Homeಕರ್ನಾಟಕರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ: ಊಹಾಪೋಹಗಳಿಗೆ ಕಿವಿಕೊಡಬಾರದು-ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ: ಊಹಾಪೋಹಗಳಿಗೆ ಕಿವಿಕೊಡಬಾರದು-ಸಿಎಂ ಬಸವರಾಜ ಬೊಮ್ಮಾಯಿ

- Advertisement -
- Advertisement -

ದೇಶದಲ್ಲಿ ಓಮಿಕ್ರಾನ್ ಬಗ್ಗೆ ಆತಂಕ ಹೆಚ್ಚಾಗಿದ್ದು, ಈ ನಡುವೆಯೇ ರಾಜ್ಯದಲ್ಲಿಯೂ ಲಾಕ್‌ಡೌನ್‌ ಜಾರಿಯಾಗುವ ಬಗ್ಗೆ ವದಂತಿ ಹಬ್ಬಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಹೇಳಿದ್ದಾರೆ.

”ಸದ್ಯಕ್ಕೆ ರಾಜ್ಯದಲ್ಲಿ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ನಡೆಯಬೇಕು. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ” ಎಂದು ಸಿಎಂ ತಿಳಿಸಿದ್ದಾರೆ.

’ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಬಗ್ಗೆ ನಿಗಾ ಇರಿಸಲಾಗಿದೆ. ಈಗಿರುವ ಡೆಲ್ಟಾ ತಳಿಯಿಂದ ಅಲ್ಲಲ್ಲಿ ಕ್ಲಸ್ಟರ್ ಆಗಿದೆ. ಎರಡು ಹಂತಗಳಲ್ಲಿ ಇದನ್ನು ನಿಭಾಯಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ವೈಜ್ಞಾನಿಕವಾಗಿ ಕೈಗೊಳ್ಳಬೇಕಿರುವ ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ತನಿಖೆಗೆ ಎನ್.ಸಿ.ಬಿ.ಎಸ್‌ಗೂ ಮಾದರಿಗಳನ್ನು ಕಳುಹಿಸಲಾಗಿದೆ. ವಿದೇಶಗಳಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇರಿಸಿದ್ದು, ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆಗಳನ್ನು ಮಾಡಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?


ಇನ್ನು ಕ್ಲಸ್ಟರ್‌ಗಳ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅಲ್ಲಿ ಪಾಲ್ಗೊಂಡಿದ್ದವರ ಪರೀಕ್ಷೆ, 7 ದಿನಗಳ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸುಮಾರು 4 ಸಾವಿರ ಜನರ ಪರೀಕ್ಷೆಯನ್ನು ಮಾಡಲಾಗಿದೆ. ಅದೇ ರೀತಿ ಮೈಸೂರು, ಹಾಸನ ಮತ್ತು ಬೆಂಗಳೂರಿನ ಆನೇಕಲ್‌ನಲ್ಲಿನ ಕಸ್ಟರ್‌ಗಳಲ್ಲಿ ತಪಾಸಣೆಯನ್ನು ತೀವ್ರ ಗೊಳಿಸಲಾಗಿದೆ. ಸಾಮಾನ್ಯ ಪರೀಕ್ಷೆಗಳನ್ನು ಹೆಚ್ಚಿಸಲೂ ಸಹ ಸೂಚನೆ ನೀಡಲಾಗಿದೆ ಎಂದಿದ್ದಾರೆ.

—————

ಇದನ್ನೂ ಓದಿ: ಬೆಂಗಳೂರಿನ ESI ಆಸ್ಪತ್ರೆ ನಿರ್ಲಕ್ಷ್ಯ: ಒಂದೂವರೆ ವರ್ಷದ ಬಳಿಕ ಶವಾಗಾರದಿಂದ ಕೊರೊನಾ ಪೀಡಿತರ ಮೃತದೇಹ ಹೊರ ತೆಗೆದ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...