Homeಕರ್ನಾಟಕಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

ಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

- Advertisement -
- Advertisement -

ಸರ್ಕಾರ ಬೀಳುತ್ತೋ ಅಥವಾ ಇಲ್ಲವೋ ಎಂಬ ಚರ್ಚೆಯನ್ನು ಇವತ್ತಿನ (ಶುಕ್ರವಾರ) ಮುಂಜಾನೆ 4 ತಾಸುಗಳು ಹೊಸ ಆಯಾಮಕ್ಕೆ ಒಯ್ದುಬಿಟ್ಟಿವೆ. ಅರ್ಜೆಂಟಾಗಿ ಅಧಿಕಾರ ಹಿಡಿಯಬೇಕೆಂದಿದ್ದ ಬಿಜೆಪಿ ಮತ್ತು ಅತೃಪ್ತರಿಗೆ ತಾತ್ಕಾಲಿಕ ಹಿನ್ನಡೆ ಆಗಿದ್ದರೆ, ಒಂದೊಂದು ದಿನ ಸಿಕ್ಕರೂ ಸಾಕು ಎಂದು ಹಪಹಪಿಸುತ್ತಿದ್ದ ಮೈತ್ರಿ ಸರ್ಕಾರದ ಮುಖದಲ್ಲಿ ಮಂದಹಾಸ ಕಾಣಿಸಿತೊಡಗಿದೆ. ಇಲ್ಲೊಂದು ಇಂಟರೆಸ್ಟಿಂಗ್ ಪಾಯಿಂಟ್ ಅಂದರೆ, ತಮ್ಮ ರಾಜಕೀಯದ ಕೊನೆ ಘಟ್ಟದಲ್ಲಿರುವ ಸ್ಪೀಕರ್ ರಮೇಶಕುಮಾರರಿಗೆ ಈ ಒಟ್ಟೂ ಬಿಕ್ಕಟ್ಟು ಸಂವಿಧಾನ ಮತ್ತು ಸಂಸದೀಯ ಪ್ರಕ್ರಿಯೆಗಳ ಕುರಿತ ಅವರ ಜ್ಞಾನವನ್ನು ದೇಶದ ಎದುರು ಇಡಲು ಒಂದು ಅಪೂರ್ವ ಅವಕಾಶವನ್ನು ಒದಗಿಸಿದೆ!

ಸುಪ್ರಿಂಕೋರ್ಟು ಮಂಗಳವಾರಕ್ಕೆ ವಿಚಾರಣೆ ಮುಂದೂಡಿದ್ದು, ಸಂತಾಪ ಕಲಾಪದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಯ ಅಸ್ತ್ರ ಬಿಟ್ಟಿದ್ದು, ಹಿಂದೆಯೇ ವಿಪ್ ಭೂತವನ್ನು ತೇಲಿಬಿಟ್ಟಿದ್ದು-ಇದೆಲ್ಲವೂ ಆಪರೇಷನ್ ಕಮಲ ಎಂಬ ದಂಧೆಯನ್ನು ಅಧಿಕೃತಗೊಳಿಸಲು ಯತ್ನಿಸುತ್ತಿರುವ ಬಿಜೆಪಿಗೆ ಸದ್ಯಕ್ಕೆ ಶಾಕ್ ನೀಡಿದೆ. ಒಟ್ಟಿನಲ್ಲಿ ಅಧಿಕಾರ ಬಿಡಲೇಬಾರದು ಎಂದು ಒದ್ದಾಡುತ್ತಿರುವ ಮೈತ್ರಿ ಸರ್ಕಾರಕ್ಕೆ ರಿಲೀಫ್ ನೀಡಿದೆ.

‘ಈಗಲೇ ರಾಜೀನಾಮೆ ಅಂಗೀಕರಿಸಿ’ ಎಂದು ಸುಪ್ರಿಂಕೋರ್ಟು ಸ್ಪೀಕರ್ ಗೆ ಆದೇಶ ನೀಡಬಹುದು ಎಂದು ಬಿಜೆಪಿಯಷ್ಟೇ ಅಲ್ಲ, ಟಿವಿ ಮಾಧ್ಯಮಗಳು ಮತ್ತು ಅಲ್ಲಿ ಸ್ಪೀಕರ್ ನಾಲೆಡ್ಜ್ ಗಿಂತ ತಮ್ಮದೇ ಜಾಸ್ತಿ ಎಂದೆಲ್ಲ ಪ್ರದರ್ಶನ ಮಾಡಲು ಹೆಣಗಾಡುತ್ತಿರುವ ಕೆಲವು ಪತ್ರಕರ್ತ ಪಂಡಿತರೂ ನಿರೀಕ್ಷೆ ಮಾಡಿದ್ದರು. ಆದರೆ, ಅಲ್ಲಿ ನಡೆದದ್ದೇ ಬೇರೆ. ಅತೃಪ್ತರ ಪರ ಮುಕುಲ್ ರೊಹಟಗಿ ಮಂಡಿಸಿದ ವಾದಕ್ಕೆ ಸ್ಪೀಕರ್ ಪರ ವಾದ ಮಂಡಿಸಿದ ಅಭಿಷೇಕ್ ಸಿಂಘ್ವಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪರ ವಾದ ಮಂಡಿಸಿದ ರಾಹುಲ್ ಧವನ್ ಹಿನ್ನಡೆ ಮಾಡಿದರು. ‘ಈ ಸಂದರ್ಭದಲ್ಲಿ ನಾವು ಸ್ಪೀಕರ್ ಗೆ ನಿರ್ದೇಶನ ಮಾಡಬಾರದೇ’ ಎಂದು ಪ್ರಶ್ನೆ ಮಾಡಿಕೊಂಡ ಸುಪ್ರಿಂಕೋರ್ಟು ವಿಚಾರಣೆಯನ್ನು ಮಂಗಳವಾರದವರೆಗೆ ಮುಂದೂಡಿ, ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡಲು ಹೇಳುವ ಮೂಲಕ ಮುಂಬೈಯಲ್ಲಿ ಮಜಾ ಮಾಡುತ್ತಿರುವ ಶಾಸಕರಿಗೆ ಆಘಾತವನ್ನು, ವಿಜಯೋತ್ಸಾಹದ ನಿರೀಕ್ಷೆಯಲ್ಲಿ ಸದನಕ್ಕೆ ಬಂದಿದ್ದ ಬಿಜೆಪಿಗೆ ಭರ್ಜರಿ ಶಾಕ್ ಅನ್ನು ನೀಡಿಬಿಟ್ಟಿತು.

ಇದರಿಂದ ಸುಧಾರಿಸಿಕೊಳ್ಳುವ ಮೊದಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಆಶ್ಚರ್ಯಕರ ರೀತಿಯಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿ, ದಿನಾಂಕ ನಿಗದಿ ಮಾಡಿ ಎಂದಿದ್ದಂತೂ ಬಿಜೆಪಿ ಮತ್ತು ಅತೃಪ್ತರ ಪಾಲಿಗೆ ಒಂದು ರೀತಿಯ ಚಾಲೆಂಜೇ ಆಗಿದೆ.

ಸದ್ಯ ಸದನ ಮುಂದೂಡಿಕೆ ಆಗಿದೆ. ಈಗ ಮತ್ತೊಮ್ಮೆ ವಿಪ್ ಜಾರಿಯಾಗಬಹುದು. ವಿಶ್ವಾಸಮತ ಯಾಚನೆ ನಿಗದಿ ಏಕಾಏಕಿ ಆಗುವಂಥದ್ದಲ್ಲ… ಇಲ್ಲಿ ಸಂಕೀರ್ಣ ಕಾನೂನು ಈ ಸಂದರ್ಭಕ್ಕೆ ಹೇಗೆ ಅಪ್ಲೈ ಆಗುತ್ತದೆ ಎಂಬ ಬಗ್ಗೆ ಗೊಂದಲವಿದೆ….

ಆದರೆ, ಸಿಎಂ ಪರ ವಾದ ಮಂಡಿಸಿದ ರಾಜೀವ್ ಧವನ್ ಇದನ್ನು ಪ್ರಜಾತಂತ್ರಕ್ಕೇ ಅಪಾಯ ಎಂಬ ರೀತಿಯಲ್ಲಿ ವಾದ ಮಂಡಿಸುತ್ತ ಆಪರೇಷನ್ ಕಮಲ ಎಂಬ ದಂಧೆಯ ಅಪಾವಿತ್ರ್ಯತೆಯನ್ನು ನ್ಯಾಯಾಧೀಶರಿಗೆ ಮನವರಿಕೆ ಮಾಡಲು ಯತ್ನಿಸುತ್ತಿದ್ದಾರೆ. ಮಂಗಳವಾರ ಅವರು, ಮತ್ತೆ ರೋಷನ್ ಬೇಗ್-ಐಎಂಎ ಮತ್ತು ಇತರ ಕೆಲವು ಅತೃಪ್ತರು ಭಾಗಿಯಾಗಿರಬಹುದು ಎನ್ನಲಾದ ಭ್ರಷ್ಟಾಚಾರದ ಪ್ರಕರಣಗಳನ್ನು ಸುಪ್ರೀಂ ಮುಂದೆ ಇಡಬಹುದು….

ಅಂತ್ಯದಲ್ಲಿ ಬಿಜೆಪಿ ಇಲ್ಲಿ ಸರ್ಕಾರ ರಚಿಸಬಹುದು, ಆದರೆ ಆಪರೇಷನ್ ಕಮಲ ಎಂಬ ವ್ಯಾಪಾರದ ಮೂಲಕ ಪಕ್ಷಾಂತರ ಕಾಯ್ದೆಯನ್ನೇ ಅಪ್ರಸ್ತುತ ಮಾಡುತ್ತ ಅಧಿಕಾರ ಕಬಳಿಸುತ್ತಿರವ ಬಿಜೆಪಿಯ ನಡೆಯೂ ಸುಪ್ರಿಂನಲ್ಲಿ ಚರ್ಚೆಯಾಗಬಹುದು. ಆ ಮೂಲಕ ರಾಷ್ಟ್ರವ್ಯಾಪಿಯಾಗಿ ಈ ಹೇಯ ದಂಧೆಯ ಅನಾವರಣವಾದರೂ ಆಗಲಿ ಎಂಬುದೇ ಪ್ರಜಾತಂತ್ರವಾದಿಗಳ ಆಶಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...