Homeಕರ್ನಾಟಕಬಿಎಸ್‌ಎನ್‌ಎಲ್‌ನಿಂದ ಜಿಯೊಗೆ 38,000 ಸಿಮ್‌ ಪೋರ್ಟ್‌ ಮಾಡಲು ಕರ್ನಾಟಕ ಪೊಲೀಸ್ ನಿರ್ಧಾರ

ಬಿಎಸ್‌ಎನ್‌ಎಲ್‌ನಿಂದ ಜಿಯೊಗೆ 38,000 ಸಿಮ್‌ ಪೋರ್ಟ್‌ ಮಾಡಲು ಕರ್ನಾಟಕ ಪೊಲೀಸ್ ನಿರ್ಧಾರ

- Advertisement -
- Advertisement -

ಕರ್ನಾಟಕ ರಾಜ್ಯ ಪೊಲೀಸರು ತಾವು ಬಳಸುತ್ತಿರುವ ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌)ನ ತಮ್ಮ ಎಲ್ಲಾ 38,000 ಅಧಿಕೃತ ಮೊಬೈಲ್ ಫೋನ್ ಸಿಮ್ ಕಾರ್ಡ್‌ಗಳನ್ನು ರಿಲಯನ್ಸ್ ಜಿಯೋಗೆ ಪೋರ್ಟ್ ಮಾಡಲು ನಿರ್ಧರಿಸಿದ್ದಾರೆ. ಈ ನಿರ್ಧಾರವನ್ನು ಬಿಎಸ್‌ಎನ್‌ಎಲ್‌ ನೌಕರರ ಒಕ್ಕೂಟ ಸೇರಿದಂತೆ ಹಲವರು ವಿರೋಧಿಸಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

‘ಬಿಎಸ್‌ಎನ್‌ಎಲ್‌ನಿಂದ ಜಿಯೊಗೆ ಪೋರ್ಟ್ ಆಗುವ ಸಂಬಂಧ ಸರ್ಕಾರದ ಅನುಮೋದನೆಯ ಬಗ್ಗೆ’ ಮತ್ತು ‘ಪೋರ್ಟ್ ಮಾಡುವ ಪ್ರಕ್ರಿಯೆಯು ವಿವಿಧ ಹಂತಗಳಲ್ಲಿ ನಡೆಯುತ್ತದೆ’ ಎಂಬುದಾಗಿ ಎಲ್ಲಾ ಘಟಕಗಳ ಮುಖ್ಯಸ್ಥರಿಗೆ ಲಾಜಿಸ್ಟಿಕ್ಸ್‌ ಅಂಡ್ ಮೊಡರೇಷನ್‌‌ನ ಹೆಚ್ಚುವರಿ ಮಹಾನಿರ್ದೇಶಕರು ಹೊರಡಿಸಿರುವ ಸುತ್ತೋಲೆಯನ್ನು ‘ದಿ ಹಿಂದೂ’ ವರದಿ ಉಲ್ಲೇಖಿಸಿದೆ. ಒಟ್ಟು 38,347 ಸಂಪರ್ಕ ಸಂಖ್ಯೆಗಳಿವೆ ಎಂದು ವರದಿ ತಿಳಿಸಿದೆ.

“ಪೊಲೀಸ್ ವ್ಯವಸ್ಥೆಯಂತಹ ತುರ್ತು ಸೇವೆಗೆ ನೆಟ್‌ವರ್ಕ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಲಭ್ಯವಿರುವ ನೆಟ್‌ವರ್ಕ್‌ನ ದಕ್ಷತೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಂಪೂರ್ಣವಾಗಿ ವಾಣಿಜ್ಯಿಕ ನಿರ್ಧಾರವಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಈ 38,000 ಸಂಪರ್ಕ ಸಂಖ್ಯೆಗಳಲ್ಲಿ ಹೆಚ್ಚಿನವು ದೂರದ ಗ್ರಾಮೀಣ ಪ್ರದೇಶಗಳಲ್ಲಿವೆ. ಉತ್ತಮ ನೆಟ್‌ವರ್ಕ್ ವ್ಯಾಪ್ತಿಯ ಕೊರತೆಯ ಬಗ್ಗೆ ಅಲ್ಲಿನ ಅಧಿಕಾರಿಗಳು ದೂರಿದ್ದಾರೆ. ಈ ದಿನಮಾನಗಳಲ್ಲಿ ಪೊಲೀಸರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಲೊಕೇಷನ್‌, ಫೋಟೋಗಳು ಮತ್ತು ವೀಡಿಯೊಗಳನ್ನು ಒಳಗೊಂಡಂತೆ ಅನೇಕ ಡೇಟಾಗಳನ್ನು ವರ್ಗಾಯಿಸಬೇಕಾಗುತ್ತದೆ. ಈಗ ಬಳಸಲಾಗುತ್ತಿರುವ ಸೇವಾ ಪೂರೈಕೆದಾರರ ಡೇಟಾ ಸ್ಪೀಟ್‌ ಶೋಚನೀಯವಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಖಾಸಗಿ ಸಂಸ್ಥೆಗಳು 5G ಸೇವೆಗಳನ್ನು ನೀಡುತ್ತಿದ್ದರೆ, ಬಿಎಸ್‌ಎನ್‌ಎಲ್‌ ಇನ್ನೂ 4G ಸೇವೆಗಳನ್ನೂ ನೀಡುತ್ತಿಲ್ಲ. ನಮ್ಮಂಥವರ ತುರ್ತು ಸೇವೆಗೆ ಇದು ತೊಂದರೆಯುಂಟುಮಾಡಿದೆ. ವಾಣಿಜ್ಯ ಮೌಲ್ಯಮಾಪನದ ನಂತರ, ‘ಕರ್ನಾಟಕ ಟ್ರಾನ್ಸ್‌ಪರೆನ್ಸಿ ಇನ್‌ ಪಬ್ಲಿಕ್‌ ಪ್ರೊಕ್ಯೂರ್‌ಮೆಂಟ್ ಆಕ್ಟ್‌’ 1999ರ ಪ್ರಕಾರ ರಿಲಯನ್ಸ್ ಜಿಯೋವನ್ನು ಪರ್ಯಾಯ ಸೇವಾ ಪೂರೈಕೆದಾರರಾಗಿ ಆಯ್ಕೆ ಮಾಡಲಾಗಿದೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಬಿಎಸ್‌ಎನ್‌ಎಲ್‌ನ ಜಾಗದಲ್ಲಿ ರಿಲಯನ್ಸ್‌ ಜಿಯೋವನ್ನು ಉತ್ತೇಜಿಸುವ ಇತ್ತೀಚಿನ ಉದಾಹರಣೆ ಇದಾಗಿದೆ ಎಂದು ಬಿಎಸ್‌ಎನ್‌ಎಲ್‌ ನೌಕರರ ಸಂಘ ಟೀಕಿಸಿದೆ.

“ಈ ಹಾದಿ ತುಳಿದವರಲ್ಲಿ ಕರ್ನಾಟಕ ಪೊಲೀಸರೇ ಮೊದಲಿಗರೇನಲ್ಲ. ಭಾರತೀಯ ರೈಲ್ವೇ ಮತ್ತು ತೆಲಂಗಾಣ ಪೊಲೀಸ್‌ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ರಿಲಯನ್ಸ್ ಜಿಯೋಗೆ ಪೋರ್ಟ್‌ ಆಗಲು ನಿರ್ದೇಶನ ನೀಡಲಾಗಿದೆ. ಇದೀಗ ಕರ್ನಾಟಕದ ಸರದಿ ಬಂದಿದೆ” ಎಂದು ಬಿಎಸ್‌ಎನ್‌ಎಲ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗುಂಡಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ವಲಯದ ಉದ್ಯಮವನ್ನು (ಪಿಎಸ್‌ಯು) ಮುಚ್ಚಿ, ಖಾಸಗಿ ವಲಯವನ್ನು ಉತ್ತೇಜಿಸುವುದು ಸರ್ಕಾರದ ಉದ್ದೇಶ. ಹೀಗಾಗಿ ಸಾರ್ವಜನಿಕ ಉದ್ದಿಮೆಗಳು ಸರ್ಕಾರದ ನಿರಾಸಕ್ತಿಯಿಂದ ಬಲಿಪಶುಗಳಾಗಿವೆ ಎಂದು ಅವರು ಆರೋಪಿಸಿದ್ದಾರೆ.

“ಸರ್ಕಾರವು ಇತ್ತೀಚೆಗೆ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತಂದಿತು, ಅದರ ಅಡಿಯಲ್ಲಿ ಸುಮಾರು 80,000 ಉದ್ಯೋಗಿಗಳು ನಿವೃತ್ತರಾದರು. ಇದರಿಂದಾಗಿ ಬಿಎಸ್‌ಎನ್‌ಎಲ್‌ನಲ್ಲಿ ಮಾನವ ಸಂಪನ್ಮೂಲದ ಅಭಾವ ಉಂಟಾಯಿತು. ಸಂಸ್ಥೆ ನಲುಗಿತು. ಬಿಎಸ್‌ಎನ್‌ಎಲ್‌ನ ಮೂಲಸೌಕರ್ಯಗಳನ್ನು ಹೆಚ್ಚಿಸಲು ಸರ್ಕಾರ ಹೂಡಿಕೆ ಮಾಡಿಲ್ಲ. 5G ತರಂಗಾಂತರಗಳನ್ನು ಖಾಸಗಿ ಕಂಪನಿಗಳಿಗೆ ಹರಾಜು ಹಾಕುತ್ತಿರುವಾಗ ಬಿಎಸ್‌ಎನ್‌ಎಲ್‌ಗೆ 4G ಸೇವೆಗಳನ್ನು ಒದಗಿಸಲೂ ಸರ್ಕಾರ ಅನುಮತಿ ನೀಡಲಿಲ್ಲ. ಇದು ಉದ್ದೇಶಪೂರ್ವಕ ಕೃತ್ಯ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. So, now no secret would be kept in secret, so total confidentiality of the individual and country has gone in to the hand of private people. It may go to any ones hand and the country is in threat at last.
    Country only socialistic in words
    Controlled by ……………

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...