Homeಕರ್ನಾಟಕಬಿಎಸ್‌ಎನ್‌ಎಲ್‌ನಿಂದ ಜಿಯೊಗೆ 38,000 ಸಿಮ್‌ ಪೋರ್ಟ್‌ ಮಾಡಲು ಕರ್ನಾಟಕ ಪೊಲೀಸ್ ನಿರ್ಧಾರ

ಬಿಎಸ್‌ಎನ್‌ಎಲ್‌ನಿಂದ ಜಿಯೊಗೆ 38,000 ಸಿಮ್‌ ಪೋರ್ಟ್‌ ಮಾಡಲು ಕರ್ನಾಟಕ ಪೊಲೀಸ್ ನಿರ್ಧಾರ

- Advertisement -
- Advertisement -

ಕರ್ನಾಟಕ ರಾಜ್ಯ ಪೊಲೀಸರು ತಾವು ಬಳಸುತ್ತಿರುವ ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌)ನ ತಮ್ಮ ಎಲ್ಲಾ 38,000 ಅಧಿಕೃತ ಮೊಬೈಲ್ ಫೋನ್ ಸಿಮ್ ಕಾರ್ಡ್‌ಗಳನ್ನು ರಿಲಯನ್ಸ್ ಜಿಯೋಗೆ ಪೋರ್ಟ್ ಮಾಡಲು ನಿರ್ಧರಿಸಿದ್ದಾರೆ. ಈ ನಿರ್ಧಾರವನ್ನು ಬಿಎಸ್‌ಎನ್‌ಎಲ್‌ ನೌಕರರ ಒಕ್ಕೂಟ ಸೇರಿದಂತೆ ಹಲವರು ವಿರೋಧಿಸಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

‘ಬಿಎಸ್‌ಎನ್‌ಎಲ್‌ನಿಂದ ಜಿಯೊಗೆ ಪೋರ್ಟ್ ಆಗುವ ಸಂಬಂಧ ಸರ್ಕಾರದ ಅನುಮೋದನೆಯ ಬಗ್ಗೆ’ ಮತ್ತು ‘ಪೋರ್ಟ್ ಮಾಡುವ ಪ್ರಕ್ರಿಯೆಯು ವಿವಿಧ ಹಂತಗಳಲ್ಲಿ ನಡೆಯುತ್ತದೆ’ ಎಂಬುದಾಗಿ ಎಲ್ಲಾ ಘಟಕಗಳ ಮುಖ್ಯಸ್ಥರಿಗೆ ಲಾಜಿಸ್ಟಿಕ್ಸ್‌ ಅಂಡ್ ಮೊಡರೇಷನ್‌‌ನ ಹೆಚ್ಚುವರಿ ಮಹಾನಿರ್ದೇಶಕರು ಹೊರಡಿಸಿರುವ ಸುತ್ತೋಲೆಯನ್ನು ‘ದಿ ಹಿಂದೂ’ ವರದಿ ಉಲ್ಲೇಖಿಸಿದೆ. ಒಟ್ಟು 38,347 ಸಂಪರ್ಕ ಸಂಖ್ಯೆಗಳಿವೆ ಎಂದು ವರದಿ ತಿಳಿಸಿದೆ.

“ಪೊಲೀಸ್ ವ್ಯವಸ್ಥೆಯಂತಹ ತುರ್ತು ಸೇವೆಗೆ ನೆಟ್‌ವರ್ಕ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಲಭ್ಯವಿರುವ ನೆಟ್‌ವರ್ಕ್‌ನ ದಕ್ಷತೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಂಪೂರ್ಣವಾಗಿ ವಾಣಿಜ್ಯಿಕ ನಿರ್ಧಾರವಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಈ 38,000 ಸಂಪರ್ಕ ಸಂಖ್ಯೆಗಳಲ್ಲಿ ಹೆಚ್ಚಿನವು ದೂರದ ಗ್ರಾಮೀಣ ಪ್ರದೇಶಗಳಲ್ಲಿವೆ. ಉತ್ತಮ ನೆಟ್‌ವರ್ಕ್ ವ್ಯಾಪ್ತಿಯ ಕೊರತೆಯ ಬಗ್ಗೆ ಅಲ್ಲಿನ ಅಧಿಕಾರಿಗಳು ದೂರಿದ್ದಾರೆ. ಈ ದಿನಮಾನಗಳಲ್ಲಿ ಪೊಲೀಸರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಲೊಕೇಷನ್‌, ಫೋಟೋಗಳು ಮತ್ತು ವೀಡಿಯೊಗಳನ್ನು ಒಳಗೊಂಡಂತೆ ಅನೇಕ ಡೇಟಾಗಳನ್ನು ವರ್ಗಾಯಿಸಬೇಕಾಗುತ್ತದೆ. ಈಗ ಬಳಸಲಾಗುತ್ತಿರುವ ಸೇವಾ ಪೂರೈಕೆದಾರರ ಡೇಟಾ ಸ್ಪೀಟ್‌ ಶೋಚನೀಯವಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಖಾಸಗಿ ಸಂಸ್ಥೆಗಳು 5G ಸೇವೆಗಳನ್ನು ನೀಡುತ್ತಿದ್ದರೆ, ಬಿಎಸ್‌ಎನ್‌ಎಲ್‌ ಇನ್ನೂ 4G ಸೇವೆಗಳನ್ನೂ ನೀಡುತ್ತಿಲ್ಲ. ನಮ್ಮಂಥವರ ತುರ್ತು ಸೇವೆಗೆ ಇದು ತೊಂದರೆಯುಂಟುಮಾಡಿದೆ. ವಾಣಿಜ್ಯ ಮೌಲ್ಯಮಾಪನದ ನಂತರ, ‘ಕರ್ನಾಟಕ ಟ್ರಾನ್ಸ್‌ಪರೆನ್ಸಿ ಇನ್‌ ಪಬ್ಲಿಕ್‌ ಪ್ರೊಕ್ಯೂರ್‌ಮೆಂಟ್ ಆಕ್ಟ್‌’ 1999ರ ಪ್ರಕಾರ ರಿಲಯನ್ಸ್ ಜಿಯೋವನ್ನು ಪರ್ಯಾಯ ಸೇವಾ ಪೂರೈಕೆದಾರರಾಗಿ ಆಯ್ಕೆ ಮಾಡಲಾಗಿದೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಬಿಎಸ್‌ಎನ್‌ಎಲ್‌ನ ಜಾಗದಲ್ಲಿ ರಿಲಯನ್ಸ್‌ ಜಿಯೋವನ್ನು ಉತ್ತೇಜಿಸುವ ಇತ್ತೀಚಿನ ಉದಾಹರಣೆ ಇದಾಗಿದೆ ಎಂದು ಬಿಎಸ್‌ಎನ್‌ಎಲ್‌ ನೌಕರರ ಸಂಘ ಟೀಕಿಸಿದೆ.

“ಈ ಹಾದಿ ತುಳಿದವರಲ್ಲಿ ಕರ್ನಾಟಕ ಪೊಲೀಸರೇ ಮೊದಲಿಗರೇನಲ್ಲ. ಭಾರತೀಯ ರೈಲ್ವೇ ಮತ್ತು ತೆಲಂಗಾಣ ಪೊಲೀಸ್‌ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ರಿಲಯನ್ಸ್ ಜಿಯೋಗೆ ಪೋರ್ಟ್‌ ಆಗಲು ನಿರ್ದೇಶನ ನೀಡಲಾಗಿದೆ. ಇದೀಗ ಕರ್ನಾಟಕದ ಸರದಿ ಬಂದಿದೆ” ಎಂದು ಬಿಎಸ್‌ಎನ್‌ಎಲ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗುಂಡಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ವಲಯದ ಉದ್ಯಮವನ್ನು (ಪಿಎಸ್‌ಯು) ಮುಚ್ಚಿ, ಖಾಸಗಿ ವಲಯವನ್ನು ಉತ್ತೇಜಿಸುವುದು ಸರ್ಕಾರದ ಉದ್ದೇಶ. ಹೀಗಾಗಿ ಸಾರ್ವಜನಿಕ ಉದ್ದಿಮೆಗಳು ಸರ್ಕಾರದ ನಿರಾಸಕ್ತಿಯಿಂದ ಬಲಿಪಶುಗಳಾಗಿವೆ ಎಂದು ಅವರು ಆರೋಪಿಸಿದ್ದಾರೆ.

“ಸರ್ಕಾರವು ಇತ್ತೀಚೆಗೆ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತಂದಿತು, ಅದರ ಅಡಿಯಲ್ಲಿ ಸುಮಾರು 80,000 ಉದ್ಯೋಗಿಗಳು ನಿವೃತ್ತರಾದರು. ಇದರಿಂದಾಗಿ ಬಿಎಸ್‌ಎನ್‌ಎಲ್‌ನಲ್ಲಿ ಮಾನವ ಸಂಪನ್ಮೂಲದ ಅಭಾವ ಉಂಟಾಯಿತು. ಸಂಸ್ಥೆ ನಲುಗಿತು. ಬಿಎಸ್‌ಎನ್‌ಎಲ್‌ನ ಮೂಲಸೌಕರ್ಯಗಳನ್ನು ಹೆಚ್ಚಿಸಲು ಸರ್ಕಾರ ಹೂಡಿಕೆ ಮಾಡಿಲ್ಲ. 5G ತರಂಗಾಂತರಗಳನ್ನು ಖಾಸಗಿ ಕಂಪನಿಗಳಿಗೆ ಹರಾಜು ಹಾಕುತ್ತಿರುವಾಗ ಬಿಎಸ್‌ಎನ್‌ಎಲ್‌ಗೆ 4G ಸೇವೆಗಳನ್ನು ಒದಗಿಸಲೂ ಸರ್ಕಾರ ಅನುಮತಿ ನೀಡಲಿಲ್ಲ. ಇದು ಉದ್ದೇಶಪೂರ್ವಕ ಕೃತ್ಯ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. So, now no secret would be kept in secret, so total confidentiality of the individual and country has gone in to the hand of private people. It may go to any ones hand and the country is in threat at last.
    Country only socialistic in words
    Controlled by ……………

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...