Homeಕರ್ನಾಟಕ‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

- Advertisement -
- Advertisement -

ಮಾಂಸಾಹಾರವನ್ನು ‘ಅನಿಷ್ಠ’ ಎಂದು ಬಿಂಬಿಸುವುದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭವಾಗಿದೆ. ಈ ಸಂಬಂಧ #ಮಾಂಸವೇ_ನಮ್ಮನೆ_ದ್ಯಾವ್ರು ಮತ್ತು #ಬಾಡೇ_ನಮ್_ಗಾಡು ಹ್ಯಾಶ್‌ಟ್ಯಾಗ್‌ ಚಳವಳಿ ಪ್ರಾರಂಭವಾಗಿದೆ.

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ದಲಿತರ ಮನೆಗೆ ಬಲಿತವರು ಹೋಗುವುದು ಬೂಟಾಟಿಕೆ ಎಂಬರ್ಥದಲ್ಲಿ ಮಾತನಾಡುತ್ತಾ, ಪೇಜಾವರ ಸ್ವಾಮಿಯ ಉದಾಹರಣೆಯನ್ನು ನೀಡಿದ್ದರು. ಈ ವೇಳೆ ಅವರು, “ಪೇಜಾವರ ಸ್ವಾಮಿ ದಲಿತರ ಮನೆಗೆ ಹೋಗಲು ಮಾತ್ರ ಆಗುವುದು. ಅವರು ಕೋಳಿ ಕೊಟ್ಟರೆ ತಿನ್ನಕ್ಕಾಗುತ್ತಾ? ಕುರಿಯ ರಕ್ತದ ಫ್ರೈ ಮಾಡಿ ಕೊಟ್ಟರೆ ಅವರು ತಿನ್ನುತ್ತಾರೆಯೆ? ಲಿವರ್‌ ಕೊಟ್ಟರೆ ತಿನ್ನುತ್ತಾರಾ? ದಲಿತರ ಮನೆಗೆ ಬಲಿತವರು ಹೋಗುವುದು ಏನು ದೊಡ್ಡ ವಿಷಯ?” ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಹಂಸಲೇಖ ಅವರನ್ನು ತೇಜೋವಧೆ ಮಾಡಲಾಗಿತ್ತು. ಅವರ ಫೋನ್‌ ನಂಬರ್‌ಗಳನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿಯ ಬಿಟ್ಟು ಅವರಿಗೆ ನಿರಂತರ ಕಿರುಕುಳ ಕೂಡಾ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ನಂತರ ಹಂಸಲೇಖ ಅವರು, ತಾನು ಅಂತಹ ವೇದಿಕೆಗಳಲ್ಲಿ ಈ ಮಾತುಗಳನ್ನು ಹೇಳಬಾರದಿತ್ತು ಎಂದು ಹೇಳಿ ಕ್ಷಮೆ ಕೇಳಿದ್ದರು.

ಇದನ್ನೂ ಓದಿ: ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಂಸಲೇಖ ಕ್ಷಮೆ ಕೇಳಿದ ನಂತರವು ಸಾಮಾಜಿಕ ಜಾಲತಾಣದಲ್ಲಿ ಅವರ ತೇಜೋವಧೆ ಮುಂದುವರೆದಿತ್ತು. ಇಷ್ಟೇ ಅಲ್ಲದೆ ಮಾಂಸಾಹಾರ ಮತ್ತು ಕುರಿ ರಕ್ತದ ಫ್ರೈ ಜೊತೆಗೆ ಮಾಂಸ ತಿನ್ನುವವರ ಬಗ್ಗೆಯು ಅವಹೇಳನದ ಮಾತುಗಳನ್ನು ಆಡಲಾಗಿತ್ತು. ಮಾಂಸವನ್ನು ‘ಅಸಹ್ಯ’ ಮತ್ತು ‘ಅನಿಷ್ಠ’ ಎಂಬಂತೆ ಬಿಂಬಿಸಲಾಗಿತ್ತು. ಅಲ್ಲದೆ ಮಾಂಸ ತಿನ್ನುವವರನ್ನು ‘ರಾಕ್ಷಸರು’, ‘ಕ್ರೂರಿಗಳು’ ಎಂದು ಹೇಳಿ ಅವಮಾನಿಸಲಾಗಿತ್ತು.

ಈ ಎಲ್ಲಾ ಬೆಳವಣಿಗೆಯನ್ನು ವಿರೋಧಿಸಿ ಮಾಂಸಾಹಾರಿಗಳು ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈಗಾಗಲೆ ಹಲವಾರು ಜನರು ಈ ಅಭಿಯಾನಕ್ಕೆ ಕೈಜೋಡಿಸಿದ್ದು, ಸಸ್ಯಾಹಾರದಂತೆಯೆ ಮಾಂಸಾಹಾರ ಕೂಡಾ ಆಹಾರವೇ ಆಗಿದೆ. ಅದನ್ನು ಅನಿಷ್ಠ ಮತ್ತು ಅಸಹ್ಯ ಎಂಬಂತೆ ಬಿಂಬಿಸುವುದು ನಿಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿ ಕಾರಿದ್ದಾರೆ. ದೇಶದ 90% ಜನರು ತಿನ್ನುವ ಮಾಂಸಾಹಾರವನ್ನು ಅವಮಾನಿಸುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಹಾಕಲಾಗಿದೆ.

ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

#ಮಾಂಸವೇ_ನಮ್ಮನೆ_ದ್ಯಾವ್ರು ಮತ್ತು #ಬಾಡೇ_ನಮ್_ಗಾಡು ಅಭಿಯಾನವು ಮುಂದಿನ ಒಂದು ವಾರ ನಡೆಯಲಿದ್ದು, ತಮ್ಮ ಮಾಂಸದೂಟದ ಜೊತೆಗೆ ಸೆಲ್ಫಿಯನ್ನು ಕ್ಲಿಕ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಪ್ರತಿಯೊಬ್ಬರೂ ಅಭಿಯಾನದಲ್ಲಿ ಸೇರಬಹುದಾಗಿದೆ. ಇಷ್ಟೇ ಅಲ್ಲದೆ ಅಭಿಯಾನದಲ್ಲಿ ಸೇರಬಯಸುವವರು ತಮ್ಮ ಕನಿಷ್ಠ ಐವರು ಸ್ನೇಹಿತರಿಗೆ ಖೋ ಕೊಟ್ಟು ಅವರು ಅಭಿಯಾನಕ್ಕೆ ಸೇರುವಂತೆ ಮಾಡಬೇಕು ಎಂದು ಅಭಿಯಾನದ ಪೋಸ್ಟರ್‌ ಒಂದು ಹೇಳುತ್ತದೆ.

ಈಗಾಗಲೆ ಹಲವಾರು ಜನರು ಈ ಅಭಿಯಾನದಲ್ಲಿ ಸೇರಿದ್ದು ಅವುಗಳ ಕೆಲವು ಝಲಕ್‌ಗಳು ಇಲ್ಲಿವೆ.

ಇದನ್ನೂ ಓದಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಇದನ್ನೂ ಓದಿ: ಪ್ರತಿದಿನ ಕರ್ನಾಟಕದಿಂದ ಕಳುಹಿಸಲ್ಪಟ್ಟ 2,100 ಕೆಜಿ ಗೋಮಾಂಸವನ್ನು ಗೋವಾದಲ್ಲಿ ಸೇವಿಸುತ್ತಾರೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...