Homeಮುಖಪುಟಕರ್ನಾಟಕ ಆಕ್ರಮಿತ ಪ್ರದೇಶ ಹೇಳಿಕೆ: ಉದ್ಧವ್ ಠಾಕ್ರೆ ವಿರುದ್ಧ ಒಕ್ಕೊರಲ ಆಕ್ರೋಶ

ಕರ್ನಾಟಕ ಆಕ್ರಮಿತ ಪ್ರದೇಶ ಹೇಳಿಕೆ: ಉದ್ಧವ್ ಠಾಕ್ರೆ ವಿರುದ್ಧ ಒಕ್ಕೊರಲ ಆಕ್ರೋಶ

ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆಯನ್ನು ಸಾವಿರಾರು ಕನ್ನಡಿಗರು ಸೇರಿದಂತೆ ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳು ಪಕ್ಷಬೇಧ ಮರೆತು ಖಂಡಿಸಿವೆ. ಬೆಳಗಾವಿ ನಮ್ಮದು ಎಂದು ಘೋಷಿಸಿವೆ.

- Advertisement -
- Advertisement -

ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಗೆ ಕರ್ನಾಟಕದಾದ್ಯಂತ ಒಕ್ಕೊರಲಿನ ವಿರೋಧ ವ್ಯಕ್ತವಾಗಿದೆ. ಆಡಳಿತ ಪಕ್ಷ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಮತ್ತು ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಗಡಿ ಹೋರಾಟದಲ್ಲಿ ಮಡಿದವರ ನೆನಪಿನಲ್ಲಿ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯಲ್ಲಿ ಭಾಗವಹಿಸಿದ ಉದ್ಧವ್ ಠಾಕ್ರೆ ಮೇಲಿನ ಹೇಳಿಕೆ ನೀಡಿದ್ದರು. “ಮರಾಠಿ ಮಾತನಾಡುವ ಮತ್ತು ಮರಾಠಿ ಸಾಂಸ್ಕೃತಿಕ ವಾತವಾರಣವಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆಗೊಳಿಸುವುದೇ ಈ ಗಡಿ ಹೋರಾಟದಲ್ಲಿ ಹುತಾತ್ಮರಾದವರಿಗೆ ನಾವು ಸಲ್ಲಿಸುವ ನಿಜವಾದ ಗೌರವ. ನಾವು ಒಂದಾಗಿದ್ದೇವೆ ಮತ್ತು ಅದಕ್ಕೆ ಬದ್ಧರಾಗಿದ್ದೇವೆ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿಯು ಟ್ವೀಟ್ ಮಾಡಿತ್ತು.

ಮಹಾರಾಷ್ಟ್ರ ಸಿಎಂರವರ ಈ ಪ್ರಚೋದನಾಕಾರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, “ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ. ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಬಿಎಸ್‌ವೈ ಆಗ್ರಹಿಸಿದ್ದಾರೆ.

ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ “ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು‌ ಬರಬೇಡಿ. ಬೆಳಗಾವಿ ನಮ್ಮದು” ಎಂದು ಕಿಡಿಕಾರಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರೆ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ. ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿ “ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ನೆಟ್ಟಿದ್ದ ಕನ್ನಡ ಧ್ವಜ ತೆರವು ಮಾಡಬೇಕು ಎಂದು ವಾದಿಸಿದ್ದ ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ್ ಠಾಕ್ರೆ ಇಂಥ ಮಾತುಗಳನ್ನು ಆಡಲು ಸಾಧ್ಯವಾಗುತ್ತಿರಲಿಲ್ಲ. ಎಂಇಎಸ್‌ ಅನ್ನು ಪರೋಕ್ಷವಾಗಿ ಬೆಂಬಲಿಸುತ್ತಿರುವವರಿಂದ ಪ್ರೇರಣೆ ಪಡೆದೇ ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಿದ್ದಾರೆ ಎಂದು ಎಚ್‌ಡಿಕೆ ದೂರಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ನಾರಾಯಣಾಗೌಡರವರು ಟ್ವೀಟ್ ಮಾಡಿ “ಉದ್ಧವ್ ಠಾಕ್ರೆ ಹೇಳಿಕೆ ಕುಚೇಷ್ಟೆ, ತಲೆಹರಟೆ ಮಾತು. ಶಿವಸೇನೆಯವರಿಗೆ ಮೂರು ತಿಂಗಳಿಗೊಮ್ಮೆ ಗಡಿ ತಂಟೆ ಕೆದಕದಿದ್ದರೆ ತಿಂದಿದ್ದು ಅರಗುವುದಿಲ್ಲ. ಹೀಗೆ ಮಾತಾಡುವುದರಿಂದ ಉದ್ಧವ್ ಠಾಕ್ರೆ ಪದೇಪದೇ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ ರಾಜ್ಯಗಳು ಪ್ರಗತಿಪರ ರಾಜ್ಯಗಳಾಗಿದ್ದು, ಹೆಚ್ಚು ತೆರಿಗೆ ಸಂಗ್ರಹಿಸಿಕೊಡುತ್ತವೆ. ಆದರೂ ಈ ರಾಜ್ಯಗಳ ಮೇಲೆ ಹಿಂದಿ ಸಾಮ್ರಾಜ್ಯಶಾಹಿ ದಬ್ಬಾಳಿಕೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ನಡೆಸಬೇಕಿತ್ತು. ಉದ್ಧವ್ ಠಾಕ್ರೆಗೆ ಈ ಸಾಮಾನ್ಯ ಜ್ಞಾನ ಇಲ್ಲದಿರುವುದು ವಿಷಾಧನೀಯ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಅಕ್ರಮಿತ ಪ್ರದೇಶ ಎಂಬ ಉದ್ಧವ್ ಹೇಳಿಕೆಯೇ ಅಸಂಬದ್ಧ. ಕರ್ನಾಟಕ ಯಾವ ಪ್ರದೇಶವನ್ನು ಅತಿಕ್ರಮಿಸಿಕೊಂಡಿಲ್ಲ. 1956ರ ರಾಜ್ಯ ಪುನರ್ವಿಂಗಡನೆ ಸಂದರ್ಭದಲ್ಲಿ ಬೆಳಗಾವಿ ನ್ಯಾಯಬದ್ಧವಾಗಿಯೇ ಅಂದಿನ ಮೈಸೂರು ಸಂಸ್ಥಾನದ ಭಾಗವಾಗಿದೆ. ಮಹಾಜನ್ ಆಯೋಗದ ವರದಿಯೂ ಅದನ್ನು ಸ್ಪಷ್ಟಪಡಿಸಿದೆ. ಹೀಗಿರುವಾಗ ಮಹಾರಾಷ್ಟ್ರದ ಕೀಟಲೆಗೆ ಅರ್ಥವಿದೆಯೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಬೆಳಗಾವಿ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ ಕೆರಳಿಸುವ ಯತ್ನ ಮಾಡುವುದನ್ನು ನಿಲ್ಲಿಸಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...