Homeಕರ್ನಾಟಕಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

ಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

- Advertisement -
- Advertisement -

ಸರ್ಕಾರ ಬೀಳುತ್ತೋ ಅಥವಾ ಇಲ್ಲವೋ ಎಂಬ ಚರ್ಚೆಯನ್ನು ಇವತ್ತಿನ (ಶುಕ್ರವಾರ) ಮುಂಜಾನೆ 4 ತಾಸುಗಳು ಹೊಸ ಆಯಾಮಕ್ಕೆ ಒಯ್ದುಬಿಟ್ಟಿವೆ. ಅರ್ಜೆಂಟಾಗಿ ಅಧಿಕಾರ ಹಿಡಿಯಬೇಕೆಂದಿದ್ದ ಬಿಜೆಪಿ ಮತ್ತು ಅತೃಪ್ತರಿಗೆ ತಾತ್ಕಾಲಿಕ ಹಿನ್ನಡೆ ಆಗಿದ್ದರೆ, ಒಂದೊಂದು ದಿನ ಸಿಕ್ಕರೂ ಸಾಕು ಎಂದು ಹಪಹಪಿಸುತ್ತಿದ್ದ ಮೈತ್ರಿ ಸರ್ಕಾರದ ಮುಖದಲ್ಲಿ ಮಂದಹಾಸ ಕಾಣಿಸಿತೊಡಗಿದೆ. ಇಲ್ಲೊಂದು ಇಂಟರೆಸ್ಟಿಂಗ್ ಪಾಯಿಂಟ್ ಅಂದರೆ, ತಮ್ಮ ರಾಜಕೀಯದ ಕೊನೆ ಘಟ್ಟದಲ್ಲಿರುವ ಸ್ಪೀಕರ್ ರಮೇಶಕುಮಾರರಿಗೆ ಈ ಒಟ್ಟೂ ಬಿಕ್ಕಟ್ಟು ಸಂವಿಧಾನ ಮತ್ತು ಸಂಸದೀಯ ಪ್ರಕ್ರಿಯೆಗಳ ಕುರಿತ ಅವರ ಜ್ಞಾನವನ್ನು ದೇಶದ ಎದುರು ಇಡಲು ಒಂದು ಅಪೂರ್ವ ಅವಕಾಶವನ್ನು ಒದಗಿಸಿದೆ!

ಸುಪ್ರಿಂಕೋರ್ಟು ಮಂಗಳವಾರಕ್ಕೆ ವಿಚಾರಣೆ ಮುಂದೂಡಿದ್ದು, ಸಂತಾಪ ಕಲಾಪದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಯ ಅಸ್ತ್ರ ಬಿಟ್ಟಿದ್ದು, ಹಿಂದೆಯೇ ವಿಪ್ ಭೂತವನ್ನು ತೇಲಿಬಿಟ್ಟಿದ್ದು-ಇದೆಲ್ಲವೂ ಆಪರೇಷನ್ ಕಮಲ ಎಂಬ ದಂಧೆಯನ್ನು ಅಧಿಕೃತಗೊಳಿಸಲು ಯತ್ನಿಸುತ್ತಿರುವ ಬಿಜೆಪಿಗೆ ಸದ್ಯಕ್ಕೆ ಶಾಕ್ ನೀಡಿದೆ. ಒಟ್ಟಿನಲ್ಲಿ ಅಧಿಕಾರ ಬಿಡಲೇಬಾರದು ಎಂದು ಒದ್ದಾಡುತ್ತಿರುವ ಮೈತ್ರಿ ಸರ್ಕಾರಕ್ಕೆ ರಿಲೀಫ್ ನೀಡಿದೆ.

‘ಈಗಲೇ ರಾಜೀನಾಮೆ ಅಂಗೀಕರಿಸಿ’ ಎಂದು ಸುಪ್ರಿಂಕೋರ್ಟು ಸ್ಪೀಕರ್ ಗೆ ಆದೇಶ ನೀಡಬಹುದು ಎಂದು ಬಿಜೆಪಿಯಷ್ಟೇ ಅಲ್ಲ, ಟಿವಿ ಮಾಧ್ಯಮಗಳು ಮತ್ತು ಅಲ್ಲಿ ಸ್ಪೀಕರ್ ನಾಲೆಡ್ಜ್ ಗಿಂತ ತಮ್ಮದೇ ಜಾಸ್ತಿ ಎಂದೆಲ್ಲ ಪ್ರದರ್ಶನ ಮಾಡಲು ಹೆಣಗಾಡುತ್ತಿರುವ ಕೆಲವು ಪತ್ರಕರ್ತ ಪಂಡಿತರೂ ನಿರೀಕ್ಷೆ ಮಾಡಿದ್ದರು. ಆದರೆ, ಅಲ್ಲಿ ನಡೆದದ್ದೇ ಬೇರೆ. ಅತೃಪ್ತರ ಪರ ಮುಕುಲ್ ರೊಹಟಗಿ ಮಂಡಿಸಿದ ವಾದಕ್ಕೆ ಸ್ಪೀಕರ್ ಪರ ವಾದ ಮಂಡಿಸಿದ ಅಭಿಷೇಕ್ ಸಿಂಘ್ವಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪರ ವಾದ ಮಂಡಿಸಿದ ರಾಹುಲ್ ಧವನ್ ಹಿನ್ನಡೆ ಮಾಡಿದರು. ‘ಈ ಸಂದರ್ಭದಲ್ಲಿ ನಾವು ಸ್ಪೀಕರ್ ಗೆ ನಿರ್ದೇಶನ ಮಾಡಬಾರದೇ’ ಎಂದು ಪ್ರಶ್ನೆ ಮಾಡಿಕೊಂಡ ಸುಪ್ರಿಂಕೋರ್ಟು ವಿಚಾರಣೆಯನ್ನು ಮಂಗಳವಾರದವರೆಗೆ ಮುಂದೂಡಿ, ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡಲು ಹೇಳುವ ಮೂಲಕ ಮುಂಬೈಯಲ್ಲಿ ಮಜಾ ಮಾಡುತ್ತಿರುವ ಶಾಸಕರಿಗೆ ಆಘಾತವನ್ನು, ವಿಜಯೋತ್ಸಾಹದ ನಿರೀಕ್ಷೆಯಲ್ಲಿ ಸದನಕ್ಕೆ ಬಂದಿದ್ದ ಬಿಜೆಪಿಗೆ ಭರ್ಜರಿ ಶಾಕ್ ಅನ್ನು ನೀಡಿಬಿಟ್ಟಿತು.

ಇದರಿಂದ ಸುಧಾರಿಸಿಕೊಳ್ಳುವ ಮೊದಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಆಶ್ಚರ್ಯಕರ ರೀತಿಯಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿ, ದಿನಾಂಕ ನಿಗದಿ ಮಾಡಿ ಎಂದಿದ್ದಂತೂ ಬಿಜೆಪಿ ಮತ್ತು ಅತೃಪ್ತರ ಪಾಲಿಗೆ ಒಂದು ರೀತಿಯ ಚಾಲೆಂಜೇ ಆಗಿದೆ.

ಸದ್ಯ ಸದನ ಮುಂದೂಡಿಕೆ ಆಗಿದೆ. ಈಗ ಮತ್ತೊಮ್ಮೆ ವಿಪ್ ಜಾರಿಯಾಗಬಹುದು. ವಿಶ್ವಾಸಮತ ಯಾಚನೆ ನಿಗದಿ ಏಕಾಏಕಿ ಆಗುವಂಥದ್ದಲ್ಲ… ಇಲ್ಲಿ ಸಂಕೀರ್ಣ ಕಾನೂನು ಈ ಸಂದರ್ಭಕ್ಕೆ ಹೇಗೆ ಅಪ್ಲೈ ಆಗುತ್ತದೆ ಎಂಬ ಬಗ್ಗೆ ಗೊಂದಲವಿದೆ….

ಆದರೆ, ಸಿಎಂ ಪರ ವಾದ ಮಂಡಿಸಿದ ರಾಜೀವ್ ಧವನ್ ಇದನ್ನು ಪ್ರಜಾತಂತ್ರಕ್ಕೇ ಅಪಾಯ ಎಂಬ ರೀತಿಯಲ್ಲಿ ವಾದ ಮಂಡಿಸುತ್ತ ಆಪರೇಷನ್ ಕಮಲ ಎಂಬ ದಂಧೆಯ ಅಪಾವಿತ್ರ್ಯತೆಯನ್ನು ನ್ಯಾಯಾಧೀಶರಿಗೆ ಮನವರಿಕೆ ಮಾಡಲು ಯತ್ನಿಸುತ್ತಿದ್ದಾರೆ. ಮಂಗಳವಾರ ಅವರು, ಮತ್ತೆ ರೋಷನ್ ಬೇಗ್-ಐಎಂಎ ಮತ್ತು ಇತರ ಕೆಲವು ಅತೃಪ್ತರು ಭಾಗಿಯಾಗಿರಬಹುದು ಎನ್ನಲಾದ ಭ್ರಷ್ಟಾಚಾರದ ಪ್ರಕರಣಗಳನ್ನು ಸುಪ್ರೀಂ ಮುಂದೆ ಇಡಬಹುದು….

ಅಂತ್ಯದಲ್ಲಿ ಬಿಜೆಪಿ ಇಲ್ಲಿ ಸರ್ಕಾರ ರಚಿಸಬಹುದು, ಆದರೆ ಆಪರೇಷನ್ ಕಮಲ ಎಂಬ ವ್ಯಾಪಾರದ ಮೂಲಕ ಪಕ್ಷಾಂತರ ಕಾಯ್ದೆಯನ್ನೇ ಅಪ್ರಸ್ತುತ ಮಾಡುತ್ತ ಅಧಿಕಾರ ಕಬಳಿಸುತ್ತಿರವ ಬಿಜೆಪಿಯ ನಡೆಯೂ ಸುಪ್ರಿಂನಲ್ಲಿ ಚರ್ಚೆಯಾಗಬಹುದು. ಆ ಮೂಲಕ ರಾಷ್ಟ್ರವ್ಯಾಪಿಯಾಗಿ ಈ ಹೇಯ ದಂಧೆಯ ಅನಾವರಣವಾದರೂ ಆಗಲಿ ಎಂಬುದೇ ಪ್ರಜಾತಂತ್ರವಾದಿಗಳ ಆಶಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....