Homeಕರ್ನಾಟಕಬಿಎಸ್‌ಎನ್‌ಎಲ್‌ನಿಂದ ಜಿಯೊಗೆ 38,000 ಸಿಮ್‌ ಪೋರ್ಟ್‌ ಮಾಡಲು ಕರ್ನಾಟಕ ಪೊಲೀಸ್ ನಿರ್ಧಾರ

ಬಿಎಸ್‌ಎನ್‌ಎಲ್‌ನಿಂದ ಜಿಯೊಗೆ 38,000 ಸಿಮ್‌ ಪೋರ್ಟ್‌ ಮಾಡಲು ಕರ್ನಾಟಕ ಪೊಲೀಸ್ ನಿರ್ಧಾರ

- Advertisement -
- Advertisement -

ಕರ್ನಾಟಕ ರಾಜ್ಯ ಪೊಲೀಸರು ತಾವು ಬಳಸುತ್ತಿರುವ ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌)ನ ತಮ್ಮ ಎಲ್ಲಾ 38,000 ಅಧಿಕೃತ ಮೊಬೈಲ್ ಫೋನ್ ಸಿಮ್ ಕಾರ್ಡ್‌ಗಳನ್ನು ರಿಲಯನ್ಸ್ ಜಿಯೋಗೆ ಪೋರ್ಟ್ ಮಾಡಲು ನಿರ್ಧರಿಸಿದ್ದಾರೆ. ಈ ನಿರ್ಧಾರವನ್ನು ಬಿಎಸ್‌ಎನ್‌ಎಲ್‌ ನೌಕರರ ಒಕ್ಕೂಟ ಸೇರಿದಂತೆ ಹಲವರು ವಿರೋಧಿಸಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

‘ಬಿಎಸ್‌ಎನ್‌ಎಲ್‌ನಿಂದ ಜಿಯೊಗೆ ಪೋರ್ಟ್ ಆಗುವ ಸಂಬಂಧ ಸರ್ಕಾರದ ಅನುಮೋದನೆಯ ಬಗ್ಗೆ’ ಮತ್ತು ‘ಪೋರ್ಟ್ ಮಾಡುವ ಪ್ರಕ್ರಿಯೆಯು ವಿವಿಧ ಹಂತಗಳಲ್ಲಿ ನಡೆಯುತ್ತದೆ’ ಎಂಬುದಾಗಿ ಎಲ್ಲಾ ಘಟಕಗಳ ಮುಖ್ಯಸ್ಥರಿಗೆ ಲಾಜಿಸ್ಟಿಕ್ಸ್‌ ಅಂಡ್ ಮೊಡರೇಷನ್‌‌ನ ಹೆಚ್ಚುವರಿ ಮಹಾನಿರ್ದೇಶಕರು ಹೊರಡಿಸಿರುವ ಸುತ್ತೋಲೆಯನ್ನು ‘ದಿ ಹಿಂದೂ’ ವರದಿ ಉಲ್ಲೇಖಿಸಿದೆ. ಒಟ್ಟು 38,347 ಸಂಪರ್ಕ ಸಂಖ್ಯೆಗಳಿವೆ ಎಂದು ವರದಿ ತಿಳಿಸಿದೆ.

“ಪೊಲೀಸ್ ವ್ಯವಸ್ಥೆಯಂತಹ ತುರ್ತು ಸೇವೆಗೆ ನೆಟ್‌ವರ್ಕ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಲಭ್ಯವಿರುವ ನೆಟ್‌ವರ್ಕ್‌ನ ದಕ್ಷತೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಂಪೂರ್ಣವಾಗಿ ವಾಣಿಜ್ಯಿಕ ನಿರ್ಧಾರವಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಈ 38,000 ಸಂಪರ್ಕ ಸಂಖ್ಯೆಗಳಲ್ಲಿ ಹೆಚ್ಚಿನವು ದೂರದ ಗ್ರಾಮೀಣ ಪ್ರದೇಶಗಳಲ್ಲಿವೆ. ಉತ್ತಮ ನೆಟ್‌ವರ್ಕ್ ವ್ಯಾಪ್ತಿಯ ಕೊರತೆಯ ಬಗ್ಗೆ ಅಲ್ಲಿನ ಅಧಿಕಾರಿಗಳು ದೂರಿದ್ದಾರೆ. ಈ ದಿನಮಾನಗಳಲ್ಲಿ ಪೊಲೀಸರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಲೊಕೇಷನ್‌, ಫೋಟೋಗಳು ಮತ್ತು ವೀಡಿಯೊಗಳನ್ನು ಒಳಗೊಂಡಂತೆ ಅನೇಕ ಡೇಟಾಗಳನ್ನು ವರ್ಗಾಯಿಸಬೇಕಾಗುತ್ತದೆ. ಈಗ ಬಳಸಲಾಗುತ್ತಿರುವ ಸೇವಾ ಪೂರೈಕೆದಾರರ ಡೇಟಾ ಸ್ಪೀಟ್‌ ಶೋಚನೀಯವಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಖಾಸಗಿ ಸಂಸ್ಥೆಗಳು 5G ಸೇವೆಗಳನ್ನು ನೀಡುತ್ತಿದ್ದರೆ, ಬಿಎಸ್‌ಎನ್‌ಎಲ್‌ ಇನ್ನೂ 4G ಸೇವೆಗಳನ್ನೂ ನೀಡುತ್ತಿಲ್ಲ. ನಮ್ಮಂಥವರ ತುರ್ತು ಸೇವೆಗೆ ಇದು ತೊಂದರೆಯುಂಟುಮಾಡಿದೆ. ವಾಣಿಜ್ಯ ಮೌಲ್ಯಮಾಪನದ ನಂತರ, ‘ಕರ್ನಾಟಕ ಟ್ರಾನ್ಸ್‌ಪರೆನ್ಸಿ ಇನ್‌ ಪಬ್ಲಿಕ್‌ ಪ್ರೊಕ್ಯೂರ್‌ಮೆಂಟ್ ಆಕ್ಟ್‌’ 1999ರ ಪ್ರಕಾರ ರಿಲಯನ್ಸ್ ಜಿಯೋವನ್ನು ಪರ್ಯಾಯ ಸೇವಾ ಪೂರೈಕೆದಾರರಾಗಿ ಆಯ್ಕೆ ಮಾಡಲಾಗಿದೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಬಿಎಸ್‌ಎನ್‌ಎಲ್‌ನ ಜಾಗದಲ್ಲಿ ರಿಲಯನ್ಸ್‌ ಜಿಯೋವನ್ನು ಉತ್ತೇಜಿಸುವ ಇತ್ತೀಚಿನ ಉದಾಹರಣೆ ಇದಾಗಿದೆ ಎಂದು ಬಿಎಸ್‌ಎನ್‌ಎಲ್‌ ನೌಕರರ ಸಂಘ ಟೀಕಿಸಿದೆ.

“ಈ ಹಾದಿ ತುಳಿದವರಲ್ಲಿ ಕರ್ನಾಟಕ ಪೊಲೀಸರೇ ಮೊದಲಿಗರೇನಲ್ಲ. ಭಾರತೀಯ ರೈಲ್ವೇ ಮತ್ತು ತೆಲಂಗಾಣ ಪೊಲೀಸ್‌ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ರಿಲಯನ್ಸ್ ಜಿಯೋಗೆ ಪೋರ್ಟ್‌ ಆಗಲು ನಿರ್ದೇಶನ ನೀಡಲಾಗಿದೆ. ಇದೀಗ ಕರ್ನಾಟಕದ ಸರದಿ ಬಂದಿದೆ” ಎಂದು ಬಿಎಸ್‌ಎನ್‌ಎಲ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗುಂಡಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ವಲಯದ ಉದ್ಯಮವನ್ನು (ಪಿಎಸ್‌ಯು) ಮುಚ್ಚಿ, ಖಾಸಗಿ ವಲಯವನ್ನು ಉತ್ತೇಜಿಸುವುದು ಸರ್ಕಾರದ ಉದ್ದೇಶ. ಹೀಗಾಗಿ ಸಾರ್ವಜನಿಕ ಉದ್ದಿಮೆಗಳು ಸರ್ಕಾರದ ನಿರಾಸಕ್ತಿಯಿಂದ ಬಲಿಪಶುಗಳಾಗಿವೆ ಎಂದು ಅವರು ಆರೋಪಿಸಿದ್ದಾರೆ.

“ಸರ್ಕಾರವು ಇತ್ತೀಚೆಗೆ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತಂದಿತು, ಅದರ ಅಡಿಯಲ್ಲಿ ಸುಮಾರು 80,000 ಉದ್ಯೋಗಿಗಳು ನಿವೃತ್ತರಾದರು. ಇದರಿಂದಾಗಿ ಬಿಎಸ್‌ಎನ್‌ಎಲ್‌ನಲ್ಲಿ ಮಾನವ ಸಂಪನ್ಮೂಲದ ಅಭಾವ ಉಂಟಾಯಿತು. ಸಂಸ್ಥೆ ನಲುಗಿತು. ಬಿಎಸ್‌ಎನ್‌ಎಲ್‌ನ ಮೂಲಸೌಕರ್ಯಗಳನ್ನು ಹೆಚ್ಚಿಸಲು ಸರ್ಕಾರ ಹೂಡಿಕೆ ಮಾಡಿಲ್ಲ. 5G ತರಂಗಾಂತರಗಳನ್ನು ಖಾಸಗಿ ಕಂಪನಿಗಳಿಗೆ ಹರಾಜು ಹಾಕುತ್ತಿರುವಾಗ ಬಿಎಸ್‌ಎನ್‌ಎಲ್‌ಗೆ 4G ಸೇವೆಗಳನ್ನು ಒದಗಿಸಲೂ ಸರ್ಕಾರ ಅನುಮತಿ ನೀಡಲಿಲ್ಲ. ಇದು ಉದ್ದೇಶಪೂರ್ವಕ ಕೃತ್ಯ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. So, now no secret would be kept in secret, so total confidentiality of the individual and country has gone in to the hand of private people. It may go to any ones hand and the country is in threat at last.
    Country only socialistic in words
    Controlled by ……………

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...