Homeಕರ್ನಾಟಕಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

ಅತೃಪ್ತರಿಗೆ ‘ಅಪಶಕುನ’, ಬಿಜೆಪಿಗೆ ತಾತ್ಕಾಲಿಕ ಹಿನ್ನಡೆ, ಮೈತ್ರಿಗೆ ಮುಗುಳ್ನಗೆ..

- Advertisement -
- Advertisement -

ಸರ್ಕಾರ ಬೀಳುತ್ತೋ ಅಥವಾ ಇಲ್ಲವೋ ಎಂಬ ಚರ್ಚೆಯನ್ನು ಇವತ್ತಿನ (ಶುಕ್ರವಾರ) ಮುಂಜಾನೆ 4 ತಾಸುಗಳು ಹೊಸ ಆಯಾಮಕ್ಕೆ ಒಯ್ದುಬಿಟ್ಟಿವೆ. ಅರ್ಜೆಂಟಾಗಿ ಅಧಿಕಾರ ಹಿಡಿಯಬೇಕೆಂದಿದ್ದ ಬಿಜೆಪಿ ಮತ್ತು ಅತೃಪ್ತರಿಗೆ ತಾತ್ಕಾಲಿಕ ಹಿನ್ನಡೆ ಆಗಿದ್ದರೆ, ಒಂದೊಂದು ದಿನ ಸಿಕ್ಕರೂ ಸಾಕು ಎಂದು ಹಪಹಪಿಸುತ್ತಿದ್ದ ಮೈತ್ರಿ ಸರ್ಕಾರದ ಮುಖದಲ್ಲಿ ಮಂದಹಾಸ ಕಾಣಿಸಿತೊಡಗಿದೆ. ಇಲ್ಲೊಂದು ಇಂಟರೆಸ್ಟಿಂಗ್ ಪಾಯಿಂಟ್ ಅಂದರೆ, ತಮ್ಮ ರಾಜಕೀಯದ ಕೊನೆ ಘಟ್ಟದಲ್ಲಿರುವ ಸ್ಪೀಕರ್ ರಮೇಶಕುಮಾರರಿಗೆ ಈ ಒಟ್ಟೂ ಬಿಕ್ಕಟ್ಟು ಸಂವಿಧಾನ ಮತ್ತು ಸಂಸದೀಯ ಪ್ರಕ್ರಿಯೆಗಳ ಕುರಿತ ಅವರ ಜ್ಞಾನವನ್ನು ದೇಶದ ಎದುರು ಇಡಲು ಒಂದು ಅಪೂರ್ವ ಅವಕಾಶವನ್ನು ಒದಗಿಸಿದೆ!

ಸುಪ್ರಿಂಕೋರ್ಟು ಮಂಗಳವಾರಕ್ಕೆ ವಿಚಾರಣೆ ಮುಂದೂಡಿದ್ದು, ಸಂತಾಪ ಕಲಾಪದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಯ ಅಸ್ತ್ರ ಬಿಟ್ಟಿದ್ದು, ಹಿಂದೆಯೇ ವಿಪ್ ಭೂತವನ್ನು ತೇಲಿಬಿಟ್ಟಿದ್ದು-ಇದೆಲ್ಲವೂ ಆಪರೇಷನ್ ಕಮಲ ಎಂಬ ದಂಧೆಯನ್ನು ಅಧಿಕೃತಗೊಳಿಸಲು ಯತ್ನಿಸುತ್ತಿರುವ ಬಿಜೆಪಿಗೆ ಸದ್ಯಕ್ಕೆ ಶಾಕ್ ನೀಡಿದೆ. ಒಟ್ಟಿನಲ್ಲಿ ಅಧಿಕಾರ ಬಿಡಲೇಬಾರದು ಎಂದು ಒದ್ದಾಡುತ್ತಿರುವ ಮೈತ್ರಿ ಸರ್ಕಾರಕ್ಕೆ ರಿಲೀಫ್ ನೀಡಿದೆ.

‘ಈಗಲೇ ರಾಜೀನಾಮೆ ಅಂಗೀಕರಿಸಿ’ ಎಂದು ಸುಪ್ರಿಂಕೋರ್ಟು ಸ್ಪೀಕರ್ ಗೆ ಆದೇಶ ನೀಡಬಹುದು ಎಂದು ಬಿಜೆಪಿಯಷ್ಟೇ ಅಲ್ಲ, ಟಿವಿ ಮಾಧ್ಯಮಗಳು ಮತ್ತು ಅಲ್ಲಿ ಸ್ಪೀಕರ್ ನಾಲೆಡ್ಜ್ ಗಿಂತ ತಮ್ಮದೇ ಜಾಸ್ತಿ ಎಂದೆಲ್ಲ ಪ್ರದರ್ಶನ ಮಾಡಲು ಹೆಣಗಾಡುತ್ತಿರುವ ಕೆಲವು ಪತ್ರಕರ್ತ ಪಂಡಿತರೂ ನಿರೀಕ್ಷೆ ಮಾಡಿದ್ದರು. ಆದರೆ, ಅಲ್ಲಿ ನಡೆದದ್ದೇ ಬೇರೆ. ಅತೃಪ್ತರ ಪರ ಮುಕುಲ್ ರೊಹಟಗಿ ಮಂಡಿಸಿದ ವಾದಕ್ಕೆ ಸ್ಪೀಕರ್ ಪರ ವಾದ ಮಂಡಿಸಿದ ಅಭಿಷೇಕ್ ಸಿಂಘ್ವಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪರ ವಾದ ಮಂಡಿಸಿದ ರಾಹುಲ್ ಧವನ್ ಹಿನ್ನಡೆ ಮಾಡಿದರು. ‘ಈ ಸಂದರ್ಭದಲ್ಲಿ ನಾವು ಸ್ಪೀಕರ್ ಗೆ ನಿರ್ದೇಶನ ಮಾಡಬಾರದೇ’ ಎಂದು ಪ್ರಶ್ನೆ ಮಾಡಿಕೊಂಡ ಸುಪ್ರಿಂಕೋರ್ಟು ವಿಚಾರಣೆಯನ್ನು ಮಂಗಳವಾರದವರೆಗೆ ಮುಂದೂಡಿ, ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡಲು ಹೇಳುವ ಮೂಲಕ ಮುಂಬೈಯಲ್ಲಿ ಮಜಾ ಮಾಡುತ್ತಿರುವ ಶಾಸಕರಿಗೆ ಆಘಾತವನ್ನು, ವಿಜಯೋತ್ಸಾಹದ ನಿರೀಕ್ಷೆಯಲ್ಲಿ ಸದನಕ್ಕೆ ಬಂದಿದ್ದ ಬಿಜೆಪಿಗೆ ಭರ್ಜರಿ ಶಾಕ್ ಅನ್ನು ನೀಡಿಬಿಟ್ಟಿತು.

ಇದರಿಂದ ಸುಧಾರಿಸಿಕೊಳ್ಳುವ ಮೊದಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಆಶ್ಚರ್ಯಕರ ರೀತಿಯಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿ, ದಿನಾಂಕ ನಿಗದಿ ಮಾಡಿ ಎಂದಿದ್ದಂತೂ ಬಿಜೆಪಿ ಮತ್ತು ಅತೃಪ್ತರ ಪಾಲಿಗೆ ಒಂದು ರೀತಿಯ ಚಾಲೆಂಜೇ ಆಗಿದೆ.

ಸದ್ಯ ಸದನ ಮುಂದೂಡಿಕೆ ಆಗಿದೆ. ಈಗ ಮತ್ತೊಮ್ಮೆ ವಿಪ್ ಜಾರಿಯಾಗಬಹುದು. ವಿಶ್ವಾಸಮತ ಯಾಚನೆ ನಿಗದಿ ಏಕಾಏಕಿ ಆಗುವಂಥದ್ದಲ್ಲ… ಇಲ್ಲಿ ಸಂಕೀರ್ಣ ಕಾನೂನು ಈ ಸಂದರ್ಭಕ್ಕೆ ಹೇಗೆ ಅಪ್ಲೈ ಆಗುತ್ತದೆ ಎಂಬ ಬಗ್ಗೆ ಗೊಂದಲವಿದೆ….

ಆದರೆ, ಸಿಎಂ ಪರ ವಾದ ಮಂಡಿಸಿದ ರಾಜೀವ್ ಧವನ್ ಇದನ್ನು ಪ್ರಜಾತಂತ್ರಕ್ಕೇ ಅಪಾಯ ಎಂಬ ರೀತಿಯಲ್ಲಿ ವಾದ ಮಂಡಿಸುತ್ತ ಆಪರೇಷನ್ ಕಮಲ ಎಂಬ ದಂಧೆಯ ಅಪಾವಿತ್ರ್ಯತೆಯನ್ನು ನ್ಯಾಯಾಧೀಶರಿಗೆ ಮನವರಿಕೆ ಮಾಡಲು ಯತ್ನಿಸುತ್ತಿದ್ದಾರೆ. ಮಂಗಳವಾರ ಅವರು, ಮತ್ತೆ ರೋಷನ್ ಬೇಗ್-ಐಎಂಎ ಮತ್ತು ಇತರ ಕೆಲವು ಅತೃಪ್ತರು ಭಾಗಿಯಾಗಿರಬಹುದು ಎನ್ನಲಾದ ಭ್ರಷ್ಟಾಚಾರದ ಪ್ರಕರಣಗಳನ್ನು ಸುಪ್ರೀಂ ಮುಂದೆ ಇಡಬಹುದು….

ಅಂತ್ಯದಲ್ಲಿ ಬಿಜೆಪಿ ಇಲ್ಲಿ ಸರ್ಕಾರ ರಚಿಸಬಹುದು, ಆದರೆ ಆಪರೇಷನ್ ಕಮಲ ಎಂಬ ವ್ಯಾಪಾರದ ಮೂಲಕ ಪಕ್ಷಾಂತರ ಕಾಯ್ದೆಯನ್ನೇ ಅಪ್ರಸ್ತುತ ಮಾಡುತ್ತ ಅಧಿಕಾರ ಕಬಳಿಸುತ್ತಿರವ ಬಿಜೆಪಿಯ ನಡೆಯೂ ಸುಪ್ರಿಂನಲ್ಲಿ ಚರ್ಚೆಯಾಗಬಹುದು. ಆ ಮೂಲಕ ರಾಷ್ಟ್ರವ್ಯಾಪಿಯಾಗಿ ಈ ಹೇಯ ದಂಧೆಯ ಅನಾವರಣವಾದರೂ ಆಗಲಿ ಎಂಬುದೇ ಪ್ರಜಾತಂತ್ರವಾದಿಗಳ ಆಶಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...