Homeಕರ್ನಾಟಕಮೈತ್ರಿ ಕಡೆಯಿಂದ ಎರಡು ಅಸ್ತ್ರ: ಶಾಸಕತ್ವದ ಅನರ್ಹತೆ, ಸಚಿವಗಿರಿಯ ಆಮಿಷ!

ಮೈತ್ರಿ ಕಡೆಯಿಂದ ಎರಡು ಅಸ್ತ್ರ: ಶಾಸಕತ್ವದ ಅನರ್ಹತೆ, ಸಚಿವಗಿರಿಯ ಆಮಿಷ!

- Advertisement -
- Advertisement -

ಸರ್ಕಾರ ಬೀಳುವ ಎಲ್ಲ ಲಕ್ಷಣಗಳು ಮೋಲ್ನೋಟಕ್ಕೆ ಮುಖಕ್ಕೆ ಹೊಡೆಯುತ್ತಿರುವ ವೇಳೆಯೂ, ಮೈತ್ರಿ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಕೊನೆ ಹಂತದ ರಕ್ಷಣೆಗೆ ಎಂಬಂತೆ ಎರಡು ಅಸ್ತ್ರಗಳನ್ನು 3 ಗಂಟೆ ಸುಮಾರಿಗೆ ಹೊರಬಿಟ್ಟಿದ್ದಾರೆ.

ಒಂದು, ರಾಜಿನಾಮೆ ನೀಡಿದ್ದೇವೆ ಎಂದು ಬಿಜೆಪಿ ಬಣದ ಜೊತೆ ಹೋಗಲು ಸಜ್ಜಾಗಿರುವ ಶಾಸಕರನ್ನು ಕಾನೂನಿನ ಅಸ್ತ್ರದಿಂದ ಬೆದರಿಸುವುದು. ಇನ್ನೊಂದು ನೀವು ಬಂದರೆ ನಿಮಗೆ ಸಚಿವಗಿರಿ (ಪರೋಕ್ಷವಾಗಿ ಇತರೆ ಸವಲತ್ತೂ ಸೇರಿ) ನೀಡುತ್ತೇವೆ ಎಂಬ ಪ್ರೀತಿಯ ಆಮಿಷ!

ಹಲವು ಕಾನೂನು ತಜ್ಞರೊಂದಿಗೆ ಚರ್ಚಿಸಿ ಸಂವಿಧಾನದ ಶೆಡ್ಯೂಲ್ 10ರ ಪ್ಯಾರಾ 2ರ ಮೊರೆ ಹೋಗಿರುವ ಮೈತ್ರಿ ಬಣದ ನಾಯಕರು ಸೆಕ್ಷನ್ 164-1ಬಿ ಅಡಿ ಭಿನ್ನಮತದ ಬಾವುಟ ಹಾರಿಸಿರುವ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್‍ಗೆ ದೂರು ನೀಡಲು ಸಜ್ಜಾಗಿದ್ದಾರೆ.

ಅಂತಹ ಸಂದೇಶವೊಂದನ್ನು ತೇಲಿ ಬಿಡುವ ಮೂಲಕ ಮುಂಬೈನ ಸೋಫಿಟೆಲ್ ಹೊಟೆಲ್‍ನಲ್ಲಿ ಕುಳಿತು ಕರ್ನಾಟಕದ ರಾಜಕೀಯ ಬೆಳವಣೆಗಳನ್ನು ಟಿವಿಯ ಮೂಲಕ ವೀಕ್ಷಿಸುತ್ತಿರುವ ಅತೃಪ್ತರಿಗೆ ಕಾನೂನಾತ್ಮಕ ಕ್ರಮದ ಗುಮ್ಮವನ್ನು ತೋರಿಸಿದ್ದಾರೆ. ಅಲ್ಲಿರುವ ಶಾಸಕರಿಗೆ ‘ಹಾಗೆಲ್ಲ ಮಾಡಲು ಆಗುವುದಿಲ್ಲ’ ಎಂದು ಬಿಜೆಪಿ ಅಭಯ ನೀಡುತ್ತಿರಬಹುದು. ಆದರೆ, ಕಳೆದ ವರ್ಷವಷ್ಟೇ ಹೆಚ್ಚೂ ಕಡಿಮೆ ಇದೇ ಮಾದರಿಯಲ್ಲಿ, ಇಂಥದ್ದೇ ಸಂದರ್ಭದಲ್ಲಿ ತಮಿಳುನಾಡಿನಲ್ಲಿ 18 ಶಾಸಕರನ್ನು ಅನರ್ಹಗೊಳಿಸಿದ್ದು, ಅದನ್ನು ಅಲ್ಲಿನ ಕೋರ್ಟ್ ಮಾನ್ಯ ಮಾಡಿದ್ದು ಇನ್ನೂ ಹಚ್ಚ ಹಸಿರಾಗಿರುವಾಗ, ಅತೃಪ್ತ ಶಾಸಕರಲ್ಲಿ ಒಂದು ಅಳುಕಂತೂ ಮೂಡಿರಲು ಸಾಧ್ಯ.

ಈ ಸೆಕ್ಷನ್ ಅಳವಡಿಕೆ ಈಗಿನ ಸಂದರ್ಭದಲ್ಲಿ ಸಾಧ್ಯವೇ ಇಲ್ಲವೇ ಎಂಬುದು ಚರ್ಚೆಯ ವಿಷಯವೇ. ಆದರೆ ಸ್ಪೀಕರ್‍ಗೆ ಮನವರಿಕೆ ಮಾಡಲು, ಅದಕ್ಕೆ ತಕ್ಕ ಪುರಾವೆ ಒದಗಿಸಲು ಮೈತ್ರಿಬಣ ಯಶಸ್ವಿಯಾದರೆ, ರಾಜಿನಾಮೆ ಕೊಟ್ಟಿದ್ದೇವೆ ಎನ್ನುತ್ತಿರುವ ಶಾಸಕರ ಸದಸ್ಯತ್ವದ ಮೇಲೆ ತೂಗುಗತ್ತಿ ಗ್ಯಾರಂಟಿ. ಏಕೆಂದರೆ ಈಗ ಶಾಸಕರು ಸದನಕ್ಕೆ ರಾಜಿನಾಮೆ ಸಲ್ಲಿಸಿದ್ದಾರಷ್ಟೇ. ಅದೂ ಕೂಡ, ಇದನ್ನು ಅಂಗೀಕರಿಸುವ ಅಂತಿಮ ಅಧಿಕಾರವುಳ್ಳ ಸ್ಪೀಕರ್ ಕೈಗೆ ಅಧಿಕೃತವಾಗಿ ರಾಜಿನಾಮೆ ಪತ್ರಗಳು ತಲುಪಿಲ್ಲ. ಇದು ತಾಂತ್ರಿಕ ವಿಷಯವಾಗಿದ್ದರಿಮದ ಸ್ಪೀಕರ್ ವಿವೇಚನೆಯ ಮೇಲೆಯೇ ನಿಂತಿದೆ. ಈ ಅತೃಪ್ತರು ಪಕ್ಷಕ್ಕೆ ಇನ್ನೂ ರಾಜಿನಾಮೆ ನೀಡದೇ ಇರುವುದರಿಂದ ಉಭಯ ಪಕ್ಷಗಳು ಪಕ್ಷಾಂತರ ನಿಷೇಧ ಕಾನೂನಿನ ಅಡಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಳ್ಳಬಹುದು. ಈ ಶಾಸಕರು ಬೇರೆ ಪಕ್ಷದೊಂದಿಗೆ ಗುರುತಿಸಿಕೊಂಡು ಮೂಲ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಿರೂಪಿಸಬೇಕು. ಇದು ಈಗಿನ ಪರಿಸ್ಥಿಯಲ್ಲಿ ಕೊಂಚ ಕಷ್ಟವಾದರೂ, ಶಾಸಕರಲ್ಲಿ ಮಾತ್ರ ಭಯ ಹುಟ್ಟಿಸಲು ಸಫಲವಾಗಿರಬಹುದು.

ಮೈತ್ರಿಯ ಉಭಯ ಪಕ್ಷಗಳು ಶಾಸಕಾಂಗ ಪಕ್ಷದ ಸಭೆ ಕರೆದು ವಿಪ್ ಜಾರಿ ಮಾಡಿದರೆ ಹಾಜರಾಗದ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್‍ಗೆ ದೂರು ನೀಡಬಹುದು. ಅಷ್ಟರ ಮಟ್ಟಿಗೆ ಕಾನೂನಾತ್ಮಕ ಮೊದಲ ಅಸ್ತ್ರ ಶಾಸಕರಲ್ಲಿ ದಿಗಿಲು ಹುಟ್ಟಿಸುವಲ್ಲಿ ಸಫಲವಾಗಬಹುದು.

ಇನ್ನು ಎರಡನೇ ಅಸ್ತ್ರ ಬೆದರಿಕೆಯದ್ದಲ್ಲ, ಬದಲಿಗೆ ತಮ್ಮದೇ ಶಾಸಕರನ್ನು ರಮಿಸುವಂತದ್ದು. ಬನ್ನಿ ಬನ್ನಿ ಇಲ್ಲಿ ಸಚಿವ ಸಂಪುಟದ ಎಲ್ಲ ಸ್ಥಾನಗಳು ಖಾಲಿಯಿವೆ. ನಿಮಗೆಲ್ಲರಿಗೂ ಅವಕಾಶವಿದೆ ಎಂದು ಪ್ರತಿ ಆಹ್ವಾನ ನೀಡಲಾಗಿದೆ. ಅದಕ್ಕಾಗಿ ಎಲ್ಲ ಸಚಿವರ ರಾಜಿನಾಮೆ ಪಡೆದಿರುವುದಾಗಿ ಉಭಯ ಪಕ್ಷಗಳ ನಾಯಕರು ಅಧಿಕೃತವಾಗಿ ಘೋಷಿಸಿದ್ದಾರೆ.

ಮೊದಲ ಅಸ್ತ್ರಕ್ಕೆ ಬೆದರಿ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಕೆ. ಆರ್ ಪೇಟೆಯ ಶಾಸಕ ನಾರಾಯಣಗೌಡ ಥರದ ವೈಯಕ್ತಿಕ ವರ್ಚಸಿಲ್ಲದ ಶಾಸಕರು ಶರಣಾಗಿ ಹೇಗೂ ಸಚಿವ ಸ್ಥಾನ ಸಿಗಲಿದೆ ಎಂದು ಮಣಿಯಬಹುದು ಎಂದು ಮೈತ್ರಿ ಬಣ ಅಂದಾಜಿಸಿದೆ. ಸಚಿವರಾಗಲೆಂದೇ ಭಿನ್ನಮತ ಸಾರಿರುವ ರಾಮಲಿಂಗಾರೆಡ್ಡಿ, ಎಸ್‍ಟಿ ಸೋಮಶೇಖರ್, ಬೈರತಿ ಬಸವರಾಜ, ರಮೇಶ ಜಾರಕಿಹೊಳಿ ಥರದವರು ಖುಷಿಯಿಂದ ವಾಪಸ್ ಬರಬಹದೆಂಬ ನಿರೀಕ್ಷೆ ಮೈತ್ರಿಬಣದ್ದು.

ಆದರೆ ಇದೆಲ್ಲವು ಅಷ್ಟು ಸರಳವಾಗಿಲ್ಲ. ಸಂಕೀರ್ಣ ಕಾನೂನನ್ನು ಹೇಗೆ ಬಳಸಬಹುದು ಎಂಬ ಬಗ್ಗೆ ಕಾನೂನು ತಜ್ಞರಲ್ಲೇ ಭಿನ್ನಾಭಿಪ್ರಾಯ ಇವೆ. ಬಿಜೆಪಿ ಕೂಡ ಕಾನೂನು ಪಂಡಿತರೊಂದಿಗೆ ಸಮಾಲೋಚನೆ ನಡೆಸಿದ್ದು ಯಾವುದೇ ಅಪಾಯವಿಲ್ಲ ಎಂಬ ಭರವಸೆಯನ್ನು ನೀಡಲು ಸಫಲವಾದರೆ ಮಾತ್ರ ಅತೃಪ್ರಲ್ಲಿ ಧೈರ್ಯ ಬರಬಹುದು.

2006 ಮತ್ತು 2008ರ ಹಗ್ಗಜಗಾಟ ಮರುಕಳಿಸುವ ಎಲ್ಲ ಲಕ್ಷಣಗಳಿವೆ. ಸದ್ಯ ರಾಜಿನಾಮೆ ಕೊಟ್ಟ ಶಾಸಕರನ್ನು ಹೊರತುಪಡಿಸಿದರೆ ಬಿಜೆಪಿ ಸಂಖ್ಯೆ 106 ( ಪಕ್ಷೇತರ ನಾಗೇಶ ಸೇರಿದರೆ 107) ಇದ್ದರೆ ಮೈತ್ರ ಬಣದ ಸಂಖ್ಯೆ 104 ಇದೆ. ಈ ಲೆಕ್ಕಾಚಾರದಲ್ಲಿ ಕತ್ತಿಯಂಚಿನ ಸರಳ ಬಹುಮತವಷ್ಟೇ ಈಗ ಬಿಜೆಪಿಗೆ ಸಿಗುತ್ತದೆ. 104 ಸದಸ್ಯರನ್ನು ಹೊಂದಿರುವ ಮೈತ್ರಿ ಬಣವು ಆಪರೇಷನ್ ಶುರು ಮಾಡಿದರೆ ಮತ್ತೆ ಡೋಲಾಯಮಾನವೇ! 3 ಗಂಟೆಯ ನಂತರದ ಈ ಬೆಳವಣಿಗೆ ಈ ಅಧಿಕಾರದ ಆಟಕ್ಕೆ ಹೊಸ ತಿರುವನ್ನಂತೂ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...