Homeಕರ್ನಾಟಕ‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

- Advertisement -
- Advertisement -

ಮಾಂಸಾಹಾರವನ್ನು ‘ಅನಿಷ್ಠ’ ಎಂದು ಬಿಂಬಿಸುವುದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭವಾಗಿದೆ. ಈ ಸಂಬಂಧ #ಮಾಂಸವೇ_ನಮ್ಮನೆ_ದ್ಯಾವ್ರು ಮತ್ತು #ಬಾಡೇ_ನಮ್_ಗಾಡು ಹ್ಯಾಶ್‌ಟ್ಯಾಗ್‌ ಚಳವಳಿ ಪ್ರಾರಂಭವಾಗಿದೆ.

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ದಲಿತರ ಮನೆಗೆ ಬಲಿತವರು ಹೋಗುವುದು ಬೂಟಾಟಿಕೆ ಎಂಬರ್ಥದಲ್ಲಿ ಮಾತನಾಡುತ್ತಾ, ಪೇಜಾವರ ಸ್ವಾಮಿಯ ಉದಾಹರಣೆಯನ್ನು ನೀಡಿದ್ದರು. ಈ ವೇಳೆ ಅವರು, “ಪೇಜಾವರ ಸ್ವಾಮಿ ದಲಿತರ ಮನೆಗೆ ಹೋಗಲು ಮಾತ್ರ ಆಗುವುದು. ಅವರು ಕೋಳಿ ಕೊಟ್ಟರೆ ತಿನ್ನಕ್ಕಾಗುತ್ತಾ? ಕುರಿಯ ರಕ್ತದ ಫ್ರೈ ಮಾಡಿ ಕೊಟ್ಟರೆ ಅವರು ತಿನ್ನುತ್ತಾರೆಯೆ? ಲಿವರ್‌ ಕೊಟ್ಟರೆ ತಿನ್ನುತ್ತಾರಾ? ದಲಿತರ ಮನೆಗೆ ಬಲಿತವರು ಹೋಗುವುದು ಏನು ದೊಡ್ಡ ವಿಷಯ?” ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಹಂಸಲೇಖ ಅವರನ್ನು ತೇಜೋವಧೆ ಮಾಡಲಾಗಿತ್ತು. ಅವರ ಫೋನ್‌ ನಂಬರ್‌ಗಳನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿಯ ಬಿಟ್ಟು ಅವರಿಗೆ ನಿರಂತರ ಕಿರುಕುಳ ಕೂಡಾ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ನಂತರ ಹಂಸಲೇಖ ಅವರು, ತಾನು ಅಂತಹ ವೇದಿಕೆಗಳಲ್ಲಿ ಈ ಮಾತುಗಳನ್ನು ಹೇಳಬಾರದಿತ್ತು ಎಂದು ಹೇಳಿ ಕ್ಷಮೆ ಕೇಳಿದ್ದರು.

ಇದನ್ನೂ ಓದಿ: ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಂಸಲೇಖ ಕ್ಷಮೆ ಕೇಳಿದ ನಂತರವು ಸಾಮಾಜಿಕ ಜಾಲತಾಣದಲ್ಲಿ ಅವರ ತೇಜೋವಧೆ ಮುಂದುವರೆದಿತ್ತು. ಇಷ್ಟೇ ಅಲ್ಲದೆ ಮಾಂಸಾಹಾರ ಮತ್ತು ಕುರಿ ರಕ್ತದ ಫ್ರೈ ಜೊತೆಗೆ ಮಾಂಸ ತಿನ್ನುವವರ ಬಗ್ಗೆಯು ಅವಹೇಳನದ ಮಾತುಗಳನ್ನು ಆಡಲಾಗಿತ್ತು. ಮಾಂಸವನ್ನು ‘ಅಸಹ್ಯ’ ಮತ್ತು ‘ಅನಿಷ್ಠ’ ಎಂಬಂತೆ ಬಿಂಬಿಸಲಾಗಿತ್ತು. ಅಲ್ಲದೆ ಮಾಂಸ ತಿನ್ನುವವರನ್ನು ‘ರಾಕ್ಷಸರು’, ‘ಕ್ರೂರಿಗಳು’ ಎಂದು ಹೇಳಿ ಅವಮಾನಿಸಲಾಗಿತ್ತು.

ಈ ಎಲ್ಲಾ ಬೆಳವಣಿಗೆಯನ್ನು ವಿರೋಧಿಸಿ ಮಾಂಸಾಹಾರಿಗಳು ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈಗಾಗಲೆ ಹಲವಾರು ಜನರು ಈ ಅಭಿಯಾನಕ್ಕೆ ಕೈಜೋಡಿಸಿದ್ದು, ಸಸ್ಯಾಹಾರದಂತೆಯೆ ಮಾಂಸಾಹಾರ ಕೂಡಾ ಆಹಾರವೇ ಆಗಿದೆ. ಅದನ್ನು ಅನಿಷ್ಠ ಮತ್ತು ಅಸಹ್ಯ ಎಂಬಂತೆ ಬಿಂಬಿಸುವುದು ನಿಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿ ಕಾರಿದ್ದಾರೆ. ದೇಶದ 90% ಜನರು ತಿನ್ನುವ ಮಾಂಸಾಹಾರವನ್ನು ಅವಮಾನಿಸುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಹಾಕಲಾಗಿದೆ.

ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

#ಮಾಂಸವೇ_ನಮ್ಮನೆ_ದ್ಯಾವ್ರು ಮತ್ತು #ಬಾಡೇ_ನಮ್_ಗಾಡು ಅಭಿಯಾನವು ಮುಂದಿನ ಒಂದು ವಾರ ನಡೆಯಲಿದ್ದು, ತಮ್ಮ ಮಾಂಸದೂಟದ ಜೊತೆಗೆ ಸೆಲ್ಫಿಯನ್ನು ಕ್ಲಿಕ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಪ್ರತಿಯೊಬ್ಬರೂ ಅಭಿಯಾನದಲ್ಲಿ ಸೇರಬಹುದಾಗಿದೆ. ಇಷ್ಟೇ ಅಲ್ಲದೆ ಅಭಿಯಾನದಲ್ಲಿ ಸೇರಬಯಸುವವರು ತಮ್ಮ ಕನಿಷ್ಠ ಐವರು ಸ್ನೇಹಿತರಿಗೆ ಖೋ ಕೊಟ್ಟು ಅವರು ಅಭಿಯಾನಕ್ಕೆ ಸೇರುವಂತೆ ಮಾಡಬೇಕು ಎಂದು ಅಭಿಯಾನದ ಪೋಸ್ಟರ್‌ ಒಂದು ಹೇಳುತ್ತದೆ.

ಈಗಾಗಲೆ ಹಲವಾರು ಜನರು ಈ ಅಭಿಯಾನದಲ್ಲಿ ಸೇರಿದ್ದು ಅವುಗಳ ಕೆಲವು ಝಲಕ್‌ಗಳು ಇಲ್ಲಿವೆ.

ಇದನ್ನೂ ಓದಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಇದನ್ನೂ ಓದಿ: ಪ್ರತಿದಿನ ಕರ್ನಾಟಕದಿಂದ ಕಳುಹಿಸಲ್ಪಟ್ಟ 2,100 ಕೆಜಿ ಗೋಮಾಂಸವನ್ನು ಗೋವಾದಲ್ಲಿ ಸೇವಿಸುತ್ತಾರೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...