Homeಮುಖಪುಟಕರ್ನಾಟಕ ಆಕ್ರಮಿತ ಪ್ರದೇಶ ಹೇಳಿಕೆ: ಉದ್ಧವ್ ಠಾಕ್ರೆ ವಿರುದ್ಧ ಒಕ್ಕೊರಲ ಆಕ್ರೋಶ

ಕರ್ನಾಟಕ ಆಕ್ರಮಿತ ಪ್ರದೇಶ ಹೇಳಿಕೆ: ಉದ್ಧವ್ ಠಾಕ್ರೆ ವಿರುದ್ಧ ಒಕ್ಕೊರಲ ಆಕ್ರೋಶ

ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆಯನ್ನು ಸಾವಿರಾರು ಕನ್ನಡಿಗರು ಸೇರಿದಂತೆ ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳು ಪಕ್ಷಬೇಧ ಮರೆತು ಖಂಡಿಸಿವೆ. ಬೆಳಗಾವಿ ನಮ್ಮದು ಎಂದು ಘೋಷಿಸಿವೆ.

- Advertisement -
- Advertisement -

ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಗೆ ಕರ್ನಾಟಕದಾದ್ಯಂತ ಒಕ್ಕೊರಲಿನ ವಿರೋಧ ವ್ಯಕ್ತವಾಗಿದೆ. ಆಡಳಿತ ಪಕ್ಷ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಮತ್ತು ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಗಡಿ ಹೋರಾಟದಲ್ಲಿ ಮಡಿದವರ ನೆನಪಿನಲ್ಲಿ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯಲ್ಲಿ ಭಾಗವಹಿಸಿದ ಉದ್ಧವ್ ಠಾಕ್ರೆ ಮೇಲಿನ ಹೇಳಿಕೆ ನೀಡಿದ್ದರು. “ಮರಾಠಿ ಮಾತನಾಡುವ ಮತ್ತು ಮರಾಠಿ ಸಾಂಸ್ಕೃತಿಕ ವಾತವಾರಣವಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆಗೊಳಿಸುವುದೇ ಈ ಗಡಿ ಹೋರಾಟದಲ್ಲಿ ಹುತಾತ್ಮರಾದವರಿಗೆ ನಾವು ಸಲ್ಲಿಸುವ ನಿಜವಾದ ಗೌರವ. ನಾವು ಒಂದಾಗಿದ್ದೇವೆ ಮತ್ತು ಅದಕ್ಕೆ ಬದ್ಧರಾಗಿದ್ದೇವೆ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿಯು ಟ್ವೀಟ್ ಮಾಡಿತ್ತು.

ಮಹಾರಾಷ್ಟ್ರ ಸಿಎಂರವರ ಈ ಪ್ರಚೋದನಾಕಾರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, “ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ. ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಬಿಎಸ್‌ವೈ ಆಗ್ರಹಿಸಿದ್ದಾರೆ.

ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ “ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು‌ ಬರಬೇಡಿ. ಬೆಳಗಾವಿ ನಮ್ಮದು” ಎಂದು ಕಿಡಿಕಾರಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರೆ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ. ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿ “ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ನೆಟ್ಟಿದ್ದ ಕನ್ನಡ ಧ್ವಜ ತೆರವು ಮಾಡಬೇಕು ಎಂದು ವಾದಿಸಿದ್ದ ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ್ ಠಾಕ್ರೆ ಇಂಥ ಮಾತುಗಳನ್ನು ಆಡಲು ಸಾಧ್ಯವಾಗುತ್ತಿರಲಿಲ್ಲ. ಎಂಇಎಸ್‌ ಅನ್ನು ಪರೋಕ್ಷವಾಗಿ ಬೆಂಬಲಿಸುತ್ತಿರುವವರಿಂದ ಪ್ರೇರಣೆ ಪಡೆದೇ ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಿದ್ದಾರೆ ಎಂದು ಎಚ್‌ಡಿಕೆ ದೂರಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ನಾರಾಯಣಾಗೌಡರವರು ಟ್ವೀಟ್ ಮಾಡಿ “ಉದ್ಧವ್ ಠಾಕ್ರೆ ಹೇಳಿಕೆ ಕುಚೇಷ್ಟೆ, ತಲೆಹರಟೆ ಮಾತು. ಶಿವಸೇನೆಯವರಿಗೆ ಮೂರು ತಿಂಗಳಿಗೊಮ್ಮೆ ಗಡಿ ತಂಟೆ ಕೆದಕದಿದ್ದರೆ ತಿಂದಿದ್ದು ಅರಗುವುದಿಲ್ಲ. ಹೀಗೆ ಮಾತಾಡುವುದರಿಂದ ಉದ್ಧವ್ ಠಾಕ್ರೆ ಪದೇಪದೇ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ ರಾಜ್ಯಗಳು ಪ್ರಗತಿಪರ ರಾಜ್ಯಗಳಾಗಿದ್ದು, ಹೆಚ್ಚು ತೆರಿಗೆ ಸಂಗ್ರಹಿಸಿಕೊಡುತ್ತವೆ. ಆದರೂ ಈ ರಾಜ್ಯಗಳ ಮೇಲೆ ಹಿಂದಿ ಸಾಮ್ರಾಜ್ಯಶಾಹಿ ದಬ್ಬಾಳಿಕೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ನಡೆಸಬೇಕಿತ್ತು. ಉದ್ಧವ್ ಠಾಕ್ರೆಗೆ ಈ ಸಾಮಾನ್ಯ ಜ್ಞಾನ ಇಲ್ಲದಿರುವುದು ವಿಷಾಧನೀಯ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಅಕ್ರಮಿತ ಪ್ರದೇಶ ಎಂಬ ಉದ್ಧವ್ ಹೇಳಿಕೆಯೇ ಅಸಂಬದ್ಧ. ಕರ್ನಾಟಕ ಯಾವ ಪ್ರದೇಶವನ್ನು ಅತಿಕ್ರಮಿಸಿಕೊಂಡಿಲ್ಲ. 1956ರ ರಾಜ್ಯ ಪುನರ್ವಿಂಗಡನೆ ಸಂದರ್ಭದಲ್ಲಿ ಬೆಳಗಾವಿ ನ್ಯಾಯಬದ್ಧವಾಗಿಯೇ ಅಂದಿನ ಮೈಸೂರು ಸಂಸ್ಥಾನದ ಭಾಗವಾಗಿದೆ. ಮಹಾಜನ್ ಆಯೋಗದ ವರದಿಯೂ ಅದನ್ನು ಸ್ಪಷ್ಟಪಡಿಸಿದೆ. ಹೀಗಿರುವಾಗ ಮಹಾರಾಷ್ಟ್ರದ ಕೀಟಲೆಗೆ ಅರ್ಥವಿದೆಯೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಬೆಳಗಾವಿ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ ಕೆರಳಿಸುವ ಯತ್ನ ಮಾಡುವುದನ್ನು ನಿಲ್ಲಿಸಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...