Homeಕರ್ನಾಟಕಬಿಎಸ್‌ಎನ್‌ಎಲ್‌ನಿಂದ ಜಿಯೊಗೆ 38,000 ಸಿಮ್‌ ಪೋರ್ಟ್‌ ಮಾಡಲು ಕರ್ನಾಟಕ ಪೊಲೀಸ್ ನಿರ್ಧಾರ

ಬಿಎಸ್‌ಎನ್‌ಎಲ್‌ನಿಂದ ಜಿಯೊಗೆ 38,000 ಸಿಮ್‌ ಪೋರ್ಟ್‌ ಮಾಡಲು ಕರ್ನಾಟಕ ಪೊಲೀಸ್ ನಿರ್ಧಾರ

- Advertisement -
- Advertisement -

ಕರ್ನಾಟಕ ರಾಜ್ಯ ಪೊಲೀಸರು ತಾವು ಬಳಸುತ್ತಿರುವ ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌)ನ ತಮ್ಮ ಎಲ್ಲಾ 38,000 ಅಧಿಕೃತ ಮೊಬೈಲ್ ಫೋನ್ ಸಿಮ್ ಕಾರ್ಡ್‌ಗಳನ್ನು ರಿಲಯನ್ಸ್ ಜಿಯೋಗೆ ಪೋರ್ಟ್ ಮಾಡಲು ನಿರ್ಧರಿಸಿದ್ದಾರೆ. ಈ ನಿರ್ಧಾರವನ್ನು ಬಿಎಸ್‌ಎನ್‌ಎಲ್‌ ನೌಕರರ ಒಕ್ಕೂಟ ಸೇರಿದಂತೆ ಹಲವರು ವಿರೋಧಿಸಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

‘ಬಿಎಸ್‌ಎನ್‌ಎಲ್‌ನಿಂದ ಜಿಯೊಗೆ ಪೋರ್ಟ್ ಆಗುವ ಸಂಬಂಧ ಸರ್ಕಾರದ ಅನುಮೋದನೆಯ ಬಗ್ಗೆ’ ಮತ್ತು ‘ಪೋರ್ಟ್ ಮಾಡುವ ಪ್ರಕ್ರಿಯೆಯು ವಿವಿಧ ಹಂತಗಳಲ್ಲಿ ನಡೆಯುತ್ತದೆ’ ಎಂಬುದಾಗಿ ಎಲ್ಲಾ ಘಟಕಗಳ ಮುಖ್ಯಸ್ಥರಿಗೆ ಲಾಜಿಸ್ಟಿಕ್ಸ್‌ ಅಂಡ್ ಮೊಡರೇಷನ್‌‌ನ ಹೆಚ್ಚುವರಿ ಮಹಾನಿರ್ದೇಶಕರು ಹೊರಡಿಸಿರುವ ಸುತ್ತೋಲೆಯನ್ನು ‘ದಿ ಹಿಂದೂ’ ವರದಿ ಉಲ್ಲೇಖಿಸಿದೆ. ಒಟ್ಟು 38,347 ಸಂಪರ್ಕ ಸಂಖ್ಯೆಗಳಿವೆ ಎಂದು ವರದಿ ತಿಳಿಸಿದೆ.

“ಪೊಲೀಸ್ ವ್ಯವಸ್ಥೆಯಂತಹ ತುರ್ತು ಸೇವೆಗೆ ನೆಟ್‌ವರ್ಕ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಲಭ್ಯವಿರುವ ನೆಟ್‌ವರ್ಕ್‌ನ ದಕ್ಷತೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಂಪೂರ್ಣವಾಗಿ ವಾಣಿಜ್ಯಿಕ ನಿರ್ಧಾರವಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಈ 38,000 ಸಂಪರ್ಕ ಸಂಖ್ಯೆಗಳಲ್ಲಿ ಹೆಚ್ಚಿನವು ದೂರದ ಗ್ರಾಮೀಣ ಪ್ರದೇಶಗಳಲ್ಲಿವೆ. ಉತ್ತಮ ನೆಟ್‌ವರ್ಕ್ ವ್ಯಾಪ್ತಿಯ ಕೊರತೆಯ ಬಗ್ಗೆ ಅಲ್ಲಿನ ಅಧಿಕಾರಿಗಳು ದೂರಿದ್ದಾರೆ. ಈ ದಿನಮಾನಗಳಲ್ಲಿ ಪೊಲೀಸರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಲೊಕೇಷನ್‌, ಫೋಟೋಗಳು ಮತ್ತು ವೀಡಿಯೊಗಳನ್ನು ಒಳಗೊಂಡಂತೆ ಅನೇಕ ಡೇಟಾಗಳನ್ನು ವರ್ಗಾಯಿಸಬೇಕಾಗುತ್ತದೆ. ಈಗ ಬಳಸಲಾಗುತ್ತಿರುವ ಸೇವಾ ಪೂರೈಕೆದಾರರ ಡೇಟಾ ಸ್ಪೀಟ್‌ ಶೋಚನೀಯವಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಖಾಸಗಿ ಸಂಸ್ಥೆಗಳು 5G ಸೇವೆಗಳನ್ನು ನೀಡುತ್ತಿದ್ದರೆ, ಬಿಎಸ್‌ಎನ್‌ಎಲ್‌ ಇನ್ನೂ 4G ಸೇವೆಗಳನ್ನೂ ನೀಡುತ್ತಿಲ್ಲ. ನಮ್ಮಂಥವರ ತುರ್ತು ಸೇವೆಗೆ ಇದು ತೊಂದರೆಯುಂಟುಮಾಡಿದೆ. ವಾಣಿಜ್ಯ ಮೌಲ್ಯಮಾಪನದ ನಂತರ, ‘ಕರ್ನಾಟಕ ಟ್ರಾನ್ಸ್‌ಪರೆನ್ಸಿ ಇನ್‌ ಪಬ್ಲಿಕ್‌ ಪ್ರೊಕ್ಯೂರ್‌ಮೆಂಟ್ ಆಕ್ಟ್‌’ 1999ರ ಪ್ರಕಾರ ರಿಲಯನ್ಸ್ ಜಿಯೋವನ್ನು ಪರ್ಯಾಯ ಸೇವಾ ಪೂರೈಕೆದಾರರಾಗಿ ಆಯ್ಕೆ ಮಾಡಲಾಗಿದೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಬಿಎಸ್‌ಎನ್‌ಎಲ್‌ನ ಜಾಗದಲ್ಲಿ ರಿಲಯನ್ಸ್‌ ಜಿಯೋವನ್ನು ಉತ್ತೇಜಿಸುವ ಇತ್ತೀಚಿನ ಉದಾಹರಣೆ ಇದಾಗಿದೆ ಎಂದು ಬಿಎಸ್‌ಎನ್‌ಎಲ್‌ ನೌಕರರ ಸಂಘ ಟೀಕಿಸಿದೆ.

“ಈ ಹಾದಿ ತುಳಿದವರಲ್ಲಿ ಕರ್ನಾಟಕ ಪೊಲೀಸರೇ ಮೊದಲಿಗರೇನಲ್ಲ. ಭಾರತೀಯ ರೈಲ್ವೇ ಮತ್ತು ತೆಲಂಗಾಣ ಪೊಲೀಸ್‌ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ರಿಲಯನ್ಸ್ ಜಿಯೋಗೆ ಪೋರ್ಟ್‌ ಆಗಲು ನಿರ್ದೇಶನ ನೀಡಲಾಗಿದೆ. ಇದೀಗ ಕರ್ನಾಟಕದ ಸರದಿ ಬಂದಿದೆ” ಎಂದು ಬಿಎಸ್‌ಎನ್‌ಎಲ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗುಂಡಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ವಲಯದ ಉದ್ಯಮವನ್ನು (ಪಿಎಸ್‌ಯು) ಮುಚ್ಚಿ, ಖಾಸಗಿ ವಲಯವನ್ನು ಉತ್ತೇಜಿಸುವುದು ಸರ್ಕಾರದ ಉದ್ದೇಶ. ಹೀಗಾಗಿ ಸಾರ್ವಜನಿಕ ಉದ್ದಿಮೆಗಳು ಸರ್ಕಾರದ ನಿರಾಸಕ್ತಿಯಿಂದ ಬಲಿಪಶುಗಳಾಗಿವೆ ಎಂದು ಅವರು ಆರೋಪಿಸಿದ್ದಾರೆ.

“ಸರ್ಕಾರವು ಇತ್ತೀಚೆಗೆ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತಂದಿತು, ಅದರ ಅಡಿಯಲ್ಲಿ ಸುಮಾರು 80,000 ಉದ್ಯೋಗಿಗಳು ನಿವೃತ್ತರಾದರು. ಇದರಿಂದಾಗಿ ಬಿಎಸ್‌ಎನ್‌ಎಲ್‌ನಲ್ಲಿ ಮಾನವ ಸಂಪನ್ಮೂಲದ ಅಭಾವ ಉಂಟಾಯಿತು. ಸಂಸ್ಥೆ ನಲುಗಿತು. ಬಿಎಸ್‌ಎನ್‌ಎಲ್‌ನ ಮೂಲಸೌಕರ್ಯಗಳನ್ನು ಹೆಚ್ಚಿಸಲು ಸರ್ಕಾರ ಹೂಡಿಕೆ ಮಾಡಿಲ್ಲ. 5G ತರಂಗಾಂತರಗಳನ್ನು ಖಾಸಗಿ ಕಂಪನಿಗಳಿಗೆ ಹರಾಜು ಹಾಕುತ್ತಿರುವಾಗ ಬಿಎಸ್‌ಎನ್‌ಎಲ್‌ಗೆ 4G ಸೇವೆಗಳನ್ನು ಒದಗಿಸಲೂ ಸರ್ಕಾರ ಅನುಮತಿ ನೀಡಲಿಲ್ಲ. ಇದು ಉದ್ದೇಶಪೂರ್ವಕ ಕೃತ್ಯ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. So, now no secret would be kept in secret, so total confidentiality of the individual and country has gone in to the hand of private people. It may go to any ones hand and the country is in threat at last.
    Country only socialistic in words
    Controlled by ……………

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...