Homeಕರ್ನಾಟಕಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

ಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

- Advertisement -
- Advertisement -

ಸರ್ಕಾರ ಬೀಳುತ್ತೋ ಅಥವಾ ಇಲ್ಲವೋ ಎಂಬ ಚರ್ಚೆಯನ್ನು ಇವತ್ತಿನ (ಶುಕ್ರವಾರ) ಮುಂಜಾನೆ 4 ತಾಸುಗಳು ಹೊಸ ಆಯಾಮಕ್ಕೆ ಒಯ್ದುಬಿಟ್ಟಿವೆ. ಅರ್ಜೆಂಟಾಗಿ ಅಧಿಕಾರ ಹಿಡಿಯಬೇಕೆಂದಿದ್ದ ಬಿಜೆಪಿ ಮತ್ತು ಅತೃಪ್ತರಿಗೆ ತಾತ್ಕಾಲಿಕ ಹಿನ್ನಡೆ ಆಗಿದ್ದರೆ, ಒಂದೊಂದು ದಿನ ಸಿಕ್ಕರೂ ಸಾಕು ಎಂದು ಹಪಹಪಿಸುತ್ತಿದ್ದ ಮೈತ್ರಿ ಸರ್ಕಾರದ ಮುಖದಲ್ಲಿ ಮಂದಹಾಸ ಕಾಣಿಸಿತೊಡಗಿದೆ. ಇಲ್ಲೊಂದು ಇಂಟರೆಸ್ಟಿಂಗ್ ಪಾಯಿಂಟ್ ಅಂದರೆ, ತಮ್ಮ ರಾಜಕೀಯದ ಕೊನೆ ಘಟ್ಟದಲ್ಲಿರುವ ಸ್ಪೀಕರ್ ರಮೇಶಕುಮಾರರಿಗೆ ಈ ಒಟ್ಟೂ ಬಿಕ್ಕಟ್ಟು ಸಂವಿಧಾನ ಮತ್ತು ಸಂಸದೀಯ ಪ್ರಕ್ರಿಯೆಗಳ ಕುರಿತ ಅವರ ಜ್ಞಾನವನ್ನು ದೇಶದ ಎದುರು ಇಡಲು ಒಂದು ಅಪೂರ್ವ ಅವಕಾಶವನ್ನು ಒದಗಿಸಿದೆ!

ಸುಪ್ರಿಂಕೋರ್ಟು ಮಂಗಳವಾರಕ್ಕೆ ವಿಚಾರಣೆ ಮುಂದೂಡಿದ್ದು, ಸಂತಾಪ ಕಲಾಪದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಯ ಅಸ್ತ್ರ ಬಿಟ್ಟಿದ್ದು, ಹಿಂದೆಯೇ ವಿಪ್ ಭೂತವನ್ನು ತೇಲಿಬಿಟ್ಟಿದ್ದು-ಇದೆಲ್ಲವೂ ಆಪರೇಷನ್ ಕಮಲ ಎಂಬ ದಂಧೆಯನ್ನು ಅಧಿಕೃತಗೊಳಿಸಲು ಯತ್ನಿಸುತ್ತಿರುವ ಬಿಜೆಪಿಗೆ ಸದ್ಯಕ್ಕೆ ಶಾಕ್ ನೀಡಿದೆ. ಒಟ್ಟಿನಲ್ಲಿ ಅಧಿಕಾರ ಬಿಡಲೇಬಾರದು ಎಂದು ಒದ್ದಾಡುತ್ತಿರುವ ಮೈತ್ರಿ ಸರ್ಕಾರಕ್ಕೆ ರಿಲೀಫ್ ನೀಡಿದೆ.

‘ಈಗಲೇ ರಾಜೀನಾಮೆ ಅಂಗೀಕರಿಸಿ’ ಎಂದು ಸುಪ್ರಿಂಕೋರ್ಟು ಸ್ಪೀಕರ್ ಗೆ ಆದೇಶ ನೀಡಬಹುದು ಎಂದು ಬಿಜೆಪಿಯಷ್ಟೇ ಅಲ್ಲ, ಟಿವಿ ಮಾಧ್ಯಮಗಳು ಮತ್ತು ಅಲ್ಲಿ ಸ್ಪೀಕರ್ ನಾಲೆಡ್ಜ್ ಗಿಂತ ತಮ್ಮದೇ ಜಾಸ್ತಿ ಎಂದೆಲ್ಲ ಪ್ರದರ್ಶನ ಮಾಡಲು ಹೆಣಗಾಡುತ್ತಿರುವ ಕೆಲವು ಪತ್ರಕರ್ತ ಪಂಡಿತರೂ ನಿರೀಕ್ಷೆ ಮಾಡಿದ್ದರು. ಆದರೆ, ಅಲ್ಲಿ ನಡೆದದ್ದೇ ಬೇರೆ. ಅತೃಪ್ತರ ಪರ ಮುಕುಲ್ ರೊಹಟಗಿ ಮಂಡಿಸಿದ ವಾದಕ್ಕೆ ಸ್ಪೀಕರ್ ಪರ ವಾದ ಮಂಡಿಸಿದ ಅಭಿಷೇಕ್ ಸಿಂಘ್ವಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪರ ವಾದ ಮಂಡಿಸಿದ ರಾಹುಲ್ ಧವನ್ ಹಿನ್ನಡೆ ಮಾಡಿದರು. ‘ಈ ಸಂದರ್ಭದಲ್ಲಿ ನಾವು ಸ್ಪೀಕರ್ ಗೆ ನಿರ್ದೇಶನ ಮಾಡಬಾರದೇ’ ಎಂದು ಪ್ರಶ್ನೆ ಮಾಡಿಕೊಂಡ ಸುಪ್ರಿಂಕೋರ್ಟು ವಿಚಾರಣೆಯನ್ನು ಮಂಗಳವಾರದವರೆಗೆ ಮುಂದೂಡಿ, ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡಲು ಹೇಳುವ ಮೂಲಕ ಮುಂಬೈಯಲ್ಲಿ ಮಜಾ ಮಾಡುತ್ತಿರುವ ಶಾಸಕರಿಗೆ ಆಘಾತವನ್ನು, ವಿಜಯೋತ್ಸಾಹದ ನಿರೀಕ್ಷೆಯಲ್ಲಿ ಸದನಕ್ಕೆ ಬಂದಿದ್ದ ಬಿಜೆಪಿಗೆ ಭರ್ಜರಿ ಶಾಕ್ ಅನ್ನು ನೀಡಿಬಿಟ್ಟಿತು.

ಇದರಿಂದ ಸುಧಾರಿಸಿಕೊಳ್ಳುವ ಮೊದಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಆಶ್ಚರ್ಯಕರ ರೀತಿಯಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿ, ದಿನಾಂಕ ನಿಗದಿ ಮಾಡಿ ಎಂದಿದ್ದಂತೂ ಬಿಜೆಪಿ ಮತ್ತು ಅತೃಪ್ತರ ಪಾಲಿಗೆ ಒಂದು ರೀತಿಯ ಚಾಲೆಂಜೇ ಆಗಿದೆ.

ಸದ್ಯ ಸದನ ಮುಂದೂಡಿಕೆ ಆಗಿದೆ. ಈಗ ಮತ್ತೊಮ್ಮೆ ವಿಪ್ ಜಾರಿಯಾಗಬಹುದು. ವಿಶ್ವಾಸಮತ ಯಾಚನೆ ನಿಗದಿ ಏಕಾಏಕಿ ಆಗುವಂಥದ್ದಲ್ಲ… ಇಲ್ಲಿ ಸಂಕೀರ್ಣ ಕಾನೂನು ಈ ಸಂದರ್ಭಕ್ಕೆ ಹೇಗೆ ಅಪ್ಲೈ ಆಗುತ್ತದೆ ಎಂಬ ಬಗ್ಗೆ ಗೊಂದಲವಿದೆ….

ಆದರೆ, ಸಿಎಂ ಪರ ವಾದ ಮಂಡಿಸಿದ ರಾಜೀವ್ ಧವನ್ ಇದನ್ನು ಪ್ರಜಾತಂತ್ರಕ್ಕೇ ಅಪಾಯ ಎಂಬ ರೀತಿಯಲ್ಲಿ ವಾದ ಮಂಡಿಸುತ್ತ ಆಪರೇಷನ್ ಕಮಲ ಎಂಬ ದಂಧೆಯ ಅಪಾವಿತ್ರ್ಯತೆಯನ್ನು ನ್ಯಾಯಾಧೀಶರಿಗೆ ಮನವರಿಕೆ ಮಾಡಲು ಯತ್ನಿಸುತ್ತಿದ್ದಾರೆ. ಮಂಗಳವಾರ ಅವರು, ಮತ್ತೆ ರೋಷನ್ ಬೇಗ್-ಐಎಂಎ ಮತ್ತು ಇತರ ಕೆಲವು ಅತೃಪ್ತರು ಭಾಗಿಯಾಗಿರಬಹುದು ಎನ್ನಲಾದ ಭ್ರಷ್ಟಾಚಾರದ ಪ್ರಕರಣಗಳನ್ನು ಸುಪ್ರೀಂ ಮುಂದೆ ಇಡಬಹುದು….

ಅಂತ್ಯದಲ್ಲಿ ಬಿಜೆಪಿ ಇಲ್ಲಿ ಸರ್ಕಾರ ರಚಿಸಬಹುದು, ಆದರೆ ಆಪರೇಷನ್ ಕಮಲ ಎಂಬ ವ್ಯಾಪಾರದ ಮೂಲಕ ಪಕ್ಷಾಂತರ ಕಾಯ್ದೆಯನ್ನೇ ಅಪ್ರಸ್ತುತ ಮಾಡುತ್ತ ಅಧಿಕಾರ ಕಬಳಿಸುತ್ತಿರವ ಬಿಜೆಪಿಯ ನಡೆಯೂ ಸುಪ್ರಿಂನಲ್ಲಿ ಚರ್ಚೆಯಾಗಬಹುದು. ಆ ಮೂಲಕ ರಾಷ್ಟ್ರವ್ಯಾಪಿಯಾಗಿ ಈ ಹೇಯ ದಂಧೆಯ ಅನಾವರಣವಾದರೂ ಆಗಲಿ ಎಂಬುದೇ ಪ್ರಜಾತಂತ್ರವಾದಿಗಳ ಆಶಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...