Homeಕರ್ನಾಟಕಮೈತ್ರಿ ಕಡೆಯಿಂದ ಎರಡು ಅಸ್ತ್ರ: ಶಾಸಕತ್ವದ ಅನರ್ಹತೆ, ಸಚಿವಗಿರಿಯ ಆಮಿಷ!

ಮೈತ್ರಿ ಕಡೆಯಿಂದ ಎರಡು ಅಸ್ತ್ರ: ಶಾಸಕತ್ವದ ಅನರ್ಹತೆ, ಸಚಿವಗಿರಿಯ ಆಮಿಷ!

- Advertisement -
- Advertisement -

ಸರ್ಕಾರ ಬೀಳುವ ಎಲ್ಲ ಲಕ್ಷಣಗಳು ಮೋಲ್ನೋಟಕ್ಕೆ ಮುಖಕ್ಕೆ ಹೊಡೆಯುತ್ತಿರುವ ವೇಳೆಯೂ, ಮೈತ್ರಿ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಕೊನೆ ಹಂತದ ರಕ್ಷಣೆಗೆ ಎಂಬಂತೆ ಎರಡು ಅಸ್ತ್ರಗಳನ್ನು 3 ಗಂಟೆ ಸುಮಾರಿಗೆ ಹೊರಬಿಟ್ಟಿದ್ದಾರೆ.

ಒಂದು, ರಾಜಿನಾಮೆ ನೀಡಿದ್ದೇವೆ ಎಂದು ಬಿಜೆಪಿ ಬಣದ ಜೊತೆ ಹೋಗಲು ಸಜ್ಜಾಗಿರುವ ಶಾಸಕರನ್ನು ಕಾನೂನಿನ ಅಸ್ತ್ರದಿಂದ ಬೆದರಿಸುವುದು. ಇನ್ನೊಂದು ನೀವು ಬಂದರೆ ನಿಮಗೆ ಸಚಿವಗಿರಿ (ಪರೋಕ್ಷವಾಗಿ ಇತರೆ ಸವಲತ್ತೂ ಸೇರಿ) ನೀಡುತ್ತೇವೆ ಎಂಬ ಪ್ರೀತಿಯ ಆಮಿಷ!

ಹಲವು ಕಾನೂನು ತಜ್ಞರೊಂದಿಗೆ ಚರ್ಚಿಸಿ ಸಂವಿಧಾನದ ಶೆಡ್ಯೂಲ್ 10ರ ಪ್ಯಾರಾ 2ರ ಮೊರೆ ಹೋಗಿರುವ ಮೈತ್ರಿ ಬಣದ ನಾಯಕರು ಸೆಕ್ಷನ್ 164-1ಬಿ ಅಡಿ ಭಿನ್ನಮತದ ಬಾವುಟ ಹಾರಿಸಿರುವ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್‍ಗೆ ದೂರು ನೀಡಲು ಸಜ್ಜಾಗಿದ್ದಾರೆ.

ಅಂತಹ ಸಂದೇಶವೊಂದನ್ನು ತೇಲಿ ಬಿಡುವ ಮೂಲಕ ಮುಂಬೈನ ಸೋಫಿಟೆಲ್ ಹೊಟೆಲ್‍ನಲ್ಲಿ ಕುಳಿತು ಕರ್ನಾಟಕದ ರಾಜಕೀಯ ಬೆಳವಣೆಗಳನ್ನು ಟಿವಿಯ ಮೂಲಕ ವೀಕ್ಷಿಸುತ್ತಿರುವ ಅತೃಪ್ತರಿಗೆ ಕಾನೂನಾತ್ಮಕ ಕ್ರಮದ ಗುಮ್ಮವನ್ನು ತೋರಿಸಿದ್ದಾರೆ. ಅಲ್ಲಿರುವ ಶಾಸಕರಿಗೆ ‘ಹಾಗೆಲ್ಲ ಮಾಡಲು ಆಗುವುದಿಲ್ಲ’ ಎಂದು ಬಿಜೆಪಿ ಅಭಯ ನೀಡುತ್ತಿರಬಹುದು. ಆದರೆ, ಕಳೆದ ವರ್ಷವಷ್ಟೇ ಹೆಚ್ಚೂ ಕಡಿಮೆ ಇದೇ ಮಾದರಿಯಲ್ಲಿ, ಇಂಥದ್ದೇ ಸಂದರ್ಭದಲ್ಲಿ ತಮಿಳುನಾಡಿನಲ್ಲಿ 18 ಶಾಸಕರನ್ನು ಅನರ್ಹಗೊಳಿಸಿದ್ದು, ಅದನ್ನು ಅಲ್ಲಿನ ಕೋರ್ಟ್ ಮಾನ್ಯ ಮಾಡಿದ್ದು ಇನ್ನೂ ಹಚ್ಚ ಹಸಿರಾಗಿರುವಾಗ, ಅತೃಪ್ತ ಶಾಸಕರಲ್ಲಿ ಒಂದು ಅಳುಕಂತೂ ಮೂಡಿರಲು ಸಾಧ್ಯ.

ಈ ಸೆಕ್ಷನ್ ಅಳವಡಿಕೆ ಈಗಿನ ಸಂದರ್ಭದಲ್ಲಿ ಸಾಧ್ಯವೇ ಇಲ್ಲವೇ ಎಂಬುದು ಚರ್ಚೆಯ ವಿಷಯವೇ. ಆದರೆ ಸ್ಪೀಕರ್‍ಗೆ ಮನವರಿಕೆ ಮಾಡಲು, ಅದಕ್ಕೆ ತಕ್ಕ ಪುರಾವೆ ಒದಗಿಸಲು ಮೈತ್ರಿಬಣ ಯಶಸ್ವಿಯಾದರೆ, ರಾಜಿನಾಮೆ ಕೊಟ್ಟಿದ್ದೇವೆ ಎನ್ನುತ್ತಿರುವ ಶಾಸಕರ ಸದಸ್ಯತ್ವದ ಮೇಲೆ ತೂಗುಗತ್ತಿ ಗ್ಯಾರಂಟಿ. ಏಕೆಂದರೆ ಈಗ ಶಾಸಕರು ಸದನಕ್ಕೆ ರಾಜಿನಾಮೆ ಸಲ್ಲಿಸಿದ್ದಾರಷ್ಟೇ. ಅದೂ ಕೂಡ, ಇದನ್ನು ಅಂಗೀಕರಿಸುವ ಅಂತಿಮ ಅಧಿಕಾರವುಳ್ಳ ಸ್ಪೀಕರ್ ಕೈಗೆ ಅಧಿಕೃತವಾಗಿ ರಾಜಿನಾಮೆ ಪತ್ರಗಳು ತಲುಪಿಲ್ಲ. ಇದು ತಾಂತ್ರಿಕ ವಿಷಯವಾಗಿದ್ದರಿಮದ ಸ್ಪೀಕರ್ ವಿವೇಚನೆಯ ಮೇಲೆಯೇ ನಿಂತಿದೆ. ಈ ಅತೃಪ್ತರು ಪಕ್ಷಕ್ಕೆ ಇನ್ನೂ ರಾಜಿನಾಮೆ ನೀಡದೇ ಇರುವುದರಿಂದ ಉಭಯ ಪಕ್ಷಗಳು ಪಕ್ಷಾಂತರ ನಿಷೇಧ ಕಾನೂನಿನ ಅಡಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಳ್ಳಬಹುದು. ಈ ಶಾಸಕರು ಬೇರೆ ಪಕ್ಷದೊಂದಿಗೆ ಗುರುತಿಸಿಕೊಂಡು ಮೂಲ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಿರೂಪಿಸಬೇಕು. ಇದು ಈಗಿನ ಪರಿಸ್ಥಿಯಲ್ಲಿ ಕೊಂಚ ಕಷ್ಟವಾದರೂ, ಶಾಸಕರಲ್ಲಿ ಮಾತ್ರ ಭಯ ಹುಟ್ಟಿಸಲು ಸಫಲವಾಗಿರಬಹುದು.

ಮೈತ್ರಿಯ ಉಭಯ ಪಕ್ಷಗಳು ಶಾಸಕಾಂಗ ಪಕ್ಷದ ಸಭೆ ಕರೆದು ವಿಪ್ ಜಾರಿ ಮಾಡಿದರೆ ಹಾಜರಾಗದ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್‍ಗೆ ದೂರು ನೀಡಬಹುದು. ಅಷ್ಟರ ಮಟ್ಟಿಗೆ ಕಾನೂನಾತ್ಮಕ ಮೊದಲ ಅಸ್ತ್ರ ಶಾಸಕರಲ್ಲಿ ದಿಗಿಲು ಹುಟ್ಟಿಸುವಲ್ಲಿ ಸಫಲವಾಗಬಹುದು.

ಇನ್ನು ಎರಡನೇ ಅಸ್ತ್ರ ಬೆದರಿಕೆಯದ್ದಲ್ಲ, ಬದಲಿಗೆ ತಮ್ಮದೇ ಶಾಸಕರನ್ನು ರಮಿಸುವಂತದ್ದು. ಬನ್ನಿ ಬನ್ನಿ ಇಲ್ಲಿ ಸಚಿವ ಸಂಪುಟದ ಎಲ್ಲ ಸ್ಥಾನಗಳು ಖಾಲಿಯಿವೆ. ನಿಮಗೆಲ್ಲರಿಗೂ ಅವಕಾಶವಿದೆ ಎಂದು ಪ್ರತಿ ಆಹ್ವಾನ ನೀಡಲಾಗಿದೆ. ಅದಕ್ಕಾಗಿ ಎಲ್ಲ ಸಚಿವರ ರಾಜಿನಾಮೆ ಪಡೆದಿರುವುದಾಗಿ ಉಭಯ ಪಕ್ಷಗಳ ನಾಯಕರು ಅಧಿಕೃತವಾಗಿ ಘೋಷಿಸಿದ್ದಾರೆ.

ಮೊದಲ ಅಸ್ತ್ರಕ್ಕೆ ಬೆದರಿ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಕೆ. ಆರ್ ಪೇಟೆಯ ಶಾಸಕ ನಾರಾಯಣಗೌಡ ಥರದ ವೈಯಕ್ತಿಕ ವರ್ಚಸಿಲ್ಲದ ಶಾಸಕರು ಶರಣಾಗಿ ಹೇಗೂ ಸಚಿವ ಸ್ಥಾನ ಸಿಗಲಿದೆ ಎಂದು ಮಣಿಯಬಹುದು ಎಂದು ಮೈತ್ರಿ ಬಣ ಅಂದಾಜಿಸಿದೆ. ಸಚಿವರಾಗಲೆಂದೇ ಭಿನ್ನಮತ ಸಾರಿರುವ ರಾಮಲಿಂಗಾರೆಡ್ಡಿ, ಎಸ್‍ಟಿ ಸೋಮಶೇಖರ್, ಬೈರತಿ ಬಸವರಾಜ, ರಮೇಶ ಜಾರಕಿಹೊಳಿ ಥರದವರು ಖುಷಿಯಿಂದ ವಾಪಸ್ ಬರಬಹದೆಂಬ ನಿರೀಕ್ಷೆ ಮೈತ್ರಿಬಣದ್ದು.

ಆದರೆ ಇದೆಲ್ಲವು ಅಷ್ಟು ಸರಳವಾಗಿಲ್ಲ. ಸಂಕೀರ್ಣ ಕಾನೂನನ್ನು ಹೇಗೆ ಬಳಸಬಹುದು ಎಂಬ ಬಗ್ಗೆ ಕಾನೂನು ತಜ್ಞರಲ್ಲೇ ಭಿನ್ನಾಭಿಪ್ರಾಯ ಇವೆ. ಬಿಜೆಪಿ ಕೂಡ ಕಾನೂನು ಪಂಡಿತರೊಂದಿಗೆ ಸಮಾಲೋಚನೆ ನಡೆಸಿದ್ದು ಯಾವುದೇ ಅಪಾಯವಿಲ್ಲ ಎಂಬ ಭರವಸೆಯನ್ನು ನೀಡಲು ಸಫಲವಾದರೆ ಮಾತ್ರ ಅತೃಪ್ರಲ್ಲಿ ಧೈರ್ಯ ಬರಬಹುದು.

2006 ಮತ್ತು 2008ರ ಹಗ್ಗಜಗಾಟ ಮರುಕಳಿಸುವ ಎಲ್ಲ ಲಕ್ಷಣಗಳಿವೆ. ಸದ್ಯ ರಾಜಿನಾಮೆ ಕೊಟ್ಟ ಶಾಸಕರನ್ನು ಹೊರತುಪಡಿಸಿದರೆ ಬಿಜೆಪಿ ಸಂಖ್ಯೆ 106 ( ಪಕ್ಷೇತರ ನಾಗೇಶ ಸೇರಿದರೆ 107) ಇದ್ದರೆ ಮೈತ್ರ ಬಣದ ಸಂಖ್ಯೆ 104 ಇದೆ. ಈ ಲೆಕ್ಕಾಚಾರದಲ್ಲಿ ಕತ್ತಿಯಂಚಿನ ಸರಳ ಬಹುಮತವಷ್ಟೇ ಈಗ ಬಿಜೆಪಿಗೆ ಸಿಗುತ್ತದೆ. 104 ಸದಸ್ಯರನ್ನು ಹೊಂದಿರುವ ಮೈತ್ರಿ ಬಣವು ಆಪರೇಷನ್ ಶುರು ಮಾಡಿದರೆ ಮತ್ತೆ ಡೋಲಾಯಮಾನವೇ! 3 ಗಂಟೆಯ ನಂತರದ ಈ ಬೆಳವಣಿಗೆ ಈ ಅಧಿಕಾರದ ಆಟಕ್ಕೆ ಹೊಸ ತಿರುವನ್ನಂತೂ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...