Homeಕರ್ನಾಟಕಮೈತ್ರಿ ಕಡೆಯಿಂದ ಎರಡು ಅಸ್ತ್ರ: ಶಾಸಕತ್ವದ ಅನರ್ಹತೆ, ಸಚಿವಗಿರಿಯ ಆಮಿಷ!

ಮೈತ್ರಿ ಕಡೆಯಿಂದ ಎರಡು ಅಸ್ತ್ರ: ಶಾಸಕತ್ವದ ಅನರ್ಹತೆ, ಸಚಿವಗಿರಿಯ ಆಮಿಷ!

- Advertisement -
- Advertisement -

ಸರ್ಕಾರ ಬೀಳುವ ಎಲ್ಲ ಲಕ್ಷಣಗಳು ಮೋಲ್ನೋಟಕ್ಕೆ ಮುಖಕ್ಕೆ ಹೊಡೆಯುತ್ತಿರುವ ವೇಳೆಯೂ, ಮೈತ್ರಿ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಕೊನೆ ಹಂತದ ರಕ್ಷಣೆಗೆ ಎಂಬಂತೆ ಎರಡು ಅಸ್ತ್ರಗಳನ್ನು 3 ಗಂಟೆ ಸುಮಾರಿಗೆ ಹೊರಬಿಟ್ಟಿದ್ದಾರೆ.

ಒಂದು, ರಾಜಿನಾಮೆ ನೀಡಿದ್ದೇವೆ ಎಂದು ಬಿಜೆಪಿ ಬಣದ ಜೊತೆ ಹೋಗಲು ಸಜ್ಜಾಗಿರುವ ಶಾಸಕರನ್ನು ಕಾನೂನಿನ ಅಸ್ತ್ರದಿಂದ ಬೆದರಿಸುವುದು. ಇನ್ನೊಂದು ನೀವು ಬಂದರೆ ನಿಮಗೆ ಸಚಿವಗಿರಿ (ಪರೋಕ್ಷವಾಗಿ ಇತರೆ ಸವಲತ್ತೂ ಸೇರಿ) ನೀಡುತ್ತೇವೆ ಎಂಬ ಪ್ರೀತಿಯ ಆಮಿಷ!

ಹಲವು ಕಾನೂನು ತಜ್ಞರೊಂದಿಗೆ ಚರ್ಚಿಸಿ ಸಂವಿಧಾನದ ಶೆಡ್ಯೂಲ್ 10ರ ಪ್ಯಾರಾ 2ರ ಮೊರೆ ಹೋಗಿರುವ ಮೈತ್ರಿ ಬಣದ ನಾಯಕರು ಸೆಕ್ಷನ್ 164-1ಬಿ ಅಡಿ ಭಿನ್ನಮತದ ಬಾವುಟ ಹಾರಿಸಿರುವ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್‍ಗೆ ದೂರು ನೀಡಲು ಸಜ್ಜಾಗಿದ್ದಾರೆ.

ಅಂತಹ ಸಂದೇಶವೊಂದನ್ನು ತೇಲಿ ಬಿಡುವ ಮೂಲಕ ಮುಂಬೈನ ಸೋಫಿಟೆಲ್ ಹೊಟೆಲ್‍ನಲ್ಲಿ ಕುಳಿತು ಕರ್ನಾಟಕದ ರಾಜಕೀಯ ಬೆಳವಣೆಗಳನ್ನು ಟಿವಿಯ ಮೂಲಕ ವೀಕ್ಷಿಸುತ್ತಿರುವ ಅತೃಪ್ತರಿಗೆ ಕಾನೂನಾತ್ಮಕ ಕ್ರಮದ ಗುಮ್ಮವನ್ನು ತೋರಿಸಿದ್ದಾರೆ. ಅಲ್ಲಿರುವ ಶಾಸಕರಿಗೆ ‘ಹಾಗೆಲ್ಲ ಮಾಡಲು ಆಗುವುದಿಲ್ಲ’ ಎಂದು ಬಿಜೆಪಿ ಅಭಯ ನೀಡುತ್ತಿರಬಹುದು. ಆದರೆ, ಕಳೆದ ವರ್ಷವಷ್ಟೇ ಹೆಚ್ಚೂ ಕಡಿಮೆ ಇದೇ ಮಾದರಿಯಲ್ಲಿ, ಇಂಥದ್ದೇ ಸಂದರ್ಭದಲ್ಲಿ ತಮಿಳುನಾಡಿನಲ್ಲಿ 18 ಶಾಸಕರನ್ನು ಅನರ್ಹಗೊಳಿಸಿದ್ದು, ಅದನ್ನು ಅಲ್ಲಿನ ಕೋರ್ಟ್ ಮಾನ್ಯ ಮಾಡಿದ್ದು ಇನ್ನೂ ಹಚ್ಚ ಹಸಿರಾಗಿರುವಾಗ, ಅತೃಪ್ತ ಶಾಸಕರಲ್ಲಿ ಒಂದು ಅಳುಕಂತೂ ಮೂಡಿರಲು ಸಾಧ್ಯ.

ಈ ಸೆಕ್ಷನ್ ಅಳವಡಿಕೆ ಈಗಿನ ಸಂದರ್ಭದಲ್ಲಿ ಸಾಧ್ಯವೇ ಇಲ್ಲವೇ ಎಂಬುದು ಚರ್ಚೆಯ ವಿಷಯವೇ. ಆದರೆ ಸ್ಪೀಕರ್‍ಗೆ ಮನವರಿಕೆ ಮಾಡಲು, ಅದಕ್ಕೆ ತಕ್ಕ ಪುರಾವೆ ಒದಗಿಸಲು ಮೈತ್ರಿಬಣ ಯಶಸ್ವಿಯಾದರೆ, ರಾಜಿನಾಮೆ ಕೊಟ್ಟಿದ್ದೇವೆ ಎನ್ನುತ್ತಿರುವ ಶಾಸಕರ ಸದಸ್ಯತ್ವದ ಮೇಲೆ ತೂಗುಗತ್ತಿ ಗ್ಯಾರಂಟಿ. ಏಕೆಂದರೆ ಈಗ ಶಾಸಕರು ಸದನಕ್ಕೆ ರಾಜಿನಾಮೆ ಸಲ್ಲಿಸಿದ್ದಾರಷ್ಟೇ. ಅದೂ ಕೂಡ, ಇದನ್ನು ಅಂಗೀಕರಿಸುವ ಅಂತಿಮ ಅಧಿಕಾರವುಳ್ಳ ಸ್ಪೀಕರ್ ಕೈಗೆ ಅಧಿಕೃತವಾಗಿ ರಾಜಿನಾಮೆ ಪತ್ರಗಳು ತಲುಪಿಲ್ಲ. ಇದು ತಾಂತ್ರಿಕ ವಿಷಯವಾಗಿದ್ದರಿಮದ ಸ್ಪೀಕರ್ ವಿವೇಚನೆಯ ಮೇಲೆಯೇ ನಿಂತಿದೆ. ಈ ಅತೃಪ್ತರು ಪಕ್ಷಕ್ಕೆ ಇನ್ನೂ ರಾಜಿನಾಮೆ ನೀಡದೇ ಇರುವುದರಿಂದ ಉಭಯ ಪಕ್ಷಗಳು ಪಕ್ಷಾಂತರ ನಿಷೇಧ ಕಾನೂನಿನ ಅಡಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಳ್ಳಬಹುದು. ಈ ಶಾಸಕರು ಬೇರೆ ಪಕ್ಷದೊಂದಿಗೆ ಗುರುತಿಸಿಕೊಂಡು ಮೂಲ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಿರೂಪಿಸಬೇಕು. ಇದು ಈಗಿನ ಪರಿಸ್ಥಿಯಲ್ಲಿ ಕೊಂಚ ಕಷ್ಟವಾದರೂ, ಶಾಸಕರಲ್ಲಿ ಮಾತ್ರ ಭಯ ಹುಟ್ಟಿಸಲು ಸಫಲವಾಗಿರಬಹುದು.

ಮೈತ್ರಿಯ ಉಭಯ ಪಕ್ಷಗಳು ಶಾಸಕಾಂಗ ಪಕ್ಷದ ಸಭೆ ಕರೆದು ವಿಪ್ ಜಾರಿ ಮಾಡಿದರೆ ಹಾಜರಾಗದ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್‍ಗೆ ದೂರು ನೀಡಬಹುದು. ಅಷ್ಟರ ಮಟ್ಟಿಗೆ ಕಾನೂನಾತ್ಮಕ ಮೊದಲ ಅಸ್ತ್ರ ಶಾಸಕರಲ್ಲಿ ದಿಗಿಲು ಹುಟ್ಟಿಸುವಲ್ಲಿ ಸಫಲವಾಗಬಹುದು.

ಇನ್ನು ಎರಡನೇ ಅಸ್ತ್ರ ಬೆದರಿಕೆಯದ್ದಲ್ಲ, ಬದಲಿಗೆ ತಮ್ಮದೇ ಶಾಸಕರನ್ನು ರಮಿಸುವಂತದ್ದು. ಬನ್ನಿ ಬನ್ನಿ ಇಲ್ಲಿ ಸಚಿವ ಸಂಪುಟದ ಎಲ್ಲ ಸ್ಥಾನಗಳು ಖಾಲಿಯಿವೆ. ನಿಮಗೆಲ್ಲರಿಗೂ ಅವಕಾಶವಿದೆ ಎಂದು ಪ್ರತಿ ಆಹ್ವಾನ ನೀಡಲಾಗಿದೆ. ಅದಕ್ಕಾಗಿ ಎಲ್ಲ ಸಚಿವರ ರಾಜಿನಾಮೆ ಪಡೆದಿರುವುದಾಗಿ ಉಭಯ ಪಕ್ಷಗಳ ನಾಯಕರು ಅಧಿಕೃತವಾಗಿ ಘೋಷಿಸಿದ್ದಾರೆ.

ಮೊದಲ ಅಸ್ತ್ರಕ್ಕೆ ಬೆದರಿ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಕೆ. ಆರ್ ಪೇಟೆಯ ಶಾಸಕ ನಾರಾಯಣಗೌಡ ಥರದ ವೈಯಕ್ತಿಕ ವರ್ಚಸಿಲ್ಲದ ಶಾಸಕರು ಶರಣಾಗಿ ಹೇಗೂ ಸಚಿವ ಸ್ಥಾನ ಸಿಗಲಿದೆ ಎಂದು ಮಣಿಯಬಹುದು ಎಂದು ಮೈತ್ರಿ ಬಣ ಅಂದಾಜಿಸಿದೆ. ಸಚಿವರಾಗಲೆಂದೇ ಭಿನ್ನಮತ ಸಾರಿರುವ ರಾಮಲಿಂಗಾರೆಡ್ಡಿ, ಎಸ್‍ಟಿ ಸೋಮಶೇಖರ್, ಬೈರತಿ ಬಸವರಾಜ, ರಮೇಶ ಜಾರಕಿಹೊಳಿ ಥರದವರು ಖುಷಿಯಿಂದ ವಾಪಸ್ ಬರಬಹದೆಂಬ ನಿರೀಕ್ಷೆ ಮೈತ್ರಿಬಣದ್ದು.

ಆದರೆ ಇದೆಲ್ಲವು ಅಷ್ಟು ಸರಳವಾಗಿಲ್ಲ. ಸಂಕೀರ್ಣ ಕಾನೂನನ್ನು ಹೇಗೆ ಬಳಸಬಹುದು ಎಂಬ ಬಗ್ಗೆ ಕಾನೂನು ತಜ್ಞರಲ್ಲೇ ಭಿನ್ನಾಭಿಪ್ರಾಯ ಇವೆ. ಬಿಜೆಪಿ ಕೂಡ ಕಾನೂನು ಪಂಡಿತರೊಂದಿಗೆ ಸಮಾಲೋಚನೆ ನಡೆಸಿದ್ದು ಯಾವುದೇ ಅಪಾಯವಿಲ್ಲ ಎಂಬ ಭರವಸೆಯನ್ನು ನೀಡಲು ಸಫಲವಾದರೆ ಮಾತ್ರ ಅತೃಪ್ರಲ್ಲಿ ಧೈರ್ಯ ಬರಬಹುದು.

2006 ಮತ್ತು 2008ರ ಹಗ್ಗಜಗಾಟ ಮರುಕಳಿಸುವ ಎಲ್ಲ ಲಕ್ಷಣಗಳಿವೆ. ಸದ್ಯ ರಾಜಿನಾಮೆ ಕೊಟ್ಟ ಶಾಸಕರನ್ನು ಹೊರತುಪಡಿಸಿದರೆ ಬಿಜೆಪಿ ಸಂಖ್ಯೆ 106 ( ಪಕ್ಷೇತರ ನಾಗೇಶ ಸೇರಿದರೆ 107) ಇದ್ದರೆ ಮೈತ್ರ ಬಣದ ಸಂಖ್ಯೆ 104 ಇದೆ. ಈ ಲೆಕ್ಕಾಚಾರದಲ್ಲಿ ಕತ್ತಿಯಂಚಿನ ಸರಳ ಬಹುಮತವಷ್ಟೇ ಈಗ ಬಿಜೆಪಿಗೆ ಸಿಗುತ್ತದೆ. 104 ಸದಸ್ಯರನ್ನು ಹೊಂದಿರುವ ಮೈತ್ರಿ ಬಣವು ಆಪರೇಷನ್ ಶುರು ಮಾಡಿದರೆ ಮತ್ತೆ ಡೋಲಾಯಮಾನವೇ! 3 ಗಂಟೆಯ ನಂತರದ ಈ ಬೆಳವಣಿಗೆ ಈ ಅಧಿಕಾರದ ಆಟಕ್ಕೆ ಹೊಸ ತಿರುವನ್ನಂತೂ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...