Homeಕರ್ನಾಟಕಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

ಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

- Advertisement -
- Advertisement -

ಸರ್ಕಾರ ಬೀಳುತ್ತೋ ಅಥವಾ ಇಲ್ಲವೋ ಎಂಬ ಚರ್ಚೆಯನ್ನು ಇವತ್ತಿನ (ಶುಕ್ರವಾರ) ಮುಂಜಾನೆ 4 ತಾಸುಗಳು ಹೊಸ ಆಯಾಮಕ್ಕೆ ಒಯ್ದುಬಿಟ್ಟಿವೆ. ಅರ್ಜೆಂಟಾಗಿ ಅಧಿಕಾರ ಹಿಡಿಯಬೇಕೆಂದಿದ್ದ ಬಿಜೆಪಿ ಮತ್ತು ಅತೃಪ್ತರಿಗೆ ತಾತ್ಕಾಲಿಕ ಹಿನ್ನಡೆ ಆಗಿದ್ದರೆ, ಒಂದೊಂದು ದಿನ ಸಿಕ್ಕರೂ ಸಾಕು ಎಂದು ಹಪಹಪಿಸುತ್ತಿದ್ದ ಮೈತ್ರಿ ಸರ್ಕಾರದ ಮುಖದಲ್ಲಿ ಮಂದಹಾಸ ಕಾಣಿಸಿತೊಡಗಿದೆ. ಇಲ್ಲೊಂದು ಇಂಟರೆಸ್ಟಿಂಗ್ ಪಾಯಿಂಟ್ ಅಂದರೆ, ತಮ್ಮ ರಾಜಕೀಯದ ಕೊನೆ ಘಟ್ಟದಲ್ಲಿರುವ ಸ್ಪೀಕರ್ ರಮೇಶಕುಮಾರರಿಗೆ ಈ ಒಟ್ಟೂ ಬಿಕ್ಕಟ್ಟು ಸಂವಿಧಾನ ಮತ್ತು ಸಂಸದೀಯ ಪ್ರಕ್ರಿಯೆಗಳ ಕುರಿತ ಅವರ ಜ್ಞಾನವನ್ನು ದೇಶದ ಎದುರು ಇಡಲು ಒಂದು ಅಪೂರ್ವ ಅವಕಾಶವನ್ನು ಒದಗಿಸಿದೆ!

ಸುಪ್ರಿಂಕೋರ್ಟು ಮಂಗಳವಾರಕ್ಕೆ ವಿಚಾರಣೆ ಮುಂದೂಡಿದ್ದು, ಸಂತಾಪ ಕಲಾಪದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಯ ಅಸ್ತ್ರ ಬಿಟ್ಟಿದ್ದು, ಹಿಂದೆಯೇ ವಿಪ್ ಭೂತವನ್ನು ತೇಲಿಬಿಟ್ಟಿದ್ದು-ಇದೆಲ್ಲವೂ ಆಪರೇಷನ್ ಕಮಲ ಎಂಬ ದಂಧೆಯನ್ನು ಅಧಿಕೃತಗೊಳಿಸಲು ಯತ್ನಿಸುತ್ತಿರುವ ಬಿಜೆಪಿಗೆ ಸದ್ಯಕ್ಕೆ ಶಾಕ್ ನೀಡಿದೆ. ಒಟ್ಟಿನಲ್ಲಿ ಅಧಿಕಾರ ಬಿಡಲೇಬಾರದು ಎಂದು ಒದ್ದಾಡುತ್ತಿರುವ ಮೈತ್ರಿ ಸರ್ಕಾರಕ್ಕೆ ರಿಲೀಫ್ ನೀಡಿದೆ.

‘ಈಗಲೇ ರಾಜೀನಾಮೆ ಅಂಗೀಕರಿಸಿ’ ಎಂದು ಸುಪ್ರಿಂಕೋರ್ಟು ಸ್ಪೀಕರ್ ಗೆ ಆದೇಶ ನೀಡಬಹುದು ಎಂದು ಬಿಜೆಪಿಯಷ್ಟೇ ಅಲ್ಲ, ಟಿವಿ ಮಾಧ್ಯಮಗಳು ಮತ್ತು ಅಲ್ಲಿ ಸ್ಪೀಕರ್ ನಾಲೆಡ್ಜ್ ಗಿಂತ ತಮ್ಮದೇ ಜಾಸ್ತಿ ಎಂದೆಲ್ಲ ಪ್ರದರ್ಶನ ಮಾಡಲು ಹೆಣಗಾಡುತ್ತಿರುವ ಕೆಲವು ಪತ್ರಕರ್ತ ಪಂಡಿತರೂ ನಿರೀಕ್ಷೆ ಮಾಡಿದ್ದರು. ಆದರೆ, ಅಲ್ಲಿ ನಡೆದದ್ದೇ ಬೇರೆ. ಅತೃಪ್ತರ ಪರ ಮುಕುಲ್ ರೊಹಟಗಿ ಮಂಡಿಸಿದ ವಾದಕ್ಕೆ ಸ್ಪೀಕರ್ ಪರ ವಾದ ಮಂಡಿಸಿದ ಅಭಿಷೇಕ್ ಸಿಂಘ್ವಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪರ ವಾದ ಮಂಡಿಸಿದ ರಾಹುಲ್ ಧವನ್ ಹಿನ್ನಡೆ ಮಾಡಿದರು. ‘ಈ ಸಂದರ್ಭದಲ್ಲಿ ನಾವು ಸ್ಪೀಕರ್ ಗೆ ನಿರ್ದೇಶನ ಮಾಡಬಾರದೇ’ ಎಂದು ಪ್ರಶ್ನೆ ಮಾಡಿಕೊಂಡ ಸುಪ್ರಿಂಕೋರ್ಟು ವಿಚಾರಣೆಯನ್ನು ಮಂಗಳವಾರದವರೆಗೆ ಮುಂದೂಡಿ, ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡಲು ಹೇಳುವ ಮೂಲಕ ಮುಂಬೈಯಲ್ಲಿ ಮಜಾ ಮಾಡುತ್ತಿರುವ ಶಾಸಕರಿಗೆ ಆಘಾತವನ್ನು, ವಿಜಯೋತ್ಸಾಹದ ನಿರೀಕ್ಷೆಯಲ್ಲಿ ಸದನಕ್ಕೆ ಬಂದಿದ್ದ ಬಿಜೆಪಿಗೆ ಭರ್ಜರಿ ಶಾಕ್ ಅನ್ನು ನೀಡಿಬಿಟ್ಟಿತು.

ಇದರಿಂದ ಸುಧಾರಿಸಿಕೊಳ್ಳುವ ಮೊದಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಆಶ್ಚರ್ಯಕರ ರೀತಿಯಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿ, ದಿನಾಂಕ ನಿಗದಿ ಮಾಡಿ ಎಂದಿದ್ದಂತೂ ಬಿಜೆಪಿ ಮತ್ತು ಅತೃಪ್ತರ ಪಾಲಿಗೆ ಒಂದು ರೀತಿಯ ಚಾಲೆಂಜೇ ಆಗಿದೆ.

ಸದ್ಯ ಸದನ ಮುಂದೂಡಿಕೆ ಆಗಿದೆ. ಈಗ ಮತ್ತೊಮ್ಮೆ ವಿಪ್ ಜಾರಿಯಾಗಬಹುದು. ವಿಶ್ವಾಸಮತ ಯಾಚನೆ ನಿಗದಿ ಏಕಾಏಕಿ ಆಗುವಂಥದ್ದಲ್ಲ… ಇಲ್ಲಿ ಸಂಕೀರ್ಣ ಕಾನೂನು ಈ ಸಂದರ್ಭಕ್ಕೆ ಹೇಗೆ ಅಪ್ಲೈ ಆಗುತ್ತದೆ ಎಂಬ ಬಗ್ಗೆ ಗೊಂದಲವಿದೆ….

ಆದರೆ, ಸಿಎಂ ಪರ ವಾದ ಮಂಡಿಸಿದ ರಾಜೀವ್ ಧವನ್ ಇದನ್ನು ಪ್ರಜಾತಂತ್ರಕ್ಕೇ ಅಪಾಯ ಎಂಬ ರೀತಿಯಲ್ಲಿ ವಾದ ಮಂಡಿಸುತ್ತ ಆಪರೇಷನ್ ಕಮಲ ಎಂಬ ದಂಧೆಯ ಅಪಾವಿತ್ರ್ಯತೆಯನ್ನು ನ್ಯಾಯಾಧೀಶರಿಗೆ ಮನವರಿಕೆ ಮಾಡಲು ಯತ್ನಿಸುತ್ತಿದ್ದಾರೆ. ಮಂಗಳವಾರ ಅವರು, ಮತ್ತೆ ರೋಷನ್ ಬೇಗ್-ಐಎಂಎ ಮತ್ತು ಇತರ ಕೆಲವು ಅತೃಪ್ತರು ಭಾಗಿಯಾಗಿರಬಹುದು ಎನ್ನಲಾದ ಭ್ರಷ್ಟಾಚಾರದ ಪ್ರಕರಣಗಳನ್ನು ಸುಪ್ರೀಂ ಮುಂದೆ ಇಡಬಹುದು….

ಅಂತ್ಯದಲ್ಲಿ ಬಿಜೆಪಿ ಇಲ್ಲಿ ಸರ್ಕಾರ ರಚಿಸಬಹುದು, ಆದರೆ ಆಪರೇಷನ್ ಕಮಲ ಎಂಬ ವ್ಯಾಪಾರದ ಮೂಲಕ ಪಕ್ಷಾಂತರ ಕಾಯ್ದೆಯನ್ನೇ ಅಪ್ರಸ್ತುತ ಮಾಡುತ್ತ ಅಧಿಕಾರ ಕಬಳಿಸುತ್ತಿರವ ಬಿಜೆಪಿಯ ನಡೆಯೂ ಸುಪ್ರಿಂನಲ್ಲಿ ಚರ್ಚೆಯಾಗಬಹುದು. ಆ ಮೂಲಕ ರಾಷ್ಟ್ರವ್ಯಾಪಿಯಾಗಿ ಈ ಹೇಯ ದಂಧೆಯ ಅನಾವರಣವಾದರೂ ಆಗಲಿ ಎಂಬುದೇ ಪ್ರಜಾತಂತ್ರವಾದಿಗಳ ಆಶಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...