Homeಕರ್ನಾಟಕಸಚಿವ ಸ್ಥಾನ ಅವಕಾಶ ತಪ್ಪಿ ಹೋದ ಬಗ್ಗೆ ನನಗೆ ಮತ್ತು ಜಿಲ್ಲೆಯ ಜನತೆಗೆ ನೋವಾಗಿದೆ: ಸುಳ್ಯ...

ಸಚಿವ ಸ್ಥಾನ ಅವಕಾಶ ತಪ್ಪಿ ಹೋದ ಬಗ್ಗೆ ನನಗೆ ಮತ್ತು ಜಿಲ್ಲೆಯ ಜನತೆಗೆ ನೋವಾಗಿದೆ: ಸುಳ್ಯ ಶಾಸಕ ಎಸ್.ಅಂಗಾರ

ಸಚಿವ ಸಂಪುಟ ರಚನೆಯಾಗುತ್ತಲೇ ಸಹಜವಾಗಿ ಭಿನ್ನಮತವೂ ಭುಗಿಲೆದ್ದಿದೆ. ಯಾರ್ಯಾರು ಏನೇನು ಹೇಳಿದ್ದಾರೆ ನೋಡಿ..

- Advertisement -
- Advertisement -

ಈ ಬಾರಿ ಸಚಿವ ಸ್ಥಾನ ಖಂಡಿತ ಸಿಗುತ್ತದೆ ಎಂದು ಬಾರೀ ನಿರೀಕ್ಷೆ ಇತ್ತು ಆದರೆ ಸಚಿವ ಸ್ಥಾನ ಅವಕಾಶ ತಪ್ಪಿ ಹೋದ ಬಗ್ಗೆ ನನಗೆ ಮತ್ತು ಜಿಲ್ಲೆಯ ಜನತೆಗೆ ನೋವಾಗಿದೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಬೇಸರ ವ್ಯಕ್ತಪಡಿಸಿದ್ದಾರೆ.

ಆರು ಬಾರಿ ಶಾಸಕನಾಗಿದ್ದೇನೆ. ಹಿಂದೆಯೂ ಅವಕಾಶಕ್ಕಾಗಿ ದನಿ ಎತ್ತಿದ್ದೇನೆ. ನಮ್ಮ ಜಿಲ್ಲೆಯಲ್ಲಿ ವ್ಯಾಪಕ ವಿಶ್ವಾಸವಿಟ್ಟಿದ್ದರು. ಆದರೆ ಈ ಬಾರಿಯೂ ನೋವಾಗಿದೆ, ಜಿಲ್ಲೆಯ ಜನರು ಬೇಸರದಲ್ಲಿದ್ದಾರೆ. ಪಕ್ಷ ಹಿರಿಯರು ಇದರ ಬಗ್ಗೆ ಗಮನ ವಹಿಸಬೇಕು ಎಂದು ಹೇಳಿದ್ದಾರೆ.

ನನಗೂ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ಸುಳ್ಳಾಗಿದೆ. ಇದರಿಂದ ಸಹಜವಾಗಿ ಕಾರ್ಯಕಾರ್ತರಿಗೆ ನೋವಾಗಿದೆ. ಅವರನ್ನು ಸಮಾಧಾನ ಮಾಡಿಕಳಿಸಿದ್ದೇನೆ. ಸಚಿವ ಸ್ಥಾನ ಸಿಗದಿದ್ದರಿಂಗ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಕೊಡಿಸುತ್ತೇನೆಂದು ಸಂಸದರು ಭರವಸೆ ನೀಡಿದ್ದಾರೆ. ಮುಂದಿನ ಸಲವಾದರೂ ಸಚಿವ ಸ್ಥಾನ ಬೇಕು ಎಂದು ಕೇಳುತ್ತೇನೆ ಎಂದು ಶಾಸಕರು ಹೇಳಿದ್ದಾರೆ.

ಈ ನಡುವೆ ಶಾಸಕ ರೇಣುಕಾಚಾರ್ಯ ಬಾಲಚಂದ್ರ ಜಾರಕಿಹೊಳಿಯವರನ್ನು ಭೇಟಿಯಾಗಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಿಲ್ಲ ಎಂದು ಹೇಳಿದ್ದಾರೆ.

ಇಂದು ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ನೂತನ ಸಚಿವರುಗಳಿಗೆ ಅಭಿನಂದನೆಗಳು. ನಮ್ಮ ರಾಜ್ಯ ಮಹಾಪೂರ ಮತ್ತು ಮಳೆಯಿಂದ ತತ್ತರಿಸಿ ಹೋಗಿದೆ. ಜನತೆ ಅತ್ಯಂತ ಕಷ್ಟದ ನೋವು ಅನುಭವಿಸುತ್ತಿದ್ದಾರೆ ಆ ಕಡೆಗೆ ನಮ್ಮ ಗಮನ ಕೊಡಬೇಕು ಸಚಿವ ಸಂಪುಟ ಅಸಮಾಧಾನ ಈಗ ಬೇಡ. ನೂತನ ಸಚಿವರು ತಕ್ಷಣ ಕ್ರಿಯಾಶೀಲರಾಗಬೇಕು. ಹಾರ ತುರಾಯಿಯಲ್ಲಿ ಸಮಯ ವ್ಯರ್ಥ ಮಾಡದೆ ಕೆಲಸ ಪ್ರಾರಂಭವಾಗಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...