Homeಕರ್ನಾಟಕಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

ಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

- Advertisement -
- Advertisement -

ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರೂ ಮಹಿಳಾ ಆಯೋಗವು ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿರುವ ಆಮ್‌ ಆದ್ಮಿ ಪಕ್ಷ ಮಹಿಳಾ ಆಯೋಗದ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದೆ.

ಬೆಂಗಳೂರು ನಗರ ಆಪ್ ಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ ಮಾತನಾಡಿ, “ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 42 ಅತ್ಯಾಚಾರ ನಡೆಯುತ್ತಿದೆ. 2018ರ ಜನವರಿಯಿಂದ 2021ರ ಜುಲೈ ತನಕ ರಾಜ್ಯದಲ್ಲಿ 1,759 ಅತ್ಯಾಚಾರ ಪ್ರಕರಣಗಳು ನಡೆದಿವೆ. 2021ರ ಮೊದಲ ಏಳು ತಿಂಗಳಿನಲ್ಲಿ ರಾಜ್ಯದಲ್ಲಿ 307 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅದೇ ಅವಧಿಯಲ್ಲಿ 1,300 ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಶಿಕ್ಷೆಯಾಗಿರುವುದು 6 ಆರೋಪಿಗಳಿಗೆ ಮಾತ್ರ” ಎಂದು ಹೇಳಿದ್ದಾರೆ.

“ಇತ್ತೀಚೆಗೆ ಬಿಡುಗಡೆಯಾದ ಎನ್‌ಸಿಆರ್‌ಬಿ ಮಾಹಿತಿ ಪ್ರಕಾರ, 2020ರಲ್ಲಿ ರಾಜ್ಯದಲ್ಲಿ 3,246 ಮಹಿಳೆಯರ ಮೇಲೆ ಹಲ್ಲೆ ಹಾಗೂ 47 ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. 8 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಲಾಗಿದೆ. 178 ಮಹಿಳೆಯರು ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಮಾನಸಿಕ ಕಿರುಕುಳ ಹಾಗೂ ಬೆದರಿಕೆಗೆ ಹೆದರಿ 263 ಮಹಿಳೆಯರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. 6 ಮಹಿಳೆಯರ ಮೇಲೆ ಆಸಿಡ್‌ ದಾಳಿ ನಡೆದಿದೆ. ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ 55 ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗಿದೆ” ಎಂದು ಕುಶಲಾ ಸ್ವಾಮಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ಈ ವೇಳೆ ಮಾತನಾಡಿದ ಎಎಪಿಯ ಉಷಾ ಮೋಹನ್‌, “ಪ್ರಮೀಳಾ ನಾಯ್ಡು ಅವರು ಆಯೋಗದ ಅಧ್ಯಕ್ಷರೋ ಅಥವಾ ಬಿಜೆಪಿಯ ಏಜೆಂಟರೋ ಎಂಬ ಅನುಮಾನ ಕಾಡುತ್ತಿದೆ. ಮಹಿಳಾ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರೆ, ಪ್ರಕರಣಗಳು ಜನರ ಗಮನಕ್ಕೆ ಬಂದು ಸರ್ಕಾರದ ಮಾನ ಬೀದಿ ಪಾಲಾಗುತ್ತದೆ ಎಂಬ ಕಾರಣಕ್ಕೆ ಅವರು ನಿಷ್ಕ್ರಿಯರಾಗಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷರಾದ ಆರ್. ಪ್ರಮೀಳಾ ನಾಯ್ಡು ಹಾಗೂ ಸದಸ್ಯರು ಸರ್ಕಾರದ ಸೌಲಭ್ಯ ಪಡೆಯುವುದಕ್ಕೆ ಸೀಮಿತವಾಗಿದ್ದಾರೆ. ಕೋಟ್ಯಂತರ ಅನುದಾನ, ನಾನಾ ಸೌಲಭ್ಯಗಳನ್ನು ಆಯೋಗಕ್ಕೆ ನೀಡಿ ದುಂದುವೆಚ್ಚ ಮಾಡುವ ಮಾಡಲು ಆಯೋಗವನ್ನು ವಜಾ ಮಾಡಿ, ಮಹಿಳೆಯರ ಬಗ್ಗೆ ಕಾಳಜಿ ಹೊಂದಿರುವ ದಿಟ್ಟ ಮಹಿಳೆಯ ನೇತೃತ್ವದಲ್ಲಿ ಆಯೋಗದ ಪುನಾರಚನೆ ಆಗಲಿ” ಎಂದು ಆಗ್ರಹಿಸಿದ್ದಾರೆ.

“ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರವರ ಸರ್ಕಾರವು ಸ್ವಾತಿ ಮಾಲಿವಾಲ್‌ ಎಂಬ ದಿಟ್ಟ ಹೋರಾಟಗಾರ್ತಿಯನ್ನು ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದೆ. ಕಳೆದ ಐದು ವರ್ಷಗಳಲ್ಲಿ ಅವರ ನೇತೃತ್ವದಲ್ಲಿ 1,00,672 ಪ್ರಕರಣಗಳಿಗೆ ಸಂಬಂಧಿಸಿ 1,42,234 ಜನರ ವೈಯಕ್ತಿಕ ವಿಚಾರಣೆ ನಡೆದಿದೆ. ಸಹಾಯವಾಣಿಗೆ ಕರೆ ಮಾಡಿ ಕಷ್ಟ ಹೇಳಿಕೊಂಡ ದೆಹಲಿಯ 4.25 ಲಕ್ಷ ಮಹಿಳೆಯರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗಿದೆ. ದೆಹಲಿಯ ಮಹಿಳಾ ಆಯೋಗವು 250ಕ್ಕೂ ಶಿಫಾರಸ್ಸುಗಳು ಸರ್ಕಾರ ಹಾಗೂ ಪ್ರಾಧಿಕಾರಕ್ಕೆ ಕಳುಹಿಸಿದೆ. ರಾಜ್ಯದ ಆಯೋಗಕ್ಕೂ ಅಂತಹ ದಿಟ್ಟ ಅಧ್ಯಕ್ಷರ ಅಗತ್ಯವಿದೆ” ಎಂದಿದ್ದಾರೆ.

ಎಎಪಿಯ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, “ಜಾರಕಿಹೊಳಿ ಪ್ರಕರಣದಲ್ಲಿ ವಿಡಿಯೋ ನಕಲಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ನಂತರ ಅದು ಹನಿಟ್ರಾಪ್‌ ಎಂದು ಜಾರಕಿಹೊಳಿಯವರೇ ಹೇಳಿದರು. ಅಧಿಕಾರ ದುರ್ಬಳಕೆ ಮಾಡಿಕೊಂಡು ಯುವತಿಯನ್ನು ಜಾರಕಿಹೊಳಿ ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಇಡೀ ಸರ್ಕಾರವೇ ಆರೋಪಿಯ ರಕ್ಷಣೆಗೆ ನಿಂತಿದೆ” ಎಂದು ಕಿಡಿಕಾರಿದ್ದಾರೆ.

“ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸಲು ಬಳಕೆಯಾಗುತ್ತಿದ್ದ 71 ಸಾಂತ್ವನ ಕೇಂದ್ರಗಳನ್ನು ಏಪ್ರಿಲ್‌ನಲ್ಲಿ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿದ್ದ 194 ಸಾಂತ್ವನ ಕೇಂದ್ರಗಳ ಪೈಕಿ 123 ಮಾತ್ರ ಪ್ರಸ್ತುತ ಕಾರ್ಯನಿರ್ವಹಿಸುತ್ತಿದೆ. ಜನಸಂಖ್ಯೆ ಜಾಸ್ತಿಯಿರುವ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳ ಹೆಚ್ಚು ದಾಖಲಾಗುವ ಬೆಂಗಳೂರಿನಲ್ಲೇ ಎಲ್ಲಾ ಸಾಂತ್ವನ ಕೇಂದ್ರಗಳು ಸ್ಥಗಿತಗೊಂಡಿವೆ” ಎಂದು ಎಎಪಿಯ ವೀಣಾ ಸೆರ್ರಾವ್‌ರವರು ಹೇಳಿದ್ದಾರೆ.

ಮಹಿಳಾ ನಾಯಕಿ ಪುಷ್ಪಾ ಕೇಶವ್‌ ಮಾತನಾಡಿ, “ಪೊಲೀಸರಿಗೆ ದೂರು ನೀಡಲು ಬರುವ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳೆಯರಿಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಪೊಲೀಸರು ಎಫ್‌ಐಆರ್‌ ಹಾಕಲು ಮೀನಾಮೇಷ ಎಣಿಸುತ್ತಾರೆ. ಅತ್ಯಾಚಾರದಂತಹ ಗಂಭೀರ ಪ್ರಕರಣಗಳಲ್ಲೂ ರಾಜಿ ಮಾಡಿಸಲು ಪೊಲೀಸರು ಮುಂದಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಒಂದುವೇಳೆ ಎಫ್‌ಐಆರ್‌ ದಾಖಲಿಸಿಕೊಂಡರೂ, ಆರೋಪಿ ವಿರುದ್ಧ ಸಾಕ್ಷಿ ಸಂಗ್ರಹಕ್ಕೆ ಉದಾಸೀನ ತೋರುತ್ತಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...