Homeಕರ್ನಾಟಕಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

ಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

- Advertisement -
- Advertisement -

ಸರ್ಕಾರ ಬೀಳುತ್ತೋ ಅಥವಾ ಇಲ್ಲವೋ ಎಂಬ ಚರ್ಚೆಯನ್ನು ಇವತ್ತಿನ (ಶುಕ್ರವಾರ) ಮುಂಜಾನೆ 4 ತಾಸುಗಳು ಹೊಸ ಆಯಾಮಕ್ಕೆ ಒಯ್ದುಬಿಟ್ಟಿವೆ. ಅರ್ಜೆಂಟಾಗಿ ಅಧಿಕಾರ ಹಿಡಿಯಬೇಕೆಂದಿದ್ದ ಬಿಜೆಪಿ ಮತ್ತು ಅತೃಪ್ತರಿಗೆ ತಾತ್ಕಾಲಿಕ ಹಿನ್ನಡೆ ಆಗಿದ್ದರೆ, ಒಂದೊಂದು ದಿನ ಸಿಕ್ಕರೂ ಸಾಕು ಎಂದು ಹಪಹಪಿಸುತ್ತಿದ್ದ ಮೈತ್ರಿ ಸರ್ಕಾರದ ಮುಖದಲ್ಲಿ ಮಂದಹಾಸ ಕಾಣಿಸಿತೊಡಗಿದೆ. ಇಲ್ಲೊಂದು ಇಂಟರೆಸ್ಟಿಂಗ್ ಪಾಯಿಂಟ್ ಅಂದರೆ, ತಮ್ಮ ರಾಜಕೀಯದ ಕೊನೆ ಘಟ್ಟದಲ್ಲಿರುವ ಸ್ಪೀಕರ್ ರಮೇಶಕುಮಾರರಿಗೆ ಈ ಒಟ್ಟೂ ಬಿಕ್ಕಟ್ಟು ಸಂವಿಧಾನ ಮತ್ತು ಸಂಸದೀಯ ಪ್ರಕ್ರಿಯೆಗಳ ಕುರಿತ ಅವರ ಜ್ಞಾನವನ್ನು ದೇಶದ ಎದುರು ಇಡಲು ಒಂದು ಅಪೂರ್ವ ಅವಕಾಶವನ್ನು ಒದಗಿಸಿದೆ!

ಸುಪ್ರಿಂಕೋರ್ಟು ಮಂಗಳವಾರಕ್ಕೆ ವಿಚಾರಣೆ ಮುಂದೂಡಿದ್ದು, ಸಂತಾಪ ಕಲಾಪದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಯ ಅಸ್ತ್ರ ಬಿಟ್ಟಿದ್ದು, ಹಿಂದೆಯೇ ವಿಪ್ ಭೂತವನ್ನು ತೇಲಿಬಿಟ್ಟಿದ್ದು-ಇದೆಲ್ಲವೂ ಆಪರೇಷನ್ ಕಮಲ ಎಂಬ ದಂಧೆಯನ್ನು ಅಧಿಕೃತಗೊಳಿಸಲು ಯತ್ನಿಸುತ್ತಿರುವ ಬಿಜೆಪಿಗೆ ಸದ್ಯಕ್ಕೆ ಶಾಕ್ ನೀಡಿದೆ. ಒಟ್ಟಿನಲ್ಲಿ ಅಧಿಕಾರ ಬಿಡಲೇಬಾರದು ಎಂದು ಒದ್ದಾಡುತ್ತಿರುವ ಮೈತ್ರಿ ಸರ್ಕಾರಕ್ಕೆ ರಿಲೀಫ್ ನೀಡಿದೆ.

‘ಈಗಲೇ ರಾಜೀನಾಮೆ ಅಂಗೀಕರಿಸಿ’ ಎಂದು ಸುಪ್ರಿಂಕೋರ್ಟು ಸ್ಪೀಕರ್ ಗೆ ಆದೇಶ ನೀಡಬಹುದು ಎಂದು ಬಿಜೆಪಿಯಷ್ಟೇ ಅಲ್ಲ, ಟಿವಿ ಮಾಧ್ಯಮಗಳು ಮತ್ತು ಅಲ್ಲಿ ಸ್ಪೀಕರ್ ನಾಲೆಡ್ಜ್ ಗಿಂತ ತಮ್ಮದೇ ಜಾಸ್ತಿ ಎಂದೆಲ್ಲ ಪ್ರದರ್ಶನ ಮಾಡಲು ಹೆಣಗಾಡುತ್ತಿರುವ ಕೆಲವು ಪತ್ರಕರ್ತ ಪಂಡಿತರೂ ನಿರೀಕ್ಷೆ ಮಾಡಿದ್ದರು. ಆದರೆ, ಅಲ್ಲಿ ನಡೆದದ್ದೇ ಬೇರೆ. ಅತೃಪ್ತರ ಪರ ಮುಕುಲ್ ರೊಹಟಗಿ ಮಂಡಿಸಿದ ವಾದಕ್ಕೆ ಸ್ಪೀಕರ್ ಪರ ವಾದ ಮಂಡಿಸಿದ ಅಭಿಷೇಕ್ ಸಿಂಘ್ವಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪರ ವಾದ ಮಂಡಿಸಿದ ರಾಹುಲ್ ಧವನ್ ಹಿನ್ನಡೆ ಮಾಡಿದರು. ‘ಈ ಸಂದರ್ಭದಲ್ಲಿ ನಾವು ಸ್ಪೀಕರ್ ಗೆ ನಿರ್ದೇಶನ ಮಾಡಬಾರದೇ’ ಎಂದು ಪ್ರಶ್ನೆ ಮಾಡಿಕೊಂಡ ಸುಪ್ರಿಂಕೋರ್ಟು ವಿಚಾರಣೆಯನ್ನು ಮಂಗಳವಾರದವರೆಗೆ ಮುಂದೂಡಿ, ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡಲು ಹೇಳುವ ಮೂಲಕ ಮುಂಬೈಯಲ್ಲಿ ಮಜಾ ಮಾಡುತ್ತಿರುವ ಶಾಸಕರಿಗೆ ಆಘಾತವನ್ನು, ವಿಜಯೋತ್ಸಾಹದ ನಿರೀಕ್ಷೆಯಲ್ಲಿ ಸದನಕ್ಕೆ ಬಂದಿದ್ದ ಬಿಜೆಪಿಗೆ ಭರ್ಜರಿ ಶಾಕ್ ಅನ್ನು ನೀಡಿಬಿಟ್ಟಿತು.

ಇದರಿಂದ ಸುಧಾರಿಸಿಕೊಳ್ಳುವ ಮೊದಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಆಶ್ಚರ್ಯಕರ ರೀತಿಯಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿ, ದಿನಾಂಕ ನಿಗದಿ ಮಾಡಿ ಎಂದಿದ್ದಂತೂ ಬಿಜೆಪಿ ಮತ್ತು ಅತೃಪ್ತರ ಪಾಲಿಗೆ ಒಂದು ರೀತಿಯ ಚಾಲೆಂಜೇ ಆಗಿದೆ.

ಸದ್ಯ ಸದನ ಮುಂದೂಡಿಕೆ ಆಗಿದೆ. ಈಗ ಮತ್ತೊಮ್ಮೆ ವಿಪ್ ಜಾರಿಯಾಗಬಹುದು. ವಿಶ್ವಾಸಮತ ಯಾಚನೆ ನಿಗದಿ ಏಕಾಏಕಿ ಆಗುವಂಥದ್ದಲ್ಲ… ಇಲ್ಲಿ ಸಂಕೀರ್ಣ ಕಾನೂನು ಈ ಸಂದರ್ಭಕ್ಕೆ ಹೇಗೆ ಅಪ್ಲೈ ಆಗುತ್ತದೆ ಎಂಬ ಬಗ್ಗೆ ಗೊಂದಲವಿದೆ….

ಆದರೆ, ಸಿಎಂ ಪರ ವಾದ ಮಂಡಿಸಿದ ರಾಜೀವ್ ಧವನ್ ಇದನ್ನು ಪ್ರಜಾತಂತ್ರಕ್ಕೇ ಅಪಾಯ ಎಂಬ ರೀತಿಯಲ್ಲಿ ವಾದ ಮಂಡಿಸುತ್ತ ಆಪರೇಷನ್ ಕಮಲ ಎಂಬ ದಂಧೆಯ ಅಪಾವಿತ್ರ್ಯತೆಯನ್ನು ನ್ಯಾಯಾಧೀಶರಿಗೆ ಮನವರಿಕೆ ಮಾಡಲು ಯತ್ನಿಸುತ್ತಿದ್ದಾರೆ. ಮಂಗಳವಾರ ಅವರು, ಮತ್ತೆ ರೋಷನ್ ಬೇಗ್-ಐಎಂಎ ಮತ್ತು ಇತರ ಕೆಲವು ಅತೃಪ್ತರು ಭಾಗಿಯಾಗಿರಬಹುದು ಎನ್ನಲಾದ ಭ್ರಷ್ಟಾಚಾರದ ಪ್ರಕರಣಗಳನ್ನು ಸುಪ್ರೀಂ ಮುಂದೆ ಇಡಬಹುದು….

ಅಂತ್ಯದಲ್ಲಿ ಬಿಜೆಪಿ ಇಲ್ಲಿ ಸರ್ಕಾರ ರಚಿಸಬಹುದು, ಆದರೆ ಆಪರೇಷನ್ ಕಮಲ ಎಂಬ ವ್ಯಾಪಾರದ ಮೂಲಕ ಪಕ್ಷಾಂತರ ಕಾಯ್ದೆಯನ್ನೇ ಅಪ್ರಸ್ತುತ ಮಾಡುತ್ತ ಅಧಿಕಾರ ಕಬಳಿಸುತ್ತಿರವ ಬಿಜೆಪಿಯ ನಡೆಯೂ ಸುಪ್ರಿಂನಲ್ಲಿ ಚರ್ಚೆಯಾಗಬಹುದು. ಆ ಮೂಲಕ ರಾಷ್ಟ್ರವ್ಯಾಪಿಯಾಗಿ ಈ ಹೇಯ ದಂಧೆಯ ಅನಾವರಣವಾದರೂ ಆಗಲಿ ಎಂಬುದೇ ಪ್ರಜಾತಂತ್ರವಾದಿಗಳ ಆಶಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...