Homeಕರ್ನಾಟಕಅನರ್ಹ ಸಂಪುಟ, ಅತೃಪ್ತ ಸರ್ಕಾರ: ಹೈದರಾಬಾದ್ ಕರ್ನಾಟಕಕ್ಕೆ ಭಾರೀ ಅನ್ಯಾಯ

ಅನರ್ಹ ಸಂಪುಟ, ಅತೃಪ್ತ ಸರ್ಕಾರ: ಹೈದರಾಬಾದ್ ಕರ್ನಾಟಕಕ್ಕೆ ಭಾರೀ ಅನ್ಯಾಯ

- Advertisement -
- Advertisement -

ಅಂತೂ ಇಂತೂ ಗಜಪ್ರಸವದಂತೆ ಯಡಿಯೂರಪ್ಪ ತಮ್ಮ ಅರೆಬರೆ ಸಂಪುಟವನ್ನು ರಚಿಸಿದ್ದಾರೆ. ಆದರೆ ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಳ್ಳದೇ ಮಾಡಿರುವ ಈ ಸಂಪುಟವನ್ನು ಅನರ್ಹ ಸಂಪುಟವೆನ್ನಬಹುದು. ಇನ್ನು ತಾನು ಭರವಸೆ ಕೊಟ್ಟಿದ್ದವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಆಗದಿದ್ದಕ್ಕಾಗಿ ಅಸಮಧಾನದಿಂದ ಕುದಿಯುತ್ತಿರುವ ಯಡಿಯೂರಪ್ಪ, ಉಪ – ಮುಖ್ಯಮಂತ್ರಿ ಸ್ಥಾನ ಸಿಗದೆ ಬೇಸರಗೊಂಡಿರುವ ಕೆ.ಎಸ್. ಈಶ್ವರಪ್ಪ, ಆರ್.ಅಶೋಕ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು ಹಾಗೂ ಪ್ರಮುಖ ಖಾತೆಗಳಿಗಾಗಿ ಹಾತೊರೆಯುತ್ತಿರುವ ಇತರ ಸಚಿವರಿಂದಾಗಿ ಇದನ್ನು ಅತೃಪ್ತ ಸರ್ಕಾರವೆಂದೇ ಕರೆಯಬೇಕಾಗುತ್ತದೆ.

ಯಾವುದೇ ಬದ್ಧತೆ, ಸಾಮಾಜಿಕ ಕಾಳಜಿಗಳಿಲ್ಲದ ಆರ್.ಎಸ್.ಎಸ್ ನ ಬಿ.ಎಲ್ ಸಂತೋಷ್‍ ಸಲಹೆಯಂತೆ, ಕರ್ನಾಟಕದ ಸಾಮಾಜಿಕ ಸಂರಚನೆ ಮತ್ತು ಪ್ರಾದೇಶಿಕ ಅಸಮತೋಲನ ಕುರಿತು ಪ್ರಾಥಮಿಕ ಜ್ಞಾನವೂ ಇರದ “ಮೋಟಾಭಾಯ್” ಅಮಿತ್ ಷಾ ಅಂತಿಮಗೊಳಿಸಿದ ಸಚಿವ ಸಂಪುಟವು ಮುಂದಿನ ದಿನಗಳಲ್ಲಿ ಭಾರೀ ರಾಜಕೀಯ ಪಲ್ಲಟಗಳಿಗೆ ಕಾರಣವಾಗಬಹುದು. ಸೇರ್ಪಡೆಯಾದ 17 ಜನರಲ್ಲಿ 7 ಲಿಂಗಾಯತ, 3 ಒಕ್ಕಲಿಗ, 2 ಹಿಂದುಳಿದ ವರ್ಗ, 3 ಪರಿಶಿಷ್ಟ ಜಾತಿ, 1 ಪರಿಶಿಷ್ಟ ಪಂಗಡ ಹಾಗು 1 ಬ್ರಾಹ್ಮಣರಿದ್ದಾರೆ.

2018 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸಾರಾಸಗಟಾಗಿ ಬೆಂಬಲಿಸಿದ್ದ ಬೋವಿ, ಯಾದವ, ಮರಾಠ ಹಾಗೂ ಮೀನುಗಾರ ಸಮುದಾಯಗಳಿಗೆ ಇಲ್ಲಿ ಯಾವುದೇ ಪ್ರಾತಿನಿಧ್ಯ ಇಲ್ಲ. ಇನ್ನು ರೆಡ್ಡಿ, ಕಮ್ಮ ಹಾಗು ಬಲಿಜ ಜಾತಿಗಳಿಗೆ ಸಂಪುಟದಲ್ಲಿ ಯಾವುದೇ ಸ್ಥಾನ ದೊರೆತಿಲ್ಲ. ಇದಲ್ಲದೆ ಕರಾವಳಿಯಲ್ಲಿ ಬಿಜೆಪಿಯ ಕಟ್ಟಾ ಬೆಂಬಲಿಗರಾಗಿರುವ ಬಂಟ ಮತ್ತು ಮೊಗವೀರ ಸಮುದಾಯಗಳಿಗೂ ನಿರಾಶೆಯಾಗಿದೆ.

ಇತ್ತ ಜಿಲ್ಲಾವಾರು ಪ್ರಾತಿನಿಧ್ಯವನ್ನು ನೋಡಿದರೆ ಬೆಳಗಾವಿ (2), ಬೆಂಗಳೂರು ನಗರ (3), ಶಿವಮೊಗ್ಗ(2), ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ತಲಾ ಒಂದೊಂದು ಸಚಿವ ಸ್ಥಾನ ದೊರೆತಿದೆ. ಉಳಿದ ವಿಜಯಪುರ, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ, ದಾವಣಗೆರೆ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಮಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ. ಈ 17 ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಇಲ್ಲ. ಇವುಗಳಲ್ಲಿ ಅರ್ಧದಷ್ಟು ಜಿಲ್ಲೆಗಳು ಇತ್ತೀಚಿನ ಪ್ರವಾಹ, ಭೂ ಕುಸಿತದಂತಹ ಪ್ರಾಕೃತಿಕ ವಿಕೋಪಕ್ಕೆ ಬಲಿಯಾಗಿವೆ. ಇಲ್ಲಿ ತುರ್ತು ಪರಿಹಾರ ಕಾರ್ಯದ ಉಸ್ತುವಾರಿಯ ಅವಶ್ಯಕತೆ ಇದೆ.

ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕವಾಗಿ ಅತಿಹೆಚ್ಚು ಅನ್ಯಾಯವಾಗಿರುವುದು ಅತ್ಯಂತ ಹಿಂದುಳಿದ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಎನ್ನುವುದೇ ದುರಂತ. ಇಲ್ಲಿನ 6 ಜಿಲ್ಲೆಗಳ ಪೈಕಿ ಬೀದರ್ ಜಿಲ್ಲೆಯ ಔರಾದ್‍ನ ಪ್ರಭು ಚವ್ಹಾಣ್‍ಗೆ ಮಾತ್ರ ಸಂಪುಟದಲ್ಲಿ ಸ್ಥಾನ ದೊರೆತಿದೆ. ಅದು ಕೂಡ ಪಶುಸಂಗೋಪನಾ ಇಲಾಖೆಯಾಗಿದೆ. ಹೈ.ಕರ್ನಾಟಕದ ಒಟ್ಟು 40 ಶಾಸಕರಲ್ಲಿ 15 ಜನ ಬಿಜೆಪಿಯವರಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಒಬ್ಬ ವಿಧಾನ ಪರಿಷತ್ ಸದಸ್ಯರೂ ಇದ್ದಾರೆ. ಮೊನ್ನೆ ತಾನೇ ನಡೆದ ಲೋಕಸಭಾ ಚುನಾವಣೆಯಲ್ಲಿ 5 ಕ್ಕೆ 5 ಕ್ಷೇತ್ರಗಳಲ್ಲಿ ಬಿಜೆಪಿಯ ಸಂಸದರೇ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಯಾದಗಿರಿ ಜಿಲ್ಲೆಯಿಂದ ರಾಜು ಗೌಡ ಹಾಗು ಬಳ್ಳಾರಿ ಜಿಲ್ಲೆಯ ಕರುಣಾಕರ ರೆಡ್ಡಿಯವರಿಗೆ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗುವ ಭರವಸೆ ಕೊನೆಯ ಕ್ಷಣದವರೆಗೂ ಇತ್ತು. ಹೀಗಿದ್ದೂ ಕೂಡ ಕೇವಲ ಒಬ್ಬರಿಗೆ ಮಾತ್ರ ಅವಕಾಶ ನೀಡಿರುವುದು ಈ ಭಾಗದ ಬಿಜೆಪಿಯ ಶಾಸಕರು ಹಾಗೂ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅವರನ್ನು ಸಮಾಧಾನ ಪಡಿಸಲು ಬಳ್ಳಾರಿ ಜಿಲ್ಲೆಯ ಶ್ರೀರಾಮುಲು ಅವರಿಗೂ ಅವಕಾಶ ನೀಡಿರುವುದಾಗಿ ಹೇಳಲಾಗುತ್ತಿದೆ. ಆದರೆ ಶ್ರೀರಾಮುಲು ಆಯ್ಕೆಯಾಗಿರುವುದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಹಾಗಾಗಿ ಆ ಜಿಲ್ಲೆಯಿಂದ ಆಯ್ಕೆಯಾದ ಬಿಜೆಪಿಯ 5 ಜನ ಶಾಸಕರಿಗೂ ಶ್ರೀರಾಮಲುರನ್ನೇ ತೋರಿಸಿ ಸಮಾಧಾನ ಪಡಿಸುತ್ತಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ಹೈ.ಕರ್ನಾಟಕದಲ್ಲಿ ರಾಯಚೂರು, ಯಾದಗಿರಿ ಹಾಗು ಕಲ್ಬುರ್ಗಿ ಜಿಲ್ಲೆಗಳು ತೀವ್ರ ಮಳೆ ಮತ್ತು ಭೀಮಾ, ಕೃಷ್ಣ, ತುಂಗಭದ್ರಾ ನದಿಗಳ ಪ್ರವಾಹದಿಂದ ತತ್ತರಿಸಿ ಹೋಗಿವೆ. ಜನಜೀವನ ಸಹಜ ಪರಿಸ್ಥಿತಿಗೆ ಬರಲು ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯಬೇಕಾದ ಅಗತ್ಯವಿದೆ. ಹಾಗೆ ನೋಡಿದರೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಬೀದರ್‍ನಿಂದ 3 , ಬಳ್ಳಾರಿಯಿಂದ 2 , ರಾಯಚೂರು ಮತ್ತು ಕಲ್ಬುರ್ಗಿಯಿಂದ ತಲಾ ಒಬ್ಬರು ಹೀಗೆ ಹೈ.ಕರ್ನಾಟಕದಿಂದ ಒಟ್ಟು 7 ಜನ ಸಚಿವರಿದ್ದರು. ಈಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೈ.ಕರ್ನಾಟಕ ಪ್ರದೇಶ ನಿರ್ಲಕ್ಷ್ಯಕ್ಕೊಳಗಾಗಿರುವುದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

– ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ-ಕೋಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಿಮನಗೌಡ ಕಾಸಿರೆಡ್ಡಿ ಇವರ ಲೇಖನ ವಾಸ್ತವಕ್ಕೆ ಹಿಡಿದ ಕನ್ನಡಿಯಾಗಿದೆ.
    ಬಂಗಿ ದೊಡ್ಡ ಮಂಜುನಾಥ, ಕಂಪ್ಲಿ.

  2. ಹೈಕ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಯಂತಿದೆ ಗೌಡರ ಲೇಖನ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...