Homeಕರ್ನಾಟಕಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

ಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

- Advertisement -
- Advertisement -

ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರೂ ಮಹಿಳಾ ಆಯೋಗವು ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿರುವ ಆಮ್‌ ಆದ್ಮಿ ಪಕ್ಷ ಮಹಿಳಾ ಆಯೋಗದ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದೆ.

ಬೆಂಗಳೂರು ನಗರ ಆಪ್ ಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ ಮಾತನಾಡಿ, “ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 42 ಅತ್ಯಾಚಾರ ನಡೆಯುತ್ತಿದೆ. 2018ರ ಜನವರಿಯಿಂದ 2021ರ ಜುಲೈ ತನಕ ರಾಜ್ಯದಲ್ಲಿ 1,759 ಅತ್ಯಾಚಾರ ಪ್ರಕರಣಗಳು ನಡೆದಿವೆ. 2021ರ ಮೊದಲ ಏಳು ತಿಂಗಳಿನಲ್ಲಿ ರಾಜ್ಯದಲ್ಲಿ 307 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅದೇ ಅವಧಿಯಲ್ಲಿ 1,300 ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಶಿಕ್ಷೆಯಾಗಿರುವುದು 6 ಆರೋಪಿಗಳಿಗೆ ಮಾತ್ರ” ಎಂದು ಹೇಳಿದ್ದಾರೆ.

“ಇತ್ತೀಚೆಗೆ ಬಿಡುಗಡೆಯಾದ ಎನ್‌ಸಿಆರ್‌ಬಿ ಮಾಹಿತಿ ಪ್ರಕಾರ, 2020ರಲ್ಲಿ ರಾಜ್ಯದಲ್ಲಿ 3,246 ಮಹಿಳೆಯರ ಮೇಲೆ ಹಲ್ಲೆ ಹಾಗೂ 47 ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. 8 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಲಾಗಿದೆ. 178 ಮಹಿಳೆಯರು ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಮಾನಸಿಕ ಕಿರುಕುಳ ಹಾಗೂ ಬೆದರಿಕೆಗೆ ಹೆದರಿ 263 ಮಹಿಳೆಯರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. 6 ಮಹಿಳೆಯರ ಮೇಲೆ ಆಸಿಡ್‌ ದಾಳಿ ನಡೆದಿದೆ. ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ 55 ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗಿದೆ” ಎಂದು ಕುಶಲಾ ಸ್ವಾಮಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ಈ ವೇಳೆ ಮಾತನಾಡಿದ ಎಎಪಿಯ ಉಷಾ ಮೋಹನ್‌, “ಪ್ರಮೀಳಾ ನಾಯ್ಡು ಅವರು ಆಯೋಗದ ಅಧ್ಯಕ್ಷರೋ ಅಥವಾ ಬಿಜೆಪಿಯ ಏಜೆಂಟರೋ ಎಂಬ ಅನುಮಾನ ಕಾಡುತ್ತಿದೆ. ಮಹಿಳಾ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರೆ, ಪ್ರಕರಣಗಳು ಜನರ ಗಮನಕ್ಕೆ ಬಂದು ಸರ್ಕಾರದ ಮಾನ ಬೀದಿ ಪಾಲಾಗುತ್ತದೆ ಎಂಬ ಕಾರಣಕ್ಕೆ ಅವರು ನಿಷ್ಕ್ರಿಯರಾಗಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷರಾದ ಆರ್. ಪ್ರಮೀಳಾ ನಾಯ್ಡು ಹಾಗೂ ಸದಸ್ಯರು ಸರ್ಕಾರದ ಸೌಲಭ್ಯ ಪಡೆಯುವುದಕ್ಕೆ ಸೀಮಿತವಾಗಿದ್ದಾರೆ. ಕೋಟ್ಯಂತರ ಅನುದಾನ, ನಾನಾ ಸೌಲಭ್ಯಗಳನ್ನು ಆಯೋಗಕ್ಕೆ ನೀಡಿ ದುಂದುವೆಚ್ಚ ಮಾಡುವ ಮಾಡಲು ಆಯೋಗವನ್ನು ವಜಾ ಮಾಡಿ, ಮಹಿಳೆಯರ ಬಗ್ಗೆ ಕಾಳಜಿ ಹೊಂದಿರುವ ದಿಟ್ಟ ಮಹಿಳೆಯ ನೇತೃತ್ವದಲ್ಲಿ ಆಯೋಗದ ಪುನಾರಚನೆ ಆಗಲಿ” ಎಂದು ಆಗ್ರಹಿಸಿದ್ದಾರೆ.

“ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರವರ ಸರ್ಕಾರವು ಸ್ವಾತಿ ಮಾಲಿವಾಲ್‌ ಎಂಬ ದಿಟ್ಟ ಹೋರಾಟಗಾರ್ತಿಯನ್ನು ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದೆ. ಕಳೆದ ಐದು ವರ್ಷಗಳಲ್ಲಿ ಅವರ ನೇತೃತ್ವದಲ್ಲಿ 1,00,672 ಪ್ರಕರಣಗಳಿಗೆ ಸಂಬಂಧಿಸಿ 1,42,234 ಜನರ ವೈಯಕ್ತಿಕ ವಿಚಾರಣೆ ನಡೆದಿದೆ. ಸಹಾಯವಾಣಿಗೆ ಕರೆ ಮಾಡಿ ಕಷ್ಟ ಹೇಳಿಕೊಂಡ ದೆಹಲಿಯ 4.25 ಲಕ್ಷ ಮಹಿಳೆಯರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗಿದೆ. ದೆಹಲಿಯ ಮಹಿಳಾ ಆಯೋಗವು 250ಕ್ಕೂ ಶಿಫಾರಸ್ಸುಗಳು ಸರ್ಕಾರ ಹಾಗೂ ಪ್ರಾಧಿಕಾರಕ್ಕೆ ಕಳುಹಿಸಿದೆ. ರಾಜ್ಯದ ಆಯೋಗಕ್ಕೂ ಅಂತಹ ದಿಟ್ಟ ಅಧ್ಯಕ್ಷರ ಅಗತ್ಯವಿದೆ” ಎಂದಿದ್ದಾರೆ.

ಎಎಪಿಯ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, “ಜಾರಕಿಹೊಳಿ ಪ್ರಕರಣದಲ್ಲಿ ವಿಡಿಯೋ ನಕಲಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ನಂತರ ಅದು ಹನಿಟ್ರಾಪ್‌ ಎಂದು ಜಾರಕಿಹೊಳಿಯವರೇ ಹೇಳಿದರು. ಅಧಿಕಾರ ದುರ್ಬಳಕೆ ಮಾಡಿಕೊಂಡು ಯುವತಿಯನ್ನು ಜಾರಕಿಹೊಳಿ ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಇಡೀ ಸರ್ಕಾರವೇ ಆರೋಪಿಯ ರಕ್ಷಣೆಗೆ ನಿಂತಿದೆ” ಎಂದು ಕಿಡಿಕಾರಿದ್ದಾರೆ.

“ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸಲು ಬಳಕೆಯಾಗುತ್ತಿದ್ದ 71 ಸಾಂತ್ವನ ಕೇಂದ್ರಗಳನ್ನು ಏಪ್ರಿಲ್‌ನಲ್ಲಿ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿದ್ದ 194 ಸಾಂತ್ವನ ಕೇಂದ್ರಗಳ ಪೈಕಿ 123 ಮಾತ್ರ ಪ್ರಸ್ತುತ ಕಾರ್ಯನಿರ್ವಹಿಸುತ್ತಿದೆ. ಜನಸಂಖ್ಯೆ ಜಾಸ್ತಿಯಿರುವ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳ ಹೆಚ್ಚು ದಾಖಲಾಗುವ ಬೆಂಗಳೂರಿನಲ್ಲೇ ಎಲ್ಲಾ ಸಾಂತ್ವನ ಕೇಂದ್ರಗಳು ಸ್ಥಗಿತಗೊಂಡಿವೆ” ಎಂದು ಎಎಪಿಯ ವೀಣಾ ಸೆರ್ರಾವ್‌ರವರು ಹೇಳಿದ್ದಾರೆ.

ಮಹಿಳಾ ನಾಯಕಿ ಪುಷ್ಪಾ ಕೇಶವ್‌ ಮಾತನಾಡಿ, “ಪೊಲೀಸರಿಗೆ ದೂರು ನೀಡಲು ಬರುವ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳೆಯರಿಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಪೊಲೀಸರು ಎಫ್‌ಐಆರ್‌ ಹಾಕಲು ಮೀನಾಮೇಷ ಎಣಿಸುತ್ತಾರೆ. ಅತ್ಯಾಚಾರದಂತಹ ಗಂಭೀರ ಪ್ರಕರಣಗಳಲ್ಲೂ ರಾಜಿ ಮಾಡಿಸಲು ಪೊಲೀಸರು ಮುಂದಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಒಂದುವೇಳೆ ಎಫ್‌ಐಆರ್‌ ದಾಖಲಿಸಿಕೊಂಡರೂ, ಆರೋಪಿ ವಿರುದ್ಧ ಸಾಕ್ಷಿ ಸಂಗ್ರಹಕ್ಕೆ ಉದಾಸೀನ ತೋರುತ್ತಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...