Homeಕರ್ನಾಟಕಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

ಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

- Advertisement -
- Advertisement -

ಸರ್ಕಾರ ಬೀಳುತ್ತೋ ಅಥವಾ ಇಲ್ಲವೋ ಎಂಬ ಚರ್ಚೆಯನ್ನು ಇವತ್ತಿನ (ಶುಕ್ರವಾರ) ಮುಂಜಾನೆ 4 ತಾಸುಗಳು ಹೊಸ ಆಯಾಮಕ್ಕೆ ಒಯ್ದುಬಿಟ್ಟಿವೆ. ಅರ್ಜೆಂಟಾಗಿ ಅಧಿಕಾರ ಹಿಡಿಯಬೇಕೆಂದಿದ್ದ ಬಿಜೆಪಿ ಮತ್ತು ಅತೃಪ್ತರಿಗೆ ತಾತ್ಕಾಲಿಕ ಹಿನ್ನಡೆ ಆಗಿದ್ದರೆ, ಒಂದೊಂದು ದಿನ ಸಿಕ್ಕರೂ ಸಾಕು ಎಂದು ಹಪಹಪಿಸುತ್ತಿದ್ದ ಮೈತ್ರಿ ಸರ್ಕಾರದ ಮುಖದಲ್ಲಿ ಮಂದಹಾಸ ಕಾಣಿಸಿತೊಡಗಿದೆ. ಇಲ್ಲೊಂದು ಇಂಟರೆಸ್ಟಿಂಗ್ ಪಾಯಿಂಟ್ ಅಂದರೆ, ತಮ್ಮ ರಾಜಕೀಯದ ಕೊನೆ ಘಟ್ಟದಲ್ಲಿರುವ ಸ್ಪೀಕರ್ ರಮೇಶಕುಮಾರರಿಗೆ ಈ ಒಟ್ಟೂ ಬಿಕ್ಕಟ್ಟು ಸಂವಿಧಾನ ಮತ್ತು ಸಂಸದೀಯ ಪ್ರಕ್ರಿಯೆಗಳ ಕುರಿತ ಅವರ ಜ್ಞಾನವನ್ನು ದೇಶದ ಎದುರು ಇಡಲು ಒಂದು ಅಪೂರ್ವ ಅವಕಾಶವನ್ನು ಒದಗಿಸಿದೆ!

ಸುಪ್ರಿಂಕೋರ್ಟು ಮಂಗಳವಾರಕ್ಕೆ ವಿಚಾರಣೆ ಮುಂದೂಡಿದ್ದು, ಸಂತಾಪ ಕಲಾಪದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಯ ಅಸ್ತ್ರ ಬಿಟ್ಟಿದ್ದು, ಹಿಂದೆಯೇ ವಿಪ್ ಭೂತವನ್ನು ತೇಲಿಬಿಟ್ಟಿದ್ದು-ಇದೆಲ್ಲವೂ ಆಪರೇಷನ್ ಕಮಲ ಎಂಬ ದಂಧೆಯನ್ನು ಅಧಿಕೃತಗೊಳಿಸಲು ಯತ್ನಿಸುತ್ತಿರುವ ಬಿಜೆಪಿಗೆ ಸದ್ಯಕ್ಕೆ ಶಾಕ್ ನೀಡಿದೆ. ಒಟ್ಟಿನಲ್ಲಿ ಅಧಿಕಾರ ಬಿಡಲೇಬಾರದು ಎಂದು ಒದ್ದಾಡುತ್ತಿರುವ ಮೈತ್ರಿ ಸರ್ಕಾರಕ್ಕೆ ರಿಲೀಫ್ ನೀಡಿದೆ.

‘ಈಗಲೇ ರಾಜೀನಾಮೆ ಅಂಗೀಕರಿಸಿ’ ಎಂದು ಸುಪ್ರಿಂಕೋರ್ಟು ಸ್ಪೀಕರ್ ಗೆ ಆದೇಶ ನೀಡಬಹುದು ಎಂದು ಬಿಜೆಪಿಯಷ್ಟೇ ಅಲ್ಲ, ಟಿವಿ ಮಾಧ್ಯಮಗಳು ಮತ್ತು ಅಲ್ಲಿ ಸ್ಪೀಕರ್ ನಾಲೆಡ್ಜ್ ಗಿಂತ ತಮ್ಮದೇ ಜಾಸ್ತಿ ಎಂದೆಲ್ಲ ಪ್ರದರ್ಶನ ಮಾಡಲು ಹೆಣಗಾಡುತ್ತಿರುವ ಕೆಲವು ಪತ್ರಕರ್ತ ಪಂಡಿತರೂ ನಿರೀಕ್ಷೆ ಮಾಡಿದ್ದರು. ಆದರೆ, ಅಲ್ಲಿ ನಡೆದದ್ದೇ ಬೇರೆ. ಅತೃಪ್ತರ ಪರ ಮುಕುಲ್ ರೊಹಟಗಿ ಮಂಡಿಸಿದ ವಾದಕ್ಕೆ ಸ್ಪೀಕರ್ ಪರ ವಾದ ಮಂಡಿಸಿದ ಅಭಿಷೇಕ್ ಸಿಂಘ್ವಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪರ ವಾದ ಮಂಡಿಸಿದ ರಾಹುಲ್ ಧವನ್ ಹಿನ್ನಡೆ ಮಾಡಿದರು. ‘ಈ ಸಂದರ್ಭದಲ್ಲಿ ನಾವು ಸ್ಪೀಕರ್ ಗೆ ನಿರ್ದೇಶನ ಮಾಡಬಾರದೇ’ ಎಂದು ಪ್ರಶ್ನೆ ಮಾಡಿಕೊಂಡ ಸುಪ್ರಿಂಕೋರ್ಟು ವಿಚಾರಣೆಯನ್ನು ಮಂಗಳವಾರದವರೆಗೆ ಮುಂದೂಡಿ, ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡಲು ಹೇಳುವ ಮೂಲಕ ಮುಂಬೈಯಲ್ಲಿ ಮಜಾ ಮಾಡುತ್ತಿರುವ ಶಾಸಕರಿಗೆ ಆಘಾತವನ್ನು, ವಿಜಯೋತ್ಸಾಹದ ನಿರೀಕ್ಷೆಯಲ್ಲಿ ಸದನಕ್ಕೆ ಬಂದಿದ್ದ ಬಿಜೆಪಿಗೆ ಭರ್ಜರಿ ಶಾಕ್ ಅನ್ನು ನೀಡಿಬಿಟ್ಟಿತು.

ಇದರಿಂದ ಸುಧಾರಿಸಿಕೊಳ್ಳುವ ಮೊದಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಆಶ್ಚರ್ಯಕರ ರೀತಿಯಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿ, ದಿನಾಂಕ ನಿಗದಿ ಮಾಡಿ ಎಂದಿದ್ದಂತೂ ಬಿಜೆಪಿ ಮತ್ತು ಅತೃಪ್ತರ ಪಾಲಿಗೆ ಒಂದು ರೀತಿಯ ಚಾಲೆಂಜೇ ಆಗಿದೆ.

ಸದ್ಯ ಸದನ ಮುಂದೂಡಿಕೆ ಆಗಿದೆ. ಈಗ ಮತ್ತೊಮ್ಮೆ ವಿಪ್ ಜಾರಿಯಾಗಬಹುದು. ವಿಶ್ವಾಸಮತ ಯಾಚನೆ ನಿಗದಿ ಏಕಾಏಕಿ ಆಗುವಂಥದ್ದಲ್ಲ… ಇಲ್ಲಿ ಸಂಕೀರ್ಣ ಕಾನೂನು ಈ ಸಂದರ್ಭಕ್ಕೆ ಹೇಗೆ ಅಪ್ಲೈ ಆಗುತ್ತದೆ ಎಂಬ ಬಗ್ಗೆ ಗೊಂದಲವಿದೆ….

ಆದರೆ, ಸಿಎಂ ಪರ ವಾದ ಮಂಡಿಸಿದ ರಾಜೀವ್ ಧವನ್ ಇದನ್ನು ಪ್ರಜಾತಂತ್ರಕ್ಕೇ ಅಪಾಯ ಎಂಬ ರೀತಿಯಲ್ಲಿ ವಾದ ಮಂಡಿಸುತ್ತ ಆಪರೇಷನ್ ಕಮಲ ಎಂಬ ದಂಧೆಯ ಅಪಾವಿತ್ರ್ಯತೆಯನ್ನು ನ್ಯಾಯಾಧೀಶರಿಗೆ ಮನವರಿಕೆ ಮಾಡಲು ಯತ್ನಿಸುತ್ತಿದ್ದಾರೆ. ಮಂಗಳವಾರ ಅವರು, ಮತ್ತೆ ರೋಷನ್ ಬೇಗ್-ಐಎಂಎ ಮತ್ತು ಇತರ ಕೆಲವು ಅತೃಪ್ತರು ಭಾಗಿಯಾಗಿರಬಹುದು ಎನ್ನಲಾದ ಭ್ರಷ್ಟಾಚಾರದ ಪ್ರಕರಣಗಳನ್ನು ಸುಪ್ರೀಂ ಮುಂದೆ ಇಡಬಹುದು….

ಅಂತ್ಯದಲ್ಲಿ ಬಿಜೆಪಿ ಇಲ್ಲಿ ಸರ್ಕಾರ ರಚಿಸಬಹುದು, ಆದರೆ ಆಪರೇಷನ್ ಕಮಲ ಎಂಬ ವ್ಯಾಪಾರದ ಮೂಲಕ ಪಕ್ಷಾಂತರ ಕಾಯ್ದೆಯನ್ನೇ ಅಪ್ರಸ್ತುತ ಮಾಡುತ್ತ ಅಧಿಕಾರ ಕಬಳಿಸುತ್ತಿರವ ಬಿಜೆಪಿಯ ನಡೆಯೂ ಸುಪ್ರಿಂನಲ್ಲಿ ಚರ್ಚೆಯಾಗಬಹುದು. ಆ ಮೂಲಕ ರಾಷ್ಟ್ರವ್ಯಾಪಿಯಾಗಿ ಈ ಹೇಯ ದಂಧೆಯ ಅನಾವರಣವಾದರೂ ಆಗಲಿ ಎಂಬುದೇ ಪ್ರಜಾತಂತ್ರವಾದಿಗಳ ಆಶಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....