಲದೆ ಕರಾವಳಿಯಲ್ಲಿ ಬಿಜೆಪಿಯ ಕಟ್ಟಾ ಬೆಂಬಲಿಗರಾಗಿರುವ ಬಂಟ ಮತ್ತು ಮೊಗವೀರ ಸಮುದಾಯಗಳಿಗೂ ನಿರಾಶೆಯಾಗಿದೆ.

ಇತ್ತ ಜಿಲ್ಲಾವಾರು ಪ್ರಾತಿನಿಧ್ಯವನ್ನು ನೋಡಿದರೆ ಬೆಳಗಾವಿ (2), ಬೆಂಗಳೂರು ನಗರ (3), ಶಿವಮೊಗ್ಗ(2), ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ತಲಾ ಒಂದೊಂದು ಸಚಿವ ಸ್ಥಾನ ದೊರೆತಿದೆ. ಉಳಿದ ವಿಜಯಪುರ, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ, ದಾವಣಗೆರೆ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಮಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ. ಈ 17 ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಇಲ್ಲ. ಇವುಗಳಲ್ಲಿ ಅರ್ಧದಷ್ಟು ಜಿಲ್ಲೆಗಳು ಇತ್ತೀಚಿನ ಪ್ರವಾಹ, ಭೂ ಕುಸಿತದಂತಹ ಪ್ರಾಕೃತಿಕ ವಿಕೋಪಕ್ಕೆ ಬಲಿಯಾಗಿವೆ. ಇಲ್ಲಿ ತುರ್ತು ಪರಿಹಾರ ಕಾರ್ಯದ ಉಸ್ತುವಾರಿಯ ಅವಶ್ಯಕತೆ ಇದೆ.

ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕವಾಗಿ ಅತಿಹೆಚ್ಚು ಅನ್ಯಾಯವಾಗಿರುವುದು ಅತ್ಯಂತ ಹಿಂದುಳಿದ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಎನ್ನುವುದೇ ದುರಂತ. ಇಲ್ಲಿನ 6 ಜಿಲ್ಲೆಗಳ ಪೈಕಿ ಬೀದರ್ ಜಿಲ್ಲೆಯ ಔರಾದ್‍ನ ಪ್ರಭು ಚವ್ಹಾಣ್‍ಗೆ ಮಾತ್ರ ಸಂಪುಟದಲ್ಲಿ ಸ್ಥಾನ ದೊರೆತಿದೆ. ಅದು ಕೂಡ ಪಶುಸಂಗೋಪನಾ ಇಲಾಖೆಯಾಗಿದೆ. ಹೈ.ಕರ್ನಾಟಕದ ಒಟ್ಟು 40 ಶಾಸಕರಲ್ಲಿ 15 ಜನ ಬಿಜೆಪಿಯವರಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಒಬ್ಬ ವಿಧಾನ ಪರಿಷತ್ ಸದಸ್ಯರೂ ಇದ್ದಾರೆ. ಮೊನ್ನೆ ತಾನೇ ನಡೆದ ಲೋಕಸಭಾ ಚುನಾವಣೆಯಲ್ಲಿ 5 ಕ್ಕೆ 5 ಕ್ಷೇತ್ರಗಳಲ್ಲಿ ಬಿಜೆಪಿಯ ಸಂಸದರೇ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಯಾದಗಿರಿ ಜಿಲ್ಲೆಯಿಂದ ರಾಜು ಗೌಡ ಹಾಗು ಬಳ್ಳಾರಿ ಜಿಲ್ಲೆಯ ಕರುಣಾಕರ ರೆಡ್ಡಿಯವರಿಗೆ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗುವ ಭರವಸೆ ಕೊನೆಯ ಕ್ಷಣದವರೆಗೂ ಇತ್ತು. ಹೀಗಿದ್ದೂ ಕೂಡ ಕೇವಲ ಒಬ್ಬರಿಗೆ ಮಾತ್ರ ಅವಕಾಶ ನೀಡಿರುವುದು ಈ ಭಾಗದ ಬಿಜೆಪಿಯ ಶಾಸಕರು ಹಾಗೂ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅವರನ್ನು ಸಮಾಧಾನ ಪಡಿಸಲು ಬಳ್ಳಾರಿ ಜಿಲ್ಲೆಯ ಶ್ರೀರಾಮುಲು ಅವರಿಗೂ ಅವಕಾಶ ನೀಡಿರುವುದಾಗಿ ಹೇಳಲಾಗುತ್ತಿದೆ. ಆದರೆ ಶ್ರೀರಾಮುಲು ಆಯ್ಕೆಯಾಗಿರುವುದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಹಾಗಾಗಿ ಆ ಜಿಲ್ಲೆಯಿಂದ ಆಯ್ಕೆಯಾದ ಬಿಜೆಪಿಯ 5 ಜನ ಶಾಸಕರಿಗೂ ಶ್ರೀರಾಮಲುರನ್ನೇ ತೋರಿಸಿ ಸಮಾಧಾನ ಪಡಿಸುತ್ತಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ಹೈ.ಕರ್ನಾಟಕದಲ್ಲಿ ರಾಯಚೂರು, ಯಾದಗಿರಿ ಹಾಗು ಕಲ್ಬುರ್ಗಿ ಜಿಲ್ಲೆಗಳು ತೀವ್ರ ಮಳೆ ಮತ್ತು ಭೀಮಾ, ಕೃಷ್ಣ, ತುಂಗಭದ್ರಾ ನದಿಗಳ ಪ್ರವಾಹದಿಂದ ತತ್ತರಿಸಿ ಹೋಗಿವೆ. ಜನಜೀವನ ಸಹಜ ಪರಿಸ್ಥಿತಿಗೆ ಬರಲು ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯಬೇಕಾದ ಅಗತ್ಯವಿದೆ. ಹಾಗೆ ನೋಡಿದರೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಬೀದರ್‍ನಿಂದ 3 , ಬಳ್ಳಾರಿಯಿಂದ 2 , ರಾಯಚೂರು ಮತ್ತು ಕಲ್ಬುರ್ಗಿಯಿಂದ ತಲಾ ಒಬ್ಬರು ಹೀಗೆ ಹೈ.ಕರ್ನಾಟಕದಿಂದ ಒಟ್ಟು 7 ಜನ ಸಚಿವರಿದ್ದರು. ಈಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೈ.ಕರ್ನಾಟಕ ಪ್ರದೇಶ ನಿರ್ಲಕ್ಷ್ಯಕ್ಕೊಳಗಾಗಿರುವುದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

– ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ-ಕೋಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಿಮನಗೌಡ ಕಾಸಿರೆಡ್ಡಿ ಇವರ ಲೇಖನ ವಾಸ್ತವಕ್ಕೆ ಹಿಡಿದ ಕನ್ನಡಿಯಾಗಿದೆ.
    ಬಂಗಿ ದೊಡ್ಡ ಮಂಜುನಾಥ, ಕಂಪ್ಲಿ.

  2. ಹೈಕ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಯಂತಿದೆ ಗೌಡರ ಲೇಖನ

LEAVE A REPLY

Please enter your comment!
Please enter your name here

- Advertisment -

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...