Homeಕರ್ನಾಟಕಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

ಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

- Advertisement -
- Advertisement -

ಸರ್ಕಾರ ಬೀಳುತ್ತೋ ಅಥವಾ ಇಲ್ಲವೋ ಎಂಬ ಚರ್ಚೆಯನ್ನು ಇವತ್ತಿನ (ಶುಕ್ರವಾರ) ಮುಂಜಾನೆ 4 ತಾಸುಗಳು ಹೊಸ ಆಯಾಮಕ್ಕೆ ಒಯ್ದುಬಿಟ್ಟಿವೆ. ಅರ್ಜೆಂಟಾಗಿ ಅಧಿಕಾರ ಹಿಡಿಯಬೇಕೆಂದಿದ್ದ ಬಿಜೆಪಿ ಮತ್ತು ಅತೃಪ್ತರಿಗೆ ತಾತ್ಕಾಲಿಕ ಹಿನ್ನಡೆ ಆಗಿದ್ದರೆ, ಒಂದೊಂದು ದಿನ ಸಿಕ್ಕರೂ ಸಾಕು ಎಂದು ಹಪಹಪಿಸುತ್ತಿದ್ದ ಮೈತ್ರಿ ಸರ್ಕಾರದ ಮುಖದಲ್ಲಿ ಮಂದಹಾಸ ಕಾಣಿಸಿತೊಡಗಿದೆ. ಇಲ್ಲೊಂದು ಇಂಟರೆಸ್ಟಿಂಗ್ ಪಾಯಿಂಟ್ ಅಂದರೆ, ತಮ್ಮ ರಾಜಕೀಯದ ಕೊನೆ ಘಟ್ಟದಲ್ಲಿರುವ ಸ್ಪೀಕರ್ ರಮೇಶಕುಮಾರರಿಗೆ ಈ ಒಟ್ಟೂ ಬಿಕ್ಕಟ್ಟು ಸಂವಿಧಾನ ಮತ್ತು ಸಂಸದೀಯ ಪ್ರಕ್ರಿಯೆಗಳ ಕುರಿತ ಅವರ ಜ್ಞಾನವನ್ನು ದೇಶದ ಎದುರು ಇಡಲು ಒಂದು ಅಪೂರ್ವ ಅವಕಾಶವನ್ನು ಒದಗಿಸಿದೆ!

ಸುಪ್ರಿಂಕೋರ್ಟು ಮಂಗಳವಾರಕ್ಕೆ ವಿಚಾರಣೆ ಮುಂದೂಡಿದ್ದು, ಸಂತಾಪ ಕಲಾಪದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಯ ಅಸ್ತ್ರ ಬಿಟ್ಟಿದ್ದು, ಹಿಂದೆಯೇ ವಿಪ್ ಭೂತವನ್ನು ತೇಲಿಬಿಟ್ಟಿದ್ದು-ಇದೆಲ್ಲವೂ ಆಪರೇಷನ್ ಕಮಲ ಎಂಬ ದಂಧೆಯನ್ನು ಅಧಿಕೃತಗೊಳಿಸಲು ಯತ್ನಿಸುತ್ತಿರುವ ಬಿಜೆಪಿಗೆ ಸದ್ಯಕ್ಕೆ ಶಾಕ್ ನೀಡಿದೆ. ಒಟ್ಟಿನಲ್ಲಿ ಅಧಿಕಾರ ಬಿಡಲೇಬಾರದು ಎಂದು ಒದ್ದಾಡುತ್ತಿರುವ ಮೈತ್ರಿ ಸರ್ಕಾರಕ್ಕೆ ರಿಲೀಫ್ ನೀಡಿದೆ.

‘ಈಗಲೇ ರಾಜೀನಾಮೆ ಅಂಗೀಕರಿಸಿ’ ಎಂದು ಸುಪ್ರಿಂಕೋರ್ಟು ಸ್ಪೀಕರ್ ಗೆ ಆದೇಶ ನೀಡಬಹುದು ಎಂದು ಬಿಜೆಪಿಯಷ್ಟೇ ಅಲ್ಲ, ಟಿವಿ ಮಾಧ್ಯಮಗಳು ಮತ್ತು ಅಲ್ಲಿ ಸ್ಪೀಕರ್ ನಾಲೆಡ್ಜ್ ಗಿಂತ ತಮ್ಮದೇ ಜಾಸ್ತಿ ಎಂದೆಲ್ಲ ಪ್ರದರ್ಶನ ಮಾಡಲು ಹೆಣಗಾಡುತ್ತಿರುವ ಕೆಲವು ಪತ್ರಕರ್ತ ಪಂಡಿತರೂ ನಿರೀಕ್ಷೆ ಮಾಡಿದ್ದರು. ಆದರೆ, ಅಲ್ಲಿ ನಡೆದದ್ದೇ ಬೇರೆ. ಅತೃಪ್ತರ ಪರ ಮುಕುಲ್ ರೊಹಟಗಿ ಮಂಡಿಸಿದ ವಾದಕ್ಕೆ ಸ್ಪೀಕರ್ ಪರ ವಾದ ಮಂಡಿಸಿದ ಅಭಿಷೇಕ್ ಸಿಂಘ್ವಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪರ ವಾದ ಮಂಡಿಸಿದ ರಾಹುಲ್ ಧವನ್ ಹಿನ್ನಡೆ ಮಾಡಿದರು. ‘ಈ ಸಂದರ್ಭದಲ್ಲಿ ನಾವು ಸ್ಪೀಕರ್ ಗೆ ನಿರ್ದೇಶನ ಮಾಡಬಾರದೇ’ ಎಂದು ಪ್ರಶ್ನೆ ಮಾಡಿಕೊಂಡ ಸುಪ್ರಿಂಕೋರ್ಟು ವಿಚಾರಣೆಯನ್ನು ಮಂಗಳವಾರದವರೆಗೆ ಮುಂದೂಡಿ, ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡಲು ಹೇಳುವ ಮೂಲಕ ಮುಂಬೈಯಲ್ಲಿ ಮಜಾ ಮಾಡುತ್ತಿರುವ ಶಾಸಕರಿಗೆ ಆಘಾತವನ್ನು, ವಿಜಯೋತ್ಸಾಹದ ನಿರೀಕ್ಷೆಯಲ್ಲಿ ಸದನಕ್ಕೆ ಬಂದಿದ್ದ ಬಿಜೆಪಿಗೆ ಭರ್ಜರಿ ಶಾಕ್ ಅನ್ನು ನೀಡಿಬಿಟ್ಟಿತು.

ಇದರಿಂದ ಸುಧಾರಿಸಿಕೊಳ್ಳುವ ಮೊದಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಆಶ್ಚರ್ಯಕರ ರೀತಿಯಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿ, ದಿನಾಂಕ ನಿಗದಿ ಮಾಡಿ ಎಂದಿದ್ದಂತೂ ಬಿಜೆಪಿ ಮತ್ತು ಅತೃಪ್ತರ ಪಾಲಿಗೆ ಒಂದು ರೀತಿಯ ಚಾಲೆಂಜೇ ಆಗಿದೆ.

ಸದ್ಯ ಸದನ ಮುಂದೂಡಿಕೆ ಆಗಿದೆ. ಈಗ ಮತ್ತೊಮ್ಮೆ ವಿಪ್ ಜಾರಿಯಾಗಬಹುದು. ವಿಶ್ವಾಸಮತ ಯಾಚನೆ ನಿಗದಿ ಏಕಾಏಕಿ ಆಗುವಂಥದ್ದಲ್ಲ… ಇಲ್ಲಿ ಸಂಕೀರ್ಣ ಕಾನೂನು ಈ ಸಂದರ್ಭಕ್ಕೆ ಹೇಗೆ ಅಪ್ಲೈ ಆಗುತ್ತದೆ ಎಂಬ ಬಗ್ಗೆ ಗೊಂದಲವಿದೆ….

ಆದರೆ, ಸಿಎಂ ಪರ ವಾದ ಮಂಡಿಸಿದ ರಾಜೀವ್ ಧವನ್ ಇದನ್ನು ಪ್ರಜಾತಂತ್ರಕ್ಕೇ ಅಪಾಯ ಎಂಬ ರೀತಿಯಲ್ಲಿ ವಾದ ಮಂಡಿಸುತ್ತ ಆಪರೇಷನ್ ಕಮಲ ಎಂಬ ದಂಧೆಯ ಅಪಾವಿತ್ರ್ಯತೆಯನ್ನು ನ್ಯಾಯಾಧೀಶರಿಗೆ ಮನವರಿಕೆ ಮಾಡಲು ಯತ್ನಿಸುತ್ತಿದ್ದಾರೆ. ಮಂಗಳವಾರ ಅವರು, ಮತ್ತೆ ರೋಷನ್ ಬೇಗ್-ಐಎಂಎ ಮತ್ತು ಇತರ ಕೆಲವು ಅತೃಪ್ತರು ಭಾಗಿಯಾಗಿರಬಹುದು ಎನ್ನಲಾದ ಭ್ರಷ್ಟಾಚಾರದ ಪ್ರಕರಣಗಳನ್ನು ಸುಪ್ರೀಂ ಮುಂದೆ ಇಡಬಹುದು….

ಅಂತ್ಯದಲ್ಲಿ ಬಿಜೆಪಿ ಇಲ್ಲಿ ಸರ್ಕಾರ ರಚಿಸಬಹುದು, ಆದರೆ ಆಪರೇಷನ್ ಕಮಲ ಎಂಬ ವ್ಯಾಪಾರದ ಮೂಲಕ ಪಕ್ಷಾಂತರ ಕಾಯ್ದೆಯನ್ನೇ ಅಪ್ರಸ್ತುತ ಮಾಡುತ್ತ ಅಧಿಕಾರ ಕಬಳಿಸುತ್ತಿರವ ಬಿಜೆಪಿಯ ನಡೆಯೂ ಸುಪ್ರಿಂನಲ್ಲಿ ಚರ್ಚೆಯಾಗಬಹುದು. ಆ ಮೂಲಕ ರಾಷ್ಟ್ರವ್ಯಾಪಿಯಾಗಿ ಈ ಹೇಯ ದಂಧೆಯ ಅನಾವರಣವಾದರೂ ಆಗಲಿ ಎಂಬುದೇ ಪ್ರಜಾತಂತ್ರವಾದಿಗಳ ಆಶಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...