Homeಕರ್ನಾಟಕಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

ಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

- Advertisement -
- Advertisement -

ಸರ್ಕಾರ ಬೀಳುತ್ತೋ ಅಥವಾ ಇಲ್ಲವೋ ಎಂಬ ಚರ್ಚೆಯನ್ನು ಇವತ್ತಿನ (ಶುಕ್ರವಾರ) ಮುಂಜಾನೆ 4 ತಾಸುಗಳು ಹೊಸ ಆಯಾಮಕ್ಕೆ ಒಯ್ದುಬಿಟ್ಟಿವೆ. ಅರ್ಜೆಂಟಾಗಿ ಅಧಿಕಾರ ಹಿಡಿಯಬೇಕೆಂದಿದ್ದ ಬಿಜೆಪಿ ಮತ್ತು ಅತೃಪ್ತರಿಗೆ ತಾತ್ಕಾಲಿಕ ಹಿನ್ನಡೆ ಆಗಿದ್ದರೆ, ಒಂದೊಂದು ದಿನ ಸಿಕ್ಕರೂ ಸಾಕು ಎಂದು ಹಪಹಪಿಸುತ್ತಿದ್ದ ಮೈತ್ರಿ ಸರ್ಕಾರದ ಮುಖದಲ್ಲಿ ಮಂದಹಾಸ ಕಾಣಿಸಿತೊಡಗಿದೆ. ಇಲ್ಲೊಂದು ಇಂಟರೆಸ್ಟಿಂಗ್ ಪಾಯಿಂಟ್ ಅಂದರೆ, ತಮ್ಮ ರಾಜಕೀಯದ ಕೊನೆ ಘಟ್ಟದಲ್ಲಿರುವ ಸ್ಪೀಕರ್ ರಮೇಶಕುಮಾರರಿಗೆ ಈ ಒಟ್ಟೂ ಬಿಕ್ಕಟ್ಟು ಸಂವಿಧಾನ ಮತ್ತು ಸಂಸದೀಯ ಪ್ರಕ್ರಿಯೆಗಳ ಕುರಿತ ಅವರ ಜ್ಞಾನವನ್ನು ದೇಶದ ಎದುರು ಇಡಲು ಒಂದು ಅಪೂರ್ವ ಅವಕಾಶವನ್ನು ಒದಗಿಸಿದೆ!

ಸುಪ್ರಿಂಕೋರ್ಟು ಮಂಗಳವಾರಕ್ಕೆ ವಿಚಾರಣೆ ಮುಂದೂಡಿದ್ದು, ಸಂತಾಪ ಕಲಾಪದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಯ ಅಸ್ತ್ರ ಬಿಟ್ಟಿದ್ದು, ಹಿಂದೆಯೇ ವಿಪ್ ಭೂತವನ್ನು ತೇಲಿಬಿಟ್ಟಿದ್ದು-ಇದೆಲ್ಲವೂ ಆಪರೇಷನ್ ಕಮಲ ಎಂಬ ದಂಧೆಯನ್ನು ಅಧಿಕೃತಗೊಳಿಸಲು ಯತ್ನಿಸುತ್ತಿರುವ ಬಿಜೆಪಿಗೆ ಸದ್ಯಕ್ಕೆ ಶಾಕ್ ನೀಡಿದೆ. ಒಟ್ಟಿನಲ್ಲಿ ಅಧಿಕಾರ ಬಿಡಲೇಬಾರದು ಎಂದು ಒದ್ದಾಡುತ್ತಿರುವ ಮೈತ್ರಿ ಸರ್ಕಾರಕ್ಕೆ ರಿಲೀಫ್ ನೀಡಿದೆ.

‘ಈಗಲೇ ರಾಜೀನಾಮೆ ಅಂಗೀಕರಿಸಿ’ ಎಂದು ಸುಪ್ರಿಂಕೋರ್ಟು ಸ್ಪೀಕರ್ ಗೆ ಆದೇಶ ನೀಡಬಹುದು ಎಂದು ಬಿಜೆಪಿಯಷ್ಟೇ ಅಲ್ಲ, ಟಿವಿ ಮಾಧ್ಯಮಗಳು ಮತ್ತು ಅಲ್ಲಿ ಸ್ಪೀಕರ್ ನಾಲೆಡ್ಜ್ ಗಿಂತ ತಮ್ಮದೇ ಜಾಸ್ತಿ ಎಂದೆಲ್ಲ ಪ್ರದರ್ಶನ ಮಾಡಲು ಹೆಣಗಾಡುತ್ತಿರುವ ಕೆಲವು ಪತ್ರಕರ್ತ ಪಂಡಿತರೂ ನಿರೀಕ್ಷೆ ಮಾಡಿದ್ದರು. ಆದರೆ, ಅಲ್ಲಿ ನಡೆದದ್ದೇ ಬೇರೆ. ಅತೃಪ್ತರ ಪರ ಮುಕುಲ್ ರೊಹಟಗಿ ಮಂಡಿಸಿದ ವಾದಕ್ಕೆ ಸ್ಪೀಕರ್ ಪರ ವಾದ ಮಂಡಿಸಿದ ಅಭಿಷೇಕ್ ಸಿಂಘ್ವಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪರ ವಾದ ಮಂಡಿಸಿದ ರಾಹುಲ್ ಧವನ್ ಹಿನ್ನಡೆ ಮಾಡಿದರು. ‘ಈ ಸಂದರ್ಭದಲ್ಲಿ ನಾವು ಸ್ಪೀಕರ್ ಗೆ ನಿರ್ದೇಶನ ಮಾಡಬಾರದೇ’ ಎಂದು ಪ್ರಶ್ನೆ ಮಾಡಿಕೊಂಡ ಸುಪ್ರಿಂಕೋರ್ಟು ವಿಚಾರಣೆಯನ್ನು ಮಂಗಳವಾರದವರೆಗೆ ಮುಂದೂಡಿ, ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡಲು ಹೇಳುವ ಮೂಲಕ ಮುಂಬೈಯಲ್ಲಿ ಮಜಾ ಮಾಡುತ್ತಿರುವ ಶಾಸಕರಿಗೆ ಆಘಾತವನ್ನು, ವಿಜಯೋತ್ಸಾಹದ ನಿರೀಕ್ಷೆಯಲ್ಲಿ ಸದನಕ್ಕೆ ಬಂದಿದ್ದ ಬಿಜೆಪಿಗೆ ಭರ್ಜರಿ ಶಾಕ್ ಅನ್ನು ನೀಡಿಬಿಟ್ಟಿತು.

ಇದರಿಂದ ಸುಧಾರಿಸಿಕೊಳ್ಳುವ ಮೊದಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಆಶ್ಚರ್ಯಕರ ರೀತಿಯಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿ, ದಿನಾಂಕ ನಿಗದಿ ಮಾಡಿ ಎಂದಿದ್ದಂತೂ ಬಿಜೆಪಿ ಮತ್ತು ಅತೃಪ್ತರ ಪಾಲಿಗೆ ಒಂದು ರೀತಿಯ ಚಾಲೆಂಜೇ ಆಗಿದೆ.

ಸದ್ಯ ಸದನ ಮುಂದೂಡಿಕೆ ಆಗಿದೆ. ಈಗ ಮತ್ತೊಮ್ಮೆ ವಿಪ್ ಜಾರಿಯಾಗಬಹುದು. ವಿಶ್ವಾಸಮತ ಯಾಚನೆ ನಿಗದಿ ಏಕಾಏಕಿ ಆಗುವಂಥದ್ದಲ್ಲ… ಇಲ್ಲಿ ಸಂಕೀರ್ಣ ಕಾನೂನು ಈ ಸಂದರ್ಭಕ್ಕೆ ಹೇಗೆ ಅಪ್ಲೈ ಆಗುತ್ತದೆ ಎಂಬ ಬಗ್ಗೆ ಗೊಂದಲವಿದೆ….

ಆದರೆ, ಸಿಎಂ ಪರ ವಾದ ಮಂಡಿಸಿದ ರಾಜೀವ್ ಧವನ್ ಇದನ್ನು ಪ್ರಜಾತಂತ್ರಕ್ಕೇ ಅಪಾಯ ಎಂಬ ರೀತಿಯಲ್ಲಿ ವಾದ ಮಂಡಿಸುತ್ತ ಆಪರೇಷನ್ ಕಮಲ ಎಂಬ ದಂಧೆಯ ಅಪಾವಿತ್ರ್ಯತೆಯನ್ನು ನ್ಯಾಯಾಧೀಶರಿಗೆ ಮನವರಿಕೆ ಮಾಡಲು ಯತ್ನಿಸುತ್ತಿದ್ದಾರೆ. ಮಂಗಳವಾರ ಅವರು, ಮತ್ತೆ ರೋಷನ್ ಬೇಗ್-ಐಎಂಎ ಮತ್ತು ಇತರ ಕೆಲವು ಅತೃಪ್ತರು ಭಾಗಿಯಾಗಿರಬಹುದು ಎನ್ನಲಾದ ಭ್ರಷ್ಟಾಚಾರದ ಪ್ರಕರಣಗಳನ್ನು ಸುಪ್ರೀಂ ಮುಂದೆ ಇಡಬಹುದು….

ಅಂತ್ಯದಲ್ಲಿ ಬಿಜೆಪಿ ಇಲ್ಲಿ ಸರ್ಕಾರ ರಚಿಸಬಹುದು, ಆದರೆ ಆಪರೇಷನ್ ಕಮಲ ಎಂಬ ವ್ಯಾಪಾರದ ಮೂಲಕ ಪಕ್ಷಾಂತರ ಕಾಯ್ದೆಯನ್ನೇ ಅಪ್ರಸ್ತುತ ಮಾಡುತ್ತ ಅಧಿಕಾರ ಕಬಳಿಸುತ್ತಿರವ ಬಿಜೆಪಿಯ ನಡೆಯೂ ಸುಪ್ರಿಂನಲ್ಲಿ ಚರ್ಚೆಯಾಗಬಹುದು. ಆ ಮೂಲಕ ರಾಷ್ಟ್ರವ್ಯಾಪಿಯಾಗಿ ಈ ಹೇಯ ದಂಧೆಯ ಅನಾವರಣವಾದರೂ ಆಗಲಿ ಎಂಬುದೇ ಪ್ರಜಾತಂತ್ರವಾದಿಗಳ ಆಶಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...