Homeಕರ್ನಾಟಕಬಿಎಸ್‌ಎನ್‌ಎಲ್‌ನಿಂದ ಜಿಯೊಗೆ 38,000 ಸಿಮ್‌ ಪೋರ್ಟ್‌ ಮಾಡಲು ಕರ್ನಾಟಕ ಪೊಲೀಸ್ ನಿರ್ಧಾರ

ಬಿಎಸ್‌ಎನ್‌ಎಲ್‌ನಿಂದ ಜಿಯೊಗೆ 38,000 ಸಿಮ್‌ ಪೋರ್ಟ್‌ ಮಾಡಲು ಕರ್ನಾಟಕ ಪೊಲೀಸ್ ನಿರ್ಧಾರ

- Advertisement -
- Advertisement -

ಕರ್ನಾಟಕ ರಾಜ್ಯ ಪೊಲೀಸರು ತಾವು ಬಳಸುತ್ತಿರುವ ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌)ನ ತಮ್ಮ ಎಲ್ಲಾ 38,000 ಅಧಿಕೃತ ಮೊಬೈಲ್ ಫೋನ್ ಸಿಮ್ ಕಾರ್ಡ್‌ಗಳನ್ನು ರಿಲಯನ್ಸ್ ಜಿಯೋಗೆ ಪೋರ್ಟ್ ಮಾಡಲು ನಿರ್ಧರಿಸಿದ್ದಾರೆ. ಈ ನಿರ್ಧಾರವನ್ನು ಬಿಎಸ್‌ಎನ್‌ಎಲ್‌ ನೌಕರರ ಒಕ್ಕೂಟ ಸೇರಿದಂತೆ ಹಲವರು ವಿರೋಧಿಸಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

‘ಬಿಎಸ್‌ಎನ್‌ಎಲ್‌ನಿಂದ ಜಿಯೊಗೆ ಪೋರ್ಟ್ ಆಗುವ ಸಂಬಂಧ ಸರ್ಕಾರದ ಅನುಮೋದನೆಯ ಬಗ್ಗೆ’ ಮತ್ತು ‘ಪೋರ್ಟ್ ಮಾಡುವ ಪ್ರಕ್ರಿಯೆಯು ವಿವಿಧ ಹಂತಗಳಲ್ಲಿ ನಡೆಯುತ್ತದೆ’ ಎಂಬುದಾಗಿ ಎಲ್ಲಾ ಘಟಕಗಳ ಮುಖ್ಯಸ್ಥರಿಗೆ ಲಾಜಿಸ್ಟಿಕ್ಸ್‌ ಅಂಡ್ ಮೊಡರೇಷನ್‌‌ನ ಹೆಚ್ಚುವರಿ ಮಹಾನಿರ್ದೇಶಕರು ಹೊರಡಿಸಿರುವ ಸುತ್ತೋಲೆಯನ್ನು ‘ದಿ ಹಿಂದೂ’ ವರದಿ ಉಲ್ಲೇಖಿಸಿದೆ. ಒಟ್ಟು 38,347 ಸಂಪರ್ಕ ಸಂಖ್ಯೆಗಳಿವೆ ಎಂದು ವರದಿ ತಿಳಿಸಿದೆ.

“ಪೊಲೀಸ್ ವ್ಯವಸ್ಥೆಯಂತಹ ತುರ್ತು ಸೇವೆಗೆ ನೆಟ್‌ವರ್ಕ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಲಭ್ಯವಿರುವ ನೆಟ್‌ವರ್ಕ್‌ನ ದಕ್ಷತೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಂಪೂರ್ಣವಾಗಿ ವಾಣಿಜ್ಯಿಕ ನಿರ್ಧಾರವಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಈ 38,000 ಸಂಪರ್ಕ ಸಂಖ್ಯೆಗಳಲ್ಲಿ ಹೆಚ್ಚಿನವು ದೂರದ ಗ್ರಾಮೀಣ ಪ್ರದೇಶಗಳಲ್ಲಿವೆ. ಉತ್ತಮ ನೆಟ್‌ವರ್ಕ್ ವ್ಯಾಪ್ತಿಯ ಕೊರತೆಯ ಬಗ್ಗೆ ಅಲ್ಲಿನ ಅಧಿಕಾರಿಗಳು ದೂರಿದ್ದಾರೆ. ಈ ದಿನಮಾನಗಳಲ್ಲಿ ಪೊಲೀಸರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಲೊಕೇಷನ್‌, ಫೋಟೋಗಳು ಮತ್ತು ವೀಡಿಯೊಗಳನ್ನು ಒಳಗೊಂಡಂತೆ ಅನೇಕ ಡೇಟಾಗಳನ್ನು ವರ್ಗಾಯಿಸಬೇಕಾಗುತ್ತದೆ. ಈಗ ಬಳಸಲಾಗುತ್ತಿರುವ ಸೇವಾ ಪೂರೈಕೆದಾರರ ಡೇಟಾ ಸ್ಪೀಟ್‌ ಶೋಚನೀಯವಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಖಾಸಗಿ ಸಂಸ್ಥೆಗಳು 5G ಸೇವೆಗಳನ್ನು ನೀಡುತ್ತಿದ್ದರೆ, ಬಿಎಸ್‌ಎನ್‌ಎಲ್‌ ಇನ್ನೂ 4G ಸೇವೆಗಳನ್ನೂ ನೀಡುತ್ತಿಲ್ಲ. ನಮ್ಮಂಥವರ ತುರ್ತು ಸೇವೆಗೆ ಇದು ತೊಂದರೆಯುಂಟುಮಾಡಿದೆ. ವಾಣಿಜ್ಯ ಮೌಲ್ಯಮಾಪನದ ನಂತರ, ‘ಕರ್ನಾಟಕ ಟ್ರಾನ್ಸ್‌ಪರೆನ್ಸಿ ಇನ್‌ ಪಬ್ಲಿಕ್‌ ಪ್ರೊಕ್ಯೂರ್‌ಮೆಂಟ್ ಆಕ್ಟ್‌’ 1999ರ ಪ್ರಕಾರ ರಿಲಯನ್ಸ್ ಜಿಯೋವನ್ನು ಪರ್ಯಾಯ ಸೇವಾ ಪೂರೈಕೆದಾರರಾಗಿ ಆಯ್ಕೆ ಮಾಡಲಾಗಿದೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಬಿಎಸ್‌ಎನ್‌ಎಲ್‌ನ ಜಾಗದಲ್ಲಿ ರಿಲಯನ್ಸ್‌ ಜಿಯೋವನ್ನು ಉತ್ತೇಜಿಸುವ ಇತ್ತೀಚಿನ ಉದಾಹರಣೆ ಇದಾಗಿದೆ ಎಂದು ಬಿಎಸ್‌ಎನ್‌ಎಲ್‌ ನೌಕರರ ಸಂಘ ಟೀಕಿಸಿದೆ.

“ಈ ಹಾದಿ ತುಳಿದವರಲ್ಲಿ ಕರ್ನಾಟಕ ಪೊಲೀಸರೇ ಮೊದಲಿಗರೇನಲ್ಲ. ಭಾರತೀಯ ರೈಲ್ವೇ ಮತ್ತು ತೆಲಂಗಾಣ ಪೊಲೀಸ್‌ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ರಿಲಯನ್ಸ್ ಜಿಯೋಗೆ ಪೋರ್ಟ್‌ ಆಗಲು ನಿರ್ದೇಶನ ನೀಡಲಾಗಿದೆ. ಇದೀಗ ಕರ್ನಾಟಕದ ಸರದಿ ಬಂದಿದೆ” ಎಂದು ಬಿಎಸ್‌ಎನ್‌ಎಲ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗುಂಡಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ವಲಯದ ಉದ್ಯಮವನ್ನು (ಪಿಎಸ್‌ಯು) ಮುಚ್ಚಿ, ಖಾಸಗಿ ವಲಯವನ್ನು ಉತ್ತೇಜಿಸುವುದು ಸರ್ಕಾರದ ಉದ್ದೇಶ. ಹೀಗಾಗಿ ಸಾರ್ವಜನಿಕ ಉದ್ದಿಮೆಗಳು ಸರ್ಕಾರದ ನಿರಾಸಕ್ತಿಯಿಂದ ಬಲಿಪಶುಗಳಾಗಿವೆ ಎಂದು ಅವರು ಆರೋಪಿಸಿದ್ದಾರೆ.

“ಸರ್ಕಾರವು ಇತ್ತೀಚೆಗೆ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತಂದಿತು, ಅದರ ಅಡಿಯಲ್ಲಿ ಸುಮಾರು 80,000 ಉದ್ಯೋಗಿಗಳು ನಿವೃತ್ತರಾದರು. ಇದರಿಂದಾಗಿ ಬಿಎಸ್‌ಎನ್‌ಎಲ್‌ನಲ್ಲಿ ಮಾನವ ಸಂಪನ್ಮೂಲದ ಅಭಾವ ಉಂಟಾಯಿತು. ಸಂಸ್ಥೆ ನಲುಗಿತು. ಬಿಎಸ್‌ಎನ್‌ಎಲ್‌ನ ಮೂಲಸೌಕರ್ಯಗಳನ್ನು ಹೆಚ್ಚಿಸಲು ಸರ್ಕಾರ ಹೂಡಿಕೆ ಮಾಡಿಲ್ಲ. 5G ತರಂಗಾಂತರಗಳನ್ನು ಖಾಸಗಿ ಕಂಪನಿಗಳಿಗೆ ಹರಾಜು ಹಾಕುತ್ತಿರುವಾಗ ಬಿಎಸ್‌ಎನ್‌ಎಲ್‌ಗೆ 4G ಸೇವೆಗಳನ್ನು ಒದಗಿಸಲೂ ಸರ್ಕಾರ ಅನುಮತಿ ನೀಡಲಿಲ್ಲ. ಇದು ಉದ್ದೇಶಪೂರ್ವಕ ಕೃತ್ಯ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. So, now no secret would be kept in secret, so total confidentiality of the individual and country has gone in to the hand of private people. It may go to any ones hand and the country is in threat at last.
    Country only socialistic in words
    Controlled by ……………

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...